Homeಕರ್ನಾಟಕಎಸಿ ಕೋರ್ಟ್‌ಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು 6 ತಿಂಗಳಲ್ಲಿ ಇತ್ಯರ್ಥಗೊಳಿಸಿ : ಅಧಿಕಾರಿಗಳಿಗೆ ಸಚಿವ ಕೃಷ್ಣ...

ಎಸಿ ಕೋರ್ಟ್‌ಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು 6 ತಿಂಗಳಲ್ಲಿ ಇತ್ಯರ್ಥಗೊಳಿಸಿ : ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ತಾಕೀತು

- Advertisement -
- Advertisement -
  • ಕಳೆದ ಒಂದು ವರ್ಷದಲ್ಲಿ 30,000 ಪ್ರಕರಣಗಳು ಇತ್ಯರ್ಥ
  • ಆರು ತಿಂಗಳ ಅವಧಿ ಮೀರಿದ ಶೇ.45ರಷ್ಟು ಪ್ರಕರಣಗಳು ಬಾಕಿ
  • ಎಸಿಗಳು ತಿಂಗಳಿಗೆ 200 ರಿಂದ 250 ಪ್ರಕರಣಗಳ ವಿಲೇಗೆ ಸೂಚನೆ
  • ಫೌತಿ ಖಾತೆ ಆಂದೋಲನಕ್ಕೂ ಗಮನ ನೀಡಲು ಅಧಿಕಾರಿಗಳಿಗೆ ತಾಕೀತು

ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯಗಳಲ್ಲಿ ಅವಧಿ ಮೀರಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನೂ ಮುಂದಿನ ಆರು ತಿಂಗಳೊಳಗಾಗಿ ನ್ಯಾಯಯುತ ಇತ್ಯರ್ಥಕ್ಕೆ ಒಳಪಡಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಅಧಿಕಾರಿಗಳಿಗೆ ಗಡುವು ನೀಡಿದರು.

ಸೋಮವಾರ (ಜ.13) ವಿಕಾಸಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಜೊತೆಗೆ ಏಕ ಕಾಲದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, “ಎಸಿ ನ್ಯಾಯಾಲಯಗಳಲ್ಲಿ ಯಾವ ಪ್ರಕರಣಗಳನ್ನೂ ಆರು ತಿಂಗಳ ಅವಧಿಗಿಂತ ಹೆಚ್ಚಿನ ಕಾಲ ಇಟ್ಟುಕೊಳ್ಳುವಂತಿಲ್ಲ ಎಂಬ ಕಾನೂನಿದೆ. ಆದರೆ, ಕಳೆದ ವರ್ಷ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೇರಿದ ವೇಳೆ ಎಸಿ ನ್ಯಾಯಾಲಯಗಳಲ್ಲಿ ಅವಧಿ ಮೀರಿದ 60 ಸಾವಿರಕ್ಕೂ ಅಧಿಕ ಪ್ರಕರಣಗಳಿದ್ದವು. ಈ ಎಲ್ಲಾ ಪ್ರಕರಣಗಳನ್ನೂ ಮುಂದಿನ ಒಂದು ವರ್ಷದಲ್ಲಿ ಇತ್ಯರ್ಥಗೊಳಿಸಿ, ಸರ್ಕಾರಿ ಕಚೇರಿಗಳಿಗೆ ಜನರ ಅನಗತ್ಯ ಅಲೆದಾಟಕ್ಕೆ ಬ್ರೇಕ್ ಹಾಕಬೇಕು ಎಂಬುದು ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಉದ್ದೇಶವಾಗಿತ್ತು” ಎಂದು ನೆನೆದರು.

ಆದರೆ, “ಒಂದೂವರೆ ವರ್ಷ ಕಳೆದರೂ ನಮ್ಮ ಈ ಉದ್ದೇಶ ಈಡೇರಿಲ್ಲ. ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ವಿಶೇಷ ಉಪ-ವಿಭಾಗಾಧಿಕಾರಿಗಳನ್ನು ನೇಮಕ ಮಾಡಿದರೂ ಸಹ ಶೇ.55ರಷ್ಟು ಪ್ರಕರಣಗಳನ್ನು ಮಾತ್ರ ವಿಲೇವಾರಿ ಮಾಡಲಾಗಿದೆ. ಎಸಿ ನ್ಯಾಯಾಲಯಗಳಲ್ಲಿ ಇನ್ನೂ 29,000ಕ್ಕೂ ಅಧಿಕ ಪ್ರಕರಣಗಳು ಬಾಕಿ ಇವೆ. ಇದರಿಂದ ಜನ ಸಾಮಾನ್ಯರು ಸಾಕಷ್ಟು ಸಮಸ್ಯೆಗಳನ್ನು ಅನುಭವಿಸುತ್ತಿದ್ದು, ಮುಂದಿನ ಆರು ತಿಂಗಳೊಳಗಾಗಿ ಈ ಎಲ್ಲಾ ಪ್ರಕರಣಗಳನ್ನು ಅಧಿಕಾರಿಗಳು ನ್ಯಾಯಯುತ ವಿಲೇಗೆ ಒಳಪಡಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಅಭಿಯಾನ ಮಾದರಿಯಲ್ಲಿ ಕೆಲಸಕ್ಕೆ ಮುಂದಾಗಬೇಕು” ಎಂದು ಕರೆ ನೀಡಿದರು.

