Homeಕರ್ನಾಟಕಎಸಿ ಕೋರ್ಟ್‌ಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು 6 ತಿಂಗಳಲ್ಲಿ ಇತ್ಯರ್ಥಗೊಳಿಸಿ : ಅಧಿಕಾರಿಗಳಿಗೆ ಸಚಿವ ಕೃಷ್ಣ...

ಎಸಿ ಕೋರ್ಟ್‌ಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು 6 ತಿಂಗಳಲ್ಲಿ ಇತ್ಯರ್ಥಗೊಳಿಸಿ : ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ತಾಕೀತು

- Advertisement -
- Advertisement -
  • ಕಳೆದ ಒಂದು ವರ್ಷದಲ್ಲಿ 30,000 ಪ್ರಕರಣಗಳು ಇತ್ಯರ್ಥ
  • ಆರು ತಿಂಗಳ ಅವಧಿ ಮೀರಿದ ಶೇ.45ರಷ್ಟು ಪ್ರಕರಣಗಳು ಬಾಕಿ
  • ಎಸಿಗಳು ತಿಂಗಳಿಗೆ 200 ರಿಂದ 250 ಪ್ರಕರಣಗಳ ವಿಲೇಗೆ ಸೂಚನೆ
  • ಫೌತಿ ಖಾತೆ ಆಂದೋಲನಕ್ಕೂ ಗಮನ ನೀಡಲು ಅಧಿಕಾರಿಗಳಿಗೆ ತಾಕೀತು

ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯಗಳಲ್ಲಿ ಅವಧಿ ಮೀರಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನೂ ಮುಂದಿನ ಆರು ತಿಂಗಳೊಳಗಾಗಿ ನ್ಯಾಯಯುತ ಇತ್ಯರ್ಥಕ್ಕೆ ಒಳಪಡಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಅಧಿಕಾರಿಗಳಿಗೆ ಗಡುವು ನೀಡಿದರು.

ಸೋಮವಾರ (ಜ.13) ವಿಕಾಸಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಜೊತೆಗೆ ಏಕ ಕಾಲದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, “ಎಸಿ ನ್ಯಾಯಾಲಯಗಳಲ್ಲಿ ಯಾವ ಪ್ರಕರಣಗಳನ್ನೂ ಆರು ತಿಂಗಳ ಅವಧಿಗಿಂತ ಹೆಚ್ಚಿನ ಕಾಲ ಇಟ್ಟುಕೊಳ್ಳುವಂತಿಲ್ಲ ಎಂಬ ಕಾನೂನಿದೆ. ಆದರೆ, ಕಳೆದ ವರ್ಷ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೇರಿದ ವೇಳೆ ಎಸಿ ನ್ಯಾಯಾಲಯಗಳಲ್ಲಿ ಅವಧಿ ಮೀರಿದ 60 ಸಾವಿರಕ್ಕೂ ಅಧಿಕ ಪ್ರಕರಣಗಳಿದ್ದವು. ಈ ಎಲ್ಲಾ ಪ್ರಕರಣಗಳನ್ನೂ ಮುಂದಿನ ಒಂದು ವರ್ಷದಲ್ಲಿ ಇತ್ಯರ್ಥಗೊಳಿಸಿ, ಸರ್ಕಾರಿ ಕಚೇರಿಗಳಿಗೆ ಜನರ ಅನಗತ್ಯ ಅಲೆದಾಟಕ್ಕೆ ಬ್ರೇಕ್ ಹಾಕಬೇಕು ಎಂಬುದು ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಉದ್ದೇಶವಾಗಿತ್ತು” ಎಂದು ನೆನೆದರು.

ಆದರೆ, “ಒಂದೂವರೆ ವರ್ಷ ಕಳೆದರೂ ನಮ್ಮ ಈ ಉದ್ದೇಶ ಈಡೇರಿಲ್ಲ. ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ವಿಶೇಷ ಉಪ-ವಿಭಾಗಾಧಿಕಾರಿಗಳನ್ನು ನೇಮಕ ಮಾಡಿದರೂ ಸಹ ಶೇ.55ರಷ್ಟು ಪ್ರಕರಣಗಳನ್ನು ಮಾತ್ರ ವಿಲೇವಾರಿ ಮಾಡಲಾಗಿದೆ. ಎಸಿ ನ್ಯಾಯಾಲಯಗಳಲ್ಲಿ ಇನ್ನೂ 29,000ಕ್ಕೂ ಅಧಿಕ ಪ್ರಕರಣಗಳು ಬಾಕಿ ಇವೆ. ಇದರಿಂದ ಜನ ಸಾಮಾನ್ಯರು ಸಾಕಷ್ಟು ಸಮಸ್ಯೆಗಳನ್ನು ಅನುಭವಿಸುತ್ತಿದ್ದು, ಮುಂದಿನ ಆರು ತಿಂಗಳೊಳಗಾಗಿ ಈ ಎಲ್ಲಾ ಪ್ರಕರಣಗಳನ್ನು ಅಧಿಕಾರಿಗಳು ನ್ಯಾಯಯುತ ವಿಲೇಗೆ ಒಳಪಡಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಅಭಿಯಾನ ಮಾದರಿಯಲ್ಲಿ ಕೆಲಸಕ್ಕೆ ಮುಂದಾಗಬೇಕು” ಎಂದು ಕರೆ ನೀಡಿದರು.

