Homeಕರ್ನಾಟಕಶಿಕ್ಷಣ ಸಚಿವರನ್ನು ತಕ್ಷಣ ಕಿತ್ತು ಹಾಕಿ- ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಪತ್ರ

ಶಿಕ್ಷಣ ಸಚಿವರನ್ನು ತಕ್ಷಣ ಕಿತ್ತು ಹಾಕಿ- ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಪತ್ರ

- Advertisement -
- Advertisement -

ಪಠ್ಯ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಭಾರೀ ಅನಾಹುತಗಳಿಗೆ ಕಾರಣರಾದ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರನ್ನು ಸಂಪುಟದಿಂದ ಕೈಬಿಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತು ಸಿಎಂ ಬೊಮ್ಮಾಯಿಯವರಿಗೆ ಪತ್ರ ಬರೆದಿರುವ ಅವರು, “ನಾಡಿನ ಜನತೆಯ ಆಕ್ರೋಶದ ಬಳಿಕ ಬಹಳ ತಡವಾಗಿಯಾದರೂ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯನ್ನು ವಿಸರ್ಜಿಸಿದ್ದೀರಿ. ಆದರೆ, ಈ ಸಮಿತಿ ಪಠ್ಯದೊಳಗೆ ತುರುಕಿರುವ ಸಂವಿಧಾನ ವಿರೋಧಿ ಮತ್ತು ಸಂಗತಿಗಳನ್ನು ಹಾಗೇ ಉಳಿಸಿಕೊಂಡಿದ್ದೀರಿ. ಜಾತಿ ಶ್ರೇಷ್ಠತೆಯ ವ್ಯಸನದ ಸಂಗತಿಗಳನ್ನು ಪಠ್ಯದೊಳಗೆ ಉಳಿಸಿಕೊಳ್ಳುವುದು ಹಾಗೂ ಪ್ರಧಾನವಾಗಿ ಒಂದು ಜಾತಿಯವರ ಬರಹಗಳನ್ನು, ವಿಚಾರಗಳನ್ನು ನಾಡಿನ ಮೇಲೆ ಹೇರಲು ಹೊರಟಿರುವುದು ಅತ್ಯಂತ ಅಪಾಯಕಾರಿ ನಡೆಯಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಪಠ್ಯ ಪುಸ್ತಕ ಪರಿಷ್ಕರಣೆಗೆ ಅಗತ್ಯವಾದ ಬೌದ್ಧಿಕ ತಿಳಿವಳಿಕೆ ಮತ್ತು ಅರ್ಹತೆಗಳಿಲ್ಲದ, ಸಾಮಾಜಿಕ ತಾಣಗಳಲ್ಲಿ ಶೂದ್ರ-ದಲಿತ ಪರಂಪರೆ ಮತ್ತು ಸಂಸ್ಕೃತಿ ಬಗೆಗೆ ವಿಕೃತಿ ಕಾರಿಕೊಳ್ಳುವುದನ್ನೇ ಪಾಂಡಿತ್ಯ ಎಂದುಕೊಂಡಿರುವ ಹಾಗೂ ಮಹಿಳೆಯರ ಬಗ್ಗೆ ಕನಿಷ್ಠ ಗೌರವವೂ ಇಲ್ಲದಂತೆ ಬಹಿರಂಗವಾಗಿ ಪೋಸ್ಟ್‌ಗಳನ್ನು ಹಾಕಿ ಅಸಹ್ಯ ಆಚರಿಸುತ್ತಿದ್ದ ವ್ಯಕ್ತಿಯನ್ನು ಪಠ್ಯ ಪರಿಷ್ಕರಣೆ ಸಮಿತಿಗೆ ಅಧ್ಯಕ್ಷನನ್ನಾಗಿ ಮಾಡಿ ನಾಡಿನ ಸಾಂಸ್ಕೃತಿಕ ಪರಂಪರೆಗೆ ದ್ರೋಹ ಎಸಗಿ ಸರ್ಕಾರ ಗಂಭೀರ ಅಪರಾಧ ಮಾಡಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಎನ್ನುವ ಸಾಲಿನಿಂದ “ಸಂವಿಧಾನ ಶಿಲ್ಪಿ” ಎನ್ನುವ ಪದಕ್ಕೆ ಕತ್ತರಿ ಹಾಕಲಾಗಿದೆ. ಅಂಬೇಡ್ಕರ್ ಅವರನ್ನು ಸಂವಿಧಾನ ಶಿಲ್ಪಿ ಎಂದು ಇಡೀ ವಿಶ್ವವೇ ಒಪ್ಪಿಕೊಂಡಿದೆ. ಆದರೆ, ಮನುವಾದಿ ವಿಕೃತ ರೋಗಿಷ್ಠರಿಗೆ ಮಾತ್ರ ಬಾಬಾಸಾಹೇಬರು ಕನಸಿನಲ್ಲೂ ದಿಗಿಲು ಬೀಳಿಸುತ್ತಾರೆ. ನಿಮ್ಮ ಸರ್ಕಾರಕ್ಕೆ ಇದನ್ನು ಕತ್ತರಿಸಿ ಹಾಕುವ ರೋಗ ಬಂದಿದೆ. ಜತೆಗೆ ಕನ್ನಡ ರಾಜ್ಯೋತ್ಸವದ ಕುರಿತ ಪಠ್ಯವನ್ನೂ ಕಿತ್ತುಹಾಕಿ ಬಿಜೆಪಿ ನಾಡದ್ರೋಹಿ ಪರಂಪರೆಯನ್ನು ಮುಂದುವರೆಸಿದೆ. ಇಂಥಾ ಅಸಹ್ಯದ ನೂರಾರು ಅಧ್ವಾನಗಳನ್ನು ಪಠ್ಯ ಪರಿಷ್ಕರಣ ಸಮಿತಿ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇವನೂರು ಮಹದೇವ, ಮೂಡ್ನಾಕೂಡು ಚಿನ್ನಸ್ವಾಮಿಯವರಂತಹ ಹಿರಿಯ ಬರಹಗಾರರು ತಮ್ಮ ತಕರಾರುಗಳನ್ನು ವ್ಯಕ್ತಪಡಿಸಿದಾಗ ಆ ತಕರಾರುಗಳನ್ನು ಕೇಳಿಸಿಕೊಳ್ಳುವ ಸೌಜನ್ಯವೂ ಇಲ್ಲದಂತೆ ಸರ್ಕಾರ ಮತ್ತು ಪಠ್ಯ ಪುಸ್ತಕ ಸಮಿತಿ ವಿಕೃತಿ ಮೆರೆದಿದೆ. ನಾಡಿನ ಹಿರಿಯ ಮಠಾಧೀಶರು ತಮ್ಮ ವಿರೋಧವನ್ನು ವ್ಯಕ್ತಪಡಿಸಿದಾಗ ಅವರುಗಳ ಸಾತ್ವಿಕ ಸಿಟ್ಟನ್ನೂ ಲೇವಡಿ ಮಾಡುವ ರೀತಿಯಲ್ಲಿ ಸಚಿವರು ಮತ್ತು ಪಕ್ಷದ ಮುಖಂಡರಿಂದ ರಾಜಕೀಯ ಹೇಳಿಕೆ ಕೊಡಿಸಲಾಗಿದೆ. ಮಠಾಧೀಶರನ್ನು ಕಾಂಗ್ರೆಸ್ ವಕ್ತಾರರು ಎನ್ನುವ ಅರ್ಥ ಬರುವಂತೆ ಸಚಿವರುಗಳಿಂದ ಪರೋಕ್ಷ ಹೇಳಿಕೆ ಕೊಡಿಸಿ ಮಠ ಪರಂಪರೆಗೆ ಅವಮಾನ ಎಸಗಿದಂತೆ ಸರ್ಕಾರ ವರ್ತಿಸಿದೆ ಎಂದು ಸಿದ್ದರಾಮಯ್ಯ ದೂರಿದ್ದಾರೆ.

