Homeಕರ್ನಾಟಕಬಿಜೆಪಿ ಸೇರಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ ಆಸ್ತಿ 18 ತಿಂಗಳಲ್ಲಿ 185 ಕೋಟಿ ಏರಿಕೆ!!

ಬಿಜೆಪಿ ಸೇರಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ ಆಸ್ತಿ 18 ತಿಂಗಳಲ್ಲಿ 185 ಕೋಟಿ ಏರಿಕೆ!!

ಆಗಸ್ಟ್‌ 2 ರಿಂದ 7ರವರೆಗೆ ಒಟ್ಟು 53 ಬಾರಿ 90 ಲಕ್ಷಕ್ಕೂ ಅಧಿಕ ಮತ್ತು ಒಂದು ಕೋಟಿಗಿಂತ ಕಡಿಮೆ ಮೊತ್ತದ ಹಣವನ್ನು ಅಂದರೆ 48 ಕೋಟಿ ರೂಗಳನ್ನು ಎಂಟಿಬಿ ನಾಗರಾಜ್‌ರವರ ಖಾತೆಗೆ ಜಮಾ ಮಾಡಲಾಗಿದೆ

- Advertisement -
- Advertisement -

ಆಪರೇಷನ್‌ ಕಮಲಕ್ಕೆ ಒಳಗಾಗಿ ಕಾಂಗ್ರೆಸ್‌-ಜೆಡಿಎಸ್‌ ಸರ್ಕಾರದ ಪತನಕ್ಕೆ ಕಾರಣನಾಗಿದ್ದ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ರವರ ಆಸ್ತಿಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಕುತೂಹಲದ ವಿಚಾರವೆಂದರೆ ಅವರು ರಾಜಿನಾಮೇ ನೀಡಿದ ಹದಿನೈದು ದಿನಗಳ ಅವಧಿಯಲ್ಲಿಯೇ ಮುಖ್ಯವಾಗಿ ಆಗಸ್ಟ್ 2 ಮತ್ತು 7 ರ ನಡುವೆ 48 ಕೋಟಿ ರೂ. ಅವರ ಖಾತೆಗೆ ಜಮಾ ಆಗಿದೆ ಎಂದು ಹಲವು ವರದಿಗಳು ತೋರಿಸಿವೆ.

ಕರ್ನಾಟಕದ ಶ್ರೀಮಂತ ರಾಜಕಾರಣಿಯಾದ ಎಂಟಿಬಿ ನಾಗರಾಜ್ ಆಸ್ತಿಯಲ್ಲಿ ಕೇವಲ 18 ತಿಂಗಳ ಅವಧಿಯಲ್ಲಿ 185.7 ಕೋಟಿ ರೂ ಏರಿಕೆಯಾಗಿದೆ ಎಂದು ಅವರ ಇತ್ತೀಚಿನ ಉಪಚುನಾವಣಾ ಅಫಿಡವಿಟ್ ತೋರಿಸುತ್ತದೆ.

ಹೊಸಕೋಟೆಯ ಬಿಜೆಪಿ ಅಭ್ಯರ್ಥಿಯಾಗಿ ಅವರು ಸಲ್ಲಿಸಿದ ಇತ್ತೀಚಿನ ಅಫಿಡವಿಟ್ ಪ್ರಕಾರ, ನಾಗರಾಜ್ ಮತ್ತು ಅವರ ಪತ್ನಿ ಶಾಂತಕುಮಾರಿ ಅವರ ಒಟ್ಟು ಆಸ್ತಿ ಮೌಲ್ಯ 1201.50 ಕೋಟಿ ರೂ ಆಗಿದೆ. ಆದರೆ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ 2018 ರ ಮೇನಲ್ಲಿ ಅವರು ಘೋಷಿಸಿದ ಸ್ವತ್ತುಗಳಿಗೆ ಹೋಲಿಸಿದರೆ ಇದು ಅವರ ಸಂಪತ್ತಿನ 15.5% ಹೆಚ್ಚಳವಾಗಿದೆ. 2018 ಮತ್ತು 2019 ರಲ್ಲಿ ಸಲ್ಲಿಸಲಾದ ಅಫಿಡವಿಟ್‌ಗೆ ಹೋಲಿಸಿದಲ್ಲಿ ನಾಗರಾಜ್ ಅವರ ಆಸ್ತಿ 104.53 ಕೋಟಿ ರೂ.ಗಳಷ್ಟು ಹೆಚ್ಚಾಗಿದೆ  ಮತ್ತು ಅವರ ಪತ್ನಿ ಶಾಂತಕುಮಾರಿಯ ಆಸ್ತಿ 44.95 ಕೋಟಿ ರೂ ಹೆಚ್ಚಾಗಿದೆ ಎಂದು ತೋರಿಸುತ್ತದೆ.

ಹಾಗಾದರೆ ಎಂಟಿಬಿ ನಾಗರಾಜ್ ಇಷ್ಟು ಕಡಿಮೆ ಅವಧಿಯಲ್ಲಿ ಇಷ್ಟು ಹಣವನ್ನು ಹೇಗೆ ಸಂಗ್ರಹಿಸಿದರು ಎಂದು ಅವರ ವಿರೋಧಿಗಳು ಪ್ರಶ್ನಿಸುತ್ತಿದ್ದಾರೆ. ಅದರಲ್ಲಿಯೂ ಮುಖ್ಯವಾಗಿ ನಾಗರಾಜ್ ಅವರು ಬಿಜೆಪಿಯಿಂದ ಕಣಕ್ಕಿಳಿದಿದ್ದನ್ನು ವಿರೋಧಿಸುವ ಬಿಜೆಪಿಯ ಮೂಲಗಳು, “ಎಂಟಿಬಿ ನಾಗರಾಜ್ ಅವರು ಕಾಂಗ್ರೆಸ್‌ನಿಂದ ಬಿಜೆಪಿಗೆ ಪಕ್ಷಾಂತರಗೊಂಡಿದ್ದಕ್ಕಾಗಿ ಅವರಿಗೆ ಮತ್ತು ಇನ್ನೊಬ್ಬ ಶಾಸಕ ಡಾ.ಕೆ ಸುಧಾಕರ್‌ರವರಿಗೆ ತಲಾ 50 ಕೋಟಿ ರೂ ಹಣ ನೀಡಲಾಗಿದೆ ಎಂದು ತಿಳಿಸಿದ್ದಾರೆಂದು ದಿ ನ್ಯೂಸ್‌ ಮಿನಿಟ್‌ ವರದಿ ಮಾಡಿದೆ.

