Homeಮುಖಪುಟಲಕ್ಷದ್ವೀಪ ಸಂಸದರ ಅನರ್ಹತೆ ರದ್ದು; ಮತ್ತೆ ಲೋಕಸಭಾ ಸದಸ್ಯತ್ವ ಪಡೆದ ಫೈಝಲ್

ಲಕ್ಷದ್ವೀಪ ಸಂಸದರ ಅನರ್ಹತೆ ರದ್ದು; ಮತ್ತೆ ಲೋಕಸಭಾ ಸದಸ್ಯತ್ವ ಪಡೆದ ಫೈಝಲ್

- Advertisement -
- Advertisement -

ಎನ್‌ಸಿಪಿ ನಾಯಕ ಮೊಹಮ್ಮದ್ ಫೈಜಲ್ ಅವರ ಲೋಕಸಭೆ ಸದಸ್ಯತ್ವವನ್ನು ಸಂಸತ್ತಿನ ಕೆಳಮನೆ ಬುಧವಾರ ಮರುಸ್ಥಾಪಿಸಿದೆ. ಮೊಹಮ್ಮದ್ ಫೈಝಲ್ ಅವರನ್ನು ಕಳೆದ ಜನವರಿಯಲ್ಲಿ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಫೈಜಲ್‌ ಅವರು ಕ್ರಿಮಿನಲ್ ಪ್ರಕರಣದಲ್ಲಿ 10 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದರು.

ಲಕ್ಷದ್ವೀಪವನ್ನು ಪ್ರತಿನಿಧಿಸುವ ಫೈಝಲ್ ಅವರು ಸೆಷನ್ಸ್ ನ್ಯಾಯಾಲಯದ ಆದೇಶದ ವಿರುದ್ಧ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಫೈಝಲ್ ಅವರ ಅಪರಾಧ ಮತ್ತು ಶಿಕ್ಷೆಯನ್ನು ಹೈಕೋರ್ಟ್ ಅಮಾನತುಗೊಳಿಸಿತ್ತು.

“ಕೇರಳದ ಹೈಕೋರ್ಟಿನ 25.01.2023ರ ಆದೇಶದ ದೃಷ್ಟಿಯಿಂದ, ಮೊಹಮ್ಮದ್ ಫೈಜಲ್ ಅವರ ಅನರ್ಹತೆಯನ್ನು ತಡೆಯಲಾಗಿದೆ. 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 8ರೊಂದಿಗೆ ಓದಲಾದ ಭಾರತದ ಸಂವಿಧಾನದ 102 (1) (ಇ) ವಿಧಿಗಳ ನಿಬಂಧನೆಗಳು ಮುಂದಿನ ನ್ಯಾಯಾಂಗ ತೀರ್ಪುಗಳಿಗೆ ಒಳಪಟ್ಟಿವೆ. ಹೀಗಾಗಿ ಅನರ್ಹತೆಯನ್ನು ತಡೆಯಲಾಗಿದೆ” ಎಂದು ಲೋಕಸಭೆಯ ಸಚಿವಾಲಯದ ಅಧಿಸೂಚನೆ ತಿಳಿಸಿದೆ.

ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಸರ್ವೋಚ್ಚ ನ್ಯಾಯಾಲಯ ವಿಚಾರಣೆಯನ್ನು ಕೈಗೆತ್ತಿಕೊಳ್ಳುವ ಮುಂಚಿತವಾಗಿ ಫೈಝಲ್ ಅವರ ಅನರ್ಹತೆಯನ್ನು ತಡೆಹಿಡಿಯಲಾಗಿದೆ.

ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಶಿಕ್ಷೆಗೆ ತಡೆಯಾಜ್ಞೆ ನೀಡಿದೆ ಎಂದು ವಾದಿಸಿರುವ ಫೈಝಲ್‌, ಲೋಕಸಭೆಯಿಂದ ಮಾಡಲಾಗಿರುವ ಅನರ್ಹತೆಯನ್ನು ಹಿಂಪಡೆಯಲು ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

“ಕೇರಳ ಹೈಕೋರ್ಟ್ ಜನವರಿ 25 ರಂದು ಫೈಝಲ್‌ ಅವರ ಅಪರಾಧ ಮತ್ತು ಶಿಕ್ಷೆಯನ್ನು ಅಮಾನತುಗೊಳಿಸಿ ಆದೇಶವನ್ನು ಜಾರಿಗೊಳಿಸಿದೆ. ತಕ್ಷಣ ಅನರ್ಹತೆಯನ್ನು ಹಿಂತೆಗೆದುಕೊಳ್ಳಬೇಕಿತ್ತು, ತಡವಾಗಿಯಾದರೂ ಇದು ಸ್ವಾಗತಾರ್ಹ ಕ್ರಮವಾಗಿದೆ” ಎಂದು ಎನ್‌ಸಿಪಿ ರಾಷ್ಟ್ರೀಯ ವಕ್ತಾರ ಕ್ಲೈಡ್ ಕ್ರಾಸ್ಟೊ ಪ್ರತಿಕ್ರಿಯಿಸಿದ್ದಾರೆ.

