Homeಕರ್ನಾಟಕಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾ: ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ ಕಾರ್ಮಿಕರು

ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾ: ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ ಕಾರ್ಮಿಕರು

- Advertisement -
- Advertisement -

ಒಕ್ಕೂಟ ಸರ್ಕಾರದ ಮಾಲಿಕತ್ವದ ದೂರಸಂಪರ್ಕ ಉಪಕರಣಗಳ ತಯಾರಿಕಾ ಕಂಪನಿಯಾದ ‘ಐಟಿಐ ಲಿಮಿಟೆಡ್‌‌’ನ ಕಾರ್ಮಿಕರು ತಮ್ಮ ಕಾನೂನು ಬದ್ಧ ಹಕ್ಕುಗಳಿಗಾಗಿ ಒತ್ತಾಯಿಸಿ ಕಳೆದ ವರ್ಷ ಡಿಸೆಂಬರ್‌ನಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಈ ಹೋರಾಟಕ್ಕೆ ಎರಡು ತಿಂಗಳು ತುಂಬಿದೆ. ಇದೀಗ ಕಾರ್ಮಿಕರು ತಮ್ಮ ಹೋರಾಟವನ್ನು ತೀವ್ರಗೊಳಿಸಲು ನಿರ್ಧರಿಸಿದ್ದು ಸೋಮವಾರದಿಂದ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ್ದಾರೆ.

2021 ರ ಡಿಸೆಂಬರ್ 1 ರಂದು, ಬೆಂಗಳೂರಿನಲ್ಲಿರುವ ಭಾರತದ ಮೊದಲ ಸಾರ್ವಜನಿಕ ವಲಯದ ಉದ್ಯಮವಾದ ಐಟಿಐ ಲಿಮಿಟೆಡ್‌ನಲ್ಲಿ ಕಳೆದ 5 ರಿಂದ 30 ವರ್ಷಗ ನಡುವೆ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರನ್ನು ಕಂಪೆನಿಯು ಕೆಲಸದಿಂದ ವಜಾ ಮಾಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಕಾರ್ಮಿಕರು, ತಾವು ಸಂಘಟನೆ ಕಟ್ಟಿ ಕಾನೂನು ಬದ್ಧ ಹಕ್ಕುಗಳಿಗಾಗಿ ಒತ್ತಾಯಿಸಿದ್ದಕ್ಕೆ ಸುಮಾರು 80 ಕಾರ್ಮಿಕರಿಗೆ ಐಟಿಐ ಆಡಳಿತ ಮಂಡಳಿಯು ಉದ್ಯೋಗ ನಿರಾಕರಿದೆ ಎಂದು ಆರೋಪಿಸಿದ್ದರೆ.

ಇದನ್ನೂ ಓದಿ: ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾಗೊಳಿಸಿದ ಬೆಂಗಳೂರಿನ ITI ಕಂಪೆನಿ: ಕಾರ್ಮಿಕರ ಆರೋಪ- ಪ್ರತಿಭಟನೆ

ಅಂದಿನಿಂದಲೂ ಕಾರ್ಮಿಕರು ಕಾರ್ಖಾನೆಯ ಗೇಟ್‌ಗಳ ಮುಂದೆ ಕುಳಿತು ಅಹೋರಾತ್ರಿ ಧರಣಿ ನಡೆಸುತ್ತಿದ್ದು, ತಮಗೆ ಕೆಲಸ ನೀಡುವಂತೆ ಒತ್ತಾಯಿಸುತ್ತಿದ್ದಾರೆ.

ಉಪವಾಸ ಸತ್ಯಾಗ್ರಹದ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕಾರ್ಮಿಕರ ಹೋರಾಟವನ್ನು ಮುನ್ನಡೆಸುತ್ತಿರುವ ಕರ್ನಾಟಕ ಜನರಲ್‌ ಲೇಬರ್‌ ಯೂನಿಯನ್‌, “ಐಟಿಐ ಲಿಮಿಟೆಡ್ ಭಾರತ ಸರ್ಕಾರದ ದೂರಸಂಪರ್ಕ ಇಲಾಖೆ, ಸಂವಹನ ಸಚಿವಾಲಯದ ಅಡಿಯಲ್ಲಿ ಬರುತ್ತದೆ. ಈ ಕಾರ್ಮಿಕರು ಐಟಿಐ ನಿರ್ವಹಿಸುವ ಪ್ರಮುಖವಾದ ಹಲವಾರು ಸೂಕ್ಷ್ಮ ಮತ್ತು ರಕ್ಷಣಾ ಸಂಬಂಧಿತ ಯೋಜನೆಗಳಲ್ಲಿ ವಿವಿಧ ಸಾಧನಗಳ ಉತ್ಪಾದನೆ, ಸಂಶೋಧನೆ ಮತ್ತು ಅಭಿವೃದ್ಧಿ ಮತ್ತು ಕಾರ್ಯರೂಪಕ್ಕೆ ತರುವ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ

ಇಷ್ಟೇ ಅಲ್ಲದೆ, ಈ ಕಾರ್ಮಿಕರನ್ನು ದೇಶದ ಗಡಿಗಳಿಗೂ ಸಹ ಆನ್-ಸೈಟ್‌ನ ರಕ್ಷಣಾ ಕಾರ್ಯಯೋಜನೆಗಳಿಗಾಗಿ ಕಳುಹಿಸಲಾಗಿದೆ. ಕಳೆದ ವರ್ಷ ಕೋವಿಡ್‌ ಸಾಂಕ್ರಾಮಿಕ ರೋಗದ ಮೊದಲ ಅಲೆಯ ಸಮಯದಲ್ಲಿ 3,000 ವೆಂಟಿಲೇಟರ್‌ಗಳು ಮತ್ತು ಫೇಸ್‌ಶೀಲ್ಡ್ ಉತ್ಪಾದನೆಯಲ್ಲಿ ಈ ಕಾರ್ಮಿಕರು ಭಾಗವಹಿಸಿದ್ದರು” ಎಂದು ಕರ್ನಾಟಕ ಜನರಲ್‌ ಲೇಬರ್‌ ಯೂನಿಯನ್‌ ಹೇಳಿದೆ.