ನಮ್ಮ ನಾಡಗೀತೆಯು ಸರ್ಕಾರದ ಅಧಿಕೃತ ಗುರುತು. ನಾಡಿನ ಸಾರ್ವಭೌಮತೆಯ ಸಂಕೇತ. ಇಂತಹ ಗುರುತರವಾದ ಸಂಗತಿಗೆ ಅವಮಾನ ಮಾಡಿರುವ ಚಕ್ರತೀರ್ಥನನ್ನು ಸರ್ಕಾರ ಪಠ್ಯ ಪರಿಷ್ಕರಣಾ ಸಮಿತಿಯ ಅಧ್ಯಕ್ಷನನ್ನಾಗಿ ಮಾಡಿದ್ದು ಅಕ್ಷಮ್ಯ. ಈತನ ಮೇಲೆ ರಾಷ್ಟ್ರದ್ರೋಹದ ಪ್ರಕರಣ ದಾಖಲಿಸಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎನ್ನುವ ನಾಡಿನ ಜನತೆಯ, ಲೇಖಕ-ಬರಹಗಾರರ ಮತ್ತು ಸ್ವಾಮೀಜಿಗಳ ಆಗ್ರಹವನ್ನು ಸರ್ಕಾರ ತಕ್ಷಣ ಪಾಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಸವಣ್ಣನವರ ಪಠ್ಯದ ಕುರಿತು ಸಿಎಂ ಬೊಮ್ಮಾಯಿ ಹೇಳಿದ ಸುಳ್ಳುಗಳು ಮತ್ತು ಅರ್ಧ ಸತ್ಯಗಳು

ಈ ಕೂಡಲೇ ವಿಸರ್ಜನೆಗೊಂಡಿರುವ ಸಮಿತಿ ರೂಪಿಸಿರುವ ಪಠ್ಯ ಪುಸ್ತಕಗಳನ್ನು ತಡೆ ಹಿಡಿಯಬೇಕು. ಹಿಂದಿನ ಬರಗೂರು ಸಮಿತಿಯ ಪಠ್ಯಗಳನ್ನೇ ಈ ಸಾಲಿಗೂ ಮಕ್ಕಳಿಗೆ ವಿತರಿಸಬೇಕು. ನಿಜವಾದ ಅರ್ಹತೆ ಇರುವ ಶಿಕ್ಷಣ ತಜ್ಞರ ಸಮಿತಿ ಮೂಲಕ ಪರಿಷ್ಕರಣಾ ಸಮಿತಿ ಮಾಡಿರುವ ಅದ್ವಾನಗಳನ್ನು ಕೂಡಲೇ ಸರಿಪಡಿಸಬೇಕು ಹಾಗೂ ನಾಡಿನ ಸಂಸ್ಕೃತಿ, ಪರಂಪರೆ, ಚರಿತ್ರೆ, ಸಂವಿಧಾನದ ಆಶಯಗಳ ಬಗ್ಗೆ ಗೌರವ ಇರುವವರನ್ನು ಸಮಿತಿಗಳಿಗೆ ನೇಮಿಸಬೇಕು. ಇಷ್ಟೆಲ್ಲಾ ಯಡವಟ್ಟುಗಳಿಗೆ ಕಾರಣರಾದ ಶಿಕ್ಷಣ ಸಚಿವ ನಾಗೇಶ್ ಅವರ ರಾಜೀನಾಮೆಯನ್ನು ಕೂಡಲೇ ಪಡೆಯಬೇಕು ಎಂದು ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...