Homeಕರ್ನಾಟಕಎಸಿ ಕೋರ್ಟ್‌ಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು 6 ತಿಂಗಳಲ್ಲಿ ಇತ್ಯರ್ಥಗೊಳಿಸಿ : ಅಧಿಕಾರಿಗಳಿಗೆ ಸಚಿವ ಕೃಷ್ಣ...

ಎಸಿ ಕೋರ್ಟ್‌ಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು 6 ತಿಂಗಳಲ್ಲಿ ಇತ್ಯರ್ಥಗೊಳಿಸಿ : ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ತಾಕೀತು

- Advertisement -
- Advertisement -
  • ಕಳೆದ ಒಂದು ವರ್ಷದಲ್ಲಿ 30,000 ಪ್ರಕರಣಗಳು ಇತ್ಯರ್ಥ
  • ಆರು ತಿಂಗಳ ಅವಧಿ ಮೀರಿದ ಶೇ.45ರಷ್ಟು ಪ್ರಕರಣಗಳು ಬಾಕಿ
  • ಎಸಿಗಳು ತಿಂಗಳಿಗೆ 200 ರಿಂದ 250 ಪ್ರಕರಣಗಳ ವಿಲೇಗೆ ಸೂಚನೆ
  • ಫೌತಿ ಖಾತೆ ಆಂದೋಲನಕ್ಕೂ ಗಮನ ನೀಡಲು ಅಧಿಕಾರಿಗಳಿಗೆ ತಾಕೀತು

ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯಗಳಲ್ಲಿ ಅವಧಿ ಮೀರಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನೂ ಮುಂದಿನ ಆರು ತಿಂಗಳೊಳಗಾಗಿ ನ್ಯಾಯಯುತ ಇತ್ಯರ್ಥಕ್ಕೆ ಒಳಪಡಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಅಧಿಕಾರಿಗಳಿಗೆ ಗಡುವು ನೀಡಿದರು.

ಸೋಮವಾರ (ಜ.13) ವಿಕಾಸಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಜೊತೆಗೆ ಏಕ ಕಾಲದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, “ಎಸಿ ನ್ಯಾಯಾಲಯಗಳಲ್ಲಿ ಯಾವ ಪ್ರಕರಣಗಳನ್ನೂ ಆರು ತಿಂಗಳ ಅವಧಿಗಿಂತ ಹೆಚ್ಚಿನ ಕಾಲ ಇಟ್ಟುಕೊಳ್ಳುವಂತಿಲ್ಲ ಎಂಬ ಕಾನೂನಿದೆ. ಆದರೆ, ಕಳೆದ ವರ್ಷ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೇರಿದ ವೇಳೆ ಎಸಿ ನ್ಯಾಯಾಲಯಗಳಲ್ಲಿ ಅವಧಿ ಮೀರಿದ 60 ಸಾವಿರಕ್ಕೂ ಅಧಿಕ ಪ್ರಕರಣಗಳಿದ್ದವು. ಈ ಎಲ್ಲಾ ಪ್ರಕರಣಗಳನ್ನೂ ಮುಂದಿನ ಒಂದು ವರ್ಷದಲ್ಲಿ ಇತ್ಯರ್ಥಗೊಳಿಸಿ, ಸರ್ಕಾರಿ ಕಚೇರಿಗಳಿಗೆ ಜನರ ಅನಗತ್ಯ ಅಲೆದಾಟಕ್ಕೆ ಬ್ರೇಕ್ ಹಾಕಬೇಕು ಎಂಬುದು ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಉದ್ದೇಶವಾಗಿತ್ತು” ಎಂದು ನೆನೆದರು.

ಆದರೆ, “ಒಂದೂವರೆ ವರ್ಷ ಕಳೆದರೂ ನಮ್ಮ ಈ ಉದ್ದೇಶ ಈಡೇರಿಲ್ಲ. ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ವಿಶೇಷ ಉಪ-ವಿಭಾಗಾಧಿಕಾರಿಗಳನ್ನು ನೇಮಕ ಮಾಡಿದರೂ ಸಹ ಶೇ.55ರಷ್ಟು ಪ್ರಕರಣಗಳನ್ನು ಮಾತ್ರ ವಿಲೇವಾರಿ ಮಾಡಲಾಗಿದೆ. ಎಸಿ ನ್ಯಾಯಾಲಯಗಳಲ್ಲಿ ಇನ್ನೂ 29,000ಕ್ಕೂ ಅಧಿಕ ಪ್ರಕರಣಗಳು ಬಾಕಿ ಇವೆ. ಇದರಿಂದ ಜನ ಸಾಮಾನ್ಯರು ಸಾಕಷ್ಟು ಸಮಸ್ಯೆಗಳನ್ನು ಅನುಭವಿಸುತ್ತಿದ್ದು, ಮುಂದಿನ ಆರು ತಿಂಗಳೊಳಗಾಗಿ ಈ ಎಲ್ಲಾ ಪ್ರಕರಣಗಳನ್ನು ಅಧಿಕಾರಿಗಳು ನ್ಯಾಯಯುತ ವಿಲೇಗೆ ಒಳಪಡಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಅಭಿಯಾನ ಮಾದರಿಯಲ್ಲಿ ಕೆಲಸಕ್ಕೆ ಮುಂದಾಗಬೇಕು” ಎಂದು ಕರೆ ನೀಡಿದರು.