ಅದೇ ಸಂದರ್ಭದಲ್ಲಿ ಕಾಂಗ್ರೆಸ್‌ನ ಡಿ.ಕೆ ಶಿವಕುಮಾರ್‌ ಸೇರಿದಂತೆ ಇತರ ನಾಯಕರು ಎಂಟಿಬಿ ನಾಗರಾಜ್‌ರವರನ್ನು ರಾಜಿನಾಮೆ ಹಿಂಪಡೆಯುವಂತೆ ಮನವೊಲಿಸಿದ್ದರು. ಆಗ ಎಂಟಿಬಿ ನಾಗರಾಜ್‌ ಸುಧಾಕರ್‌ರವರು ರಾಜಿನಾಮೆ ವಾಪಸ್‌ ಪಡೆದರೆ ನಾನು ಕೂಡ ರಾಜಿನಾಮೆ ವಾಪಸ್‌ ಪಡೆಯುತ್ತೇನೆ ಎಂಬ ಷರತ್ತು ಹಾಕಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ. ಅದಾದ ನಂತರ ಜುಲೈ 15 ರಂದು ನಾಗರಾಜ್‌ ತಮ್ಮ ರಾಜೀನಾಮೆಯನ್ನು ಹಿಂತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಘೋಷಿಸಿದರು. ಅವರು ಈ ಹೇಳಿಕೆ ನೀಡಿದ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರ ಸಹಾಯಕ ಸಂತೋಷ್ ಅವರೊಂದಿಗೆ ಖಾಸಗಿ ಚಾರ್ಟರ್ ವಿಮಾನದಲ್ಲಿ ಮುಂಬೈಗೆ ತೆರಳಿದ್ದರು.

ಜುಲೈ 23 ರಂದು ಎಚ್‌.ಡಿ ಕುಮಾರಸ್ವಾಮಿಯವರು ಬಹುಮತ ಸಾಬೀತುಪಡಿಸಲು ವಿಫಲವಾದ ನಂತರ ಮೈತ್ರಿ ಸರ್ಕಾರ ಬಿದ್ದುಹೋಯಿತು. ಜುಲೈ 26 ರಂದು ಬಿ.ಎಸ್‌ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಆಗ ಅನರ್ಹಗೊಂಡಿದ್ದ ಶಾಸಕರು ಮುಂಬೈನ ಐಷರಾಮಿ ಹೋಟೆಲ್‌ನಿಂದ ಕರ್ನಾಟಕ್ಕೆ ವಾಪಸ್‌ ಆದರು.

ಅದಾಗಿ ನಾಲ್ಕು ದಿನಗಳ ನಂತರ ಆಗಸ್ಟ್‌ 2 ರಿಂದ 7ರವರೆಗೆ ಒಟ್ಟು 53 ಬಾರಿ 90 ಲಕ್ಷಕ್ಕೂ ಅಧಿಕ ಮತ್ತು ಒಂದು ಕೋಟಿಗಿಂತ ಕಡಿಮೆ ಮೊತ್ತದ ಹಣವನ್ನು ಅಂದರೆ 48 ಕೋಟಿ ರೂಗಳನ್ನು ಎಂಟಿಬಿ ನಾಗರಾಜ್‌ರವರ ಖಾತೆಗೆ ಜಮಾ ಮಾಡಲಾಗಿದೆ. ಅದರ ವಿವರ ಕೆಳಗಿನಂತಿದೆ.

ಚಿತ್ರಕೃಪೆ: ದಿ ನ್ಯೂಸ್‌ ಮಿನಿಟ್

ಒಟ್ಟಿನಲ್ಲಿ ಆಪರೇಷನ್ ಕಮಲ ನಡದೇ ಇಲ್ಲ ಎಂದು ಆಗ ಯಡಿಯೂರಪ್ಪ ಘಂಟಾಘೋಷವಾಗಿ ಹೇಳುತ್ತಿದ್ದರು. ರಾಜಿನಾಮೆ ನೀಡಿದ ಶಾಸಕರಿಗೂ ನಮಗೂ ಸಂಬಂಧವೇ ಇಲ್ಲ ಎಂದಿದ್ದವರು ಈಗ ಅವರನ್ನು ಬಿಜೆಪಿಗೆ ಸೇರಿಸಿಕೊಂಡು ಗೆಲ್ಲಿಸಿ ಮಂತ್ರಿ ಮಾಡುತ್ತೇನೆ ಎಂದು ಸಾರುತ್ತಿದ್ದಾರೆ.

ಇನ್ನೊಂದು ಕಡೆ ಅನರ್ಹ ಶಾಸಕರ ಆಸ್ತಿ ಏರುತ್ತಲೇ ಇದೆ. ಕುದುರೆ ವ್ಯಾಪರ ನಡೆದಿದೆ ಎಂಬ ಆರೋಪಕ್ಕೆ ಇವೆಲ್ಲವೂ ದಟ್ಟ ಸಾಕ್ಷಿಗಳಾಗುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...