Homeಕರ್ನಾಟಕಶಿಕ್ಷಣ ಸಚಿವರನ್ನು ತಕ್ಷಣ ಕಿತ್ತು ಹಾಕಿ- ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಪತ್ರ

ಶಿಕ್ಷಣ ಸಚಿವರನ್ನು ತಕ್ಷಣ ಕಿತ್ತು ಹಾಕಿ- ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಪತ್ರ

- Advertisement -
- Advertisement -

ಪಠ್ಯ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಭಾರೀ ಅನಾಹುತಗಳಿಗೆ ಕಾರಣರಾದ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರನ್ನು ಸಂಪುಟದಿಂದ ಕೈಬಿಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತು ಸಿಎಂ ಬೊಮ್ಮಾಯಿಯವರಿಗೆ ಪತ್ರ ಬರೆದಿರುವ ಅವರು, “ನಾಡಿನ ಜನತೆಯ ಆಕ್ರೋಶದ ಬಳಿಕ ಬಹಳ ತಡವಾಗಿಯಾದರೂ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯನ್ನು ವಿಸರ್ಜಿಸಿದ್ದೀರಿ. ಆದರೆ, ಈ ಸಮಿತಿ ಪಠ್ಯದೊಳಗೆ ತುರುಕಿರುವ ಸಂವಿಧಾನ ವಿರೋಧಿ ಮತ್ತು ಸಂಗತಿಗಳನ್ನು ಹಾಗೇ ಉಳಿಸಿಕೊಂಡಿದ್ದೀರಿ. ಜಾತಿ ಶ್ರೇಷ್ಠತೆಯ ವ್ಯಸನದ ಸಂಗತಿಗಳನ್ನು ಪಠ್ಯದೊಳಗೆ ಉಳಿಸಿಕೊಳ್ಳುವುದು ಹಾಗೂ ಪ್ರಧಾನವಾಗಿ ಒಂದು ಜಾತಿಯವರ ಬರಹಗಳನ್ನು, ವಿಚಾರಗಳನ್ನು ನಾಡಿನ ಮೇಲೆ ಹೇರಲು ಹೊರಟಿರುವುದು ಅತ್ಯಂತ ಅಪಾಯಕಾರಿ ನಡೆಯಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಪಠ್ಯ ಪುಸ್ತಕ ಪರಿಷ್ಕರಣೆಗೆ ಅಗತ್ಯವಾದ ಬೌದ್ಧಿಕ ತಿಳಿವಳಿಕೆ ಮತ್ತು ಅರ್ಹತೆಗಳಿಲ್ಲದ, ಸಾಮಾಜಿಕ ತಾಣಗಳಲ್ಲಿ ಶೂದ್ರ-ದಲಿತ ಪರಂಪರೆ ಮತ್ತು ಸಂಸ್ಕೃತಿ ಬಗೆಗೆ ವಿಕೃತಿ ಕಾರಿಕೊಳ್ಳುವುದನ್ನೇ ಪಾಂಡಿತ್ಯ ಎಂದುಕೊಂಡಿರುವ ಹಾಗೂ ಮಹಿಳೆಯರ ಬಗ್ಗೆ ಕನಿಷ್ಠ ಗೌರವವೂ ಇಲ್ಲದಂತೆ ಬಹಿರಂಗವಾಗಿ ಪೋಸ್ಟ್‌ಗಳನ್ನು ಹಾಕಿ ಅಸಹ್ಯ ಆಚರಿಸುತ್ತಿದ್ದ ವ್ಯಕ್ತಿಯನ್ನು ಪಠ್ಯ ಪರಿಷ್ಕರಣೆ ಸಮಿತಿಗೆ ಅಧ್ಯಕ್ಷನನ್ನಾಗಿ ಮಾಡಿ ನಾಡಿನ ಸಾಂಸ್ಕೃತಿಕ ಪರಂಪರೆಗೆ ದ್ರೋಹ ಎಸಗಿ ಸರ್ಕಾರ ಗಂಭೀರ ಅಪರಾಧ ಮಾಡಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಎನ್ನುವ ಸಾಲಿನಿಂದ “ಸಂವಿಧಾನ ಶಿಲ್ಪಿ” ಎನ್ನುವ ಪದಕ್ಕೆ ಕತ್ತರಿ ಹಾಕಲಾಗಿದೆ. ಅಂಬೇಡ್ಕರ್ ಅವರನ್ನು ಸಂವಿಧಾನ ಶಿಲ್ಪಿ ಎಂದು ಇಡೀ ವಿಶ್ವವೇ ಒಪ್ಪಿಕೊಂಡಿದೆ. ಆದರೆ, ಮನುವಾದಿ ವಿಕೃತ ರೋಗಿಷ್ಠರಿಗೆ ಮಾತ್ರ ಬಾಬಾಸಾಹೇಬರು ಕನಸಿನಲ್ಲೂ ದಿಗಿಲು ಬೀಳಿಸುತ್ತಾರೆ. ನಿಮ್ಮ ಸರ್ಕಾರಕ್ಕೆ ಇದನ್ನು ಕತ್ತರಿಸಿ ಹಾಕುವ ರೋಗ ಬಂದಿದೆ. ಜತೆಗೆ ಕನ್ನಡ ರಾಜ್ಯೋತ್ಸವದ ಕುರಿತ ಪಠ್ಯವನ್ನೂ ಕಿತ್ತುಹಾಕಿ ಬಿಜೆಪಿ ನಾಡದ್ರೋಹಿ ಪರಂಪರೆಯನ್ನು ಮುಂದುವರೆಸಿದೆ. ಇಂಥಾ ಅಸಹ್ಯದ ನೂರಾರು ಅಧ್ವಾನಗಳನ್ನು ಪಠ್ಯ ಪರಿಷ್ಕರಣ ಸಮಿತಿ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇವನೂರು ಮಹದೇವ, ಮೂಡ್ನಾಕೂಡು ಚಿನ್ನಸ್ವಾಮಿಯವರಂತಹ ಹಿರಿಯ ಬರಹಗಾರರು ತಮ್ಮ ತಕರಾರುಗಳನ್ನು ವ್ಯಕ್ತಪಡಿಸಿದಾಗ ಆ ತಕರಾರುಗಳನ್ನು ಕೇಳಿಸಿಕೊಳ್ಳುವ ಸೌಜನ್ಯವೂ ಇಲ್ಲದಂತೆ ಸರ್ಕಾರ ಮತ್ತು ಪಠ್ಯ ಪುಸ್ತಕ ಸಮಿತಿ ವಿಕೃತಿ ಮೆರೆದಿದೆ. ನಾಡಿನ ಹಿರಿಯ ಮಠಾಧೀಶರು ತಮ್ಮ ವಿರೋಧವನ್ನು ವ್ಯಕ್ತಪಡಿಸಿದಾಗ ಅವರುಗಳ ಸಾತ್ವಿಕ ಸಿಟ್ಟನ್ನೂ ಲೇವಡಿ ಮಾಡುವ ರೀತಿಯಲ್ಲಿ ಸಚಿವರು ಮತ್ತು ಪಕ್ಷದ ಮುಖಂಡರಿಂದ ರಾಜಕೀಯ ಹೇಳಿಕೆ ಕೊಡಿಸಲಾಗಿದೆ. ಮಠಾಧೀಶರನ್ನು ಕಾಂಗ್ರೆಸ್ ವಕ್ತಾರರು ಎನ್ನುವ ಅರ್ಥ ಬರುವಂತೆ ಸಚಿವರುಗಳಿಂದ ಪರೋಕ್ಷ ಹೇಳಿಕೆ ಕೊಡಿಸಿ ಮಠ ಪರಂಪರೆಗೆ ಅವಮಾನ ಎಸಗಿದಂತೆ ಸರ್ಕಾರ ವರ್ತಿಸಿದೆ ಎಂದು ಸಿದ್ದರಾಮಯ್ಯ ದೂರಿದ್ದಾರೆ.

