Homeಮುಖಪುಟಮಹಿಳೆಯರ ಕನಿಷ್ಠ ವಿವಾಹ ವಯಸ್ಸು ಹೆಚ್ಚಿಸಲು ಕೋರಿದ್ದ ಅರ್ಜಿ ವಜಾ; ಬಿಜೆಪಿ ನಾಯಕನಿಗೆ ಸುಪ್ರೀಂ ಛೀಮಾರಿ

ಮಹಿಳೆಯರ ಕನಿಷ್ಠ ವಿವಾಹ ವಯಸ್ಸು ಹೆಚ್ಚಿಸಲು ಕೋರಿದ್ದ ಅರ್ಜಿ ವಜಾ; ಬಿಜೆಪಿ ನಾಯಕನಿಗೆ ಸುಪ್ರೀಂ ಛೀಮಾರಿ

- Advertisement -
- Advertisement -

ಮಹಿಳೆಯರ ಕನಿಷ್ಠ ವಿವಾಹ ವಯಸ್ಸನ್ನು ಪುರುಷರಿಗೆ ಸಮಾನವಾಗಿ 18 ವರ್ಷದಿಂದ 21 ವರ್ಷಕ್ಕೆ ಹೆಚ್ಚಿಸುವಂತೆ ಕೋರಿ ಭಾರತೀಯ ಜನತಾ ಪಕ್ಷದ ನಾಯಕ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಅರ್ಜಿದಾರ-ವಕೀಲ ಅಶ್ವಿನಿ ಉಪಾಧ್ಯಾಯ ಅವರನ್ನು ಉದ್ದೇಶಿಸಿ ಮಾತನಾಡಿದ್ದು, ”ನಾವು ಸಂವಿಧಾನದ ವಿಶೇಷ ಪಾಲಕರು ಎಂದು ಗ್ರಹಿಸಬಾರದು. ಸಂಸತ್ತು ಕೂಡ ಸಂವಿಧಾನದ ಪಾಲಕ. ಏಕರೂಪದ ಮದುವೆ ವಯಸ್ಸನ್ನು ಕಾನೂನು ತಿದ್ದುಪಡಿ ಮಾಡುವ ಮೂಲಕ ನಿಗದಿ ಮಾಡಬಹುದು. ಹಾಗೆ ಮಾಡುವ ಅಧಿಕಾರ ಸಂಸತ್ತಿಗೆ ಇರುತ್ತದೆ. ಸಂಸತ್ತು ಮಾತ್ರ ತಿದ್ದುಪಡಿ ಮತ್ತು ಶಾಸನವನ್ನು ಮಾಡಬಹುದಾದ ಕೆಲವು ವಿಷಯಗಳಿವೆ… ನಾವು ಇಲ್ಲಿ ಆ ಬಗ್ಗೆ ಕಾನೂನನ್ನು ಜಾರಿಗೊಳಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

”ವಿಶೇಷ ವಿವಾಹ ಕಾಯಿದೆ ಮತ್ತು ಬಾಲ್ಯವಿವಾಹ ನಿಷೇಧ ಕಾಯಿದೆಯಲ್ಲಿ ಕನಿಷ್ಠ ವಿವಾಹದ ವಯಸ್ಸು 18 ವರ್ಷಗಳು, ಆದರೆ ಷರಿಯಾ ಕಾನೂನು ಪ್ರೌಢಾವಸ್ಥೆಯ ವಯಸ್ಸನ್ನು ಮದುವೆಯ ವಯಸ್ಸಾಗಿ ಅನುಮತಿಸಿದ್ದಾರೆ. ಆದ್ದರಿಂದ ಮದುವೆಯ ಏಕರೂಪದ ವಯಸ್ಸು ಇರಬೇಕು” ಎಂದು ಉಪಾಧ್ಯಾಯ ಅವರು ಸೂಚಿಸಿದರು.