ಜನವರಿ 13 ರಂದು ಫೈಝಲ್ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಲಾಯಿತು, ಅವರು ಮತ್ತು ಇತರ ಮೂವರಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ಕವರಟ್ಟಿಯ ಸೆಷನ್ಸ್ ನ್ಯಾಯಾಲಯವು ನೀಡಿತ್ತು.

2009ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಪಿ ಎಂ ಸಯೀದ್ ಅವರ ಅಳಿಯ ಮೊಹಮ್ಮದ್ ಸಾಲಿಹ್ ಅವರನ್ನು ಕೊಲ್ಲಲು ಪ್ರಯತ್ನಿಸಿದ್ದಾರೆಂದು ತೀರ್ಪು ನೀಡಿದ್ದ ಕವರಟ್ಟಿ ಸೆಷನ್ಸ್ ನ್ಯಾಯಾಲಯವು ಅಪರಾಧಿಗಳಿಗೆ ತಲಾ ಒಂದು ಲಕ್ಷ ರೂಪಾಯಿ ದಂಡ ವಿಧಿಸಿತ್ತು. ಅಪರಾಧಿಗಳೆಲ್ಲರೂ ಸಂಬಂಧಿಕರಾಗಿದ್ದಾರೆ.

ಮೊಹಮ್ಮದ್ ಫೈಜಲ್ ಅವರು ಕೊಲೆ ಯತ್ನ ಪ್ರಕರಣದಲ್ಲಿ ತನಗೆ ಮತ್ತು ಇತರ ಮೂವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಸೆಷನ್ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಫೈಝಲ್ ಮತ್ತು ಇತರ ಮೂವರು ಆರೋಪಿಗಳನ್ನು ಐಪಿಸಿ ಸೆಕ್ಷನ್ 143, 147, 148, 448, 427, 324, 342, 307, 506 ಆರ್/ಡಬ್ಲ್ಯು 149 ರ ಅಡಿಯಲ್ಲಿ ಶಿಕ್ಷಾರ್ಹ ದೋಷಿಗಳೆಂದು ಕವರಟ್ಟಿ ನ್ಯಾಯಾಲಯ ಘೋಷಿಸಿತ್ತು.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಜನವರಿ 30ರಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿದ್ದರು. “ಲಕ್ಷದ್ವೀಪದಿಂದ ಎರಡು ಅವಧಿಗೆ ಸದಸ್ಯರಾಗಿರುವ ಫೈಝಲ್ ಅವರ ಅಮಾನತು ರದ್ದುಗೊಳಿಸಬೇಕು” ಎಂದು ಮನವಿ ಮಾಡಿದ್ದರು.

ಅನರ್ಹತೆಯ ನಂತರ, ಚುನಾವಣಾ ಆಯೋಗವು ಜನವರಿ 18 ರಂದು ಲಕ್ಷದ್ವೀಪ ಸಂಸದೀಯ ಸ್ಥಾನಕ್ಕೆ ಉಪಚುನಾವಣೆ ಘೋಷಿಸಿತ್ತು. ಆದರೆ ಕೇರಳ ಹೈಕೋರ್ಟ್ ತಡೆಯಾಜ್ಞೆಯ ನಂತರ ಉಪಚುನಾವಣೆಯನ್ನು ಹಿಂಪಡೆಯಲು ಜನವರಿ 30ರಂದು ಆಯೋಗ ನಿರ್ಧರಿಸಿತು.

ರಾಹುಲ್ ಗಾಂಧಿಯವರು ‘ಮೋದಿ ಸರ್‌ನೇಮ್‌’ ಬಳಸಿದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ವರ್ಷ ಜೈಲು ಶಿಕ್ಷೆಯನ್ನು ಸೂರತ್‌ ನ್ಯಾಯಾಲಯ ವಿಧಿಸಿದೆ. ಆದರೆ ಮೇಲ್ಮನವಿಯ ಪ್ರಕ್ರಿಯೆಗಳು ಚಾಲ್ತಿಯಲ್ಲಿರುವಾಗಲೇ ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅಮಾನತು ಮಾಡಲಾಯಿತು ಎಂಬ ಆರೋಪಗಳು ಬಂದಿವೆ. ರಾಹುಲ್ ಗಾಂಧಿಯವರು ಏಪ್ರಿಲ್ 22 ರೊಳಗೆ ತಮ್ಮ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಬೇಕು ಎಂದು ಸೋಮವಾರ ನೋಟೀಸ್‌ ನೀಡಲಾಗಿದೆ.

ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದನ್ನು ಪ್ರಶ್ನಿಸಿ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ದನಿ ಎತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...