Homeಮುಖಪುಟರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹತೆ ರದ್ದು: ಇಂದಿನಿಂದ ಕಲಾಪದಲ್ಲಿ ಭಾಗಿ

ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹತೆ ರದ್ದು: ಇಂದಿನಿಂದ ಕಲಾಪದಲ್ಲಿ ಭಾಗಿ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ಸ್ಥಾನವನ್ನು ಪುನಃಸ್ಥಾಪಿಸಲಾಗಿದೆ ಎಂದು ಲೋಕಸಭಾ ಸಚಿವಾಲಯ ಹೇಳಿದೆ. ಇಂದಿನಿಂದ ಕಲಾಪದಲ್ಲಿ ಪಾಲ್ಗೊಳ್ಳಲಿದ್ದಾರೆ

2019ರ ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಅನೇಕ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕೆ ಇದೆ? ಎಂದು ಕೇಳಿದ್ದರು. ಈ ಹೇಳಿಕೆಗೆ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು. ಆನಂತರ ಅವರನ್ನು ಅಪರಾಧಿ ಎಂದು ಹೇಳಿ ಶಿಕ್ಷೆ ನೀಡಲಾಗಿತ್ತು.

ಗುಜರಾತ್ ನ್ಯಾಯಾಲಯವು ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಒಂದು ದಿನದ ನಂತರ, ಮಾರ್ಚ್ 24ರಂದು ಗಾಂಧಿ ಅವರನ್ನು ಸಂಸದರಾಗಿ ಅನರ್ಹಗೊಳಿಸಲಾಯಿತು.

ಈ ಪ್ರಕರಣದಲ್ಲಿ ನ್ಯಾಯಾಲಯವು ರಾಹುಲ್ ಗಾಂಧಿಯವರಿಗೆ ಗರಿಷ್ಠ ಎರಡು ವರ್ಷಗಳ ಶಿಕ್ಷೆಯನ್ನು ನೀಡಿತು, ಇದು ಅವರನ್ನು ಲೋಕಸಭಾ ಸಂಸದರಾಗಿ ತಕ್ಷಣವೇ ಅನರ್ಹಗೊಳಿಸಲು ಕಾರಣವಾಯಿತು. ಈ ನಿರ್ಧಾರವನ್ನು ಗುಜರಾತ್ ಹೈಕೋರ್ಟ್ ಎತ್ತಿ ಹಿಡಿದಿತ್ತು.

ಪ್ರಜಾಪ್ರತಿನಿಧಿ ಕಾಯಿದೆ, 1951 ರ ಸೆಕ್ಷನ್ 8(3) ರ ಅಡಿಯಲ್ಲಿ, ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಗೆ ಜೈಲು ಶಿಕ್ಷೆಗೆ ಗುರಿಯಾದ ಶಾಸಕ/ಸಂಸದರನ್ನು ಅಪರಾಧ ಸಾಬೀತಾದ ದಿನಾಂಕದಿಂದ ಆರು ವರ್ಷಗಳ ಅವಧಿಯ ನಂತರ ಅನರ್ಹಗೊಳಿಸಲಾಗುತ್ತದೆ.

ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆ ನೀಡಿದ ಸುಪ್ರೀಂ ಕೋರ್ಟ್‌ನ ತೀರ್ಪು ಸತ್ಯಕ್ಕೆ ಸಂದ ಜಯ ಎಂದು ಶುಕ್ರವಾರ ರಾಹುಲ್ ಹೇಳಿದ್ದರು.

”ನನ್ನ ಭವಿಷ್ಯ ಗುರಿ ಬಗ್ಗೆ ನನ್ನ ಮನಸ್ಸಿನಲ್ಲಿ ಸ್ಪಷ್ಟವಾಗಿದೆ ಮತ್ತು ನನ್ನ ಮೇಲೆ ಪ್ರೀತಿ ಮತ್ತು ಬೆಂಬಲವನ್ನು ತೋರಿಸಿದ್ದಕ್ಕಾಗಿ ನಾನು ಭಾರತದ ಜನರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ” ಎಂದು ಹೇಳಿದ್ದರು.

