Homeಮುಖಪುಟಮಹಿಳೆಯರ ಕನಿಷ್ಠ ವಿವಾಹ ವಯಸ್ಸು ಹೆಚ್ಚಿಸಲು ಕೋರಿದ್ದ ಅರ್ಜಿ ವಜಾ; ಬಿಜೆಪಿ ನಾಯಕನಿಗೆ ಸುಪ್ರೀಂ ಛೀಮಾರಿ

ಮಹಿಳೆಯರ ಕನಿಷ್ಠ ವಿವಾಹ ವಯಸ್ಸು ಹೆಚ್ಚಿಸಲು ಕೋರಿದ್ದ ಅರ್ಜಿ ವಜಾ; ಬಿಜೆಪಿ ನಾಯಕನಿಗೆ ಸುಪ್ರೀಂ ಛೀಮಾರಿ

- Advertisement -
- Advertisement -

ಮಹಿಳೆಯರ ಕನಿಷ್ಠ ವಿವಾಹ ವಯಸ್ಸನ್ನು ಪುರುಷರಿಗೆ ಸಮಾನವಾಗಿ 18 ವರ್ಷದಿಂದ 21 ವರ್ಷಕ್ಕೆ ಹೆಚ್ಚಿಸುವಂತೆ ಕೋರಿ ಭಾರತೀಯ ಜನತಾ ಪಕ್ಷದ ನಾಯಕ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಅರ್ಜಿದಾರ-ವಕೀಲ ಅಶ್ವಿನಿ ಉಪಾಧ್ಯಾಯ ಅವರನ್ನು ಉದ್ದೇಶಿಸಿ ಮಾತನಾಡಿದ್ದು, ”ನಾವು ಸಂವಿಧಾನದ ವಿಶೇಷ ಪಾಲಕರು ಎಂದು ಗ್ರಹಿಸಬಾರದು. ಸಂಸತ್ತು ಕೂಡ ಸಂವಿಧಾನದ ಪಾಲಕ. ಏಕರೂಪದ ಮದುವೆ ವಯಸ್ಸನ್ನು ಕಾನೂನು ತಿದ್ದುಪಡಿ ಮಾಡುವ ಮೂಲಕ ನಿಗದಿ ಮಾಡಬಹುದು. ಹಾಗೆ ಮಾಡುವ ಅಧಿಕಾರ ಸಂಸತ್ತಿಗೆ ಇರುತ್ತದೆ. ಸಂಸತ್ತು ಮಾತ್ರ ತಿದ್ದುಪಡಿ ಮತ್ತು ಶಾಸನವನ್ನು ಮಾಡಬಹುದಾದ ಕೆಲವು ವಿಷಯಗಳಿವೆ… ನಾವು ಇಲ್ಲಿ ಆ ಬಗ್ಗೆ ಕಾನೂನನ್ನು ಜಾರಿಗೊಳಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

”ವಿಶೇಷ ವಿವಾಹ ಕಾಯಿದೆ ಮತ್ತು ಬಾಲ್ಯವಿವಾಹ ನಿಷೇಧ ಕಾಯಿದೆಯಲ್ಲಿ ಕನಿಷ್ಠ ವಿವಾಹದ ವಯಸ್ಸು 18 ವರ್ಷಗಳು, ಆದರೆ ಷರಿಯಾ ಕಾನೂನು ಪ್ರೌಢಾವಸ್ಥೆಯ ವಯಸ್ಸನ್ನು ಮದುವೆಯ ವಯಸ್ಸಾಗಿ ಅನುಮತಿಸಿದ್ದಾರೆ. ಆದ್ದರಿಂದ ಮದುವೆಯ ಏಕರೂಪದ ವಯಸ್ಸು ಇರಬೇಕು” ಎಂದು ಉಪಾಧ್ಯಾಯ ಅವರು ಸೂಚಿಸಿದರು.

