Homeಮುಖಪುಟಲಕ್ಷದ್ವೀಪ ಸಂಸದರ ಅನರ್ಹತೆ ರದ್ದು; ಮತ್ತೆ ಲೋಕಸಭಾ ಸದಸ್ಯತ್ವ ಪಡೆದ ಫೈಝಲ್

ಲಕ್ಷದ್ವೀಪ ಸಂಸದರ ಅನರ್ಹತೆ ರದ್ದು; ಮತ್ತೆ ಲೋಕಸಭಾ ಸದಸ್ಯತ್ವ ಪಡೆದ ಫೈಝಲ್

- Advertisement -
- Advertisement -

ಎನ್‌ಸಿಪಿ ನಾಯಕ ಮೊಹಮ್ಮದ್ ಫೈಜಲ್ ಅವರ ಲೋಕಸಭೆ ಸದಸ್ಯತ್ವವನ್ನು ಸಂಸತ್ತಿನ ಕೆಳಮನೆ ಬುಧವಾರ ಮರುಸ್ಥಾಪಿಸಿದೆ. ಮೊಹಮ್ಮದ್ ಫೈಝಲ್ ಅವರನ್ನು ಕಳೆದ ಜನವರಿಯಲ್ಲಿ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಫೈಜಲ್‌ ಅವರು ಕ್ರಿಮಿನಲ್ ಪ್ರಕರಣದಲ್ಲಿ 10 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದರು.

ಲಕ್ಷದ್ವೀಪವನ್ನು ಪ್ರತಿನಿಧಿಸುವ ಫೈಝಲ್ ಅವರು ಸೆಷನ್ಸ್ ನ್ಯಾಯಾಲಯದ ಆದೇಶದ ವಿರುದ್ಧ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಫೈಝಲ್ ಅವರ ಅಪರಾಧ ಮತ್ತು ಶಿಕ್ಷೆಯನ್ನು ಹೈಕೋರ್ಟ್ ಅಮಾನತುಗೊಳಿಸಿತ್ತು.

“ಕೇರಳದ ಹೈಕೋರ್ಟಿನ 25.01.2023ರ ಆದೇಶದ ದೃಷ್ಟಿಯಿಂದ, ಮೊಹಮ್ಮದ್ ಫೈಜಲ್ ಅವರ ಅನರ್ಹತೆಯನ್ನು ತಡೆಯಲಾಗಿದೆ. 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 8ರೊಂದಿಗೆ ಓದಲಾದ ಭಾರತದ ಸಂವಿಧಾನದ 102 (1) (ಇ) ವಿಧಿಗಳ ನಿಬಂಧನೆಗಳು ಮುಂದಿನ ನ್ಯಾಯಾಂಗ ತೀರ್ಪುಗಳಿಗೆ ಒಳಪಟ್ಟಿವೆ. ಹೀಗಾಗಿ ಅನರ್ಹತೆಯನ್ನು ತಡೆಯಲಾಗಿದೆ” ಎಂದು ಲೋಕಸಭೆಯ ಸಚಿವಾಲಯದ ಅಧಿಸೂಚನೆ ತಿಳಿಸಿದೆ.

ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಸರ್ವೋಚ್ಚ ನ್ಯಾಯಾಲಯ ವಿಚಾರಣೆಯನ್ನು ಕೈಗೆತ್ತಿಕೊಳ್ಳುವ ಮುಂಚಿತವಾಗಿ ಫೈಝಲ್ ಅವರ ಅನರ್ಹತೆಯನ್ನು ತಡೆಹಿಡಿಯಲಾಗಿದೆ.

ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಶಿಕ್ಷೆಗೆ ತಡೆಯಾಜ್ಞೆ ನೀಡಿದೆ ಎಂದು ವಾದಿಸಿರುವ ಫೈಝಲ್‌, ಲೋಕಸಭೆಯಿಂದ ಮಾಡಲಾಗಿರುವ ಅನರ್ಹತೆಯನ್ನು ಹಿಂಪಡೆಯಲು ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

“ಕೇರಳ ಹೈಕೋರ್ಟ್ ಜನವರಿ 25 ರಂದು ಫೈಝಲ್‌ ಅವರ ಅಪರಾಧ ಮತ್ತು ಶಿಕ್ಷೆಯನ್ನು ಅಮಾನತುಗೊಳಿಸಿ ಆದೇಶವನ್ನು ಜಾರಿಗೊಳಿಸಿದೆ. ತಕ್ಷಣ ಅನರ್ಹತೆಯನ್ನು ಹಿಂತೆಗೆದುಕೊಳ್ಳಬೇಕಿತ್ತು, ತಡವಾಗಿಯಾದರೂ ಇದು ಸ್ವಾಗತಾರ್ಹ ಕ್ರಮವಾಗಿದೆ” ಎಂದು ಎನ್‌ಸಿಪಿ ರಾಷ್ಟ್ರೀಯ ವಕ್ತಾರ ಕ್ಲೈಡ್ ಕ್ರಾಸ್ಟೊ ಪ್ರತಿಕ್ರಿಯಿಸಿದ್ದಾರೆ.

