Homeಮುಖಪುಟಮಹಿಳೆಯರ ಕನಿಷ್ಠ ವಿವಾಹ ವಯಸ್ಸು ಹೆಚ್ಚಿಸಲು ಕೋರಿದ್ದ ಅರ್ಜಿ ವಜಾ; ಬಿಜೆಪಿ ನಾಯಕನಿಗೆ ಸುಪ್ರೀಂ ಛೀಮಾರಿ

ಮಹಿಳೆಯರ ಕನಿಷ್ಠ ವಿವಾಹ ವಯಸ್ಸು ಹೆಚ್ಚಿಸಲು ಕೋರಿದ್ದ ಅರ್ಜಿ ವಜಾ; ಬಿಜೆಪಿ ನಾಯಕನಿಗೆ ಸುಪ್ರೀಂ ಛೀಮಾರಿ

- Advertisement -
- Advertisement -

ಮಹಿಳೆಯರ ಕನಿಷ್ಠ ವಿವಾಹ ವಯಸ್ಸನ್ನು ಪುರುಷರಿಗೆ ಸಮಾನವಾಗಿ 18 ವರ್ಷದಿಂದ 21 ವರ್ಷಕ್ಕೆ ಹೆಚ್ಚಿಸುವಂತೆ ಕೋರಿ ಭಾರತೀಯ ಜನತಾ ಪಕ್ಷದ ನಾಯಕ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಅರ್ಜಿದಾರ-ವಕೀಲ ಅಶ್ವಿನಿ ಉಪಾಧ್ಯಾಯ ಅವರನ್ನು ಉದ್ದೇಶಿಸಿ ಮಾತನಾಡಿದ್ದು, ”ನಾವು ಸಂವಿಧಾನದ ವಿಶೇಷ ಪಾಲಕರು ಎಂದು ಗ್ರಹಿಸಬಾರದು. ಸಂಸತ್ತು ಕೂಡ ಸಂವಿಧಾನದ ಪಾಲಕ. ಏಕರೂಪದ ಮದುವೆ ವಯಸ್ಸನ್ನು ಕಾನೂನು ತಿದ್ದುಪಡಿ ಮಾಡುವ ಮೂಲಕ ನಿಗದಿ ಮಾಡಬಹುದು. ಹಾಗೆ ಮಾಡುವ ಅಧಿಕಾರ ಸಂಸತ್ತಿಗೆ ಇರುತ್ತದೆ. ಸಂಸತ್ತು ಮಾತ್ರ ತಿದ್ದುಪಡಿ ಮತ್ತು ಶಾಸನವನ್ನು ಮಾಡಬಹುದಾದ ಕೆಲವು ವಿಷಯಗಳಿವೆ… ನಾವು ಇಲ್ಲಿ ಆ ಬಗ್ಗೆ ಕಾನೂನನ್ನು ಜಾರಿಗೊಳಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

”ವಿಶೇಷ ವಿವಾಹ ಕಾಯಿದೆ ಮತ್ತು ಬಾಲ್ಯವಿವಾಹ ನಿಷೇಧ ಕಾಯಿದೆಯಲ್ಲಿ ಕನಿಷ್ಠ ವಿವಾಹದ ವಯಸ್ಸು 18 ವರ್ಷಗಳು, ಆದರೆ ಷರಿಯಾ ಕಾನೂನು ಪ್ರೌಢಾವಸ್ಥೆಯ ವಯಸ್ಸನ್ನು ಮದುವೆಯ ವಯಸ್ಸಾಗಿ ಅನುಮತಿಸಿದ್ದಾರೆ. ಆದ್ದರಿಂದ ಮದುವೆಯ ಏಕರೂಪದ ವಯಸ್ಸು ಇರಬೇಕು” ಎಂದು ಉಪಾಧ್ಯಾಯ ಅವರು ಸೂಚಿಸಿದರು.

