Homeಕರ್ನಾಟಕಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾ: ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ ಕಾರ್ಮಿಕರು

ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾ: ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ ಕಾರ್ಮಿಕರು

- Advertisement -
- Advertisement -

ಒಕ್ಕೂಟ ಸರ್ಕಾರದ ಮಾಲಿಕತ್ವದ ದೂರಸಂಪರ್ಕ ಉಪಕರಣಗಳ ತಯಾರಿಕಾ ಕಂಪನಿಯಾದ ‘ಐಟಿಐ ಲಿಮಿಟೆಡ್‌‌’ನ ಕಾರ್ಮಿಕರು ತಮ್ಮ ಕಾನೂನು ಬದ್ಧ ಹಕ್ಕುಗಳಿಗಾಗಿ ಒತ್ತಾಯಿಸಿ ಕಳೆದ ವರ್ಷ ಡಿಸೆಂಬರ್‌ನಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಈ ಹೋರಾಟಕ್ಕೆ ಎರಡು ತಿಂಗಳು ತುಂಬಿದೆ. ಇದೀಗ ಕಾರ್ಮಿಕರು ತಮ್ಮ ಹೋರಾಟವನ್ನು ತೀವ್ರಗೊಳಿಸಲು ನಿರ್ಧರಿಸಿದ್ದು ಸೋಮವಾರದಿಂದ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ್ದಾರೆ.

2021 ರ ಡಿಸೆಂಬರ್ 1 ರಂದು, ಬೆಂಗಳೂರಿನಲ್ಲಿರುವ ಭಾರತದ ಮೊದಲ ಸಾರ್ವಜನಿಕ ವಲಯದ ಉದ್ಯಮವಾದ ಐಟಿಐ ಲಿಮಿಟೆಡ್‌ನಲ್ಲಿ ಕಳೆದ 5 ರಿಂದ 30 ವರ್ಷಗ ನಡುವೆ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರನ್ನು ಕಂಪೆನಿಯು ಕೆಲಸದಿಂದ ವಜಾ ಮಾಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಕಾರ್ಮಿಕರು, ತಾವು ಸಂಘಟನೆ ಕಟ್ಟಿ ಕಾನೂನು ಬದ್ಧ ಹಕ್ಕುಗಳಿಗಾಗಿ ಒತ್ತಾಯಿಸಿದ್ದಕ್ಕೆ ಸುಮಾರು 80 ಕಾರ್ಮಿಕರಿಗೆ ಐಟಿಐ ಆಡಳಿತ ಮಂಡಳಿಯು ಉದ್ಯೋಗ ನಿರಾಕರಿದೆ ಎಂದು ಆರೋಪಿಸಿದ್ದರೆ.

ಇದನ್ನೂ ಓದಿ: ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾಗೊಳಿಸಿದ ಬೆಂಗಳೂರಿನ ITI ಕಂಪೆನಿ: ಕಾರ್ಮಿಕರ ಆರೋಪ- ಪ್ರತಿಭಟನೆ

ಅಂದಿನಿಂದಲೂ ಕಾರ್ಮಿಕರು ಕಾರ್ಖಾನೆಯ ಗೇಟ್‌ಗಳ ಮುಂದೆ ಕುಳಿತು ಅಹೋರಾತ್ರಿ ಧರಣಿ ನಡೆಸುತ್ತಿದ್ದು, ತಮಗೆ ಕೆಲಸ ನೀಡುವಂತೆ ಒತ್ತಾಯಿಸುತ್ತಿದ್ದಾರೆ.

ಉಪವಾಸ ಸತ್ಯಾಗ್ರಹದ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕಾರ್ಮಿಕರ ಹೋರಾಟವನ್ನು ಮುನ್ನಡೆಸುತ್ತಿರುವ ಕರ್ನಾಟಕ ಜನರಲ್‌ ಲೇಬರ್‌ ಯೂನಿಯನ್‌, “ಐಟಿಐ ಲಿಮಿಟೆಡ್ ಭಾರತ ಸರ್ಕಾರದ ದೂರಸಂಪರ್ಕ ಇಲಾಖೆ, ಸಂವಹನ ಸಚಿವಾಲಯದ ಅಡಿಯಲ್ಲಿ ಬರುತ್ತದೆ. ಈ ಕಾರ್ಮಿಕರು ಐಟಿಐ ನಿರ್ವಹಿಸುವ ಪ್ರಮುಖವಾದ ಹಲವಾರು ಸೂಕ್ಷ್ಮ ಮತ್ತು ರಕ್ಷಣಾ ಸಂಬಂಧಿತ ಯೋಜನೆಗಳಲ್ಲಿ ವಿವಿಧ ಸಾಧನಗಳ ಉತ್ಪಾದನೆ, ಸಂಶೋಧನೆ ಮತ್ತು ಅಭಿವೃದ್ಧಿ ಮತ್ತು ಕಾರ್ಯರೂಪಕ್ಕೆ ತರುವ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ

ಇಷ್ಟೇ ಅಲ್ಲದೆ, ಈ ಕಾರ್ಮಿಕರನ್ನು ದೇಶದ ಗಡಿಗಳಿಗೂ ಸಹ ಆನ್-ಸೈಟ್‌ನ ರಕ್ಷಣಾ ಕಾರ್ಯಯೋಜನೆಗಳಿಗಾಗಿ ಕಳುಹಿಸಲಾಗಿದೆ. ಕಳೆದ ವರ್ಷ ಕೋವಿಡ್‌ ಸಾಂಕ್ರಾಮಿಕ ರೋಗದ ಮೊದಲ ಅಲೆಯ ಸಮಯದಲ್ಲಿ 3,000 ವೆಂಟಿಲೇಟರ್‌ಗಳು ಮತ್ತು ಫೇಸ್‌ಶೀಲ್ಡ್ ಉತ್ಪಾದನೆಯಲ್ಲಿ ಈ ಕಾರ್ಮಿಕರು ಭಾಗವಹಿಸಿದ್ದರು” ಎಂದು ಕರ್ನಾಟಕ ಜನರಲ್‌ ಲೇಬರ್‌ ಯೂನಿಯನ್‌ ಹೇಳಿದೆ.

