Homeಕರ್ನಾಟಕಶಿಕ್ಷಣ ಸಚಿವರನ್ನು ತಕ್ಷಣ ಕಿತ್ತು ಹಾಕಿ- ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಪತ್ರ

ಶಿಕ್ಷಣ ಸಚಿವರನ್ನು ತಕ್ಷಣ ಕಿತ್ತು ಹಾಕಿ- ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಪತ್ರ

- Advertisement -
- Advertisement -

ಪಠ್ಯ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಭಾರೀ ಅನಾಹುತಗಳಿಗೆ ಕಾರಣರಾದ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರನ್ನು ಸಂಪುಟದಿಂದ ಕೈಬಿಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತು ಸಿಎಂ ಬೊಮ್ಮಾಯಿಯವರಿಗೆ ಪತ್ರ ಬರೆದಿರುವ ಅವರು, “ನಾಡಿನ ಜನತೆಯ ಆಕ್ರೋಶದ ಬಳಿಕ ಬಹಳ ತಡವಾಗಿಯಾದರೂ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯನ್ನು ವಿಸರ್ಜಿಸಿದ್ದೀರಿ. ಆದರೆ, ಈ ಸಮಿತಿ ಪಠ್ಯದೊಳಗೆ ತುರುಕಿರುವ ಸಂವಿಧಾನ ವಿರೋಧಿ ಮತ್ತು ಸಂಗತಿಗಳನ್ನು ಹಾಗೇ ಉಳಿಸಿಕೊಂಡಿದ್ದೀರಿ. ಜಾತಿ ಶ್ರೇಷ್ಠತೆಯ ವ್ಯಸನದ ಸಂಗತಿಗಳನ್ನು ಪಠ್ಯದೊಳಗೆ ಉಳಿಸಿಕೊಳ್ಳುವುದು ಹಾಗೂ ಪ್ರಧಾನವಾಗಿ ಒಂದು ಜಾತಿಯವರ ಬರಹಗಳನ್ನು, ವಿಚಾರಗಳನ್ನು ನಾಡಿನ ಮೇಲೆ ಹೇರಲು ಹೊರಟಿರುವುದು ಅತ್ಯಂತ ಅಪಾಯಕಾರಿ ನಡೆಯಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಪಠ್ಯ ಪುಸ್ತಕ ಪರಿಷ್ಕರಣೆಗೆ ಅಗತ್ಯವಾದ ಬೌದ್ಧಿಕ ತಿಳಿವಳಿಕೆ ಮತ್ತು ಅರ್ಹತೆಗಳಿಲ್ಲದ, ಸಾಮಾಜಿಕ ತಾಣಗಳಲ್ಲಿ ಶೂದ್ರ-ದಲಿತ ಪರಂಪರೆ ಮತ್ತು ಸಂಸ್ಕೃತಿ ಬಗೆಗೆ ವಿಕೃತಿ ಕಾರಿಕೊಳ್ಳುವುದನ್ನೇ ಪಾಂಡಿತ್ಯ ಎಂದುಕೊಂಡಿರುವ ಹಾಗೂ ಮಹಿಳೆಯರ ಬಗ್ಗೆ ಕನಿಷ್ಠ ಗೌರವವೂ ಇಲ್ಲದಂತೆ ಬಹಿರಂಗವಾಗಿ ಪೋಸ್ಟ್‌ಗಳನ್ನು ಹಾಕಿ ಅಸಹ್ಯ ಆಚರಿಸುತ್ತಿದ್ದ ವ್ಯಕ್ತಿಯನ್ನು ಪಠ್ಯ ಪರಿಷ್ಕರಣೆ ಸಮಿತಿಗೆ ಅಧ್ಯಕ್ಷನನ್ನಾಗಿ ಮಾಡಿ ನಾಡಿನ ಸಾಂಸ್ಕೃತಿಕ ಪರಂಪರೆಗೆ ದ್ರೋಹ ಎಸಗಿ ಸರ್ಕಾರ ಗಂಭೀರ ಅಪರಾಧ ಮಾಡಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಎನ್ನುವ ಸಾಲಿನಿಂದ “ಸಂವಿಧಾನ ಶಿಲ್ಪಿ” ಎನ್ನುವ ಪದಕ್ಕೆ ಕತ್ತರಿ ಹಾಕಲಾಗಿದೆ. ಅಂಬೇಡ್ಕರ್ ಅವರನ್ನು ಸಂವಿಧಾನ ಶಿಲ್ಪಿ ಎಂದು ಇಡೀ ವಿಶ್ವವೇ ಒಪ್ಪಿಕೊಂಡಿದೆ. ಆದರೆ, ಮನುವಾದಿ ವಿಕೃತ ರೋಗಿಷ್ಠರಿಗೆ ಮಾತ್ರ ಬಾಬಾಸಾಹೇಬರು ಕನಸಿನಲ್ಲೂ ದಿಗಿಲು ಬೀಳಿಸುತ್ತಾರೆ. ನಿಮ್ಮ ಸರ್ಕಾರಕ್ಕೆ ಇದನ್ನು ಕತ್ತರಿಸಿ ಹಾಕುವ ರೋಗ ಬಂದಿದೆ. ಜತೆಗೆ ಕನ್ನಡ ರಾಜ್ಯೋತ್ಸವದ ಕುರಿತ ಪಠ್ಯವನ್ನೂ ಕಿತ್ತುಹಾಕಿ ಬಿಜೆಪಿ ನಾಡದ್ರೋಹಿ ಪರಂಪರೆಯನ್ನು ಮುಂದುವರೆಸಿದೆ. ಇಂಥಾ ಅಸಹ್ಯದ ನೂರಾರು ಅಧ್ವಾನಗಳನ್ನು ಪಠ್ಯ ಪರಿಷ್ಕರಣ ಸಮಿತಿ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇವನೂರು ಮಹದೇವ, ಮೂಡ್ನಾಕೂಡು ಚಿನ್ನಸ್ವಾಮಿಯವರಂತಹ ಹಿರಿಯ ಬರಹಗಾರರು ತಮ್ಮ ತಕರಾರುಗಳನ್ನು ವ್ಯಕ್ತಪಡಿಸಿದಾಗ ಆ ತಕರಾರುಗಳನ್ನು ಕೇಳಿಸಿಕೊಳ್ಳುವ ಸೌಜನ್ಯವೂ ಇಲ್ಲದಂತೆ ಸರ್ಕಾರ ಮತ್ತು ಪಠ್ಯ ಪುಸ್ತಕ ಸಮಿತಿ ವಿಕೃತಿ ಮೆರೆದಿದೆ. ನಾಡಿನ ಹಿರಿಯ ಮಠಾಧೀಶರು ತಮ್ಮ ವಿರೋಧವನ್ನು ವ್ಯಕ್ತಪಡಿಸಿದಾಗ ಅವರುಗಳ ಸಾತ್ವಿಕ ಸಿಟ್ಟನ್ನೂ ಲೇವಡಿ ಮಾಡುವ ರೀತಿಯಲ್ಲಿ ಸಚಿವರು ಮತ್ತು ಪಕ್ಷದ ಮುಖಂಡರಿಂದ ರಾಜಕೀಯ ಹೇಳಿಕೆ ಕೊಡಿಸಲಾಗಿದೆ. ಮಠಾಧೀಶರನ್ನು ಕಾಂಗ್ರೆಸ್ ವಕ್ತಾರರು ಎನ್ನುವ ಅರ್ಥ ಬರುವಂತೆ ಸಚಿವರುಗಳಿಂದ ಪರೋಕ್ಷ ಹೇಳಿಕೆ ಕೊಡಿಸಿ ಮಠ ಪರಂಪರೆಗೆ ಅವಮಾನ ಎಸಗಿದಂತೆ ಸರ್ಕಾರ ವರ್ತಿಸಿದೆ ಎಂದು ಸಿದ್ದರಾಮಯ್ಯ ದೂರಿದ್ದಾರೆ.