ಜನವರಿ 13 ರಂದು ಫೈಝಲ್ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಲಾಯಿತು, ಅವರು ಮತ್ತು ಇತರ ಮೂವರಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ಕವರಟ್ಟಿಯ ಸೆಷನ್ಸ್ ನ್ಯಾಯಾಲಯವು ನೀಡಿತ್ತು.

2009ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಪಿ ಎಂ ಸಯೀದ್ ಅವರ ಅಳಿಯ ಮೊಹಮ್ಮದ್ ಸಾಲಿಹ್ ಅವರನ್ನು ಕೊಲ್ಲಲು ಪ್ರಯತ್ನಿಸಿದ್ದಾರೆಂದು ತೀರ್ಪು ನೀಡಿದ್ದ ಕವರಟ್ಟಿ ಸೆಷನ್ಸ್ ನ್ಯಾಯಾಲಯವು ಅಪರಾಧಿಗಳಿಗೆ ತಲಾ ಒಂದು ಲಕ್ಷ ರೂಪಾಯಿ ದಂಡ ವಿಧಿಸಿತ್ತು. ಅಪರಾಧಿಗಳೆಲ್ಲರೂ ಸಂಬಂಧಿಕರಾಗಿದ್ದಾರೆ.

ಮೊಹಮ್ಮದ್ ಫೈಜಲ್ ಅವರು ಕೊಲೆ ಯತ್ನ ಪ್ರಕರಣದಲ್ಲಿ ತನಗೆ ಮತ್ತು ಇತರ ಮೂವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಸೆಷನ್ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಫೈಝಲ್ ಮತ್ತು ಇತರ ಮೂವರು ಆರೋಪಿಗಳನ್ನು ಐಪಿಸಿ ಸೆಕ್ಷನ್ 143, 147, 148, 448, 427, 324, 342, 307, 506 ಆರ್/ಡಬ್ಲ್ಯು 149 ರ ಅಡಿಯಲ್ಲಿ ಶಿಕ್ಷಾರ್ಹ ದೋಷಿಗಳೆಂದು ಕವರಟ್ಟಿ ನ್ಯಾಯಾಲಯ ಘೋಷಿಸಿತ್ತು.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಜನವರಿ 30ರಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿದ್ದರು. “ಲಕ್ಷದ್ವೀಪದಿಂದ ಎರಡು ಅವಧಿಗೆ ಸದಸ್ಯರಾಗಿರುವ ಫೈಝಲ್ ಅವರ ಅಮಾನತು ರದ್ದುಗೊಳಿಸಬೇಕು” ಎಂದು ಮನವಿ ಮಾಡಿದ್ದರು.

ಅನರ್ಹತೆಯ ನಂತರ, ಚುನಾವಣಾ ಆಯೋಗವು ಜನವರಿ 18 ರಂದು ಲಕ್ಷದ್ವೀಪ ಸಂಸದೀಯ ಸ್ಥಾನಕ್ಕೆ ಉಪಚುನಾವಣೆ ಘೋಷಿಸಿತ್ತು. ಆದರೆ ಕೇರಳ ಹೈಕೋರ್ಟ್ ತಡೆಯಾಜ್ಞೆಯ ನಂತರ ಉಪಚುನಾವಣೆಯನ್ನು ಹಿಂಪಡೆಯಲು ಜನವರಿ 30ರಂದು ಆಯೋಗ ನಿರ್ಧರಿಸಿತು.

ರಾಹುಲ್ ಗಾಂಧಿಯವರು ‘ಮೋದಿ ಸರ್‌ನೇಮ್‌’ ಬಳಸಿದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ವರ್ಷ ಜೈಲು ಶಿಕ್ಷೆಯನ್ನು ಸೂರತ್‌ ನ್ಯಾಯಾಲಯ ವಿಧಿಸಿದೆ. ಆದರೆ ಮೇಲ್ಮನವಿಯ ಪ್ರಕ್ರಿಯೆಗಳು ಚಾಲ್ತಿಯಲ್ಲಿರುವಾಗಲೇ ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅಮಾನತು ಮಾಡಲಾಯಿತು ಎಂಬ ಆರೋಪಗಳು ಬಂದಿವೆ. ರಾಹುಲ್ ಗಾಂಧಿಯವರು ಏಪ್ರಿಲ್ 22 ರೊಳಗೆ ತಮ್ಮ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಬೇಕು ಎಂದು ಸೋಮವಾರ ನೋಟೀಸ್‌ ನೀಡಲಾಗಿದೆ.

ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದನ್ನು ಪ್ರಶ್ನಿಸಿ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ದನಿ ಎತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...