Homeಕರ್ನಾಟಕಶಿಕ್ಷಣ ಸಚಿವರನ್ನು ತಕ್ಷಣ ಕಿತ್ತು ಹಾಕಿ- ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಪತ್ರ

ಶಿಕ್ಷಣ ಸಚಿವರನ್ನು ತಕ್ಷಣ ಕಿತ್ತು ಹಾಕಿ- ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಪತ್ರ

- Advertisement -
- Advertisement -

ಪಠ್ಯ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಭಾರೀ ಅನಾಹುತಗಳಿಗೆ ಕಾರಣರಾದ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರನ್ನು ಸಂಪುಟದಿಂದ ಕೈಬಿಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತು ಸಿಎಂ ಬೊಮ್ಮಾಯಿಯವರಿಗೆ ಪತ್ರ ಬರೆದಿರುವ ಅವರು, “ನಾಡಿನ ಜನತೆಯ ಆಕ್ರೋಶದ ಬಳಿಕ ಬಹಳ ತಡವಾಗಿಯಾದರೂ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯನ್ನು ವಿಸರ್ಜಿಸಿದ್ದೀರಿ. ಆದರೆ, ಈ ಸಮಿತಿ ಪಠ್ಯದೊಳಗೆ ತುರುಕಿರುವ ಸಂವಿಧಾನ ವಿರೋಧಿ ಮತ್ತು ಸಂಗತಿಗಳನ್ನು ಹಾಗೇ ಉಳಿಸಿಕೊಂಡಿದ್ದೀರಿ. ಜಾತಿ ಶ್ರೇಷ್ಠತೆಯ ವ್ಯಸನದ ಸಂಗತಿಗಳನ್ನು ಪಠ್ಯದೊಳಗೆ ಉಳಿಸಿಕೊಳ್ಳುವುದು ಹಾಗೂ ಪ್ರಧಾನವಾಗಿ ಒಂದು ಜಾತಿಯವರ ಬರಹಗಳನ್ನು, ವಿಚಾರಗಳನ್ನು ನಾಡಿನ ಮೇಲೆ ಹೇರಲು ಹೊರಟಿರುವುದು ಅತ್ಯಂತ ಅಪಾಯಕಾರಿ ನಡೆಯಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಪಠ್ಯ ಪುಸ್ತಕ ಪರಿಷ್ಕರಣೆಗೆ ಅಗತ್ಯವಾದ ಬೌದ್ಧಿಕ ತಿಳಿವಳಿಕೆ ಮತ್ತು ಅರ್ಹತೆಗಳಿಲ್ಲದ, ಸಾಮಾಜಿಕ ತಾಣಗಳಲ್ಲಿ ಶೂದ್ರ-ದಲಿತ ಪರಂಪರೆ ಮತ್ತು ಸಂಸ್ಕೃತಿ ಬಗೆಗೆ ವಿಕೃತಿ ಕಾರಿಕೊಳ್ಳುವುದನ್ನೇ ಪಾಂಡಿತ್ಯ ಎಂದುಕೊಂಡಿರುವ ಹಾಗೂ ಮಹಿಳೆಯರ ಬಗ್ಗೆ ಕನಿಷ್ಠ ಗೌರವವೂ ಇಲ್ಲದಂತೆ ಬಹಿರಂಗವಾಗಿ ಪೋಸ್ಟ್‌ಗಳನ್ನು ಹಾಕಿ ಅಸಹ್ಯ ಆಚರಿಸುತ್ತಿದ್ದ ವ್ಯಕ್ತಿಯನ್ನು ಪಠ್ಯ ಪರಿಷ್ಕರಣೆ ಸಮಿತಿಗೆ ಅಧ್ಯಕ್ಷನನ್ನಾಗಿ ಮಾಡಿ ನಾಡಿನ ಸಾಂಸ್ಕೃತಿಕ ಪರಂಪರೆಗೆ ದ್ರೋಹ ಎಸಗಿ ಸರ್ಕಾರ ಗಂಭೀರ ಅಪರಾಧ ಮಾಡಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಎನ್ನುವ ಸಾಲಿನಿಂದ “ಸಂವಿಧಾನ ಶಿಲ್ಪಿ” ಎನ್ನುವ ಪದಕ್ಕೆ ಕತ್ತರಿ ಹಾಕಲಾಗಿದೆ. ಅಂಬೇಡ್ಕರ್ ಅವರನ್ನು ಸಂವಿಧಾನ ಶಿಲ್ಪಿ ಎಂದು ಇಡೀ ವಿಶ್ವವೇ ಒಪ್ಪಿಕೊಂಡಿದೆ. ಆದರೆ, ಮನುವಾದಿ ವಿಕೃತ ರೋಗಿಷ್ಠರಿಗೆ ಮಾತ್ರ ಬಾಬಾಸಾಹೇಬರು ಕನಸಿನಲ್ಲೂ ದಿಗಿಲು ಬೀಳಿಸುತ್ತಾರೆ. ನಿಮ್ಮ ಸರ್ಕಾರಕ್ಕೆ ಇದನ್ನು ಕತ್ತರಿಸಿ ಹಾಕುವ ರೋಗ ಬಂದಿದೆ. ಜತೆಗೆ ಕನ್ನಡ ರಾಜ್ಯೋತ್ಸವದ ಕುರಿತ ಪಠ್ಯವನ್ನೂ ಕಿತ್ತುಹಾಕಿ ಬಿಜೆಪಿ ನಾಡದ್ರೋಹಿ ಪರಂಪರೆಯನ್ನು ಮುಂದುವರೆಸಿದೆ. ಇಂಥಾ ಅಸಹ್ಯದ ನೂರಾರು ಅಧ್ವಾನಗಳನ್ನು ಪಠ್ಯ ಪರಿಷ್ಕರಣ ಸಮಿತಿ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇವನೂರು ಮಹದೇವ, ಮೂಡ್ನಾಕೂಡು ಚಿನ್ನಸ್ವಾಮಿಯವರಂತಹ ಹಿರಿಯ ಬರಹಗಾರರು ತಮ್ಮ ತಕರಾರುಗಳನ್ನು ವ್ಯಕ್ತಪಡಿಸಿದಾಗ ಆ ತಕರಾರುಗಳನ್ನು ಕೇಳಿಸಿಕೊಳ್ಳುವ ಸೌಜನ್ಯವೂ ಇಲ್ಲದಂತೆ ಸರ್ಕಾರ ಮತ್ತು ಪಠ್ಯ ಪುಸ್ತಕ ಸಮಿತಿ ವಿಕೃತಿ ಮೆರೆದಿದೆ. ನಾಡಿನ ಹಿರಿಯ ಮಠಾಧೀಶರು ತಮ್ಮ ವಿರೋಧವನ್ನು ವ್ಯಕ್ತಪಡಿಸಿದಾಗ ಅವರುಗಳ ಸಾತ್ವಿಕ ಸಿಟ್ಟನ್ನೂ ಲೇವಡಿ ಮಾಡುವ ರೀತಿಯಲ್ಲಿ ಸಚಿವರು ಮತ್ತು ಪಕ್ಷದ ಮುಖಂಡರಿಂದ ರಾಜಕೀಯ ಹೇಳಿಕೆ ಕೊಡಿಸಲಾಗಿದೆ. ಮಠಾಧೀಶರನ್ನು ಕಾಂಗ್ರೆಸ್ ವಕ್ತಾರರು ಎನ್ನುವ ಅರ್ಥ ಬರುವಂತೆ ಸಚಿವರುಗಳಿಂದ ಪರೋಕ್ಷ ಹೇಳಿಕೆ ಕೊಡಿಸಿ ಮಠ ಪರಂಪರೆಗೆ ಅವಮಾನ ಎಸಗಿದಂತೆ ಸರ್ಕಾರ ವರ್ತಿಸಿದೆ ಎಂದು ಸಿದ್ದರಾಮಯ್ಯ ದೂರಿದ್ದಾರೆ.