ಇದನ್ನೂ ಓದಿ: ಗೋಧ್ರಾ ರೈಲು ದಹಿಸಿದ ಅಪರಾಧಿಗಳ ಬಿಡುಗಡೆ ಅಸಾಧ್ಯ; ಸುಪ್ರೀಂನಲ್ಲಿ ಗುಜರಾತ್ ಸರ್ಕಾರ ಹೇಳಿಕೆ

”ಅರ್ಜಿದಾರರು ವಿವಾಹದ ಕನಿಷ್ಠ ವಯಸ್ಸನ್ನು 21 ವರ್ಷಕ್ಕೆ ಹೆಚ್ಚಿಸಲು ಶಾಸಕಾಂಗ ತಿದ್ದುಪಡಿಯನ್ನು ಬಯಸುತ್ತಾರೆ… ಆದರೆ, ಸಂವಿಧಾನದ ಪರಿಚ್ಛೇದ 32 (ರಿಟ್ ಅಧಿಕಾರ ವ್ಯಾಪ್ತಿ) ಅನ್ನು ಚಲಾಯಿಸುವ ಮೂಲಕ ನ್ಯಾಯಾಲಯವು, ಶಾಸನ ಮಾಡಲು ಸಂಸತ್ತಿಗೆ ಆದೇಶವನ್ನು ನೀಡುವಂತಿಲ್ಲ ಎಂಬುದು ನ್ಯಾಯಸಮ್ಮತ ಕಾನೂನು” ಎಂದು ಕೋರ್ಟ್ ಆದೇಶದಲ್ಲಿ ತಿಳಿಸಿದೆ.

“ನೀವು ಹೆಣ್ಣಿನ ಮದುವೆಯ ವಯಸ್ಸು 18 ವರ್ಷ ಎನ್ನುವುದನ್ನು ತಗೆದು ಹಾಕಿ, ಆಗ ಸ್ವಯಂಚಾಲಿತವಾಗಿ 21 ವರ್ಷವಾಗುತ್ತದೆ” ಎಂದು ಉಪಾಧ್ಯಾಯ ಹೇಳಿದರು.

ಅದಕ್ಕೆ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರು, ”ಆರ್ಟಿಕಲ್ 32ನ್ನು ಅಪಹಾಸ್ಯ ಮಾಡಬೇಡಿ” ಎಂದು ಅವರಿಗೆ ಹೇಳಿದರು.

ಇದರಿಂದ ಅಸಮಾಧಾನಗೊಂಡ ಉಪಾಧ್ಯಾಯ ಅವರು, ಈ ಪ್ರಕರಣವನ್ನು ದೆಹಲಿ ಹೈಕೋರ್ಟ್‌ನಿಂದ ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸಿದೆ ಮತ್ತು ಈಗ ಅದನ್ನು ನೀವು ವಜಾಗೊಳಿಸುತ್ತಿದ್ದೀರಿ ಎಂದರು.

ಅದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರು, ”ಸಂವಿಧಾನದ ಅಡಿಯಲ್ಲಿ ನಮ್ಮ ಕರ್ತವ್ಯವನ್ನು ಮಾಡಲು ನಾವು ಇಲ್ಲಿದ್ದೇವೆ. ನಾವು ನಿಮ್ಮನ್ನು ಮೆಚ್ಚಿಸಲು ಬಂದಿಲ್ಲ ಅಥವಾ ಯಾವುದೇ ರಾಜಕೀಯ ಪಕ್ಷವನ್ನು ಮೆಚ್ಚಿಸಲು ನಾವು ಇಲ್ಲಿ ಬಂದಿಲ್ಲ ದಯವಿಟ್ಟು ಅದನ್ನು ಅರ್ಥಮಾಡಿಕೊಳ್ಳಿ. ಆದ್ದರಿಂದ ನೀವು ನಮ್ಮ ಬಗ್ಗೆ ಏನು ಭಾವಿಸುತ್ತೀರಿ ಎಂಬುದರ ಕುರಿತು ಇಲ್ಲಿ ಹೇಳಬೇಡಿ. ಇದು ರಾಜಕೀಯ ವೇದಿಕೆಯಲ್ಲ” ಎಂದು ಬಿಜೆಪಿ ನಾಯಕನ ವಿರುದ್ಧ ವಾಗ್ದಾಳಿ ನಡೆಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...