Homeಕರ್ನಾಟಕಬಿಜೆಪಿ ಸೇರಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ ಆಸ್ತಿ 18 ತಿಂಗಳಲ್ಲಿ 185 ಕೋಟಿ ಏರಿಕೆ!!

ಬಿಜೆಪಿ ಸೇರಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ ಆಸ್ತಿ 18 ತಿಂಗಳಲ್ಲಿ 185 ಕೋಟಿ ಏರಿಕೆ!!

ಆಗಸ್ಟ್‌ 2 ರಿಂದ 7ರವರೆಗೆ ಒಟ್ಟು 53 ಬಾರಿ 90 ಲಕ್ಷಕ್ಕೂ ಅಧಿಕ ಮತ್ತು ಒಂದು ಕೋಟಿಗಿಂತ ಕಡಿಮೆ ಮೊತ್ತದ ಹಣವನ್ನು ಅಂದರೆ 48 ಕೋಟಿ ರೂಗಳನ್ನು ಎಂಟಿಬಿ ನಾಗರಾಜ್‌ರವರ ಖಾತೆಗೆ ಜಮಾ ಮಾಡಲಾಗಿದೆ

- Advertisement -
- Advertisement -

ಆಪರೇಷನ್‌ ಕಮಲಕ್ಕೆ ಒಳಗಾಗಿ ಕಾಂಗ್ರೆಸ್‌-ಜೆಡಿಎಸ್‌ ಸರ್ಕಾರದ ಪತನಕ್ಕೆ ಕಾರಣನಾಗಿದ್ದ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ರವರ ಆಸ್ತಿಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಕುತೂಹಲದ ವಿಚಾರವೆಂದರೆ ಅವರು ರಾಜಿನಾಮೇ ನೀಡಿದ ಹದಿನೈದು ದಿನಗಳ ಅವಧಿಯಲ್ಲಿಯೇ ಮುಖ್ಯವಾಗಿ ಆಗಸ್ಟ್ 2 ಮತ್ತು 7 ರ ನಡುವೆ 48 ಕೋಟಿ ರೂ. ಅವರ ಖಾತೆಗೆ ಜಮಾ ಆಗಿದೆ ಎಂದು ಹಲವು ವರದಿಗಳು ತೋರಿಸಿವೆ.

ಕರ್ನಾಟಕದ ಶ್ರೀಮಂತ ರಾಜಕಾರಣಿಯಾದ ಎಂಟಿಬಿ ನಾಗರಾಜ್ ಆಸ್ತಿಯಲ್ಲಿ ಕೇವಲ 18 ತಿಂಗಳ ಅವಧಿಯಲ್ಲಿ 185.7 ಕೋಟಿ ರೂ ಏರಿಕೆಯಾಗಿದೆ ಎಂದು ಅವರ ಇತ್ತೀಚಿನ ಉಪಚುನಾವಣಾ ಅಫಿಡವಿಟ್ ತೋರಿಸುತ್ತದೆ.

ಹೊಸಕೋಟೆಯ ಬಿಜೆಪಿ ಅಭ್ಯರ್ಥಿಯಾಗಿ ಅವರು ಸಲ್ಲಿಸಿದ ಇತ್ತೀಚಿನ ಅಫಿಡವಿಟ್ ಪ್ರಕಾರ, ನಾಗರಾಜ್ ಮತ್ತು ಅವರ ಪತ್ನಿ ಶಾಂತಕುಮಾರಿ ಅವರ ಒಟ್ಟು ಆಸ್ತಿ ಮೌಲ್ಯ 1201.50 ಕೋಟಿ ರೂ ಆಗಿದೆ. ಆದರೆ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ 2018 ರ ಮೇನಲ್ಲಿ ಅವರು ಘೋಷಿಸಿದ ಸ್ವತ್ತುಗಳಿಗೆ ಹೋಲಿಸಿದರೆ ಇದು ಅವರ ಸಂಪತ್ತಿನ 15.5% ಹೆಚ್ಚಳವಾಗಿದೆ. 2018 ಮತ್ತು 2019 ರಲ್ಲಿ ಸಲ್ಲಿಸಲಾದ ಅಫಿಡವಿಟ್‌ಗೆ ಹೋಲಿಸಿದಲ್ಲಿ ನಾಗರಾಜ್ ಅವರ ಆಸ್ತಿ 104.53 ಕೋಟಿ ರೂ.ಗಳಷ್ಟು ಹೆಚ್ಚಾಗಿದೆ  ಮತ್ತು ಅವರ ಪತ್ನಿ ಶಾಂತಕುಮಾರಿಯ ಆಸ್ತಿ 44.95 ಕೋಟಿ ರೂ ಹೆಚ್ಚಾಗಿದೆ ಎಂದು ತೋರಿಸುತ್ತದೆ.

ಹಾಗಾದರೆ ಎಂಟಿಬಿ ನಾಗರಾಜ್ ಇಷ್ಟು ಕಡಿಮೆ ಅವಧಿಯಲ್ಲಿ ಇಷ್ಟು ಹಣವನ್ನು ಹೇಗೆ ಸಂಗ್ರಹಿಸಿದರು ಎಂದು ಅವರ ವಿರೋಧಿಗಳು ಪ್ರಶ್ನಿಸುತ್ತಿದ್ದಾರೆ. ಅದರಲ್ಲಿಯೂ ಮುಖ್ಯವಾಗಿ ನಾಗರಾಜ್ ಅವರು ಬಿಜೆಪಿಯಿಂದ ಕಣಕ್ಕಿಳಿದಿದ್ದನ್ನು ವಿರೋಧಿಸುವ ಬಿಜೆಪಿಯ ಮೂಲಗಳು, “ಎಂಟಿಬಿ ನಾಗರಾಜ್ ಅವರು ಕಾಂಗ್ರೆಸ್‌ನಿಂದ ಬಿಜೆಪಿಗೆ ಪಕ್ಷಾಂತರಗೊಂಡಿದ್ದಕ್ಕಾಗಿ ಅವರಿಗೆ ಮತ್ತು ಇನ್ನೊಬ್ಬ ಶಾಸಕ ಡಾ.ಕೆ ಸುಧಾಕರ್‌ರವರಿಗೆ ತಲಾ 50 ಕೋಟಿ ರೂ ಹಣ ನೀಡಲಾಗಿದೆ ಎಂದು ತಿಳಿಸಿದ್ದಾರೆಂದು ದಿ ನ್ಯೂಸ್‌ ಮಿನಿಟ್‌ ವರದಿ ಮಾಡಿದೆ.