ನಮ್ಮ ನಾಡಗೀತೆಯು ಸರ್ಕಾರದ ಅಧಿಕೃತ ಗುರುತು. ನಾಡಿನ ಸಾರ್ವಭೌಮತೆಯ ಸಂಕೇತ. ಇಂತಹ ಗುರುತರವಾದ ಸಂಗತಿಗೆ ಅವಮಾನ ಮಾಡಿರುವ ಚಕ್ರತೀರ್ಥನನ್ನು ಸರ್ಕಾರ ಪಠ್ಯ ಪರಿಷ್ಕರಣಾ ಸಮಿತಿಯ ಅಧ್ಯಕ್ಷನನ್ನಾಗಿ ಮಾಡಿದ್ದು ಅಕ್ಷಮ್ಯ. ಈತನ ಮೇಲೆ ರಾಷ್ಟ್ರದ್ರೋಹದ ಪ್ರಕರಣ ದಾಖಲಿಸಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎನ್ನುವ ನಾಡಿನ ಜನತೆಯ, ಲೇಖಕ-ಬರಹಗಾರರ ಮತ್ತು ಸ್ವಾಮೀಜಿಗಳ ಆಗ್ರಹವನ್ನು ಸರ್ಕಾರ ತಕ್ಷಣ ಪಾಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಸವಣ್ಣನವರ ಪಠ್ಯದ ಕುರಿತು ಸಿಎಂ ಬೊಮ್ಮಾಯಿ ಹೇಳಿದ ಸುಳ್ಳುಗಳು ಮತ್ತು ಅರ್ಧ ಸತ್ಯಗಳು

ಈ ಕೂಡಲೇ ವಿಸರ್ಜನೆಗೊಂಡಿರುವ ಸಮಿತಿ ರೂಪಿಸಿರುವ ಪಠ್ಯ ಪುಸ್ತಕಗಳನ್ನು ತಡೆ ಹಿಡಿಯಬೇಕು. ಹಿಂದಿನ ಬರಗೂರು ಸಮಿತಿಯ ಪಠ್ಯಗಳನ್ನೇ ಈ ಸಾಲಿಗೂ ಮಕ್ಕಳಿಗೆ ವಿತರಿಸಬೇಕು. ನಿಜವಾದ ಅರ್ಹತೆ ಇರುವ ಶಿಕ್ಷಣ ತಜ್ಞರ ಸಮಿತಿ ಮೂಲಕ ಪರಿಷ್ಕರಣಾ ಸಮಿತಿ ಮಾಡಿರುವ ಅದ್ವಾನಗಳನ್ನು ಕೂಡಲೇ ಸರಿಪಡಿಸಬೇಕು ಹಾಗೂ ನಾಡಿನ ಸಂಸ್ಕೃತಿ, ಪರಂಪರೆ, ಚರಿತ್ರೆ, ಸಂವಿಧಾನದ ಆಶಯಗಳ ಬಗ್ಗೆ ಗೌರವ ಇರುವವರನ್ನು ಸಮಿತಿಗಳಿಗೆ ನೇಮಿಸಬೇಕು. ಇಷ್ಟೆಲ್ಲಾ ಯಡವಟ್ಟುಗಳಿಗೆ ಕಾರಣರಾದ ಶಿಕ್ಷಣ ಸಚಿವ ನಾಗೇಶ್ ಅವರ ರಾಜೀನಾಮೆಯನ್ನು ಕೂಡಲೇ ಪಡೆಯಬೇಕು ಎಂದು ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...