Homeಕರ್ನಾಟಕಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾ: ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ ಕಾರ್ಮಿಕರು

ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾ: ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ ಕಾರ್ಮಿಕರು

- Advertisement -
- Advertisement -

ಒಕ್ಕೂಟ ಸರ್ಕಾರದ ಮಾಲಿಕತ್ವದ ದೂರಸಂಪರ್ಕ ಉಪಕರಣಗಳ ತಯಾರಿಕಾ ಕಂಪನಿಯಾದ ‘ಐಟಿಐ ಲಿಮಿಟೆಡ್‌‌’ನ ಕಾರ್ಮಿಕರು ತಮ್ಮ ಕಾನೂನು ಬದ್ಧ ಹಕ್ಕುಗಳಿಗಾಗಿ ಒತ್ತಾಯಿಸಿ ಕಳೆದ ವರ್ಷ ಡಿಸೆಂಬರ್‌ನಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಈ ಹೋರಾಟಕ್ಕೆ ಎರಡು ತಿಂಗಳು ತುಂಬಿದೆ. ಇದೀಗ ಕಾರ್ಮಿಕರು ತಮ್ಮ ಹೋರಾಟವನ್ನು ತೀವ್ರಗೊಳಿಸಲು ನಿರ್ಧರಿಸಿದ್ದು ಸೋಮವಾರದಿಂದ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ್ದಾರೆ.

2021 ರ ಡಿಸೆಂಬರ್ 1 ರಂದು, ಬೆಂಗಳೂರಿನಲ್ಲಿರುವ ಭಾರತದ ಮೊದಲ ಸಾರ್ವಜನಿಕ ವಲಯದ ಉದ್ಯಮವಾದ ಐಟಿಐ ಲಿಮಿಟೆಡ್‌ನಲ್ಲಿ ಕಳೆದ 5 ರಿಂದ 30 ವರ್ಷಗ ನಡುವೆ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರನ್ನು ಕಂಪೆನಿಯು ಕೆಲಸದಿಂದ ವಜಾ ಮಾಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಕಾರ್ಮಿಕರು, ತಾವು ಸಂಘಟನೆ ಕಟ್ಟಿ ಕಾನೂನು ಬದ್ಧ ಹಕ್ಕುಗಳಿಗಾಗಿ ಒತ್ತಾಯಿಸಿದ್ದಕ್ಕೆ ಸುಮಾರು 80 ಕಾರ್ಮಿಕರಿಗೆ ಐಟಿಐ ಆಡಳಿತ ಮಂಡಳಿಯು ಉದ್ಯೋಗ ನಿರಾಕರಿದೆ ಎಂದು ಆರೋಪಿಸಿದ್ದರೆ.

ಇದನ್ನೂ ಓದಿ: ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾಗೊಳಿಸಿದ ಬೆಂಗಳೂರಿನ ITI ಕಂಪೆನಿ: ಕಾರ್ಮಿಕರ ಆರೋಪ- ಪ್ರತಿಭಟನೆ

ಅಂದಿನಿಂದಲೂ ಕಾರ್ಮಿಕರು ಕಾರ್ಖಾನೆಯ ಗೇಟ್‌ಗಳ ಮುಂದೆ ಕುಳಿತು ಅಹೋರಾತ್ರಿ ಧರಣಿ ನಡೆಸುತ್ತಿದ್ದು, ತಮಗೆ ಕೆಲಸ ನೀಡುವಂತೆ ಒತ್ತಾಯಿಸುತ್ತಿದ್ದಾರೆ.

ಉಪವಾಸ ಸತ್ಯಾಗ್ರಹದ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕಾರ್ಮಿಕರ ಹೋರಾಟವನ್ನು ಮುನ್ನಡೆಸುತ್ತಿರುವ ಕರ್ನಾಟಕ ಜನರಲ್‌ ಲೇಬರ್‌ ಯೂನಿಯನ್‌, “ಐಟಿಐ ಲಿಮಿಟೆಡ್ ಭಾರತ ಸರ್ಕಾರದ ದೂರಸಂಪರ್ಕ ಇಲಾಖೆ, ಸಂವಹನ ಸಚಿವಾಲಯದ ಅಡಿಯಲ್ಲಿ ಬರುತ್ತದೆ. ಈ ಕಾರ್ಮಿಕರು ಐಟಿಐ ನಿರ್ವಹಿಸುವ ಪ್ರಮುಖವಾದ ಹಲವಾರು ಸೂಕ್ಷ್ಮ ಮತ್ತು ರಕ್ಷಣಾ ಸಂಬಂಧಿತ ಯೋಜನೆಗಳಲ್ಲಿ ವಿವಿಧ ಸಾಧನಗಳ ಉತ್ಪಾದನೆ, ಸಂಶೋಧನೆ ಮತ್ತು ಅಭಿವೃದ್ಧಿ ಮತ್ತು ಕಾರ್ಯರೂಪಕ್ಕೆ ತರುವ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ

ಇಷ್ಟೇ ಅಲ್ಲದೆ, ಈ ಕಾರ್ಮಿಕರನ್ನು ದೇಶದ ಗಡಿಗಳಿಗೂ ಸಹ ಆನ್-ಸೈಟ್‌ನ ರಕ್ಷಣಾ ಕಾರ್ಯಯೋಜನೆಗಳಿಗಾಗಿ ಕಳುಹಿಸಲಾಗಿದೆ. ಕಳೆದ ವರ್ಷ ಕೋವಿಡ್‌ ಸಾಂಕ್ರಾಮಿಕ ರೋಗದ ಮೊದಲ ಅಲೆಯ ಸಮಯದಲ್ಲಿ 3,000 ವೆಂಟಿಲೇಟರ್‌ಗಳು ಮತ್ತು ಫೇಸ್‌ಶೀಲ್ಡ್ ಉತ್ಪಾದನೆಯಲ್ಲಿ ಈ ಕಾರ್ಮಿಕರು ಭಾಗವಹಿಸಿದ್ದರು” ಎಂದು ಕರ್ನಾಟಕ ಜನರಲ್‌ ಲೇಬರ್‌ ಯೂನಿಯನ್‌ ಹೇಳಿದೆ.