ಮುಂದುವರೆದು, “ಆರು ತಿಂಗಳಲ್ಲಿ ಎಲ್ಲಾ ಪ್ರಕರಣಗಳನ್ನೂ ತಹಬದಿಗೆ ತರಬೇಕು ಎಂಬುದು ಸರ್ಕಾರದ ಸಂಕಲ್ಪ. ಒಂದು ವರ್ಷದಲ್ಲಿ ಆಗಬೇಕಾದ ಕೆಲಸ ಎರಡು ವರ್ಷ ಆದ್ರೂ ಆಗಿಲ್ಲ ಅಂದ್ರೆ ಸರ್ಕಾರಕ್ಕೆ ನಿಮಗೆ ಶೋಭೆ ತರಲ್ಲ. ಹೀಗಾಗಿ ಈ ವಾರದಿಂದಲೇ ರೆಗ್ಯುಲರ್ ಎಸಿಗಳು ತಿಂಗಳೊಂದಕ್ಕೆ 200 ರಿಂದ 250 ಪ್ರಕರಣಗಳನ್ನು ವಿಲೇ ಮಾಡಿದರೆ, ವಿಶೇಷ ಉಪ-ವಿಭಾಗಾಧಿಕಾರಿಗಳು ಕನಿಷ್ಟ 70 ರಿಂದ 100 ಪ್ರಕರಣಗಳನ್ನು ವಿಲೇಗೊಳಿಸಬೇಕು. ಆರು ತಿಂಗಳ ನಂತರವೂ ಪ್ರಕರಣಗಳನ್ನು ಬಾಕಿ ಉಳಿಸಿಕೊಂಡಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು. ಅಲ್ಲದೆ, ಈ ಸಂಬಂಧ ಪ್ರತೀ ತಿಂಗಳೂ ಪ್ರಗತಿ ಪರಿಶೀಲನಾ ಸಭೆಯನ್ನೂ ನಡೆಸಲಾಗುವುದು” ಎಂದು ಎಚ್ಚರಿಸಿದರು.

“ನ್ಯಾಯಾಲಯಗಳ ತಕರಾರು ಪ್ರಕರಣಗಳ ವಿಲೇವಾರಿಯ ಜೊತೆಗೆ ಪೋಡಿ ದುರಸ್ಥಿ, ನಮೂನೆ 3-9 ಮಿಸ್ಮ್ಯಾಚ್ ಹಾಗೂ ಫೌತಿ ಖಾತೆ ಆಂದೋಲನ ಉಪ ವಿಭಾಗಾಧಿಕಾರಿಗಳ ಮಟ್ಟದಲ್ಲೇ ನಡೆಯಬೇಕು. ಹೀಗಾಗಿ ಅಧಿಕಾರಿಗಳು ಜನರ ಸಮಸ್ಯೆ ಹಾಗೂ ತಮ್ಮ ಜವಾಬ್ದಾರಿಗಳನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ಕೆಲಸಗಳನ್ನೂ ಅಭಿಯಾನ ಮಾದರಿಯಲ್ಲಿ ನಡೆಸಬೇಕು” ಎಂದು ಅವರು ಕಿವಿಮಾತು ಹೇಳಿದರು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಆಯುಕ್ತರಾದ ಸುನೀಲ್ ಕುಮಾರ್ ಸರ್ವೇ ಇಲಾಖೆ ಆಯುಕ್ತರಾದ ಮಂಜುನಾಥ್ ಉಪಸ್ಥಿತರಿದ್ದರು.

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ; ನೆಹರೂ ಕಾರಣ – ಕುಮಾರಸ್ವಾಮಿ ಪ್ರತಿಪಾದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...