ಮುಂದುವರೆದು, “ಆರು ತಿಂಗಳಲ್ಲಿ ಎಲ್ಲಾ ಪ್ರಕರಣಗಳನ್ನೂ ತಹಬದಿಗೆ ತರಬೇಕು ಎಂಬುದು ಸರ್ಕಾರದ ಸಂಕಲ್ಪ. ಒಂದು ವರ್ಷದಲ್ಲಿ ಆಗಬೇಕಾದ ಕೆಲಸ ಎರಡು ವರ್ಷ ಆದ್ರೂ ಆಗಿಲ್ಲ ಅಂದ್ರೆ ಸರ್ಕಾರಕ್ಕೆ ನಿಮಗೆ ಶೋಭೆ ತರಲ್ಲ. ಹೀಗಾಗಿ ಈ ವಾರದಿಂದಲೇ ರೆಗ್ಯುಲರ್ ಎಸಿಗಳು ತಿಂಗಳೊಂದಕ್ಕೆ 200 ರಿಂದ 250 ಪ್ರಕರಣಗಳನ್ನು ವಿಲೇ ಮಾಡಿದರೆ, ವಿಶೇಷ ಉಪ-ವಿಭಾಗಾಧಿಕಾರಿಗಳು ಕನಿಷ್ಟ 70 ರಿಂದ 100 ಪ್ರಕರಣಗಳನ್ನು ವಿಲೇಗೊಳಿಸಬೇಕು. ಆರು ತಿಂಗಳ ನಂತರವೂ ಪ್ರಕರಣಗಳನ್ನು ಬಾಕಿ ಉಳಿಸಿಕೊಂಡಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು. ಅಲ್ಲದೆ, ಈ ಸಂಬಂಧ ಪ್ರತೀ ತಿಂಗಳೂ ಪ್ರಗತಿ ಪರಿಶೀಲನಾ ಸಭೆಯನ್ನೂ ನಡೆಸಲಾಗುವುದು” ಎಂದು ಎಚ್ಚರಿಸಿದರು.

“ನ್ಯಾಯಾಲಯಗಳ ತಕರಾರು ಪ್ರಕರಣಗಳ ವಿಲೇವಾರಿಯ ಜೊತೆಗೆ ಪೋಡಿ ದುರಸ್ಥಿ, ನಮೂನೆ 3-9 ಮಿಸ್ಮ್ಯಾಚ್ ಹಾಗೂ ಫೌತಿ ಖಾತೆ ಆಂದೋಲನ ಉಪ ವಿಭಾಗಾಧಿಕಾರಿಗಳ ಮಟ್ಟದಲ್ಲೇ ನಡೆಯಬೇಕು. ಹೀಗಾಗಿ ಅಧಿಕಾರಿಗಳು ಜನರ ಸಮಸ್ಯೆ ಹಾಗೂ ತಮ್ಮ ಜವಾಬ್ದಾರಿಗಳನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ಕೆಲಸಗಳನ್ನೂ ಅಭಿಯಾನ ಮಾದರಿಯಲ್ಲಿ ನಡೆಸಬೇಕು” ಎಂದು ಅವರು ಕಿವಿಮಾತು ಹೇಳಿದರು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಆಯುಕ್ತರಾದ ಸುನೀಲ್ ಕುಮಾರ್ ಸರ್ವೇ ಇಲಾಖೆ ಆಯುಕ್ತರಾದ ಮಂಜುನಾಥ್ ಉಪಸ್ಥಿತರಿದ್ದರು.

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ; ನೆಹರೂ ಕಾರಣ – ಕುಮಾರಸ್ವಾಮಿ ಪ್ರತಿಪಾದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...