 

ಕಾರ್ಮಿಕರಲ್ಲಿ ಹೆಚ್ಚಿನವರು ದಲಿತ ಸಮುದಾಯ ಸೇರಿದವರಾಗಿದ್ದು, ಮಹಿಳೆಯರು ಇದ್ದಾರೆ. ಸುದೀರ್ಫ ವರ್ಷಗಳ ಸೇವೆ ಸಲ್ಲಿಸಿದ, ಕಾರ್ಮಿಕರನ್ನು ‘ಗುತ್ತಿಗೆ ಕಾರ್ಮಿಕರು’ ಎ೦ದು ಬಿಂಬಿಸಿ ಮೂಲಭೂತವಾದ ಹಕ್ಕುಗಳನ್ನು ನಿರಾಕರಿಸಲಾಗಿದೆ ಎಂದು ಯೂನಿಯನ್‌‌ ಹೇಳಿದೆ.

ಇದನ್ನೂ ಓದಿ: ಐಟಿಐ ಕಾರ್ಮಿಕರ ಹೋರಾಟದಲ್ಲಿ ಭಾಗಿಯಾದ ಮೇದಾ ಪಾಟ್ಕರ್‌‌ 

“ಡಿಸೆಂಬರ್‌‌ 14, 2021 ರಂದು ಪ್ರಾದೇಶಿಕ ಕಾರ್ಮಿಕ ಆಯುಕ್ತರು ಎಲ್ಲಾ 80 ಕಾರ್ಮಿಕರಿಗೆ ಮತ್ತೆ ಕೆಲಸ ನೀಡುವಂತೆ ಐಟಿಐ ಲಿಮಿಟೆಡ್‌ನ ಆಡಳಿತ ಮಂಡಳಿಗೆ ಸೂಚನೆ ನೀಡಿದ್ದಾರೆ. ಆದರೆ ಆಡಳಿತ ಮಂಡಳಿಯು ಕಾರ್ಮಿಕರು ಸಂಘಟನೆ ಕಟ್ಟಿ, ಆ ಸಂಘಟನೆಯ ಮೂಲಕ ಅವರನ್ನು ಖಾಯಂಗೊಳಿಸುವಂತೆ ಮತ್ತು ಮಾನವೀಯ ಕೆಲಸದ ವಾತಾವರಣಕ್ಕಾಗಿ ಕಾನೂನು ಹೋರಾಟವನ್ನು ಮಾಡುತ್ತಿರುವುದನ್ನು ಸಹಿಸಿಕೊಳ್ಳುತ್ತಿಲ್ಲ” ಎಂದು ಯುನಿಯನ್‌ ಆರೋಪಿಸಿದೆ.  ಆಡಳಿತ ಮಂಡಳಿಯು ಕಾರ್ಮಿಕ ಆಯುಕ್ತರ ಸೂಚನೆಯನ್ನು ಕೂಡಾ ಪಾಲಿಸುತ್ತಿಲ್ಲ ಎಂದು ಯುನಿಯನ್ ಆಕ್ರೋಶ ವ್ಯಕ್ತಪಡಿಸಿದೆ.

“62 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ, ಐಟಿಐ ಲಿಮಿಟೆಡ್ ಆಡಳಿತ ಮಂಡಳಿ ಯಾವುದೇ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿದೆ. ಅನ್ಯಾಯದ ಕಾರ್ಮಿಕ ವಿರೋಧಿ ನೀತಿಯನ್ನು ಮುಂದುವರೆಸುತ್ತಿದೆ” ಎಂದು ಯೂನಿಯನ್  ಹೇಳಿದೆ.

ಐಟಿಐ ಆಡಳಿತ ಮಂಡಳಿಯು ಈಗ ವಜಾಗೊಂಡಿರುವ ಕಾರ್ಮಿಕರ ಬದಲಿಗೆ ಹೊಸ ಕಾರ್ಮಿಕರನ್ನು ನೇಮಿಸಿಕೊಳ್ಳಲು ಮುಂದಾಗಿದೆ ಎಂದಿರುವ ಯೂನಿಯನ್, “ಐಟಿಐ ಲಿಮಿಟೆಡ್‌ನ ಆಡಳಿತ ಮಂಡಳಿ ಕಾನೂನುಬಾಹಿರ ಕ್ರಮಗಳ ವಿರುದ್ಧ ಮತ್ತು 14.12.2021 ರಂದು ಪ್ರಾದೇಶಿಕ ಕಾರ್ಮಿಕ ಆಯುಕ್ತರು ಈ ಸೂಚನೆಗಳನ್ನು ತಕ್ಷಣ ಪಾಲಿಸಬೇಕು” ಎಂದು ಒತ್ತಾಯಿಸಿದೆ.

ಇದನ್ನೂ ಓದಿ: ITI ವಿದ್ಯಾರ್ಥಿಗಳಿಗೆ ಆಮ್ಲಜನಕ ಘಟಕದ ನಿರ್ವಹಣೆ ತರಬೇತಿಗೆ ಮುಂದಾದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...