Homeಕರ್ನಾಟಕಬಿಜೆಪಿ ಸೇರಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ ಆಸ್ತಿ 18 ತಿಂಗಳಲ್ಲಿ 185 ಕೋಟಿ ಏರಿಕೆ!!

ಬಿಜೆಪಿ ಸೇರಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ ಆಸ್ತಿ 18 ತಿಂಗಳಲ್ಲಿ 185 ಕೋಟಿ ಏರಿಕೆ!!

ಆಗಸ್ಟ್‌ 2 ರಿಂದ 7ರವರೆಗೆ ಒಟ್ಟು 53 ಬಾರಿ 90 ಲಕ್ಷಕ್ಕೂ ಅಧಿಕ ಮತ್ತು ಒಂದು ಕೋಟಿಗಿಂತ ಕಡಿಮೆ ಮೊತ್ತದ ಹಣವನ್ನು ಅಂದರೆ 48 ಕೋಟಿ ರೂಗಳನ್ನು ಎಂಟಿಬಿ ನಾಗರಾಜ್‌ರವರ ಖಾತೆಗೆ ಜಮಾ ಮಾಡಲಾಗಿದೆ

- Advertisement -
- Advertisement -

ಆಪರೇಷನ್‌ ಕಮಲಕ್ಕೆ ಒಳಗಾಗಿ ಕಾಂಗ್ರೆಸ್‌-ಜೆಡಿಎಸ್‌ ಸರ್ಕಾರದ ಪತನಕ್ಕೆ ಕಾರಣನಾಗಿದ್ದ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ರವರ ಆಸ್ತಿಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಕುತೂಹಲದ ವಿಚಾರವೆಂದರೆ ಅವರು ರಾಜಿನಾಮೇ ನೀಡಿದ ಹದಿನೈದು ದಿನಗಳ ಅವಧಿಯಲ್ಲಿಯೇ ಮುಖ್ಯವಾಗಿ ಆಗಸ್ಟ್ 2 ಮತ್ತು 7 ರ ನಡುವೆ 48 ಕೋಟಿ ರೂ. ಅವರ ಖಾತೆಗೆ ಜಮಾ ಆಗಿದೆ ಎಂದು ಹಲವು ವರದಿಗಳು ತೋರಿಸಿವೆ.

ಕರ್ನಾಟಕದ ಶ್ರೀಮಂತ ರಾಜಕಾರಣಿಯಾದ ಎಂಟಿಬಿ ನಾಗರಾಜ್ ಆಸ್ತಿಯಲ್ಲಿ ಕೇವಲ 18 ತಿಂಗಳ ಅವಧಿಯಲ್ಲಿ 185.7 ಕೋಟಿ ರೂ ಏರಿಕೆಯಾಗಿದೆ ಎಂದು ಅವರ ಇತ್ತೀಚಿನ ಉಪಚುನಾವಣಾ ಅಫಿಡವಿಟ್ ತೋರಿಸುತ್ತದೆ.

ಹೊಸಕೋಟೆಯ ಬಿಜೆಪಿ ಅಭ್ಯರ್ಥಿಯಾಗಿ ಅವರು ಸಲ್ಲಿಸಿದ ಇತ್ತೀಚಿನ ಅಫಿಡವಿಟ್ ಪ್ರಕಾರ, ನಾಗರಾಜ್ ಮತ್ತು ಅವರ ಪತ್ನಿ ಶಾಂತಕುಮಾರಿ ಅವರ ಒಟ್ಟು ಆಸ್ತಿ ಮೌಲ್ಯ 1201.50 ಕೋಟಿ ರೂ ಆಗಿದೆ. ಆದರೆ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ 2018 ರ ಮೇನಲ್ಲಿ ಅವರು ಘೋಷಿಸಿದ ಸ್ವತ್ತುಗಳಿಗೆ ಹೋಲಿಸಿದರೆ ಇದು ಅವರ ಸಂಪತ್ತಿನ 15.5% ಹೆಚ್ಚಳವಾಗಿದೆ. 2018 ಮತ್ತು 2019 ರಲ್ಲಿ ಸಲ್ಲಿಸಲಾದ ಅಫಿಡವಿಟ್‌ಗೆ ಹೋಲಿಸಿದಲ್ಲಿ ನಾಗರಾಜ್ ಅವರ ಆಸ್ತಿ 104.53 ಕೋಟಿ ರೂ.ಗಳಷ್ಟು ಹೆಚ್ಚಾಗಿದೆ  ಮತ್ತು ಅವರ ಪತ್ನಿ ಶಾಂತಕುಮಾರಿಯ ಆಸ್ತಿ 44.95 ಕೋಟಿ ರೂ ಹೆಚ್ಚಾಗಿದೆ ಎಂದು ತೋರಿಸುತ್ತದೆ.

ಹಾಗಾದರೆ ಎಂಟಿಬಿ ನಾಗರಾಜ್ ಇಷ್ಟು ಕಡಿಮೆ ಅವಧಿಯಲ್ಲಿ ಇಷ್ಟು ಹಣವನ್ನು ಹೇಗೆ ಸಂಗ್ರಹಿಸಿದರು ಎಂದು ಅವರ ವಿರೋಧಿಗಳು ಪ್ರಶ್ನಿಸುತ್ತಿದ್ದಾರೆ. ಅದರಲ್ಲಿಯೂ ಮುಖ್ಯವಾಗಿ ನಾಗರಾಜ್ ಅವರು ಬಿಜೆಪಿಯಿಂದ ಕಣಕ್ಕಿಳಿದಿದ್ದನ್ನು ವಿರೋಧಿಸುವ ಬಿಜೆಪಿಯ ಮೂಲಗಳು, “ಎಂಟಿಬಿ ನಾಗರಾಜ್ ಅವರು ಕಾಂಗ್ರೆಸ್‌ನಿಂದ ಬಿಜೆಪಿಗೆ ಪಕ್ಷಾಂತರಗೊಂಡಿದ್ದಕ್ಕಾಗಿ ಅವರಿಗೆ ಮತ್ತು ಇನ್ನೊಬ್ಬ ಶಾಸಕ ಡಾ.ಕೆ ಸುಧಾಕರ್‌ರವರಿಗೆ ತಲಾ 50 ಕೋಟಿ ರೂ ಹಣ ನೀಡಲಾಗಿದೆ ಎಂದು ತಿಳಿಸಿದ್ದಾರೆಂದು ದಿ ನ್ಯೂಸ್‌ ಮಿನಿಟ್‌ ವರದಿ ಮಾಡಿದೆ.

