Homeಕರ್ನಾಟಕಎಸಿ ಕೋರ್ಟ್‌ಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು 6 ತಿಂಗಳಲ್ಲಿ ಇತ್ಯರ್ಥಗೊಳಿಸಿ : ಅಧಿಕಾರಿಗಳಿಗೆ ಸಚಿವ ಕೃಷ್ಣ...

ಎಸಿ ಕೋರ್ಟ್‌ಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು 6 ತಿಂಗಳಲ್ಲಿ ಇತ್ಯರ್ಥಗೊಳಿಸಿ : ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ತಾಕೀತು

- Advertisement -
- Advertisement -
  • ಕಳೆದ ಒಂದು ವರ್ಷದಲ್ಲಿ 30,000 ಪ್ರಕರಣಗಳು ಇತ್ಯರ್ಥ
  • ಆರು ತಿಂಗಳ ಅವಧಿ ಮೀರಿದ ಶೇ.45ರಷ್ಟು ಪ್ರಕರಣಗಳು ಬಾಕಿ
  • ಎಸಿಗಳು ತಿಂಗಳಿಗೆ 200 ರಿಂದ 250 ಪ್ರಕರಣಗಳ ವಿಲೇಗೆ ಸೂಚನೆ
  • ಫೌತಿ ಖಾತೆ ಆಂದೋಲನಕ್ಕೂ ಗಮನ ನೀಡಲು ಅಧಿಕಾರಿಗಳಿಗೆ ತಾಕೀತು

ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯಗಳಲ್ಲಿ ಅವಧಿ ಮೀರಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನೂ ಮುಂದಿನ ಆರು ತಿಂಗಳೊಳಗಾಗಿ ನ್ಯಾಯಯುತ ಇತ್ಯರ್ಥಕ್ಕೆ ಒಳಪಡಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಅಧಿಕಾರಿಗಳಿಗೆ ಗಡುವು ನೀಡಿದರು.

ಸೋಮವಾರ (ಜ.13) ವಿಕಾಸಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಜೊತೆಗೆ ಏಕ ಕಾಲದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, “ಎಸಿ ನ್ಯಾಯಾಲಯಗಳಲ್ಲಿ ಯಾವ ಪ್ರಕರಣಗಳನ್ನೂ ಆರು ತಿಂಗಳ ಅವಧಿಗಿಂತ ಹೆಚ್ಚಿನ ಕಾಲ ಇಟ್ಟುಕೊಳ್ಳುವಂತಿಲ್ಲ ಎಂಬ ಕಾನೂನಿದೆ. ಆದರೆ, ಕಳೆದ ವರ್ಷ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೇರಿದ ವೇಳೆ ಎಸಿ ನ್ಯಾಯಾಲಯಗಳಲ್ಲಿ ಅವಧಿ ಮೀರಿದ 60 ಸಾವಿರಕ್ಕೂ ಅಧಿಕ ಪ್ರಕರಣಗಳಿದ್ದವು. ಈ ಎಲ್ಲಾ ಪ್ರಕರಣಗಳನ್ನೂ ಮುಂದಿನ ಒಂದು ವರ್ಷದಲ್ಲಿ ಇತ್ಯರ್ಥಗೊಳಿಸಿ, ಸರ್ಕಾರಿ ಕಚೇರಿಗಳಿಗೆ ಜನರ ಅನಗತ್ಯ ಅಲೆದಾಟಕ್ಕೆ ಬ್ರೇಕ್ ಹಾಕಬೇಕು ಎಂಬುದು ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಉದ್ದೇಶವಾಗಿತ್ತು” ಎಂದು ನೆನೆದರು.

ಆದರೆ, “ಒಂದೂವರೆ ವರ್ಷ ಕಳೆದರೂ ನಮ್ಮ ಈ ಉದ್ದೇಶ ಈಡೇರಿಲ್ಲ. ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ವಿಶೇಷ ಉಪ-ವಿಭಾಗಾಧಿಕಾರಿಗಳನ್ನು ನೇಮಕ ಮಾಡಿದರೂ ಸಹ ಶೇ.55ರಷ್ಟು ಪ್ರಕರಣಗಳನ್ನು ಮಾತ್ರ ವಿಲೇವಾರಿ ಮಾಡಲಾಗಿದೆ. ಎಸಿ ನ್ಯಾಯಾಲಯಗಳಲ್ಲಿ ಇನ್ನೂ 29,000ಕ್ಕೂ ಅಧಿಕ ಪ್ರಕರಣಗಳು ಬಾಕಿ ಇವೆ. ಇದರಿಂದ ಜನ ಸಾಮಾನ್ಯರು ಸಾಕಷ್ಟು ಸಮಸ್ಯೆಗಳನ್ನು ಅನುಭವಿಸುತ್ತಿದ್ದು, ಮುಂದಿನ ಆರು ತಿಂಗಳೊಳಗಾಗಿ ಈ ಎಲ್ಲಾ ಪ್ರಕರಣಗಳನ್ನು ಅಧಿಕಾರಿಗಳು ನ್ಯಾಯಯುತ ವಿಲೇಗೆ ಒಳಪಡಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಅಭಿಯಾನ ಮಾದರಿಯಲ್ಲಿ ಕೆಲಸಕ್ಕೆ ಮುಂದಾಗಬೇಕು” ಎಂದು ಕರೆ ನೀಡಿದರು.

