Homeಕರ್ನಾಟಕಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾ: ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ ಕಾರ್ಮಿಕರು

ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾ: ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ ಕಾರ್ಮಿಕರು

- Advertisement -
- Advertisement -

ಒಕ್ಕೂಟ ಸರ್ಕಾರದ ಮಾಲಿಕತ್ವದ ದೂರಸಂಪರ್ಕ ಉಪಕರಣಗಳ ತಯಾರಿಕಾ ಕಂಪನಿಯಾದ ‘ಐಟಿಐ ಲಿಮಿಟೆಡ್‌‌’ನ ಕಾರ್ಮಿಕರು ತಮ್ಮ ಕಾನೂನು ಬದ್ಧ ಹಕ್ಕುಗಳಿಗಾಗಿ ಒತ್ತಾಯಿಸಿ ಕಳೆದ ವರ್ಷ ಡಿಸೆಂಬರ್‌ನಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಈ ಹೋರಾಟಕ್ಕೆ ಎರಡು ತಿಂಗಳು ತುಂಬಿದೆ. ಇದೀಗ ಕಾರ್ಮಿಕರು ತಮ್ಮ ಹೋರಾಟವನ್ನು ತೀವ್ರಗೊಳಿಸಲು ನಿರ್ಧರಿಸಿದ್ದು ಸೋಮವಾರದಿಂದ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ್ದಾರೆ.

2021 ರ ಡಿಸೆಂಬರ್ 1 ರಂದು, ಬೆಂಗಳೂರಿನಲ್ಲಿರುವ ಭಾರತದ ಮೊದಲ ಸಾರ್ವಜನಿಕ ವಲಯದ ಉದ್ಯಮವಾದ ಐಟಿಐ ಲಿಮಿಟೆಡ್‌ನಲ್ಲಿ ಕಳೆದ 5 ರಿಂದ 30 ವರ್ಷಗ ನಡುವೆ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರನ್ನು ಕಂಪೆನಿಯು ಕೆಲಸದಿಂದ ವಜಾ ಮಾಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಕಾರ್ಮಿಕರು, ತಾವು ಸಂಘಟನೆ ಕಟ್ಟಿ ಕಾನೂನು ಬದ್ಧ ಹಕ್ಕುಗಳಿಗಾಗಿ ಒತ್ತಾಯಿಸಿದ್ದಕ್ಕೆ ಸುಮಾರು 80 ಕಾರ್ಮಿಕರಿಗೆ ಐಟಿಐ ಆಡಳಿತ ಮಂಡಳಿಯು ಉದ್ಯೋಗ ನಿರಾಕರಿದೆ ಎಂದು ಆರೋಪಿಸಿದ್ದರೆ.

ಇದನ್ನೂ ಓದಿ: ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾಗೊಳಿಸಿದ ಬೆಂಗಳೂರಿನ ITI ಕಂಪೆನಿ: ಕಾರ್ಮಿಕರ ಆರೋಪ- ಪ್ರತಿಭಟನೆ

ಅಂದಿನಿಂದಲೂ ಕಾರ್ಮಿಕರು ಕಾರ್ಖಾನೆಯ ಗೇಟ್‌ಗಳ ಮುಂದೆ ಕುಳಿತು ಅಹೋರಾತ್ರಿ ಧರಣಿ ನಡೆಸುತ್ತಿದ್ದು, ತಮಗೆ ಕೆಲಸ ನೀಡುವಂತೆ ಒತ್ತಾಯಿಸುತ್ತಿದ್ದಾರೆ.

ಉಪವಾಸ ಸತ್ಯಾಗ್ರಹದ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕಾರ್ಮಿಕರ ಹೋರಾಟವನ್ನು ಮುನ್ನಡೆಸುತ್ತಿರುವ ಕರ್ನಾಟಕ ಜನರಲ್‌ ಲೇಬರ್‌ ಯೂನಿಯನ್‌, “ಐಟಿಐ ಲಿಮಿಟೆಡ್ ಭಾರತ ಸರ್ಕಾರದ ದೂರಸಂಪರ್ಕ ಇಲಾಖೆ, ಸಂವಹನ ಸಚಿವಾಲಯದ ಅಡಿಯಲ್ಲಿ ಬರುತ್ತದೆ. ಈ ಕಾರ್ಮಿಕರು ಐಟಿಐ ನಿರ್ವಹಿಸುವ ಪ್ರಮುಖವಾದ ಹಲವಾರು ಸೂಕ್ಷ್ಮ ಮತ್ತು ರಕ್ಷಣಾ ಸಂಬಂಧಿತ ಯೋಜನೆಗಳಲ್ಲಿ ವಿವಿಧ ಸಾಧನಗಳ ಉತ್ಪಾದನೆ, ಸಂಶೋಧನೆ ಮತ್ತು ಅಭಿವೃದ್ಧಿ ಮತ್ತು ಕಾರ್ಯರೂಪಕ್ಕೆ ತರುವ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ

ಇಷ್ಟೇ ಅಲ್ಲದೆ, ಈ ಕಾರ್ಮಿಕರನ್ನು ದೇಶದ ಗಡಿಗಳಿಗೂ ಸಹ ಆನ್-ಸೈಟ್‌ನ ರಕ್ಷಣಾ ಕಾರ್ಯಯೋಜನೆಗಳಿಗಾಗಿ ಕಳುಹಿಸಲಾಗಿದೆ. ಕಳೆದ ವರ್ಷ ಕೋವಿಡ್‌ ಸಾಂಕ್ರಾಮಿಕ ರೋಗದ ಮೊದಲ ಅಲೆಯ ಸಮಯದಲ್ಲಿ 3,000 ವೆಂಟಿಲೇಟರ್‌ಗಳು ಮತ್ತು ಫೇಸ್‌ಶೀಲ್ಡ್ ಉತ್ಪಾದನೆಯಲ್ಲಿ ಈ ಕಾರ್ಮಿಕರು ಭಾಗವಹಿಸಿದ್ದರು” ಎಂದು ಕರ್ನಾಟಕ ಜನರಲ್‌ ಲೇಬರ್‌ ಯೂನಿಯನ್‌ ಹೇಳಿದೆ.

