Homeಮುಖಪುಟಲಕ್ಷದ್ವೀಪ ಸಂಸದರ ಅನರ್ಹತೆ ರದ್ದು; ಮತ್ತೆ ಲೋಕಸಭಾ ಸದಸ್ಯತ್ವ ಪಡೆದ ಫೈಝಲ್

ಲಕ್ಷದ್ವೀಪ ಸಂಸದರ ಅನರ್ಹತೆ ರದ್ದು; ಮತ್ತೆ ಲೋಕಸಭಾ ಸದಸ್ಯತ್ವ ಪಡೆದ ಫೈಝಲ್

- Advertisement -
- Advertisement -

ಎನ್‌ಸಿಪಿ ನಾಯಕ ಮೊಹಮ್ಮದ್ ಫೈಜಲ್ ಅವರ ಲೋಕಸಭೆ ಸದಸ್ಯತ್ವವನ್ನು ಸಂಸತ್ತಿನ ಕೆಳಮನೆ ಬುಧವಾರ ಮರುಸ್ಥಾಪಿಸಿದೆ. ಮೊಹಮ್ಮದ್ ಫೈಝಲ್ ಅವರನ್ನು ಕಳೆದ ಜನವರಿಯಲ್ಲಿ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಫೈಜಲ್‌ ಅವರು ಕ್ರಿಮಿನಲ್ ಪ್ರಕರಣದಲ್ಲಿ 10 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದರು.

ಲಕ್ಷದ್ವೀಪವನ್ನು ಪ್ರತಿನಿಧಿಸುವ ಫೈಝಲ್ ಅವರು ಸೆಷನ್ಸ್ ನ್ಯಾಯಾಲಯದ ಆದೇಶದ ವಿರುದ್ಧ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಫೈಝಲ್ ಅವರ ಅಪರಾಧ ಮತ್ತು ಶಿಕ್ಷೆಯನ್ನು ಹೈಕೋರ್ಟ್ ಅಮಾನತುಗೊಳಿಸಿತ್ತು.

“ಕೇರಳದ ಹೈಕೋರ್ಟಿನ 25.01.2023ರ ಆದೇಶದ ದೃಷ್ಟಿಯಿಂದ, ಮೊಹಮ್ಮದ್ ಫೈಜಲ್ ಅವರ ಅನರ್ಹತೆಯನ್ನು ತಡೆಯಲಾಗಿದೆ. 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 8ರೊಂದಿಗೆ ಓದಲಾದ ಭಾರತದ ಸಂವಿಧಾನದ 102 (1) (ಇ) ವಿಧಿಗಳ ನಿಬಂಧನೆಗಳು ಮುಂದಿನ ನ್ಯಾಯಾಂಗ ತೀರ್ಪುಗಳಿಗೆ ಒಳಪಟ್ಟಿವೆ. ಹೀಗಾಗಿ ಅನರ್ಹತೆಯನ್ನು ತಡೆಯಲಾಗಿದೆ” ಎಂದು ಲೋಕಸಭೆಯ ಸಚಿವಾಲಯದ ಅಧಿಸೂಚನೆ ತಿಳಿಸಿದೆ.

ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಸರ್ವೋಚ್ಚ ನ್ಯಾಯಾಲಯ ವಿಚಾರಣೆಯನ್ನು ಕೈಗೆತ್ತಿಕೊಳ್ಳುವ ಮುಂಚಿತವಾಗಿ ಫೈಝಲ್ ಅವರ ಅನರ್ಹತೆಯನ್ನು ತಡೆಹಿಡಿಯಲಾಗಿದೆ.

ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಶಿಕ್ಷೆಗೆ ತಡೆಯಾಜ್ಞೆ ನೀಡಿದೆ ಎಂದು ವಾದಿಸಿರುವ ಫೈಝಲ್‌, ಲೋಕಸಭೆಯಿಂದ ಮಾಡಲಾಗಿರುವ ಅನರ್ಹತೆಯನ್ನು ಹಿಂಪಡೆಯಲು ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

“ಕೇರಳ ಹೈಕೋರ್ಟ್ ಜನವರಿ 25 ರಂದು ಫೈಝಲ್‌ ಅವರ ಅಪರಾಧ ಮತ್ತು ಶಿಕ್ಷೆಯನ್ನು ಅಮಾನತುಗೊಳಿಸಿ ಆದೇಶವನ್ನು ಜಾರಿಗೊಳಿಸಿದೆ. ತಕ್ಷಣ ಅನರ್ಹತೆಯನ್ನು ಹಿಂತೆಗೆದುಕೊಳ್ಳಬೇಕಿತ್ತು, ತಡವಾಗಿಯಾದರೂ ಇದು ಸ್ವಾಗತಾರ್ಹ ಕ್ರಮವಾಗಿದೆ” ಎಂದು ಎನ್‌ಸಿಪಿ ರಾಷ್ಟ್ರೀಯ ವಕ್ತಾರ ಕ್ಲೈಡ್ ಕ್ರಾಸ್ಟೊ ಪ್ರತಿಕ್ರಿಯಿಸಿದ್ದಾರೆ.

