Homeಕರ್ನಾಟಕಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾ: ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ ಕಾರ್ಮಿಕರು

ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾ: ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ ಕಾರ್ಮಿಕರು

- Advertisement -
- Advertisement -

ಒಕ್ಕೂಟ ಸರ್ಕಾರದ ಮಾಲಿಕತ್ವದ ದೂರಸಂಪರ್ಕ ಉಪಕರಣಗಳ ತಯಾರಿಕಾ ಕಂಪನಿಯಾದ ‘ಐಟಿಐ ಲಿಮಿಟೆಡ್‌‌’ನ ಕಾರ್ಮಿಕರು ತಮ್ಮ ಕಾನೂನು ಬದ್ಧ ಹಕ್ಕುಗಳಿಗಾಗಿ ಒತ್ತಾಯಿಸಿ ಕಳೆದ ವರ್ಷ ಡಿಸೆಂಬರ್‌ನಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಈ ಹೋರಾಟಕ್ಕೆ ಎರಡು ತಿಂಗಳು ತುಂಬಿದೆ. ಇದೀಗ ಕಾರ್ಮಿಕರು ತಮ್ಮ ಹೋರಾಟವನ್ನು ತೀವ್ರಗೊಳಿಸಲು ನಿರ್ಧರಿಸಿದ್ದು ಸೋಮವಾರದಿಂದ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ್ದಾರೆ.

2021 ರ ಡಿಸೆಂಬರ್ 1 ರಂದು, ಬೆಂಗಳೂರಿನಲ್ಲಿರುವ ಭಾರತದ ಮೊದಲ ಸಾರ್ವಜನಿಕ ವಲಯದ ಉದ್ಯಮವಾದ ಐಟಿಐ ಲಿಮಿಟೆಡ್‌ನಲ್ಲಿ ಕಳೆದ 5 ರಿಂದ 30 ವರ್ಷಗ ನಡುವೆ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರನ್ನು ಕಂಪೆನಿಯು ಕೆಲಸದಿಂದ ವಜಾ ಮಾಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಕಾರ್ಮಿಕರು, ತಾವು ಸಂಘಟನೆ ಕಟ್ಟಿ ಕಾನೂನು ಬದ್ಧ ಹಕ್ಕುಗಳಿಗಾಗಿ ಒತ್ತಾಯಿಸಿದ್ದಕ್ಕೆ ಸುಮಾರು 80 ಕಾರ್ಮಿಕರಿಗೆ ಐಟಿಐ ಆಡಳಿತ ಮಂಡಳಿಯು ಉದ್ಯೋಗ ನಿರಾಕರಿದೆ ಎಂದು ಆರೋಪಿಸಿದ್ದರೆ.

ಇದನ್ನೂ ಓದಿ: ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾಗೊಳಿಸಿದ ಬೆಂಗಳೂರಿನ ITI ಕಂಪೆನಿ: ಕಾರ್ಮಿಕರ ಆರೋಪ- ಪ್ರತಿಭಟನೆ

ಅಂದಿನಿಂದಲೂ ಕಾರ್ಮಿಕರು ಕಾರ್ಖಾನೆಯ ಗೇಟ್‌ಗಳ ಮುಂದೆ ಕುಳಿತು ಅಹೋರಾತ್ರಿ ಧರಣಿ ನಡೆಸುತ್ತಿದ್ದು, ತಮಗೆ ಕೆಲಸ ನೀಡುವಂತೆ ಒತ್ತಾಯಿಸುತ್ತಿದ್ದಾರೆ.

ಉಪವಾಸ ಸತ್ಯಾಗ್ರಹದ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕಾರ್ಮಿಕರ ಹೋರಾಟವನ್ನು ಮುನ್ನಡೆಸುತ್ತಿರುವ ಕರ್ನಾಟಕ ಜನರಲ್‌ ಲೇಬರ್‌ ಯೂನಿಯನ್‌, “ಐಟಿಐ ಲಿಮಿಟೆಡ್ ಭಾರತ ಸರ್ಕಾರದ ದೂರಸಂಪರ್ಕ ಇಲಾಖೆ, ಸಂವಹನ ಸಚಿವಾಲಯದ ಅಡಿಯಲ್ಲಿ ಬರುತ್ತದೆ. ಈ ಕಾರ್ಮಿಕರು ಐಟಿಐ ನಿರ್ವಹಿಸುವ ಪ್ರಮುಖವಾದ ಹಲವಾರು ಸೂಕ್ಷ್ಮ ಮತ್ತು ರಕ್ಷಣಾ ಸಂಬಂಧಿತ ಯೋಜನೆಗಳಲ್ಲಿ ವಿವಿಧ ಸಾಧನಗಳ ಉತ್ಪಾದನೆ, ಸಂಶೋಧನೆ ಮತ್ತು ಅಭಿವೃದ್ಧಿ ಮತ್ತು ಕಾರ್ಯರೂಪಕ್ಕೆ ತರುವ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ

ಇಷ್ಟೇ ಅಲ್ಲದೆ, ಈ ಕಾರ್ಮಿಕರನ್ನು ದೇಶದ ಗಡಿಗಳಿಗೂ ಸಹ ಆನ್-ಸೈಟ್‌ನ ರಕ್ಷಣಾ ಕಾರ್ಯಯೋಜನೆಗಳಿಗಾಗಿ ಕಳುಹಿಸಲಾಗಿದೆ. ಕಳೆದ ವರ್ಷ ಕೋವಿಡ್‌ ಸಾಂಕ್ರಾಮಿಕ ರೋಗದ ಮೊದಲ ಅಲೆಯ ಸಮಯದಲ್ಲಿ 3,000 ವೆಂಟಿಲೇಟರ್‌ಗಳು ಮತ್ತು ಫೇಸ್‌ಶೀಲ್ಡ್ ಉತ್ಪಾದನೆಯಲ್ಲಿ ಈ ಕಾರ್ಮಿಕರು ಭಾಗವಹಿಸಿದ್ದರು” ಎಂದು ಕರ್ನಾಟಕ ಜನರಲ್‌ ಲೇಬರ್‌ ಯೂನಿಯನ್‌ ಹೇಳಿದೆ.

