Homeಕರ್ನಾಟಕಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾ: ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ ಕಾರ್ಮಿಕರು

ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾ: ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ ಕಾರ್ಮಿಕರು

- Advertisement -
- Advertisement -

ಒಕ್ಕೂಟ ಸರ್ಕಾರದ ಮಾಲಿಕತ್ವದ ದೂರಸಂಪರ್ಕ ಉಪಕರಣಗಳ ತಯಾರಿಕಾ ಕಂಪನಿಯಾದ ‘ಐಟಿಐ ಲಿಮಿಟೆಡ್‌‌’ನ ಕಾರ್ಮಿಕರು ತಮ್ಮ ಕಾನೂನು ಬದ್ಧ ಹಕ್ಕುಗಳಿಗಾಗಿ ಒತ್ತಾಯಿಸಿ ಕಳೆದ ವರ್ಷ ಡಿಸೆಂಬರ್‌ನಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಈ ಹೋರಾಟಕ್ಕೆ ಎರಡು ತಿಂಗಳು ತುಂಬಿದೆ. ಇದೀಗ ಕಾರ್ಮಿಕರು ತಮ್ಮ ಹೋರಾಟವನ್ನು ತೀವ್ರಗೊಳಿಸಲು ನಿರ್ಧರಿಸಿದ್ದು ಸೋಮವಾರದಿಂದ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ್ದಾರೆ.

2021 ರ ಡಿಸೆಂಬರ್ 1 ರಂದು, ಬೆಂಗಳೂರಿನಲ್ಲಿರುವ ಭಾರತದ ಮೊದಲ ಸಾರ್ವಜನಿಕ ವಲಯದ ಉದ್ಯಮವಾದ ಐಟಿಐ ಲಿಮಿಟೆಡ್‌ನಲ್ಲಿ ಕಳೆದ 5 ರಿಂದ 30 ವರ್ಷಗ ನಡುವೆ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರನ್ನು ಕಂಪೆನಿಯು ಕೆಲಸದಿಂದ ವಜಾ ಮಾಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಕಾರ್ಮಿಕರು, ತಾವು ಸಂಘಟನೆ ಕಟ್ಟಿ ಕಾನೂನು ಬದ್ಧ ಹಕ್ಕುಗಳಿಗಾಗಿ ಒತ್ತಾಯಿಸಿದ್ದಕ್ಕೆ ಸುಮಾರು 80 ಕಾರ್ಮಿಕರಿಗೆ ಐಟಿಐ ಆಡಳಿತ ಮಂಡಳಿಯು ಉದ್ಯೋಗ ನಿರಾಕರಿದೆ ಎಂದು ಆರೋಪಿಸಿದ್ದರೆ.

ಇದನ್ನೂ ಓದಿ: ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾಗೊಳಿಸಿದ ಬೆಂಗಳೂರಿನ ITI ಕಂಪೆನಿ: ಕಾರ್ಮಿಕರ ಆರೋಪ- ಪ್ರತಿಭಟನೆ

ಅಂದಿನಿಂದಲೂ ಕಾರ್ಮಿಕರು ಕಾರ್ಖಾನೆಯ ಗೇಟ್‌ಗಳ ಮುಂದೆ ಕುಳಿತು ಅಹೋರಾತ್ರಿ ಧರಣಿ ನಡೆಸುತ್ತಿದ್ದು, ತಮಗೆ ಕೆಲಸ ನೀಡುವಂತೆ ಒತ್ತಾಯಿಸುತ್ತಿದ್ದಾರೆ.

ಉಪವಾಸ ಸತ್ಯಾಗ್ರಹದ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕಾರ್ಮಿಕರ ಹೋರಾಟವನ್ನು ಮುನ್ನಡೆಸುತ್ತಿರುವ ಕರ್ನಾಟಕ ಜನರಲ್‌ ಲೇಬರ್‌ ಯೂನಿಯನ್‌, “ಐಟಿಐ ಲಿಮಿಟೆಡ್ ಭಾರತ ಸರ್ಕಾರದ ದೂರಸಂಪರ್ಕ ಇಲಾಖೆ, ಸಂವಹನ ಸಚಿವಾಲಯದ ಅಡಿಯಲ್ಲಿ ಬರುತ್ತದೆ. ಈ ಕಾರ್ಮಿಕರು ಐಟಿಐ ನಿರ್ವಹಿಸುವ ಪ್ರಮುಖವಾದ ಹಲವಾರು ಸೂಕ್ಷ್ಮ ಮತ್ತು ರಕ್ಷಣಾ ಸಂಬಂಧಿತ ಯೋಜನೆಗಳಲ್ಲಿ ವಿವಿಧ ಸಾಧನಗಳ ಉತ್ಪಾದನೆ, ಸಂಶೋಧನೆ ಮತ್ತು ಅಭಿವೃದ್ಧಿ ಮತ್ತು ಕಾರ್ಯರೂಪಕ್ಕೆ ತರುವ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ

ಇಷ್ಟೇ ಅಲ್ಲದೆ, ಈ ಕಾರ್ಮಿಕರನ್ನು ದೇಶದ ಗಡಿಗಳಿಗೂ ಸಹ ಆನ್-ಸೈಟ್‌ನ ರಕ್ಷಣಾ ಕಾರ್ಯಯೋಜನೆಗಳಿಗಾಗಿ ಕಳುಹಿಸಲಾಗಿದೆ. ಕಳೆದ ವರ್ಷ ಕೋವಿಡ್‌ ಸಾಂಕ್ರಾಮಿಕ ರೋಗದ ಮೊದಲ ಅಲೆಯ ಸಮಯದಲ್ಲಿ 3,000 ವೆಂಟಿಲೇಟರ್‌ಗಳು ಮತ್ತು ಫೇಸ್‌ಶೀಲ್ಡ್ ಉತ್ಪಾದನೆಯಲ್ಲಿ ಈ ಕಾರ್ಮಿಕರು ಭಾಗವಹಿಸಿದ್ದರು” ಎಂದು ಕರ್ನಾಟಕ ಜನರಲ್‌ ಲೇಬರ್‌ ಯೂನಿಯನ್‌ ಹೇಳಿದೆ.

