Homeಮುಖಪುಟರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹತೆ ರದ್ದು: ಇಂದಿನಿಂದ ಕಲಾಪದಲ್ಲಿ ಭಾಗಿ

ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹತೆ ರದ್ದು: ಇಂದಿನಿಂದ ಕಲಾಪದಲ್ಲಿ ಭಾಗಿ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ಸ್ಥಾನವನ್ನು ಪುನಃಸ್ಥಾಪಿಸಲಾಗಿದೆ ಎಂದು ಲೋಕಸಭಾ ಸಚಿವಾಲಯ ಹೇಳಿದೆ. ಇಂದಿನಿಂದ ಕಲಾಪದಲ್ಲಿ ಪಾಲ್ಗೊಳ್ಳಲಿದ್ದಾರೆ

2019ರ ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಅನೇಕ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕೆ ಇದೆ? ಎಂದು ಕೇಳಿದ್ದರು. ಈ ಹೇಳಿಕೆಗೆ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು. ಆನಂತರ ಅವರನ್ನು ಅಪರಾಧಿ ಎಂದು ಹೇಳಿ ಶಿಕ್ಷೆ ನೀಡಲಾಗಿತ್ತು.

ಗುಜರಾತ್ ನ್ಯಾಯಾಲಯವು ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಒಂದು ದಿನದ ನಂತರ, ಮಾರ್ಚ್ 24ರಂದು ಗಾಂಧಿ ಅವರನ್ನು ಸಂಸದರಾಗಿ ಅನರ್ಹಗೊಳಿಸಲಾಯಿತು.

ಈ ಪ್ರಕರಣದಲ್ಲಿ ನ್ಯಾಯಾಲಯವು ರಾಹುಲ್ ಗಾಂಧಿಯವರಿಗೆ ಗರಿಷ್ಠ ಎರಡು ವರ್ಷಗಳ ಶಿಕ್ಷೆಯನ್ನು ನೀಡಿತು, ಇದು ಅವರನ್ನು ಲೋಕಸಭಾ ಸಂಸದರಾಗಿ ತಕ್ಷಣವೇ ಅನರ್ಹಗೊಳಿಸಲು ಕಾರಣವಾಯಿತು. ಈ ನಿರ್ಧಾರವನ್ನು ಗುಜರಾತ್ ಹೈಕೋರ್ಟ್ ಎತ್ತಿ ಹಿಡಿದಿತ್ತು.

ಪ್ರಜಾಪ್ರತಿನಿಧಿ ಕಾಯಿದೆ, 1951 ರ ಸೆಕ್ಷನ್ 8(3) ರ ಅಡಿಯಲ್ಲಿ, ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಗೆ ಜೈಲು ಶಿಕ್ಷೆಗೆ ಗುರಿಯಾದ ಶಾಸಕ/ಸಂಸದರನ್ನು ಅಪರಾಧ ಸಾಬೀತಾದ ದಿನಾಂಕದಿಂದ ಆರು ವರ್ಷಗಳ ಅವಧಿಯ ನಂತರ ಅನರ್ಹಗೊಳಿಸಲಾಗುತ್ತದೆ.

ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆ ನೀಡಿದ ಸುಪ್ರೀಂ ಕೋರ್ಟ್‌ನ ತೀರ್ಪು ಸತ್ಯಕ್ಕೆ ಸಂದ ಜಯ ಎಂದು ಶುಕ್ರವಾರ ರಾಹುಲ್ ಹೇಳಿದ್ದರು.

”ನನ್ನ ಭವಿಷ್ಯ ಗುರಿ ಬಗ್ಗೆ ನನ್ನ ಮನಸ್ಸಿನಲ್ಲಿ ಸ್ಪಷ್ಟವಾಗಿದೆ ಮತ್ತು ನನ್ನ ಮೇಲೆ ಪ್ರೀತಿ ಮತ್ತು ಬೆಂಬಲವನ್ನು ತೋರಿಸಿದ್ದಕ್ಕಾಗಿ ನಾನು ಭಾರತದ ಜನರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ” ಎಂದು ಹೇಳಿದ್ದರು.