ಇದನ್ನೂ ಓದಿ: ಗೋಧ್ರಾ ರೈಲು ದಹಿಸಿದ ಅಪರಾಧಿಗಳ ಬಿಡುಗಡೆ ಅಸಾಧ್ಯ; ಸುಪ್ರೀಂನಲ್ಲಿ ಗುಜರಾತ್ ಸರ್ಕಾರ ಹೇಳಿಕೆ

”ಅರ್ಜಿದಾರರು ವಿವಾಹದ ಕನಿಷ್ಠ ವಯಸ್ಸನ್ನು 21 ವರ್ಷಕ್ಕೆ ಹೆಚ್ಚಿಸಲು ಶಾಸಕಾಂಗ ತಿದ್ದುಪಡಿಯನ್ನು ಬಯಸುತ್ತಾರೆ… ಆದರೆ, ಸಂವಿಧಾನದ ಪರಿಚ್ಛೇದ 32 (ರಿಟ್ ಅಧಿಕಾರ ವ್ಯಾಪ್ತಿ) ಅನ್ನು ಚಲಾಯಿಸುವ ಮೂಲಕ ನ್ಯಾಯಾಲಯವು, ಶಾಸನ ಮಾಡಲು ಸಂಸತ್ತಿಗೆ ಆದೇಶವನ್ನು ನೀಡುವಂತಿಲ್ಲ ಎಂಬುದು ನ್ಯಾಯಸಮ್ಮತ ಕಾನೂನು” ಎಂದು ಕೋರ್ಟ್ ಆದೇಶದಲ್ಲಿ ತಿಳಿಸಿದೆ.

“ನೀವು ಹೆಣ್ಣಿನ ಮದುವೆಯ ವಯಸ್ಸು 18 ವರ್ಷ ಎನ್ನುವುದನ್ನು ತಗೆದು ಹಾಕಿ, ಆಗ ಸ್ವಯಂಚಾಲಿತವಾಗಿ 21 ವರ್ಷವಾಗುತ್ತದೆ” ಎಂದು ಉಪಾಧ್ಯಾಯ ಹೇಳಿದರು.

ಅದಕ್ಕೆ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರು, ”ಆರ್ಟಿಕಲ್ 32ನ್ನು ಅಪಹಾಸ್ಯ ಮಾಡಬೇಡಿ” ಎಂದು ಅವರಿಗೆ ಹೇಳಿದರು.

ಇದರಿಂದ ಅಸಮಾಧಾನಗೊಂಡ ಉಪಾಧ್ಯಾಯ ಅವರು, ಈ ಪ್ರಕರಣವನ್ನು ದೆಹಲಿ ಹೈಕೋರ್ಟ್‌ನಿಂದ ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸಿದೆ ಮತ್ತು ಈಗ ಅದನ್ನು ನೀವು ವಜಾಗೊಳಿಸುತ್ತಿದ್ದೀರಿ ಎಂದರು.

ಅದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರು, ”ಸಂವಿಧಾನದ ಅಡಿಯಲ್ಲಿ ನಮ್ಮ ಕರ್ತವ್ಯವನ್ನು ಮಾಡಲು ನಾವು ಇಲ್ಲಿದ್ದೇವೆ. ನಾವು ನಿಮ್ಮನ್ನು ಮೆಚ್ಚಿಸಲು ಬಂದಿಲ್ಲ ಅಥವಾ ಯಾವುದೇ ರಾಜಕೀಯ ಪಕ್ಷವನ್ನು ಮೆಚ್ಚಿಸಲು ನಾವು ಇಲ್ಲಿ ಬಂದಿಲ್ಲ ದಯವಿಟ್ಟು ಅದನ್ನು ಅರ್ಥಮಾಡಿಕೊಳ್ಳಿ. ಆದ್ದರಿಂದ ನೀವು ನಮ್ಮ ಬಗ್ಗೆ ಏನು ಭಾವಿಸುತ್ತೀರಿ ಎಂಬುದರ ಕುರಿತು ಇಲ್ಲಿ ಹೇಳಬೇಡಿ. ಇದು ರಾಜಕೀಯ ವೇದಿಕೆಯಲ್ಲ” ಎಂದು ಬಿಜೆಪಿ ನಾಯಕನ ವಿರುದ್ಧ ವಾಗ್ದಾಳಿ ನಡೆಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...