ಶುಕ್ರವಾರ, ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ಪಿಎಸ್ ನರಸಿಂಹ ಮತ್ತು ಪಿವಿ ಸಂಜಯ್ ಕುಮಾರ್ ಅವರ ಸುಪ್ರೀಂ ಕೋರ್ಟ್ ಪೀಠವು ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಯಲ್ಲಿ ಗರಿಷ್ಠ ಶಿಕ್ಷೆಯನ್ನು – ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲು ವಿಚಾರಣಾ ನ್ಯಾಯಾಲಯವು ಯಾವುದೇ ನಿರ್ದಿಷ್ಟ ಕಾರಣಗಳನ್ನು ನೀಡಿಲ್ಲ ಎಂದು ಹೇಳಿದೆ.

ಜಾಮೀನು ನೀಡಬಹುದಾದ ಮತ್ತು ಗರಿಷ್ಠ ಶಿಕ್ಷೆಗೆ ಅನರ್ಹವಾದ ಪ್ರಕರಣ ಎಂದು ನ್ಯಾಯಾಲಯವು ಗಮನಿಸಿದೆ.

ರಾಹುಲ್‌ಗೆ ನೀಡಲಾದ ಶಿಕ್ಷೆಯ ಪ್ರಮಾಣ ಇನ್ನೂ ಒಂದು ದಿನ ಕಡಿಮೆಯಾಗಿದ್ದರೆ, ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಲಾಗುವುದಿಲ್ಲ ಎಂದು ಪೀಠ ಹೇಳಿದೆ.

ಕೆಳ ನ್ಯಾಯಾಲಯದ ತೀರ್ಪಿನ ಪರಿಣಾಮಗಳು ವ್ಯಾಪಕವಾಗಿದ್ದು, ಲೋಕಸಭೆಯಲ್ಲಿ ಪ್ರತಿನಿಧಿಸುವ ಕ್ಷೇತ್ರವಾದ ವಯನಾಡಿನ ಜನರ ಹಕ್ಕುಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ ಎಂದು ನ್ಯಾಯಾಲಯ ಗಮನಿಸಿದೆ.

ಆದಾಗ್ಯೂ, ಸುಪ್ರೀಂ ಕೋರ್ಟ್, ರಾಹುಲ್ ಗಾಂಧಿಯವರ ಹೇಳಿಕೆಗಳು “ಒಳ್ಳೆಯ ಅಭಿರುಚಿ”ಯಲ್ಲ ಮತ್ತು ಸಾರ್ವಜನಿಕ ಜೀವನದಲ್ಲಿ ಒಬ್ಬ ವ್ಯಕ್ತಿಯು ಭಾಷಣ ಮಾಡುವಾಗ ಹೆಚ್ಚು ಜಾಗರೂಕರಾಗಿರಬೇಕು ಎಂದು ಹೇಳಿದೆ.

ಇಂದು ವಿಪಕ್ಷ ಮೈತ್ರಿಕೂಟ ಸಭೆ ಸೋಮವಾರ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ INDIA ನಾಯಕರು ಸಭೆ ನಡೆಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಸಭೆ ಆರಂಭವಾಗಿದೆ.

ಇಂಡಿಯಾ ಮತ್ತು ಕಾಂಗ್ರೆಸ್‌ನ ಮುಂಬರುವ ಎರಡೂ ಸಭೆಗಳಲ್ಲಿ, ವಿರೋಧ ಪಕ್ಷದ ನಾಯಕರು ಗಾಂಧಿಯವರ ಅನರ್ಹತೆಯನ್ನು ಶೀಘ್ರವಾಗಿ ಹಿಂತೆಗೆದುಕೊಳ್ಳದಿದ್ದರೆ ಭವಿಷ್ಯದ ಕ್ರಮಗಳ ಯೋಜನೆಯನ್ನು ಚರ್ಚಿಸುತ್ತಾರೆ.

ಲೋಕಸಭೆ ಸ್ಪೀಕರ್ ಆದಷ್ಟು ಬೇಗ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ನಾವೆಲ್ಲರೂ ಭಾವಿಸುತ್ತೇವೆ ಎಂದು ಕಾಂಗ್ರೆಸ್ ಲೋಕಸಭಾ ಶಾಸಕ ಮಾಣಿಕ್ಕಂ ಟ್ಯಾಗೋರ್ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...