ಶುಕ್ರವಾರ, ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ಪಿಎಸ್ ನರಸಿಂಹ ಮತ್ತು ಪಿವಿ ಸಂಜಯ್ ಕುಮಾರ್ ಅವರ ಸುಪ್ರೀಂ ಕೋರ್ಟ್ ಪೀಠವು ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಯಲ್ಲಿ ಗರಿಷ್ಠ ಶಿಕ್ಷೆಯನ್ನು – ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲು ವಿಚಾರಣಾ ನ್ಯಾಯಾಲಯವು ಯಾವುದೇ ನಿರ್ದಿಷ್ಟ ಕಾರಣಗಳನ್ನು ನೀಡಿಲ್ಲ ಎಂದು ಹೇಳಿದೆ.

ಜಾಮೀನು ನೀಡಬಹುದಾದ ಮತ್ತು ಗರಿಷ್ಠ ಶಿಕ್ಷೆಗೆ ಅನರ್ಹವಾದ ಪ್ರಕರಣ ಎಂದು ನ್ಯಾಯಾಲಯವು ಗಮನಿಸಿದೆ.

ರಾಹುಲ್‌ಗೆ ನೀಡಲಾದ ಶಿಕ್ಷೆಯ ಪ್ರಮಾಣ ಇನ್ನೂ ಒಂದು ದಿನ ಕಡಿಮೆಯಾಗಿದ್ದರೆ, ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಲಾಗುವುದಿಲ್ಲ ಎಂದು ಪೀಠ ಹೇಳಿದೆ.

ಕೆಳ ನ್ಯಾಯಾಲಯದ ತೀರ್ಪಿನ ಪರಿಣಾಮಗಳು ವ್ಯಾಪಕವಾಗಿದ್ದು, ಲೋಕಸಭೆಯಲ್ಲಿ ಪ್ರತಿನಿಧಿಸುವ ಕ್ಷೇತ್ರವಾದ ವಯನಾಡಿನ ಜನರ ಹಕ್ಕುಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ ಎಂದು ನ್ಯಾಯಾಲಯ ಗಮನಿಸಿದೆ.

ಆದಾಗ್ಯೂ, ಸುಪ್ರೀಂ ಕೋರ್ಟ್, ರಾಹುಲ್ ಗಾಂಧಿಯವರ ಹೇಳಿಕೆಗಳು “ಒಳ್ಳೆಯ ಅಭಿರುಚಿ”ಯಲ್ಲ ಮತ್ತು ಸಾರ್ವಜನಿಕ ಜೀವನದಲ್ಲಿ ಒಬ್ಬ ವ್ಯಕ್ತಿಯು ಭಾಷಣ ಮಾಡುವಾಗ ಹೆಚ್ಚು ಜಾಗರೂಕರಾಗಿರಬೇಕು ಎಂದು ಹೇಳಿದೆ.

ಇಂದು ವಿಪಕ್ಷ ಮೈತ್ರಿಕೂಟ ಸಭೆ ಸೋಮವಾರ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ INDIA ನಾಯಕರು ಸಭೆ ನಡೆಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಸಭೆ ಆರಂಭವಾಗಿದೆ.

ಇಂಡಿಯಾ ಮತ್ತು ಕಾಂಗ್ರೆಸ್‌ನ ಮುಂಬರುವ ಎರಡೂ ಸಭೆಗಳಲ್ಲಿ, ವಿರೋಧ ಪಕ್ಷದ ನಾಯಕರು ಗಾಂಧಿಯವರ ಅನರ್ಹತೆಯನ್ನು ಶೀಘ್ರವಾಗಿ ಹಿಂತೆಗೆದುಕೊಳ್ಳದಿದ್ದರೆ ಭವಿಷ್ಯದ ಕ್ರಮಗಳ ಯೋಜನೆಯನ್ನು ಚರ್ಚಿಸುತ್ತಾರೆ.

ಲೋಕಸಭೆ ಸ್ಪೀಕರ್ ಆದಷ್ಟು ಬೇಗ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ನಾವೆಲ್ಲರೂ ಭಾವಿಸುತ್ತೇವೆ ಎಂದು ಕಾಂಗ್ರೆಸ್ ಲೋಕಸಭಾ ಶಾಸಕ ಮಾಣಿಕ್ಕಂ ಟ್ಯಾಗೋರ್ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...