ಇದನ್ನೂ ಓದಿ: ಗೋಧ್ರಾ ರೈಲು ದಹಿಸಿದ ಅಪರಾಧಿಗಳ ಬಿಡುಗಡೆ ಅಸಾಧ್ಯ; ಸುಪ್ರೀಂನಲ್ಲಿ ಗುಜರಾತ್ ಸರ್ಕಾರ ಹೇಳಿಕೆ

”ಅರ್ಜಿದಾರರು ವಿವಾಹದ ಕನಿಷ್ಠ ವಯಸ್ಸನ್ನು 21 ವರ್ಷಕ್ಕೆ ಹೆಚ್ಚಿಸಲು ಶಾಸಕಾಂಗ ತಿದ್ದುಪಡಿಯನ್ನು ಬಯಸುತ್ತಾರೆ… ಆದರೆ, ಸಂವಿಧಾನದ ಪರಿಚ್ಛೇದ 32 (ರಿಟ್ ಅಧಿಕಾರ ವ್ಯಾಪ್ತಿ) ಅನ್ನು ಚಲಾಯಿಸುವ ಮೂಲಕ ನ್ಯಾಯಾಲಯವು, ಶಾಸನ ಮಾಡಲು ಸಂಸತ್ತಿಗೆ ಆದೇಶವನ್ನು ನೀಡುವಂತಿಲ್ಲ ಎಂಬುದು ನ್ಯಾಯಸಮ್ಮತ ಕಾನೂನು” ಎಂದು ಕೋರ್ಟ್ ಆದೇಶದಲ್ಲಿ ತಿಳಿಸಿದೆ.

“ನೀವು ಹೆಣ್ಣಿನ ಮದುವೆಯ ವಯಸ್ಸು 18 ವರ್ಷ ಎನ್ನುವುದನ್ನು ತಗೆದು ಹಾಕಿ, ಆಗ ಸ್ವಯಂಚಾಲಿತವಾಗಿ 21 ವರ್ಷವಾಗುತ್ತದೆ” ಎಂದು ಉಪಾಧ್ಯಾಯ ಹೇಳಿದರು.

ಅದಕ್ಕೆ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರು, ”ಆರ್ಟಿಕಲ್ 32ನ್ನು ಅಪಹಾಸ್ಯ ಮಾಡಬೇಡಿ” ಎಂದು ಅವರಿಗೆ ಹೇಳಿದರು.

ಇದರಿಂದ ಅಸಮಾಧಾನಗೊಂಡ ಉಪಾಧ್ಯಾಯ ಅವರು, ಈ ಪ್ರಕರಣವನ್ನು ದೆಹಲಿ ಹೈಕೋರ್ಟ್‌ನಿಂದ ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸಿದೆ ಮತ್ತು ಈಗ ಅದನ್ನು ನೀವು ವಜಾಗೊಳಿಸುತ್ತಿದ್ದೀರಿ ಎಂದರು.

ಅದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರು, ”ಸಂವಿಧಾನದ ಅಡಿಯಲ್ಲಿ ನಮ್ಮ ಕರ್ತವ್ಯವನ್ನು ಮಾಡಲು ನಾವು ಇಲ್ಲಿದ್ದೇವೆ. ನಾವು ನಿಮ್ಮನ್ನು ಮೆಚ್ಚಿಸಲು ಬಂದಿಲ್ಲ ಅಥವಾ ಯಾವುದೇ ರಾಜಕೀಯ ಪಕ್ಷವನ್ನು ಮೆಚ್ಚಿಸಲು ನಾವು ಇಲ್ಲಿ ಬಂದಿಲ್ಲ ದಯವಿಟ್ಟು ಅದನ್ನು ಅರ್ಥಮಾಡಿಕೊಳ್ಳಿ. ಆದ್ದರಿಂದ ನೀವು ನಮ್ಮ ಬಗ್ಗೆ ಏನು ಭಾವಿಸುತ್ತೀರಿ ಎಂಬುದರ ಕುರಿತು ಇಲ್ಲಿ ಹೇಳಬೇಡಿ. ಇದು ರಾಜಕೀಯ ವೇದಿಕೆಯಲ್ಲ” ಎಂದು ಬಿಜೆಪಿ ನಾಯಕನ ವಿರುದ್ಧ ವಾಗ್ದಾಳಿ ನಡೆಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...