ಜನವರಿ 13 ರಂದು ಫೈಝಲ್ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಲಾಯಿತು, ಅವರು ಮತ್ತು ಇತರ ಮೂವರಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ಕವರಟ್ಟಿಯ ಸೆಷನ್ಸ್ ನ್ಯಾಯಾಲಯವು ನೀಡಿತ್ತು.

2009ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಪಿ ಎಂ ಸಯೀದ್ ಅವರ ಅಳಿಯ ಮೊಹಮ್ಮದ್ ಸಾಲಿಹ್ ಅವರನ್ನು ಕೊಲ್ಲಲು ಪ್ರಯತ್ನಿಸಿದ್ದಾರೆಂದು ತೀರ್ಪು ನೀಡಿದ್ದ ಕವರಟ್ಟಿ ಸೆಷನ್ಸ್ ನ್ಯಾಯಾಲಯವು ಅಪರಾಧಿಗಳಿಗೆ ತಲಾ ಒಂದು ಲಕ್ಷ ರೂಪಾಯಿ ದಂಡ ವಿಧಿಸಿತ್ತು. ಅಪರಾಧಿಗಳೆಲ್ಲರೂ ಸಂಬಂಧಿಕರಾಗಿದ್ದಾರೆ.

ಮೊಹಮ್ಮದ್ ಫೈಜಲ್ ಅವರು ಕೊಲೆ ಯತ್ನ ಪ್ರಕರಣದಲ್ಲಿ ತನಗೆ ಮತ್ತು ಇತರ ಮೂವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಸೆಷನ್ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಫೈಝಲ್ ಮತ್ತು ಇತರ ಮೂವರು ಆರೋಪಿಗಳನ್ನು ಐಪಿಸಿ ಸೆಕ್ಷನ್ 143, 147, 148, 448, 427, 324, 342, 307, 506 ಆರ್/ಡಬ್ಲ್ಯು 149 ರ ಅಡಿಯಲ್ಲಿ ಶಿಕ್ಷಾರ್ಹ ದೋಷಿಗಳೆಂದು ಕವರಟ್ಟಿ ನ್ಯಾಯಾಲಯ ಘೋಷಿಸಿತ್ತು.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಜನವರಿ 30ರಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿದ್ದರು. “ಲಕ್ಷದ್ವೀಪದಿಂದ ಎರಡು ಅವಧಿಗೆ ಸದಸ್ಯರಾಗಿರುವ ಫೈಝಲ್ ಅವರ ಅಮಾನತು ರದ್ದುಗೊಳಿಸಬೇಕು” ಎಂದು ಮನವಿ ಮಾಡಿದ್ದರು.

ಅನರ್ಹತೆಯ ನಂತರ, ಚುನಾವಣಾ ಆಯೋಗವು ಜನವರಿ 18 ರಂದು ಲಕ್ಷದ್ವೀಪ ಸಂಸದೀಯ ಸ್ಥಾನಕ್ಕೆ ಉಪಚುನಾವಣೆ ಘೋಷಿಸಿತ್ತು. ಆದರೆ ಕೇರಳ ಹೈಕೋರ್ಟ್ ತಡೆಯಾಜ್ಞೆಯ ನಂತರ ಉಪಚುನಾವಣೆಯನ್ನು ಹಿಂಪಡೆಯಲು ಜನವರಿ 30ರಂದು ಆಯೋಗ ನಿರ್ಧರಿಸಿತು.

ರಾಹುಲ್ ಗಾಂಧಿಯವರು ‘ಮೋದಿ ಸರ್‌ನೇಮ್‌’ ಬಳಸಿದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ವರ್ಷ ಜೈಲು ಶಿಕ್ಷೆಯನ್ನು ಸೂರತ್‌ ನ್ಯಾಯಾಲಯ ವಿಧಿಸಿದೆ. ಆದರೆ ಮೇಲ್ಮನವಿಯ ಪ್ರಕ್ರಿಯೆಗಳು ಚಾಲ್ತಿಯಲ್ಲಿರುವಾಗಲೇ ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅಮಾನತು ಮಾಡಲಾಯಿತು ಎಂಬ ಆರೋಪಗಳು ಬಂದಿವೆ. ರಾಹುಲ್ ಗಾಂಧಿಯವರು ಏಪ್ರಿಲ್ 22 ರೊಳಗೆ ತಮ್ಮ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಬೇಕು ಎಂದು ಸೋಮವಾರ ನೋಟೀಸ್‌ ನೀಡಲಾಗಿದೆ.

ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದನ್ನು ಪ್ರಶ್ನಿಸಿ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ದನಿ ಎತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...