 

ಕಾರ್ಮಿಕರಲ್ಲಿ ಹೆಚ್ಚಿನವರು ದಲಿತ ಸಮುದಾಯ ಸೇರಿದವರಾಗಿದ್ದು, ಮಹಿಳೆಯರು ಇದ್ದಾರೆ. ಸುದೀರ್ಫ ವರ್ಷಗಳ ಸೇವೆ ಸಲ್ಲಿಸಿದ, ಕಾರ್ಮಿಕರನ್ನು ‘ಗುತ್ತಿಗೆ ಕಾರ್ಮಿಕರು’ ಎ೦ದು ಬಿಂಬಿಸಿ ಮೂಲಭೂತವಾದ ಹಕ್ಕುಗಳನ್ನು ನಿರಾಕರಿಸಲಾಗಿದೆ ಎಂದು ಯೂನಿಯನ್‌‌ ಹೇಳಿದೆ.

ಇದನ್ನೂ ಓದಿ: ಐಟಿಐ ಕಾರ್ಮಿಕರ ಹೋರಾಟದಲ್ಲಿ ಭಾಗಿಯಾದ ಮೇದಾ ಪಾಟ್ಕರ್‌‌ 

“ಡಿಸೆಂಬರ್‌‌ 14, 2021 ರಂದು ಪ್ರಾದೇಶಿಕ ಕಾರ್ಮಿಕ ಆಯುಕ್ತರು ಎಲ್ಲಾ 80 ಕಾರ್ಮಿಕರಿಗೆ ಮತ್ತೆ ಕೆಲಸ ನೀಡುವಂತೆ ಐಟಿಐ ಲಿಮಿಟೆಡ್‌ನ ಆಡಳಿತ ಮಂಡಳಿಗೆ ಸೂಚನೆ ನೀಡಿದ್ದಾರೆ. ಆದರೆ ಆಡಳಿತ ಮಂಡಳಿಯು ಕಾರ್ಮಿಕರು ಸಂಘಟನೆ ಕಟ್ಟಿ, ಆ ಸಂಘಟನೆಯ ಮೂಲಕ ಅವರನ್ನು ಖಾಯಂಗೊಳಿಸುವಂತೆ ಮತ್ತು ಮಾನವೀಯ ಕೆಲಸದ ವಾತಾವರಣಕ್ಕಾಗಿ ಕಾನೂನು ಹೋರಾಟವನ್ನು ಮಾಡುತ್ತಿರುವುದನ್ನು ಸಹಿಸಿಕೊಳ್ಳುತ್ತಿಲ್ಲ” ಎಂದು ಯುನಿಯನ್‌ ಆರೋಪಿಸಿದೆ.  ಆಡಳಿತ ಮಂಡಳಿಯು ಕಾರ್ಮಿಕ ಆಯುಕ್ತರ ಸೂಚನೆಯನ್ನು ಕೂಡಾ ಪಾಲಿಸುತ್ತಿಲ್ಲ ಎಂದು ಯುನಿಯನ್ ಆಕ್ರೋಶ ವ್ಯಕ್ತಪಡಿಸಿದೆ.

“62 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ, ಐಟಿಐ ಲಿಮಿಟೆಡ್ ಆಡಳಿತ ಮಂಡಳಿ ಯಾವುದೇ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿದೆ. ಅನ್ಯಾಯದ ಕಾರ್ಮಿಕ ವಿರೋಧಿ ನೀತಿಯನ್ನು ಮುಂದುವರೆಸುತ್ತಿದೆ” ಎಂದು ಯೂನಿಯನ್  ಹೇಳಿದೆ.

ಐಟಿಐ ಆಡಳಿತ ಮಂಡಳಿಯು ಈಗ ವಜಾಗೊಂಡಿರುವ ಕಾರ್ಮಿಕರ ಬದಲಿಗೆ ಹೊಸ ಕಾರ್ಮಿಕರನ್ನು ನೇಮಿಸಿಕೊಳ್ಳಲು ಮುಂದಾಗಿದೆ ಎಂದಿರುವ ಯೂನಿಯನ್, “ಐಟಿಐ ಲಿಮಿಟೆಡ್‌ನ ಆಡಳಿತ ಮಂಡಳಿ ಕಾನೂನುಬಾಹಿರ ಕ್ರಮಗಳ ವಿರುದ್ಧ ಮತ್ತು 14.12.2021 ರಂದು ಪ್ರಾದೇಶಿಕ ಕಾರ್ಮಿಕ ಆಯುಕ್ತರು ಈ ಸೂಚನೆಗಳನ್ನು ತಕ್ಷಣ ಪಾಲಿಸಬೇಕು” ಎಂದು ಒತ್ತಾಯಿಸಿದೆ.

ಇದನ್ನೂ ಓದಿ: ITI ವಿದ್ಯಾರ್ಥಿಗಳಿಗೆ ಆಮ್ಲಜನಕ ಘಟಕದ ನಿರ್ವಹಣೆ ತರಬೇತಿಗೆ ಮುಂದಾದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...