ನಮ್ಮ ನಾಡಗೀತೆಯು ಸರ್ಕಾರದ ಅಧಿಕೃತ ಗುರುತು. ನಾಡಿನ ಸಾರ್ವಭೌಮತೆಯ ಸಂಕೇತ. ಇಂತಹ ಗುರುತರವಾದ ಸಂಗತಿಗೆ ಅವಮಾನ ಮಾಡಿರುವ ಚಕ್ರತೀರ್ಥನನ್ನು ಸರ್ಕಾರ ಪಠ್ಯ ಪರಿಷ್ಕರಣಾ ಸಮಿತಿಯ ಅಧ್ಯಕ್ಷನನ್ನಾಗಿ ಮಾಡಿದ್ದು ಅಕ್ಷಮ್ಯ. ಈತನ ಮೇಲೆ ರಾಷ್ಟ್ರದ್ರೋಹದ ಪ್ರಕರಣ ದಾಖಲಿಸಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎನ್ನುವ ನಾಡಿನ ಜನತೆಯ, ಲೇಖಕ-ಬರಹಗಾರರ ಮತ್ತು ಸ್ವಾಮೀಜಿಗಳ ಆಗ್ರಹವನ್ನು ಸರ್ಕಾರ ತಕ್ಷಣ ಪಾಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಸವಣ್ಣನವರ ಪಠ್ಯದ ಕುರಿತು ಸಿಎಂ ಬೊಮ್ಮಾಯಿ ಹೇಳಿದ ಸುಳ್ಳುಗಳು ಮತ್ತು ಅರ್ಧ ಸತ್ಯಗಳು

ಈ ಕೂಡಲೇ ವಿಸರ್ಜನೆಗೊಂಡಿರುವ ಸಮಿತಿ ರೂಪಿಸಿರುವ ಪಠ್ಯ ಪುಸ್ತಕಗಳನ್ನು ತಡೆ ಹಿಡಿಯಬೇಕು. ಹಿಂದಿನ ಬರಗೂರು ಸಮಿತಿಯ ಪಠ್ಯಗಳನ್ನೇ ಈ ಸಾಲಿಗೂ ಮಕ್ಕಳಿಗೆ ವಿತರಿಸಬೇಕು. ನಿಜವಾದ ಅರ್ಹತೆ ಇರುವ ಶಿಕ್ಷಣ ತಜ್ಞರ ಸಮಿತಿ ಮೂಲಕ ಪರಿಷ್ಕರಣಾ ಸಮಿತಿ ಮಾಡಿರುವ ಅದ್ವಾನಗಳನ್ನು ಕೂಡಲೇ ಸರಿಪಡಿಸಬೇಕು ಹಾಗೂ ನಾಡಿನ ಸಂಸ್ಕೃತಿ, ಪರಂಪರೆ, ಚರಿತ್ರೆ, ಸಂವಿಧಾನದ ಆಶಯಗಳ ಬಗ್ಗೆ ಗೌರವ ಇರುವವರನ್ನು ಸಮಿತಿಗಳಿಗೆ ನೇಮಿಸಬೇಕು. ಇಷ್ಟೆಲ್ಲಾ ಯಡವಟ್ಟುಗಳಿಗೆ ಕಾರಣರಾದ ಶಿಕ್ಷಣ ಸಚಿವ ನಾಗೇಶ್ ಅವರ ರಾಜೀನಾಮೆಯನ್ನು ಕೂಡಲೇ ಪಡೆಯಬೇಕು ಎಂದು ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...