Homeಕರ್ನಾಟಕಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾ: ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ ಕಾರ್ಮಿಕರು

ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾ: ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ ಕಾರ್ಮಿಕರು

- Advertisement -
- Advertisement -

ಒಕ್ಕೂಟ ಸರ್ಕಾರದ ಮಾಲಿಕತ್ವದ ದೂರಸಂಪರ್ಕ ಉಪಕರಣಗಳ ತಯಾರಿಕಾ ಕಂಪನಿಯಾದ ‘ಐಟಿಐ ಲಿಮಿಟೆಡ್‌‌’ನ ಕಾರ್ಮಿಕರು ತಮ್ಮ ಕಾನೂನು ಬದ್ಧ ಹಕ್ಕುಗಳಿಗಾಗಿ ಒತ್ತಾಯಿಸಿ ಕಳೆದ ವರ್ಷ ಡಿಸೆಂಬರ್‌ನಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಈ ಹೋರಾಟಕ್ಕೆ ಎರಡು ತಿಂಗಳು ತುಂಬಿದೆ. ಇದೀಗ ಕಾರ್ಮಿಕರು ತಮ್ಮ ಹೋರಾಟವನ್ನು ತೀವ್ರಗೊಳಿಸಲು ನಿರ್ಧರಿಸಿದ್ದು ಸೋಮವಾರದಿಂದ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ್ದಾರೆ.

2021 ರ ಡಿಸೆಂಬರ್ 1 ರಂದು, ಬೆಂಗಳೂರಿನಲ್ಲಿರುವ ಭಾರತದ ಮೊದಲ ಸಾರ್ವಜನಿಕ ವಲಯದ ಉದ್ಯಮವಾದ ಐಟಿಐ ಲಿಮಿಟೆಡ್‌ನಲ್ಲಿ ಕಳೆದ 5 ರಿಂದ 30 ವರ್ಷಗ ನಡುವೆ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರನ್ನು ಕಂಪೆನಿಯು ಕೆಲಸದಿಂದ ವಜಾ ಮಾಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಕಾರ್ಮಿಕರು, ತಾವು ಸಂಘಟನೆ ಕಟ್ಟಿ ಕಾನೂನು ಬದ್ಧ ಹಕ್ಕುಗಳಿಗಾಗಿ ಒತ್ತಾಯಿಸಿದ್ದಕ್ಕೆ ಸುಮಾರು 80 ಕಾರ್ಮಿಕರಿಗೆ ಐಟಿಐ ಆಡಳಿತ ಮಂಡಳಿಯು ಉದ್ಯೋಗ ನಿರಾಕರಿದೆ ಎಂದು ಆರೋಪಿಸಿದ್ದರೆ.

ಇದನ್ನೂ ಓದಿ: ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾಗೊಳಿಸಿದ ಬೆಂಗಳೂರಿನ ITI ಕಂಪೆನಿ: ಕಾರ್ಮಿಕರ ಆರೋಪ- ಪ್ರತಿಭಟನೆ

ಅಂದಿನಿಂದಲೂ ಕಾರ್ಮಿಕರು ಕಾರ್ಖಾನೆಯ ಗೇಟ್‌ಗಳ ಮುಂದೆ ಕುಳಿತು ಅಹೋರಾತ್ರಿ ಧರಣಿ ನಡೆಸುತ್ತಿದ್ದು, ತಮಗೆ ಕೆಲಸ ನೀಡುವಂತೆ ಒತ್ತಾಯಿಸುತ್ತಿದ್ದಾರೆ.

ಉಪವಾಸ ಸತ್ಯಾಗ್ರಹದ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕಾರ್ಮಿಕರ ಹೋರಾಟವನ್ನು ಮುನ್ನಡೆಸುತ್ತಿರುವ ಕರ್ನಾಟಕ ಜನರಲ್‌ ಲೇಬರ್‌ ಯೂನಿಯನ್‌, “ಐಟಿಐ ಲಿಮಿಟೆಡ್ ಭಾರತ ಸರ್ಕಾರದ ದೂರಸಂಪರ್ಕ ಇಲಾಖೆ, ಸಂವಹನ ಸಚಿವಾಲಯದ ಅಡಿಯಲ್ಲಿ ಬರುತ್ತದೆ. ಈ ಕಾರ್ಮಿಕರು ಐಟಿಐ ನಿರ್ವಹಿಸುವ ಪ್ರಮುಖವಾದ ಹಲವಾರು ಸೂಕ್ಷ್ಮ ಮತ್ತು ರಕ್ಷಣಾ ಸಂಬಂಧಿತ ಯೋಜನೆಗಳಲ್ಲಿ ವಿವಿಧ ಸಾಧನಗಳ ಉತ್ಪಾದನೆ, ಸಂಶೋಧನೆ ಮತ್ತು ಅಭಿವೃದ್ಧಿ ಮತ್ತು ಕಾರ್ಯರೂಪಕ್ಕೆ ತರುವ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ

ಇಷ್ಟೇ ಅಲ್ಲದೆ, ಈ ಕಾರ್ಮಿಕರನ್ನು ದೇಶದ ಗಡಿಗಳಿಗೂ ಸಹ ಆನ್-ಸೈಟ್‌ನ ರಕ್ಷಣಾ ಕಾರ್ಯಯೋಜನೆಗಳಿಗಾಗಿ ಕಳುಹಿಸಲಾಗಿದೆ. ಕಳೆದ ವರ್ಷ ಕೋವಿಡ್‌ ಸಾಂಕ್ರಾಮಿಕ ರೋಗದ ಮೊದಲ ಅಲೆಯ ಸಮಯದಲ್ಲಿ 3,000 ವೆಂಟಿಲೇಟರ್‌ಗಳು ಮತ್ತು ಫೇಸ್‌ಶೀಲ್ಡ್ ಉತ್ಪಾದನೆಯಲ್ಲಿ ಈ ಕಾರ್ಮಿಕರು ಭಾಗವಹಿಸಿದ್ದರು” ಎಂದು ಕರ್ನಾಟಕ ಜನರಲ್‌ ಲೇಬರ್‌ ಯೂನಿಯನ್‌ ಹೇಳಿದೆ.