ಮುಂದುವರೆದು, “ಆರು ತಿಂಗಳಲ್ಲಿ ಎಲ್ಲಾ ಪ್ರಕರಣಗಳನ್ನೂ ತಹಬದಿಗೆ ತರಬೇಕು ಎಂಬುದು ಸರ್ಕಾರದ ಸಂಕಲ್ಪ. ಒಂದು ವರ್ಷದಲ್ಲಿ ಆಗಬೇಕಾದ ಕೆಲಸ ಎರಡು ವರ್ಷ ಆದ್ರೂ ಆಗಿಲ್ಲ ಅಂದ್ರೆ ಸರ್ಕಾರಕ್ಕೆ ನಿಮಗೆ ಶೋಭೆ ತರಲ್ಲ. ಹೀಗಾಗಿ ಈ ವಾರದಿಂದಲೇ ರೆಗ್ಯುಲರ್ ಎಸಿಗಳು ತಿಂಗಳೊಂದಕ್ಕೆ 200 ರಿಂದ 250 ಪ್ರಕರಣಗಳನ್ನು ವಿಲೇ ಮಾಡಿದರೆ, ವಿಶೇಷ ಉಪ-ವಿಭಾಗಾಧಿಕಾರಿಗಳು ಕನಿಷ್ಟ 70 ರಿಂದ 100 ಪ್ರಕರಣಗಳನ್ನು ವಿಲೇಗೊಳಿಸಬೇಕು. ಆರು ತಿಂಗಳ ನಂತರವೂ ಪ್ರಕರಣಗಳನ್ನು ಬಾಕಿ ಉಳಿಸಿಕೊಂಡಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು. ಅಲ್ಲದೆ, ಈ ಸಂಬಂಧ ಪ್ರತೀ ತಿಂಗಳೂ ಪ್ರಗತಿ ಪರಿಶೀಲನಾ ಸಭೆಯನ್ನೂ ನಡೆಸಲಾಗುವುದು” ಎಂದು ಎಚ್ಚರಿಸಿದರು.

“ನ್ಯಾಯಾಲಯಗಳ ತಕರಾರು ಪ್ರಕರಣಗಳ ವಿಲೇವಾರಿಯ ಜೊತೆಗೆ ಪೋಡಿ ದುರಸ್ಥಿ, ನಮೂನೆ 3-9 ಮಿಸ್ಮ್ಯಾಚ್ ಹಾಗೂ ಫೌತಿ ಖಾತೆ ಆಂದೋಲನ ಉಪ ವಿಭಾಗಾಧಿಕಾರಿಗಳ ಮಟ್ಟದಲ್ಲೇ ನಡೆಯಬೇಕು. ಹೀಗಾಗಿ ಅಧಿಕಾರಿಗಳು ಜನರ ಸಮಸ್ಯೆ ಹಾಗೂ ತಮ್ಮ ಜವಾಬ್ದಾರಿಗಳನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ಕೆಲಸಗಳನ್ನೂ ಅಭಿಯಾನ ಮಾದರಿಯಲ್ಲಿ ನಡೆಸಬೇಕು” ಎಂದು ಅವರು ಕಿವಿಮಾತು ಹೇಳಿದರು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಆಯುಕ್ತರಾದ ಸುನೀಲ್ ಕುಮಾರ್ ಸರ್ವೇ ಇಲಾಖೆ ಆಯುಕ್ತರಾದ ಮಂಜುನಾಥ್ ಉಪಸ್ಥಿತರಿದ್ದರು.

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ; ನೆಹರೂ ಕಾರಣ – ಕುಮಾರಸ್ವಾಮಿ ಪ್ರತಿಪಾದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...