 

ಕಾರ್ಮಿಕರಲ್ಲಿ ಹೆಚ್ಚಿನವರು ದಲಿತ ಸಮುದಾಯ ಸೇರಿದವರಾಗಿದ್ದು, ಮಹಿಳೆಯರು ಇದ್ದಾರೆ. ಸುದೀರ್ಫ ವರ್ಷಗಳ ಸೇವೆ ಸಲ್ಲಿಸಿದ, ಕಾರ್ಮಿಕರನ್ನು ‘ಗುತ್ತಿಗೆ ಕಾರ್ಮಿಕರು’ ಎ೦ದು ಬಿಂಬಿಸಿ ಮೂಲಭೂತವಾದ ಹಕ್ಕುಗಳನ್ನು ನಿರಾಕರಿಸಲಾಗಿದೆ ಎಂದು ಯೂನಿಯನ್‌‌ ಹೇಳಿದೆ.

ಇದನ್ನೂ ಓದಿ: ಐಟಿಐ ಕಾರ್ಮಿಕರ ಹೋರಾಟದಲ್ಲಿ ಭಾಗಿಯಾದ ಮೇದಾ ಪಾಟ್ಕರ್‌‌ 

“ಡಿಸೆಂಬರ್‌‌ 14, 2021 ರಂದು ಪ್ರಾದೇಶಿಕ ಕಾರ್ಮಿಕ ಆಯುಕ್ತರು ಎಲ್ಲಾ 80 ಕಾರ್ಮಿಕರಿಗೆ ಮತ್ತೆ ಕೆಲಸ ನೀಡುವಂತೆ ಐಟಿಐ ಲಿಮಿಟೆಡ್‌ನ ಆಡಳಿತ ಮಂಡಳಿಗೆ ಸೂಚನೆ ನೀಡಿದ್ದಾರೆ. ಆದರೆ ಆಡಳಿತ ಮಂಡಳಿಯು ಕಾರ್ಮಿಕರು ಸಂಘಟನೆ ಕಟ್ಟಿ, ಆ ಸಂಘಟನೆಯ ಮೂಲಕ ಅವರನ್ನು ಖಾಯಂಗೊಳಿಸುವಂತೆ ಮತ್ತು ಮಾನವೀಯ ಕೆಲಸದ ವಾತಾವರಣಕ್ಕಾಗಿ ಕಾನೂನು ಹೋರಾಟವನ್ನು ಮಾಡುತ್ತಿರುವುದನ್ನು ಸಹಿಸಿಕೊಳ್ಳುತ್ತಿಲ್ಲ” ಎಂದು ಯುನಿಯನ್‌ ಆರೋಪಿಸಿದೆ.  ಆಡಳಿತ ಮಂಡಳಿಯು ಕಾರ್ಮಿಕ ಆಯುಕ್ತರ ಸೂಚನೆಯನ್ನು ಕೂಡಾ ಪಾಲಿಸುತ್ತಿಲ್ಲ ಎಂದು ಯುನಿಯನ್ ಆಕ್ರೋಶ ವ್ಯಕ್ತಪಡಿಸಿದೆ.

“62 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ, ಐಟಿಐ ಲಿಮಿಟೆಡ್ ಆಡಳಿತ ಮಂಡಳಿ ಯಾವುದೇ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿದೆ. ಅನ್ಯಾಯದ ಕಾರ್ಮಿಕ ವಿರೋಧಿ ನೀತಿಯನ್ನು ಮುಂದುವರೆಸುತ್ತಿದೆ” ಎಂದು ಯೂನಿಯನ್  ಹೇಳಿದೆ.

ಐಟಿಐ ಆಡಳಿತ ಮಂಡಳಿಯು ಈಗ ವಜಾಗೊಂಡಿರುವ ಕಾರ್ಮಿಕರ ಬದಲಿಗೆ ಹೊಸ ಕಾರ್ಮಿಕರನ್ನು ನೇಮಿಸಿಕೊಳ್ಳಲು ಮುಂದಾಗಿದೆ ಎಂದಿರುವ ಯೂನಿಯನ್, “ಐಟಿಐ ಲಿಮಿಟೆಡ್‌ನ ಆಡಳಿತ ಮಂಡಳಿ ಕಾನೂನುಬಾಹಿರ ಕ್ರಮಗಳ ವಿರುದ್ಧ ಮತ್ತು 14.12.2021 ರಂದು ಪ್ರಾದೇಶಿಕ ಕಾರ್ಮಿಕ ಆಯುಕ್ತರು ಈ ಸೂಚನೆಗಳನ್ನು ತಕ್ಷಣ ಪಾಲಿಸಬೇಕು” ಎಂದು ಒತ್ತಾಯಿಸಿದೆ.

ಇದನ್ನೂ ಓದಿ: ITI ವಿದ್ಯಾರ್ಥಿಗಳಿಗೆ ಆಮ್ಲಜನಕ ಘಟಕದ ನಿರ್ವಹಣೆ ತರಬೇತಿಗೆ ಮುಂದಾದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...