Homeಕರ್ನಾಟಕಶಿಕ್ಷಣ ಸಚಿವರನ್ನು ತಕ್ಷಣ ಕಿತ್ತು ಹಾಕಿ- ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಪತ್ರ

ಶಿಕ್ಷಣ ಸಚಿವರನ್ನು ತಕ್ಷಣ ಕಿತ್ತು ಹಾಕಿ- ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಪತ್ರ

- Advertisement -
- Advertisement -

ಪಠ್ಯ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಭಾರೀ ಅನಾಹುತಗಳಿಗೆ ಕಾರಣರಾದ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರನ್ನು ಸಂಪುಟದಿಂದ ಕೈಬಿಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತು ಸಿಎಂ ಬೊಮ್ಮಾಯಿಯವರಿಗೆ ಪತ್ರ ಬರೆದಿರುವ ಅವರು, “ನಾಡಿನ ಜನತೆಯ ಆಕ್ರೋಶದ ಬಳಿಕ ಬಹಳ ತಡವಾಗಿಯಾದರೂ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯನ್ನು ವಿಸರ್ಜಿಸಿದ್ದೀರಿ. ಆದರೆ, ಈ ಸಮಿತಿ ಪಠ್ಯದೊಳಗೆ ತುರುಕಿರುವ ಸಂವಿಧಾನ ವಿರೋಧಿ ಮತ್ತು ಸಂಗತಿಗಳನ್ನು ಹಾಗೇ ಉಳಿಸಿಕೊಂಡಿದ್ದೀರಿ. ಜಾತಿ ಶ್ರೇಷ್ಠತೆಯ ವ್ಯಸನದ ಸಂಗತಿಗಳನ್ನು ಪಠ್ಯದೊಳಗೆ ಉಳಿಸಿಕೊಳ್ಳುವುದು ಹಾಗೂ ಪ್ರಧಾನವಾಗಿ ಒಂದು ಜಾತಿಯವರ ಬರಹಗಳನ್ನು, ವಿಚಾರಗಳನ್ನು ನಾಡಿನ ಮೇಲೆ ಹೇರಲು ಹೊರಟಿರುವುದು ಅತ್ಯಂತ ಅಪಾಯಕಾರಿ ನಡೆಯಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಪಠ್ಯ ಪುಸ್ತಕ ಪರಿಷ್ಕರಣೆಗೆ ಅಗತ್ಯವಾದ ಬೌದ್ಧಿಕ ತಿಳಿವಳಿಕೆ ಮತ್ತು ಅರ್ಹತೆಗಳಿಲ್ಲದ, ಸಾಮಾಜಿಕ ತಾಣಗಳಲ್ಲಿ ಶೂದ್ರ-ದಲಿತ ಪರಂಪರೆ ಮತ್ತು ಸಂಸ್ಕೃತಿ ಬಗೆಗೆ ವಿಕೃತಿ ಕಾರಿಕೊಳ್ಳುವುದನ್ನೇ ಪಾಂಡಿತ್ಯ ಎಂದುಕೊಂಡಿರುವ ಹಾಗೂ ಮಹಿಳೆಯರ ಬಗ್ಗೆ ಕನಿಷ್ಠ ಗೌರವವೂ ಇಲ್ಲದಂತೆ ಬಹಿರಂಗವಾಗಿ ಪೋಸ್ಟ್‌ಗಳನ್ನು ಹಾಕಿ ಅಸಹ್ಯ ಆಚರಿಸುತ್ತಿದ್ದ ವ್ಯಕ್ತಿಯನ್ನು ಪಠ್ಯ ಪರಿಷ್ಕರಣೆ ಸಮಿತಿಗೆ ಅಧ್ಯಕ್ಷನನ್ನಾಗಿ ಮಾಡಿ ನಾಡಿನ ಸಾಂಸ್ಕೃತಿಕ ಪರಂಪರೆಗೆ ದ್ರೋಹ ಎಸಗಿ ಸರ್ಕಾರ ಗಂಭೀರ ಅಪರಾಧ ಮಾಡಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಎನ್ನುವ ಸಾಲಿನಿಂದ “ಸಂವಿಧಾನ ಶಿಲ್ಪಿ” ಎನ್ನುವ ಪದಕ್ಕೆ ಕತ್ತರಿ ಹಾಕಲಾಗಿದೆ. ಅಂಬೇಡ್ಕರ್ ಅವರನ್ನು ಸಂವಿಧಾನ ಶಿಲ್ಪಿ ಎಂದು ಇಡೀ ವಿಶ್ವವೇ ಒಪ್ಪಿಕೊಂಡಿದೆ. ಆದರೆ, ಮನುವಾದಿ ವಿಕೃತ ರೋಗಿಷ್ಠರಿಗೆ ಮಾತ್ರ ಬಾಬಾಸಾಹೇಬರು ಕನಸಿನಲ್ಲೂ ದಿಗಿಲು ಬೀಳಿಸುತ್ತಾರೆ. ನಿಮ್ಮ ಸರ್ಕಾರಕ್ಕೆ ಇದನ್ನು ಕತ್ತರಿಸಿ ಹಾಕುವ ರೋಗ ಬಂದಿದೆ. ಜತೆಗೆ ಕನ್ನಡ ರಾಜ್ಯೋತ್ಸವದ ಕುರಿತ ಪಠ್ಯವನ್ನೂ ಕಿತ್ತುಹಾಕಿ ಬಿಜೆಪಿ ನಾಡದ್ರೋಹಿ ಪರಂಪರೆಯನ್ನು ಮುಂದುವರೆಸಿದೆ. ಇಂಥಾ ಅಸಹ್ಯದ ನೂರಾರು ಅಧ್ವಾನಗಳನ್ನು ಪಠ್ಯ ಪರಿಷ್ಕರಣ ಸಮಿತಿ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇವನೂರು ಮಹದೇವ, ಮೂಡ್ನಾಕೂಡು ಚಿನ್ನಸ್ವಾಮಿಯವರಂತಹ ಹಿರಿಯ ಬರಹಗಾರರು ತಮ್ಮ ತಕರಾರುಗಳನ್ನು ವ್ಯಕ್ತಪಡಿಸಿದಾಗ ಆ ತಕರಾರುಗಳನ್ನು ಕೇಳಿಸಿಕೊಳ್ಳುವ ಸೌಜನ್ಯವೂ ಇಲ್ಲದಂತೆ ಸರ್ಕಾರ ಮತ್ತು ಪಠ್ಯ ಪುಸ್ತಕ ಸಮಿತಿ ವಿಕೃತಿ ಮೆರೆದಿದೆ. ನಾಡಿನ ಹಿರಿಯ ಮಠಾಧೀಶರು ತಮ್ಮ ವಿರೋಧವನ್ನು ವ್ಯಕ್ತಪಡಿಸಿದಾಗ ಅವರುಗಳ ಸಾತ್ವಿಕ ಸಿಟ್ಟನ್ನೂ ಲೇವಡಿ ಮಾಡುವ ರೀತಿಯಲ್ಲಿ ಸಚಿವರು ಮತ್ತು ಪಕ್ಷದ ಮುಖಂಡರಿಂದ ರಾಜಕೀಯ ಹೇಳಿಕೆ ಕೊಡಿಸಲಾಗಿದೆ. ಮಠಾಧೀಶರನ್ನು ಕಾಂಗ್ರೆಸ್ ವಕ್ತಾರರು ಎನ್ನುವ ಅರ್ಥ ಬರುವಂತೆ ಸಚಿವರುಗಳಿಂದ ಪರೋಕ್ಷ ಹೇಳಿಕೆ ಕೊಡಿಸಿ ಮಠ ಪರಂಪರೆಗೆ ಅವಮಾನ ಎಸಗಿದಂತೆ ಸರ್ಕಾರ ವರ್ತಿಸಿದೆ ಎಂದು ಸಿದ್ದರಾಮಯ್ಯ ದೂರಿದ್ದಾರೆ.