 

ಕಾರ್ಮಿಕರಲ್ಲಿ ಹೆಚ್ಚಿನವರು ದಲಿತ ಸಮುದಾಯ ಸೇರಿದವರಾಗಿದ್ದು, ಮಹಿಳೆಯರು ಇದ್ದಾರೆ. ಸುದೀರ್ಫ ವರ್ಷಗಳ ಸೇವೆ ಸಲ್ಲಿಸಿದ, ಕಾರ್ಮಿಕರನ್ನು ‘ಗುತ್ತಿಗೆ ಕಾರ್ಮಿಕರು’ ಎ೦ದು ಬಿಂಬಿಸಿ ಮೂಲಭೂತವಾದ ಹಕ್ಕುಗಳನ್ನು ನಿರಾಕರಿಸಲಾಗಿದೆ ಎಂದು ಯೂನಿಯನ್‌‌ ಹೇಳಿದೆ.

ಇದನ್ನೂ ಓದಿ: ಐಟಿಐ ಕಾರ್ಮಿಕರ ಹೋರಾಟದಲ್ಲಿ ಭಾಗಿಯಾದ ಮೇದಾ ಪಾಟ್ಕರ್‌‌ 

“ಡಿಸೆಂಬರ್‌‌ 14, 2021 ರಂದು ಪ್ರಾದೇಶಿಕ ಕಾರ್ಮಿಕ ಆಯುಕ್ತರು ಎಲ್ಲಾ 80 ಕಾರ್ಮಿಕರಿಗೆ ಮತ್ತೆ ಕೆಲಸ ನೀಡುವಂತೆ ಐಟಿಐ ಲಿಮಿಟೆಡ್‌ನ ಆಡಳಿತ ಮಂಡಳಿಗೆ ಸೂಚನೆ ನೀಡಿದ್ದಾರೆ. ಆದರೆ ಆಡಳಿತ ಮಂಡಳಿಯು ಕಾರ್ಮಿಕರು ಸಂಘಟನೆ ಕಟ್ಟಿ, ಆ ಸಂಘಟನೆಯ ಮೂಲಕ ಅವರನ್ನು ಖಾಯಂಗೊಳಿಸುವಂತೆ ಮತ್ತು ಮಾನವೀಯ ಕೆಲಸದ ವಾತಾವರಣಕ್ಕಾಗಿ ಕಾನೂನು ಹೋರಾಟವನ್ನು ಮಾಡುತ್ತಿರುವುದನ್ನು ಸಹಿಸಿಕೊಳ್ಳುತ್ತಿಲ್ಲ” ಎಂದು ಯುನಿಯನ್‌ ಆರೋಪಿಸಿದೆ.  ಆಡಳಿತ ಮಂಡಳಿಯು ಕಾರ್ಮಿಕ ಆಯುಕ್ತರ ಸೂಚನೆಯನ್ನು ಕೂಡಾ ಪಾಲಿಸುತ್ತಿಲ್ಲ ಎಂದು ಯುನಿಯನ್ ಆಕ್ರೋಶ ವ್ಯಕ್ತಪಡಿಸಿದೆ.

“62 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ, ಐಟಿಐ ಲಿಮಿಟೆಡ್ ಆಡಳಿತ ಮಂಡಳಿ ಯಾವುದೇ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿದೆ. ಅನ್ಯಾಯದ ಕಾರ್ಮಿಕ ವಿರೋಧಿ ನೀತಿಯನ್ನು ಮುಂದುವರೆಸುತ್ತಿದೆ” ಎಂದು ಯೂನಿಯನ್  ಹೇಳಿದೆ.

ಐಟಿಐ ಆಡಳಿತ ಮಂಡಳಿಯು ಈಗ ವಜಾಗೊಂಡಿರುವ ಕಾರ್ಮಿಕರ ಬದಲಿಗೆ ಹೊಸ ಕಾರ್ಮಿಕರನ್ನು ನೇಮಿಸಿಕೊಳ್ಳಲು ಮುಂದಾಗಿದೆ ಎಂದಿರುವ ಯೂನಿಯನ್, “ಐಟಿಐ ಲಿಮಿಟೆಡ್‌ನ ಆಡಳಿತ ಮಂಡಳಿ ಕಾನೂನುಬಾಹಿರ ಕ್ರಮಗಳ ವಿರುದ್ಧ ಮತ್ತು 14.12.2021 ರಂದು ಪ್ರಾದೇಶಿಕ ಕಾರ್ಮಿಕ ಆಯುಕ್ತರು ಈ ಸೂಚನೆಗಳನ್ನು ತಕ್ಷಣ ಪಾಲಿಸಬೇಕು” ಎಂದು ಒತ್ತಾಯಿಸಿದೆ.

ಇದನ್ನೂ ಓದಿ: ITI ವಿದ್ಯಾರ್ಥಿಗಳಿಗೆ ಆಮ್ಲಜನಕ ಘಟಕದ ನಿರ್ವಹಣೆ ತರಬೇತಿಗೆ ಮುಂದಾದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...