ಅದೇ ಸಂದರ್ಭದಲ್ಲಿ ಕಾಂಗ್ರೆಸ್‌ನ ಡಿ.ಕೆ ಶಿವಕುಮಾರ್‌ ಸೇರಿದಂತೆ ಇತರ ನಾಯಕರು ಎಂಟಿಬಿ ನಾಗರಾಜ್‌ರವರನ್ನು ರಾಜಿನಾಮೆ ಹಿಂಪಡೆಯುವಂತೆ ಮನವೊಲಿಸಿದ್ದರು. ಆಗ ಎಂಟಿಬಿ ನಾಗರಾಜ್‌ ಸುಧಾಕರ್‌ರವರು ರಾಜಿನಾಮೆ ವಾಪಸ್‌ ಪಡೆದರೆ ನಾನು ಕೂಡ ರಾಜಿನಾಮೆ ವಾಪಸ್‌ ಪಡೆಯುತ್ತೇನೆ ಎಂಬ ಷರತ್ತು ಹಾಕಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ. ಅದಾದ ನಂತರ ಜುಲೈ 15 ರಂದು ನಾಗರಾಜ್‌ ತಮ್ಮ ರಾಜೀನಾಮೆಯನ್ನು ಹಿಂತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಘೋಷಿಸಿದರು. ಅವರು ಈ ಹೇಳಿಕೆ ನೀಡಿದ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರ ಸಹಾಯಕ ಸಂತೋಷ್ ಅವರೊಂದಿಗೆ ಖಾಸಗಿ ಚಾರ್ಟರ್ ವಿಮಾನದಲ್ಲಿ ಮುಂಬೈಗೆ ತೆರಳಿದ್ದರು.

ಜುಲೈ 23 ರಂದು ಎಚ್‌.ಡಿ ಕುಮಾರಸ್ವಾಮಿಯವರು ಬಹುಮತ ಸಾಬೀತುಪಡಿಸಲು ವಿಫಲವಾದ ನಂತರ ಮೈತ್ರಿ ಸರ್ಕಾರ ಬಿದ್ದುಹೋಯಿತು. ಜುಲೈ 26 ರಂದು ಬಿ.ಎಸ್‌ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಆಗ ಅನರ್ಹಗೊಂಡಿದ್ದ ಶಾಸಕರು ಮುಂಬೈನ ಐಷರಾಮಿ ಹೋಟೆಲ್‌ನಿಂದ ಕರ್ನಾಟಕ್ಕೆ ವಾಪಸ್‌ ಆದರು.

ಅದಾಗಿ ನಾಲ್ಕು ದಿನಗಳ ನಂತರ ಆಗಸ್ಟ್‌ 2 ರಿಂದ 7ರವರೆಗೆ ಒಟ್ಟು 53 ಬಾರಿ 90 ಲಕ್ಷಕ್ಕೂ ಅಧಿಕ ಮತ್ತು ಒಂದು ಕೋಟಿಗಿಂತ ಕಡಿಮೆ ಮೊತ್ತದ ಹಣವನ್ನು ಅಂದರೆ 48 ಕೋಟಿ ರೂಗಳನ್ನು ಎಂಟಿಬಿ ನಾಗರಾಜ್‌ರವರ ಖಾತೆಗೆ ಜಮಾ ಮಾಡಲಾಗಿದೆ. ಅದರ ವಿವರ ಕೆಳಗಿನಂತಿದೆ.

ಚಿತ್ರಕೃಪೆ: ದಿ ನ್ಯೂಸ್‌ ಮಿನಿಟ್

ಒಟ್ಟಿನಲ್ಲಿ ಆಪರೇಷನ್ ಕಮಲ ನಡದೇ ಇಲ್ಲ ಎಂದು ಆಗ ಯಡಿಯೂರಪ್ಪ ಘಂಟಾಘೋಷವಾಗಿ ಹೇಳುತ್ತಿದ್ದರು. ರಾಜಿನಾಮೆ ನೀಡಿದ ಶಾಸಕರಿಗೂ ನಮಗೂ ಸಂಬಂಧವೇ ಇಲ್ಲ ಎಂದಿದ್ದವರು ಈಗ ಅವರನ್ನು ಬಿಜೆಪಿಗೆ ಸೇರಿಸಿಕೊಂಡು ಗೆಲ್ಲಿಸಿ ಮಂತ್ರಿ ಮಾಡುತ್ತೇನೆ ಎಂದು ಸಾರುತ್ತಿದ್ದಾರೆ.

ಇನ್ನೊಂದು ಕಡೆ ಅನರ್ಹ ಶಾಸಕರ ಆಸ್ತಿ ಏರುತ್ತಲೇ ಇದೆ. ಕುದುರೆ ವ್ಯಾಪರ ನಡೆದಿದೆ ಎಂಬ ಆರೋಪಕ್ಕೆ ಇವೆಲ್ಲವೂ ದಟ್ಟ ಸಾಕ್ಷಿಗಳಾಗುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...