ನಮ್ಮ ನಾಡಗೀತೆಯು ಸರ್ಕಾರದ ಅಧಿಕೃತ ಗುರುತು. ನಾಡಿನ ಸಾರ್ವಭೌಮತೆಯ ಸಂಕೇತ. ಇಂತಹ ಗುರುತರವಾದ ಸಂಗತಿಗೆ ಅವಮಾನ ಮಾಡಿರುವ ಚಕ್ರತೀರ್ಥನನ್ನು ಸರ್ಕಾರ ಪಠ್ಯ ಪರಿಷ್ಕರಣಾ ಸಮಿತಿಯ ಅಧ್ಯಕ್ಷನನ್ನಾಗಿ ಮಾಡಿದ್ದು ಅಕ್ಷಮ್ಯ. ಈತನ ಮೇಲೆ ರಾಷ್ಟ್ರದ್ರೋಹದ ಪ್ರಕರಣ ದಾಖಲಿಸಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎನ್ನುವ ನಾಡಿನ ಜನತೆಯ, ಲೇಖಕ-ಬರಹಗಾರರ ಮತ್ತು ಸ್ವಾಮೀಜಿಗಳ ಆಗ್ರಹವನ್ನು ಸರ್ಕಾರ ತಕ್ಷಣ ಪಾಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಸವಣ್ಣನವರ ಪಠ್ಯದ ಕುರಿತು ಸಿಎಂ ಬೊಮ್ಮಾಯಿ ಹೇಳಿದ ಸುಳ್ಳುಗಳು ಮತ್ತು ಅರ್ಧ ಸತ್ಯಗಳು

ಈ ಕೂಡಲೇ ವಿಸರ್ಜನೆಗೊಂಡಿರುವ ಸಮಿತಿ ರೂಪಿಸಿರುವ ಪಠ್ಯ ಪುಸ್ತಕಗಳನ್ನು ತಡೆ ಹಿಡಿಯಬೇಕು. ಹಿಂದಿನ ಬರಗೂರು ಸಮಿತಿಯ ಪಠ್ಯಗಳನ್ನೇ ಈ ಸಾಲಿಗೂ ಮಕ್ಕಳಿಗೆ ವಿತರಿಸಬೇಕು. ನಿಜವಾದ ಅರ್ಹತೆ ಇರುವ ಶಿಕ್ಷಣ ತಜ್ಞರ ಸಮಿತಿ ಮೂಲಕ ಪರಿಷ್ಕರಣಾ ಸಮಿತಿ ಮಾಡಿರುವ ಅದ್ವಾನಗಳನ್ನು ಕೂಡಲೇ ಸರಿಪಡಿಸಬೇಕು ಹಾಗೂ ನಾಡಿನ ಸಂಸ್ಕೃತಿ, ಪರಂಪರೆ, ಚರಿತ್ರೆ, ಸಂವಿಧಾನದ ಆಶಯಗಳ ಬಗ್ಗೆ ಗೌರವ ಇರುವವರನ್ನು ಸಮಿತಿಗಳಿಗೆ ನೇಮಿಸಬೇಕು. ಇಷ್ಟೆಲ್ಲಾ ಯಡವಟ್ಟುಗಳಿಗೆ ಕಾರಣರಾದ ಶಿಕ್ಷಣ ಸಚಿವ ನಾಗೇಶ್ ಅವರ ರಾಜೀನಾಮೆಯನ್ನು ಕೂಡಲೇ ಪಡೆಯಬೇಕು ಎಂದು ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...