HomeUncategorizedಚುನಾವಣೆ ಸೋಲು; ಎಂಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರಾ ಕಮಲ್ ನಾಥ್?

ಚುನಾವಣೆ ಸೋಲು; ಎಂಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರಾ ಕಮಲ್ ನಾಥ್?

- Advertisement -
- Advertisement -

2018ರಲ್ಲಿ ನಡೆದ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ 114 ಕ್ಷೇತ್ರಗಳಲ್ಲಿ ಗೆದ್ದಿದ್ದ ಕಾಂಗ್ರೆಸ್ ಪಕ್ಷ, ಪಕ್ಷೇತರ ಶಾಸಕರ ಬೆಂಬಲ ಪಡೆದು ಸರ್ಕಾರ ರಚಿಸಿತ್ತು. ರಾಷ್ಟ್ರ ರಾಜಕಾರಣದಿಂದ ಮರಳಿದ್ದ ಕಮಲ್ ನಾಥ್ ಮುಖ್ಯಮಂತ್ರಿಯಾಗಿದ್ದರು. ಆದರೆ, ನಂತರದ ದಿನಗಳಲ್ಲಿ ನಡೆದ ಆಪರೇಷನ್ ಕಮಲಕ್ಕೆ ತುತ್ತಾಗಿ ಅಧಿಕಾರ ಕಳೆದುಕೊಳ್ಳಬೇಕಾಯಿತು. ಮರಳಿ ಅಧಿಕಾರ ಪಡೆಯುವ ಉಮೇದಿನಲ್ಲಿದ್ದ ಕಮಲ್ ನಾಥ್ ಅವರಿಗೆ 2023ರ ಚುನಾವಣಾ ಫಲಿತಾಂಶ ಆಘಾತ ನೀಡಿದ್ದು, ಕೇವಲ 66 ಸ್ಥಾನಗಳನ್ನು ಗೆಲ್ಲುವ ಮೂಲಕ ಮುಖಭಂಗ ಅನುಭವಿಸಿದ್ದಾರೆ.

ವಿಧಾನಸಭೆ ಚುನಾವಣೆ ಹೀನಾಯ ಸೋಲಿನ ಬಳಿಕ ಎಂಪಿಸಿಸಿ ಅಧ್ಯಕ್ಷ ಕಮಲ್ ನಾಥ್ ಅವರು ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸೋಲಿನ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬಹುದೂ ಎಂದು ಮೂಲಗಳಿಂದ ತಿಳಿದುಬಂದಿದೆ.

ಕಳೆದ ತಿಂಗಳು ರಾಜ್ಯದಲ್ಲಿ ಚುನಾವಣೆ ನಡೆದಿದ್ದು, ಭಾನುವಾರ ಮತ ಎಣಿಕೆ ನಡೆದಿತ್ತು. 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ 116 ಮ್ಯಾಜಿಕ್ ಸಂಖ್ಯೆಯಾಗಿದೆ. ಬಿಜೆಪಿಯು 163 ಸ್ಥಾನಗಳನ್ನು ಗೆದ್ದು ಪ್ರಚಂಡ ಬಹುಮತ ಪಡೆದರೆ, ಕಾಂಗ್ರೆಸ್ 66 ಸ್ಥಾನ ಗಳಿಸಿಕೊಳ್ಳುವುದಕ್ಕೆ ಏದುಸಿರು ಬಿಟ್ಟಿದೆ. ಈ ಎಲ್ಲ ಬೆಳವಣಿಗೆಗಳ ನಂತರ ಕಮಲ್ ನಾಥ್ ಇಂದು ಖರ್ಗೆ ಅವರನ್ನು ಭೇಟಿಯಾಗುವ ಸಾಧ್ಯತೆ ಇದ್ದು, ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಬಹುದು ಎನ್ನಲಾಗಿದೆ.

ಚುನಾವಣೆಗೂ ಮೊದಲು ಸೀಟು ಹಂಚಿಕೆ ಕುರಿತಂತೆ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ಇಂಡಿಯಾ (I.N.D.I.A)) ಬ್ಲಾಕ್‌ನ ಅನೇಕ ನಾಯಕರ ವಿರುದ್ಧ ಕಮಲ್ ನಾಥ್ ನೀಡಿರುವ ಬಹಿರಂಗ ಹೇಳಿಕೆಗಳ ಬಗ್ಗೆ ಕಾಂಗ್ರೆಸ್ ವರಿಷ್ಠರು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

ಮಧ್ಯಪ್ರದೇಶದಲ್ಲಿ ಚುನಾವಣಾ ಪೂರ್ವ ಮೈತ್ರಿಗೆ ಒಪ್ಪಿಗೆ ಸೂಚಿಸಿದ್ದ ಸಮಾಜವಾದಿ ಪಕ್ಷವು ಕೇವಲ ನಾಲ್ಕರಿಂದ ಆರು ಸ್ಥಾನಗಳನ್ನು ಮಾತ್ರ ಕೇಳಿತ್ತು. ಜೆಡಿಯು ಕೇವಲ ಒಂದು ಸ್ಥಾನವನ್ನು ಮಾತ್ರ ಕೇಳಿದ್ದರೂ ಕಮಲ್ ನಾಥ್ ಒಪ್ಪಿರಲಿಲ್ಲ ಎನ್ನಲಾಗಿದೆ. ಅವರ ಈ ನಡೆ ‘ಇಂಡಿಯಾ ಕೂಟ’ದ ನಾಯಕರನ್ನು ಕೆಣಕಿತ್ತು. ಜತೆಗೆ, ಚುನಾವಣೆ ಫಲಿತಾಂಶದ ನಂತರ ಕಮಲ್ ನಾಥ್ ಅವರು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಭೇಟಿಯಾಗದೆ, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿಯಾದ ಬಗ್ಗೆಯೂ ಹೈಕಮಾಂಡ್ ನಾಯಕರು ಅಸಮಾಧಾನಗೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇದನ್ನೂ ಓದಿ; ರಾಜಸ್ಥಾನ ಸಿಎಂ ಹುದ್ದೆಗೆ ತೀವ್ರ ಪೈಪೋಟಿ! ಮಹಂತ್ ಬಾಲಕ ನಾಥ್ ಹೆಸರು ಮುನ್ನೆಲೆಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...