 

ಕಾರ್ಮಿಕರಲ್ಲಿ ಹೆಚ್ಚಿನವರು ದಲಿತ ಸಮುದಾಯ ಸೇರಿದವರಾಗಿದ್ದು, ಮಹಿಳೆಯರು ಇದ್ದಾರೆ. ಸುದೀರ್ಫ ವರ್ಷಗಳ ಸೇವೆ ಸಲ್ಲಿಸಿದ, ಕಾರ್ಮಿಕರನ್ನು ‘ಗುತ್ತಿಗೆ ಕಾರ್ಮಿಕರು’ ಎ೦ದು ಬಿಂಬಿಸಿ ಮೂಲಭೂತವಾದ ಹಕ್ಕುಗಳನ್ನು ನಿರಾಕರಿಸಲಾಗಿದೆ ಎಂದು ಯೂನಿಯನ್‌‌ ಹೇಳಿದೆ.

ಇದನ್ನೂ ಓದಿ: ಐಟಿಐ ಕಾರ್ಮಿಕರ ಹೋರಾಟದಲ್ಲಿ ಭಾಗಿಯಾದ ಮೇದಾ ಪಾಟ್ಕರ್‌‌ 

“ಡಿಸೆಂಬರ್‌‌ 14, 2021 ರಂದು ಪ್ರಾದೇಶಿಕ ಕಾರ್ಮಿಕ ಆಯುಕ್ತರು ಎಲ್ಲಾ 80 ಕಾರ್ಮಿಕರಿಗೆ ಮತ್ತೆ ಕೆಲಸ ನೀಡುವಂತೆ ಐಟಿಐ ಲಿಮಿಟೆಡ್‌ನ ಆಡಳಿತ ಮಂಡಳಿಗೆ ಸೂಚನೆ ನೀಡಿದ್ದಾರೆ. ಆದರೆ ಆಡಳಿತ ಮಂಡಳಿಯು ಕಾರ್ಮಿಕರು ಸಂಘಟನೆ ಕಟ್ಟಿ, ಆ ಸಂಘಟನೆಯ ಮೂಲಕ ಅವರನ್ನು ಖಾಯಂಗೊಳಿಸುವಂತೆ ಮತ್ತು ಮಾನವೀಯ ಕೆಲಸದ ವಾತಾವರಣಕ್ಕಾಗಿ ಕಾನೂನು ಹೋರಾಟವನ್ನು ಮಾಡುತ್ತಿರುವುದನ್ನು ಸಹಿಸಿಕೊಳ್ಳುತ್ತಿಲ್ಲ” ಎಂದು ಯುನಿಯನ್‌ ಆರೋಪಿಸಿದೆ.  ಆಡಳಿತ ಮಂಡಳಿಯು ಕಾರ್ಮಿಕ ಆಯುಕ್ತರ ಸೂಚನೆಯನ್ನು ಕೂಡಾ ಪಾಲಿಸುತ್ತಿಲ್ಲ ಎಂದು ಯುನಿಯನ್ ಆಕ್ರೋಶ ವ್ಯಕ್ತಪಡಿಸಿದೆ.

“62 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ, ಐಟಿಐ ಲಿಮಿಟೆಡ್ ಆಡಳಿತ ಮಂಡಳಿ ಯಾವುದೇ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿದೆ. ಅನ್ಯಾಯದ ಕಾರ್ಮಿಕ ವಿರೋಧಿ ನೀತಿಯನ್ನು ಮುಂದುವರೆಸುತ್ತಿದೆ” ಎಂದು ಯೂನಿಯನ್  ಹೇಳಿದೆ.

ಐಟಿಐ ಆಡಳಿತ ಮಂಡಳಿಯು ಈಗ ವಜಾಗೊಂಡಿರುವ ಕಾರ್ಮಿಕರ ಬದಲಿಗೆ ಹೊಸ ಕಾರ್ಮಿಕರನ್ನು ನೇಮಿಸಿಕೊಳ್ಳಲು ಮುಂದಾಗಿದೆ ಎಂದಿರುವ ಯೂನಿಯನ್, “ಐಟಿಐ ಲಿಮಿಟೆಡ್‌ನ ಆಡಳಿತ ಮಂಡಳಿ ಕಾನೂನುಬಾಹಿರ ಕ್ರಮಗಳ ವಿರುದ್ಧ ಮತ್ತು 14.12.2021 ರಂದು ಪ್ರಾದೇಶಿಕ ಕಾರ್ಮಿಕ ಆಯುಕ್ತರು ಈ ಸೂಚನೆಗಳನ್ನು ತಕ್ಷಣ ಪಾಲಿಸಬೇಕು” ಎಂದು ಒತ್ತಾಯಿಸಿದೆ.

ಇದನ್ನೂ ಓದಿ: ITI ವಿದ್ಯಾರ್ಥಿಗಳಿಗೆ ಆಮ್ಲಜನಕ ಘಟಕದ ನಿರ್ವಹಣೆ ತರಬೇತಿಗೆ ಮುಂದಾದ ಕೇಂದ್ರ ಸರ್ಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read