ಅದೇ ಸಂದರ್ಭದಲ್ಲಿ ಕಾಂಗ್ರೆಸ್‌ನ ಡಿ.ಕೆ ಶಿವಕುಮಾರ್‌ ಸೇರಿದಂತೆ ಇತರ ನಾಯಕರು ಎಂಟಿಬಿ ನಾಗರಾಜ್‌ರವರನ್ನು ರಾಜಿನಾಮೆ ಹಿಂಪಡೆಯುವಂತೆ ಮನವೊಲಿಸಿದ್ದರು. ಆಗ ಎಂಟಿಬಿ ನಾಗರಾಜ್‌ ಸುಧಾಕರ್‌ರವರು ರಾಜಿನಾಮೆ ವಾಪಸ್‌ ಪಡೆದರೆ ನಾನು ಕೂಡ ರಾಜಿನಾಮೆ ವಾಪಸ್‌ ಪಡೆಯುತ್ತೇನೆ ಎಂಬ ಷರತ್ತು ಹಾಕಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ. ಅದಾದ ನಂತರ ಜುಲೈ 15 ರಂದು ನಾಗರಾಜ್‌ ತಮ್ಮ ರಾಜೀನಾಮೆಯನ್ನು ಹಿಂತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಘೋಷಿಸಿದರು. ಅವರು ಈ ಹೇಳಿಕೆ ನೀಡಿದ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರ ಸಹಾಯಕ ಸಂತೋಷ್ ಅವರೊಂದಿಗೆ ಖಾಸಗಿ ಚಾರ್ಟರ್ ವಿಮಾನದಲ್ಲಿ ಮುಂಬೈಗೆ ತೆರಳಿದ್ದರು.

ಜುಲೈ 23 ರಂದು ಎಚ್‌.ಡಿ ಕುಮಾರಸ್ವಾಮಿಯವರು ಬಹುಮತ ಸಾಬೀತುಪಡಿಸಲು ವಿಫಲವಾದ ನಂತರ ಮೈತ್ರಿ ಸರ್ಕಾರ ಬಿದ್ದುಹೋಯಿತು. ಜುಲೈ 26 ರಂದು ಬಿ.ಎಸ್‌ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಆಗ ಅನರ್ಹಗೊಂಡಿದ್ದ ಶಾಸಕರು ಮುಂಬೈನ ಐಷರಾಮಿ ಹೋಟೆಲ್‌ನಿಂದ ಕರ್ನಾಟಕ್ಕೆ ವಾಪಸ್‌ ಆದರು.

ಅದಾಗಿ ನಾಲ್ಕು ದಿನಗಳ ನಂತರ ಆಗಸ್ಟ್‌ 2 ರಿಂದ 7ರವರೆಗೆ ಒಟ್ಟು 53 ಬಾರಿ 90 ಲಕ್ಷಕ್ಕೂ ಅಧಿಕ ಮತ್ತು ಒಂದು ಕೋಟಿಗಿಂತ ಕಡಿಮೆ ಮೊತ್ತದ ಹಣವನ್ನು ಅಂದರೆ 48 ಕೋಟಿ ರೂಗಳನ್ನು ಎಂಟಿಬಿ ನಾಗರಾಜ್‌ರವರ ಖಾತೆಗೆ ಜಮಾ ಮಾಡಲಾಗಿದೆ. ಅದರ ವಿವರ ಕೆಳಗಿನಂತಿದೆ.

ಚಿತ್ರಕೃಪೆ: ದಿ ನ್ಯೂಸ್‌ ಮಿನಿಟ್

ಒಟ್ಟಿನಲ್ಲಿ ಆಪರೇಷನ್ ಕಮಲ ನಡದೇ ಇಲ್ಲ ಎಂದು ಆಗ ಯಡಿಯೂರಪ್ಪ ಘಂಟಾಘೋಷವಾಗಿ ಹೇಳುತ್ತಿದ್ದರು. ರಾಜಿನಾಮೆ ನೀಡಿದ ಶಾಸಕರಿಗೂ ನಮಗೂ ಸಂಬಂಧವೇ ಇಲ್ಲ ಎಂದಿದ್ದವರು ಈಗ ಅವರನ್ನು ಬಿಜೆಪಿಗೆ ಸೇರಿಸಿಕೊಂಡು ಗೆಲ್ಲಿಸಿ ಮಂತ್ರಿ ಮಾಡುತ್ತೇನೆ ಎಂದು ಸಾರುತ್ತಿದ್ದಾರೆ.

ಇನ್ನೊಂದು ಕಡೆ ಅನರ್ಹ ಶಾಸಕರ ಆಸ್ತಿ ಏರುತ್ತಲೇ ಇದೆ. ಕುದುರೆ ವ್ಯಾಪರ ನಡೆದಿದೆ ಎಂಬ ಆರೋಪಕ್ಕೆ ಇವೆಲ್ಲವೂ ದಟ್ಟ ಸಾಕ್ಷಿಗಳಾಗುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...