ನಮ್ಮ ನಾಡಗೀತೆಯು ಸರ್ಕಾರದ ಅಧಿಕೃತ ಗುರುತು. ನಾಡಿನ ಸಾರ್ವಭೌಮತೆಯ ಸಂಕೇತ. ಇಂತಹ ಗುರುತರವಾದ ಸಂಗತಿಗೆ ಅವಮಾನ ಮಾಡಿರುವ ಚಕ್ರತೀರ್ಥನನ್ನು ಸರ್ಕಾರ ಪಠ್ಯ ಪರಿಷ್ಕರಣಾ ಸಮಿತಿಯ ಅಧ್ಯಕ್ಷನನ್ನಾಗಿ ಮಾಡಿದ್ದು ಅಕ್ಷಮ್ಯ. ಈತನ ಮೇಲೆ ರಾಷ್ಟ್ರದ್ರೋಹದ ಪ್ರಕರಣ ದಾಖಲಿಸಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎನ್ನುವ ನಾಡಿನ ಜನತೆಯ, ಲೇಖಕ-ಬರಹಗಾರರ ಮತ್ತು ಸ್ವಾಮೀಜಿಗಳ ಆಗ್ರಹವನ್ನು ಸರ್ಕಾರ ತಕ್ಷಣ ಪಾಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಸವಣ್ಣನವರ ಪಠ್ಯದ ಕುರಿತು ಸಿಎಂ ಬೊಮ್ಮಾಯಿ ಹೇಳಿದ ಸುಳ್ಳುಗಳು ಮತ್ತು ಅರ್ಧ ಸತ್ಯಗಳು

ಈ ಕೂಡಲೇ ವಿಸರ್ಜನೆಗೊಂಡಿರುವ ಸಮಿತಿ ರೂಪಿಸಿರುವ ಪಠ್ಯ ಪುಸ್ತಕಗಳನ್ನು ತಡೆ ಹಿಡಿಯಬೇಕು. ಹಿಂದಿನ ಬರಗೂರು ಸಮಿತಿಯ ಪಠ್ಯಗಳನ್ನೇ ಈ ಸಾಲಿಗೂ ಮಕ್ಕಳಿಗೆ ವಿತರಿಸಬೇಕು. ನಿಜವಾದ ಅರ್ಹತೆ ಇರುವ ಶಿಕ್ಷಣ ತಜ್ಞರ ಸಮಿತಿ ಮೂಲಕ ಪರಿಷ್ಕರಣಾ ಸಮಿತಿ ಮಾಡಿರುವ ಅದ್ವಾನಗಳನ್ನು ಕೂಡಲೇ ಸರಿಪಡಿಸಬೇಕು ಹಾಗೂ ನಾಡಿನ ಸಂಸ್ಕೃತಿ, ಪರಂಪರೆ, ಚರಿತ್ರೆ, ಸಂವಿಧಾನದ ಆಶಯಗಳ ಬಗ್ಗೆ ಗೌರವ ಇರುವವರನ್ನು ಸಮಿತಿಗಳಿಗೆ ನೇಮಿಸಬೇಕು. ಇಷ್ಟೆಲ್ಲಾ ಯಡವಟ್ಟುಗಳಿಗೆ ಕಾರಣರಾದ ಶಿಕ್ಷಣ ಸಚಿವ ನಾಗೇಶ್ ಅವರ ರಾಜೀನಾಮೆಯನ್ನು ಕೂಡಲೇ ಪಡೆಯಬೇಕು ಎಂದು ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...