 

ಕಾರ್ಮಿಕರಲ್ಲಿ ಹೆಚ್ಚಿನವರು ದಲಿತ ಸಮುದಾಯ ಸೇರಿದವರಾಗಿದ್ದು, ಮಹಿಳೆಯರು ಇದ್ದಾರೆ. ಸುದೀರ್ಫ ವರ್ಷಗಳ ಸೇವೆ ಸಲ್ಲಿಸಿದ, ಕಾರ್ಮಿಕರನ್ನು ‘ಗುತ್ತಿಗೆ ಕಾರ್ಮಿಕರು’ ಎ೦ದು ಬಿಂಬಿಸಿ ಮೂಲಭೂತವಾದ ಹಕ್ಕುಗಳನ್ನು ನಿರಾಕರಿಸಲಾಗಿದೆ ಎಂದು ಯೂನಿಯನ್‌‌ ಹೇಳಿದೆ.

ಇದನ್ನೂ ಓದಿ: ಐಟಿಐ ಕಾರ್ಮಿಕರ ಹೋರಾಟದಲ್ಲಿ ಭಾಗಿಯಾದ ಮೇದಾ ಪಾಟ್ಕರ್‌‌ 

“ಡಿಸೆಂಬರ್‌‌ 14, 2021 ರಂದು ಪ್ರಾದೇಶಿಕ ಕಾರ್ಮಿಕ ಆಯುಕ್ತರು ಎಲ್ಲಾ 80 ಕಾರ್ಮಿಕರಿಗೆ ಮತ್ತೆ ಕೆಲಸ ನೀಡುವಂತೆ ಐಟಿಐ ಲಿಮಿಟೆಡ್‌ನ ಆಡಳಿತ ಮಂಡಳಿಗೆ ಸೂಚನೆ ನೀಡಿದ್ದಾರೆ. ಆದರೆ ಆಡಳಿತ ಮಂಡಳಿಯು ಕಾರ್ಮಿಕರು ಸಂಘಟನೆ ಕಟ್ಟಿ, ಆ ಸಂಘಟನೆಯ ಮೂಲಕ ಅವರನ್ನು ಖಾಯಂಗೊಳಿಸುವಂತೆ ಮತ್ತು ಮಾನವೀಯ ಕೆಲಸದ ವಾತಾವರಣಕ್ಕಾಗಿ ಕಾನೂನು ಹೋರಾಟವನ್ನು ಮಾಡುತ್ತಿರುವುದನ್ನು ಸಹಿಸಿಕೊಳ್ಳುತ್ತಿಲ್ಲ” ಎಂದು ಯುನಿಯನ್‌ ಆರೋಪಿಸಿದೆ.  ಆಡಳಿತ ಮಂಡಳಿಯು ಕಾರ್ಮಿಕ ಆಯುಕ್ತರ ಸೂಚನೆಯನ್ನು ಕೂಡಾ ಪಾಲಿಸುತ್ತಿಲ್ಲ ಎಂದು ಯುನಿಯನ್ ಆಕ್ರೋಶ ವ್ಯಕ್ತಪಡಿಸಿದೆ.

“62 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ, ಐಟಿಐ ಲಿಮಿಟೆಡ್ ಆಡಳಿತ ಮಂಡಳಿ ಯಾವುದೇ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿದೆ. ಅನ್ಯಾಯದ ಕಾರ್ಮಿಕ ವಿರೋಧಿ ನೀತಿಯನ್ನು ಮುಂದುವರೆಸುತ್ತಿದೆ” ಎಂದು ಯೂನಿಯನ್  ಹೇಳಿದೆ.

ಐಟಿಐ ಆಡಳಿತ ಮಂಡಳಿಯು ಈಗ ವಜಾಗೊಂಡಿರುವ ಕಾರ್ಮಿಕರ ಬದಲಿಗೆ ಹೊಸ ಕಾರ್ಮಿಕರನ್ನು ನೇಮಿಸಿಕೊಳ್ಳಲು ಮುಂದಾಗಿದೆ ಎಂದಿರುವ ಯೂನಿಯನ್, “ಐಟಿಐ ಲಿಮಿಟೆಡ್‌ನ ಆಡಳಿತ ಮಂಡಳಿ ಕಾನೂನುಬಾಹಿರ ಕ್ರಮಗಳ ವಿರುದ್ಧ ಮತ್ತು 14.12.2021 ರಂದು ಪ್ರಾದೇಶಿಕ ಕಾರ್ಮಿಕ ಆಯುಕ್ತರು ಈ ಸೂಚನೆಗಳನ್ನು ತಕ್ಷಣ ಪಾಲಿಸಬೇಕು” ಎಂದು ಒತ್ತಾಯಿಸಿದೆ.

ಇದನ್ನೂ ಓದಿ: ITI ವಿದ್ಯಾರ್ಥಿಗಳಿಗೆ ಆಮ್ಲಜನಕ ಘಟಕದ ನಿರ್ವಹಣೆ ತರಬೇತಿಗೆ ಮುಂದಾದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...