 

ಕಾರ್ಮಿಕರಲ್ಲಿ ಹೆಚ್ಚಿನವರು ದಲಿತ ಸಮುದಾಯ ಸೇರಿದವರಾಗಿದ್ದು, ಮಹಿಳೆಯರು ಇದ್ದಾರೆ. ಸುದೀರ್ಫ ವರ್ಷಗಳ ಸೇವೆ ಸಲ್ಲಿಸಿದ, ಕಾರ್ಮಿಕರನ್ನು ‘ಗುತ್ತಿಗೆ ಕಾರ್ಮಿಕರು’ ಎ೦ದು ಬಿಂಬಿಸಿ ಮೂಲಭೂತವಾದ ಹಕ್ಕುಗಳನ್ನು ನಿರಾಕರಿಸಲಾಗಿದೆ ಎಂದು ಯೂನಿಯನ್‌‌ ಹೇಳಿದೆ.

ಇದನ್ನೂ ಓದಿ: ಐಟಿಐ ಕಾರ್ಮಿಕರ ಹೋರಾಟದಲ್ಲಿ ಭಾಗಿಯಾದ ಮೇದಾ ಪಾಟ್ಕರ್‌‌ 

“ಡಿಸೆಂಬರ್‌‌ 14, 2021 ರಂದು ಪ್ರಾದೇಶಿಕ ಕಾರ್ಮಿಕ ಆಯುಕ್ತರು ಎಲ್ಲಾ 80 ಕಾರ್ಮಿಕರಿಗೆ ಮತ್ತೆ ಕೆಲಸ ನೀಡುವಂತೆ ಐಟಿಐ ಲಿಮಿಟೆಡ್‌ನ ಆಡಳಿತ ಮಂಡಳಿಗೆ ಸೂಚನೆ ನೀಡಿದ್ದಾರೆ. ಆದರೆ ಆಡಳಿತ ಮಂಡಳಿಯು ಕಾರ್ಮಿಕರು ಸಂಘಟನೆ ಕಟ್ಟಿ, ಆ ಸಂಘಟನೆಯ ಮೂಲಕ ಅವರನ್ನು ಖಾಯಂಗೊಳಿಸುವಂತೆ ಮತ್ತು ಮಾನವೀಯ ಕೆಲಸದ ವಾತಾವರಣಕ್ಕಾಗಿ ಕಾನೂನು ಹೋರಾಟವನ್ನು ಮಾಡುತ್ತಿರುವುದನ್ನು ಸಹಿಸಿಕೊಳ್ಳುತ್ತಿಲ್ಲ” ಎಂದು ಯುನಿಯನ್‌ ಆರೋಪಿಸಿದೆ.  ಆಡಳಿತ ಮಂಡಳಿಯು ಕಾರ್ಮಿಕ ಆಯುಕ್ತರ ಸೂಚನೆಯನ್ನು ಕೂಡಾ ಪಾಲಿಸುತ್ತಿಲ್ಲ ಎಂದು ಯುನಿಯನ್ ಆಕ್ರೋಶ ವ್ಯಕ್ತಪಡಿಸಿದೆ.

“62 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ, ಐಟಿಐ ಲಿಮಿಟೆಡ್ ಆಡಳಿತ ಮಂಡಳಿ ಯಾವುದೇ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿದೆ. ಅನ್ಯಾಯದ ಕಾರ್ಮಿಕ ವಿರೋಧಿ ನೀತಿಯನ್ನು ಮುಂದುವರೆಸುತ್ತಿದೆ” ಎಂದು ಯೂನಿಯನ್  ಹೇಳಿದೆ.

ಐಟಿಐ ಆಡಳಿತ ಮಂಡಳಿಯು ಈಗ ವಜಾಗೊಂಡಿರುವ ಕಾರ್ಮಿಕರ ಬದಲಿಗೆ ಹೊಸ ಕಾರ್ಮಿಕರನ್ನು ನೇಮಿಸಿಕೊಳ್ಳಲು ಮುಂದಾಗಿದೆ ಎಂದಿರುವ ಯೂನಿಯನ್, “ಐಟಿಐ ಲಿಮಿಟೆಡ್‌ನ ಆಡಳಿತ ಮಂಡಳಿ ಕಾನೂನುಬಾಹಿರ ಕ್ರಮಗಳ ವಿರುದ್ಧ ಮತ್ತು 14.12.2021 ರಂದು ಪ್ರಾದೇಶಿಕ ಕಾರ್ಮಿಕ ಆಯುಕ್ತರು ಈ ಸೂಚನೆಗಳನ್ನು ತಕ್ಷಣ ಪಾಲಿಸಬೇಕು” ಎಂದು ಒತ್ತಾಯಿಸಿದೆ.

ಇದನ್ನೂ ಓದಿ: ITI ವಿದ್ಯಾರ್ಥಿಗಳಿಗೆ ಆಮ್ಲಜನಕ ಘಟಕದ ನಿರ್ವಹಣೆ ತರಬೇತಿಗೆ ಮುಂದಾದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....