Homeಮುಖಪುಟಕೋಲ್ಕತ್ತಾ: ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದನ ಮೃತದೇಹ ತುಂಡರಿಸಿದ ಸ್ಥಿತಿಯಲ್ಲಿ ಪತ್ತೆ

ಕೋಲ್ಕತ್ತಾ: ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದನ ಮೃತದೇಹ ತುಂಡರಿಸಿದ ಸ್ಥಿತಿಯಲ್ಲಿ ಪತ್ತೆ

- Advertisement -
- Advertisement -

ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ಅನಾರ್ ಭಾರತದಲ್ಲಿ ನಾಪತ್ತೆಯಾದ ಎಂಟು ದಿನಗಳ ನಂತರ ಕೋಲ್ಕತ್ತಾ ಪೊಲೀಸರು ಅವರ ತುಂಡರಿಸಿದ ಮೃತದೇಹವನ್ನು ಪತ್ತೆ ಹಚ್ಚಿದ್ದಾರೆ.

ಕೋಲ್ಕತ್ತಾ ಪೊಲೀಸರು ಹತ್ಯೆಯು ಪೂರ್ವ ನಿಯೋಜಿತ ಎಂದು ಹೇಳಿಕೊಂಡಿದ್ದಾರೆ. ಅನಾರ್ ಅವರ ದೇಹವನ್ನು ತುಂಡುಗಳಾಗಿ ಕತ್ತರಿಸಲಾಗಿದೆ, ಅವುಗಳಲ್ಲಿ ಕೆಲವನ್ನು ಕೋಲ್ಕತ್ತಾದ ನ್ಯೂ ಟೌನ್‌ನಲ್ಲಿರುವ ಸಂಜೀವ ಗಾರ್ಡನ್‌ನಲ್ಲಿರುವ ಅಪಾರ್ಟ್‌ಮೆಂಟ್‌ನಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಮೃತದೇಹ ಸಿಕ್ಕ ಅಪಾರ್ಟ್‌ಮೆಂಟ್‌ ಅಬಕಾರಿ ಅಧಿಕಾರಿಗೆ ಸೇರಿದೆ ಎಂದು ಹೇಳಲಾಗಿದೆ.

ಬಾಂಗ್ಲಾದೇಶದ ಗೃಹ ಸಚಿವ ಅಸಾದುಝಮಾನ್ ಖಾನ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಅಝೀಂ ಅವರ ಮೃತದೇಹವನ್ನು ಕೋಲ್ಕತ್ತಾದಲ್ಲಿ ವಶಪಡಿಸಿಕೊಳ್ಳಲಾಗಿದೆ. ಈ ವಿಷಯದ ಬಗ್ಗೆ ನಮಗೆ ಇನ್ನೂ ಸಂಪೂರ್ಣವಾಗಿ ಮಾಹಿತಿ ಇಲ್ಲ. ನಮ್ಮ ಇನ್ಸ್‌ಪೆಕ್ಟರ್ ಜನರಲ್ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ. ಎಲ್ಲವನ್ನೂ ದೃಢಪಡಿಸಿದ ನಂತರ ನಾನು ಮಾದ್ಯಮಗಳ ಜೊತೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಮೃತ ಸಂಸದರ ಆಪ್ತ ಕಾರ್ಯದರ್ಶಿ ಅಬ್ದುರ್ ರೌಫ್, ಸಂಸದರ ಸಾವಿನ ಬಗ್ಗೆ ನಮಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ, ಆದರೆ ಅವರ ಕುಟುಂಬವು ಭಾರತೀಯ ವೀಸಾ ಅನುಮೋದನೆಗಾಗಿ ಢಾಕಾದಲ್ಲಿ ಕಾಯುತ್ತಿದೆ ಎಂದು ಹೇಳಿದ್ದಾರೆ.

ಬಾಂಗ್ಲಾದೇಶ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಅವರು ಕೊಲ್ಕತ್ತಾ ಪೊಲೀಸರ ಜೊತೆ ಸಂಪರ್ಕದಲ್ಲಿದ್ದಾರೆ. ಕೊಲೆಯ ಬಗ್ಗೆ ಇನ್ನೂ ನಿರ್ದಿಷ್ಟ ಮಾಹಿತಿ ಇಲ್ಲ, ಕೊಲೆಯು ಚಿನ್ನ ಕಳ್ಳಸಾಗಣೆಯ ಭಾಗಿಯಾಗಿದೆಯೇ ಅಥವಾ ಇಲ್ಲವೇ ಎಂಬುವುದನ್ನು ತನಿಖೆ ನಡೆಸುತ್ತಿದ್ದೇವೆ ಎಂದು ಇನ್ಸ್‌ಪೆಕ್ಟರ್ ಜನರಲ್ ಹೇಳಿದ್ದಾರೆ.

ಕೋಲ್ಕತ್ತಾದಲ್ಲಿರುವ ಬಾಂಗ್ಲಾದೇಶದ ಡೆಪ್ಯುಟಿ ಹೈಕಮಿಷನ್‌ನ ಹಿರಿಯ ಅಧಿಕಾರಿಯೊಬ್ಬರು ವೈದ್ಯಕೀಯ ಚಿಕಿತ್ಸೆಗಾಗಿ ಕೋಲ್ಕತ್ತಾಕ್ಕೆ ಬಂದ ನಂತರ ಸಂಸದ ಅನಾರ್ ಮೇ 13ರಿಂದ ಕಾಣೆಯಾಗಿದ್ದಾರೆ ಎಂದು ಈ ಮೊದಲು ಹೇಳಿಕೆ ಬಿಡುಗಡೆ ಮಾಡಿದ್ದರು. ಅನ್ವರುಲ್ ಅಝೀಂ ಅನಾರ್ ಮೇ 12ರಂದು ವೈದ್ಯಕೀಯ ಚಿಕಿತ್ಸೆಗಾಗಿ ಕೋಲ್ಕತ್ತಾಗೆ ತೆರಳಿದ್ದು ಬಾರಾನಗರದಲ್ಲಿರುವ ತನ್ನ ಸ್ನೇಹಿತನ ಸ್ಥಳದಲ್ಲಿ ತಂಗಿದ್ದರು. ಮೇ 13ರಂದು ಅವರು ಯಾರನ್ನೋ ಭೇಟಿಯಾಗಲು ಹೋಗಿದ್ದರು, ಆದರೆ ಹಿಂತಿರುಗಲಿಲ್ಲ. ಈ ಬಗ್ಗೆ ಅವರ ಸ್ನೇಹಿತ ಕೊಲ್ಕತ್ತಾದಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಹೇಳಿದ್ದರು.

ಅನಾರ್ ಸಂಪರ್ಕಕ್ಕೆ ಸಿಗದ ಬಗ್ಗೆ ಅವರ ಕುಟುಂಬವು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರಿಗೆ ಮಾಹಿತಿ ನೀಡಿತ್ತು, ಅನಾರ್ ಪುತ್ರಿ ಮುಮ್ತಾರಿನ್ ಫಿರ್ದೌಸ್ ಢಾಕಾ ಮೆಟ್ರೋಪಾಲಿಟನ್ ಪೊಲೀಸರಿಗೆ ನಾಪತ್ತೆ ಬಗ್ಗೆ ದೂರು ನೀಡಿದ್ದರು.

ಇದನ್ನು ಓದಿ: ಭಾರತಕ್ಕೆ ಆಗಮಿಸಿದ್ದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ನಾಪತ್ತೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...