ಮುಂದುವರೆದು, “ಆರು ತಿಂಗಳಲ್ಲಿ ಎಲ್ಲಾ ಪ್ರಕರಣಗಳನ್ನೂ ತಹಬದಿಗೆ ತರಬೇಕು ಎಂಬುದು ಸರ್ಕಾರದ ಸಂಕಲ್ಪ. ಒಂದು ವರ್ಷದಲ್ಲಿ ಆಗಬೇಕಾದ ಕೆಲಸ ಎರಡು ವರ್ಷ ಆದ್ರೂ ಆಗಿಲ್ಲ ಅಂದ್ರೆ ಸರ್ಕಾರಕ್ಕೆ ನಿಮಗೆ ಶೋಭೆ ತರಲ್ಲ. ಹೀಗಾಗಿ ಈ ವಾರದಿಂದಲೇ ರೆಗ್ಯುಲರ್ ಎಸಿಗಳು ತಿಂಗಳೊಂದಕ್ಕೆ 200 ರಿಂದ 250 ಪ್ರಕರಣಗಳನ್ನು ವಿಲೇ ಮಾಡಿದರೆ, ವಿಶೇಷ ಉಪ-ವಿಭಾಗಾಧಿಕಾರಿಗಳು ಕನಿಷ್ಟ 70 ರಿಂದ 100 ಪ್ರಕರಣಗಳನ್ನು ವಿಲೇಗೊಳಿಸಬೇಕು. ಆರು ತಿಂಗಳ ನಂತರವೂ ಪ್ರಕರಣಗಳನ್ನು ಬಾಕಿ ಉಳಿಸಿಕೊಂಡಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು. ಅಲ್ಲದೆ, ಈ ಸಂಬಂಧ ಪ್ರತೀ ತಿಂಗಳೂ ಪ್ರಗತಿ ಪರಿಶೀಲನಾ ಸಭೆಯನ್ನೂ ನಡೆಸಲಾಗುವುದು” ಎಂದು ಎಚ್ಚರಿಸಿದರು.

“ನ್ಯಾಯಾಲಯಗಳ ತಕರಾರು ಪ್ರಕರಣಗಳ ವಿಲೇವಾರಿಯ ಜೊತೆಗೆ ಪೋಡಿ ದುರಸ್ಥಿ, ನಮೂನೆ 3-9 ಮಿಸ್ಮ್ಯಾಚ್ ಹಾಗೂ ಫೌತಿ ಖಾತೆ ಆಂದೋಲನ ಉಪ ವಿಭಾಗಾಧಿಕಾರಿಗಳ ಮಟ್ಟದಲ್ಲೇ ನಡೆಯಬೇಕು. ಹೀಗಾಗಿ ಅಧಿಕಾರಿಗಳು ಜನರ ಸಮಸ್ಯೆ ಹಾಗೂ ತಮ್ಮ ಜವಾಬ್ದಾರಿಗಳನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ಕೆಲಸಗಳನ್ನೂ ಅಭಿಯಾನ ಮಾದರಿಯಲ್ಲಿ ನಡೆಸಬೇಕು” ಎಂದು ಅವರು ಕಿವಿಮಾತು ಹೇಳಿದರು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಆಯುಕ್ತರಾದ ಸುನೀಲ್ ಕುಮಾರ್ ಸರ್ವೇ ಇಲಾಖೆ ಆಯುಕ್ತರಾದ ಮಂಜುನಾಥ್ ಉಪಸ್ಥಿತರಿದ್ದರು.

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ; ನೆಹರೂ ಕಾರಣ – ಕುಮಾರಸ್ವಾಮಿ ಪ್ರತಿಪಾದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...