Homeಕರ್ನಾಟಕಬಿಜೆಪಿ ಸೇರಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ ಆಸ್ತಿ 18 ತಿಂಗಳಲ್ಲಿ 185 ಕೋಟಿ ಏರಿಕೆ!!

ಬಿಜೆಪಿ ಸೇರಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ ಆಸ್ತಿ 18 ತಿಂಗಳಲ್ಲಿ 185 ಕೋಟಿ ಏರಿಕೆ!!

ಆಗಸ್ಟ್‌ 2 ರಿಂದ 7ರವರೆಗೆ ಒಟ್ಟು 53 ಬಾರಿ 90 ಲಕ್ಷಕ್ಕೂ ಅಧಿಕ ಮತ್ತು ಒಂದು ಕೋಟಿಗಿಂತ ಕಡಿಮೆ ಮೊತ್ತದ ಹಣವನ್ನು ಅಂದರೆ 48 ಕೋಟಿ ರೂಗಳನ್ನು ಎಂಟಿಬಿ ನಾಗರಾಜ್‌ರವರ ಖಾತೆಗೆ ಜಮಾ ಮಾಡಲಾಗಿದೆ

- Advertisement -
- Advertisement -

ಆಪರೇಷನ್‌ ಕಮಲಕ್ಕೆ ಒಳಗಾಗಿ ಕಾಂಗ್ರೆಸ್‌-ಜೆಡಿಎಸ್‌ ಸರ್ಕಾರದ ಪತನಕ್ಕೆ ಕಾರಣನಾಗಿದ್ದ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ರವರ ಆಸ್ತಿಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಕುತೂಹಲದ ವಿಚಾರವೆಂದರೆ ಅವರು ರಾಜಿನಾಮೇ ನೀಡಿದ ಹದಿನೈದು ದಿನಗಳ ಅವಧಿಯಲ್ಲಿಯೇ ಮುಖ್ಯವಾಗಿ ಆಗಸ್ಟ್ 2 ಮತ್ತು 7 ರ ನಡುವೆ 48 ಕೋಟಿ ರೂ. ಅವರ ಖಾತೆಗೆ ಜಮಾ ಆಗಿದೆ ಎಂದು ಹಲವು ವರದಿಗಳು ತೋರಿಸಿವೆ.

ಕರ್ನಾಟಕದ ಶ್ರೀಮಂತ ರಾಜಕಾರಣಿಯಾದ ಎಂಟಿಬಿ ನಾಗರಾಜ್ ಆಸ್ತಿಯಲ್ಲಿ ಕೇವಲ 18 ತಿಂಗಳ ಅವಧಿಯಲ್ಲಿ 185.7 ಕೋಟಿ ರೂ ಏರಿಕೆಯಾಗಿದೆ ಎಂದು ಅವರ ಇತ್ತೀಚಿನ ಉಪಚುನಾವಣಾ ಅಫಿಡವಿಟ್ ತೋರಿಸುತ್ತದೆ.

ಹೊಸಕೋಟೆಯ ಬಿಜೆಪಿ ಅಭ್ಯರ್ಥಿಯಾಗಿ ಅವರು ಸಲ್ಲಿಸಿದ ಇತ್ತೀಚಿನ ಅಫಿಡವಿಟ್ ಪ್ರಕಾರ, ನಾಗರಾಜ್ ಮತ್ತು ಅವರ ಪತ್ನಿ ಶಾಂತಕುಮಾರಿ ಅವರ ಒಟ್ಟು ಆಸ್ತಿ ಮೌಲ್ಯ 1201.50 ಕೋಟಿ ರೂ ಆಗಿದೆ. ಆದರೆ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ 2018 ರ ಮೇನಲ್ಲಿ ಅವರು ಘೋಷಿಸಿದ ಸ್ವತ್ತುಗಳಿಗೆ ಹೋಲಿಸಿದರೆ ಇದು ಅವರ ಸಂಪತ್ತಿನ 15.5% ಹೆಚ್ಚಳವಾಗಿದೆ. 2018 ಮತ್ತು 2019 ರಲ್ಲಿ ಸಲ್ಲಿಸಲಾದ ಅಫಿಡವಿಟ್‌ಗೆ ಹೋಲಿಸಿದಲ್ಲಿ ನಾಗರಾಜ್ ಅವರ ಆಸ್ತಿ 104.53 ಕೋಟಿ ರೂ.ಗಳಷ್ಟು ಹೆಚ್ಚಾಗಿದೆ  ಮತ್ತು ಅವರ ಪತ್ನಿ ಶಾಂತಕುಮಾರಿಯ ಆಸ್ತಿ 44.95 ಕೋಟಿ ರೂ ಹೆಚ್ಚಾಗಿದೆ ಎಂದು ತೋರಿಸುತ್ತದೆ.

ಹಾಗಾದರೆ ಎಂಟಿಬಿ ನಾಗರಾಜ್ ಇಷ್ಟು ಕಡಿಮೆ ಅವಧಿಯಲ್ಲಿ ಇಷ್ಟು ಹಣವನ್ನು ಹೇಗೆ ಸಂಗ್ರಹಿಸಿದರು ಎಂದು ಅವರ ವಿರೋಧಿಗಳು ಪ್ರಶ್ನಿಸುತ್ತಿದ್ದಾರೆ. ಅದರಲ್ಲಿಯೂ ಮುಖ್ಯವಾಗಿ ನಾಗರಾಜ್ ಅವರು ಬಿಜೆಪಿಯಿಂದ ಕಣಕ್ಕಿಳಿದಿದ್ದನ್ನು ವಿರೋಧಿಸುವ ಬಿಜೆಪಿಯ ಮೂಲಗಳು, “ಎಂಟಿಬಿ ನಾಗರಾಜ್ ಅವರು ಕಾಂಗ್ರೆಸ್‌ನಿಂದ ಬಿಜೆಪಿಗೆ ಪಕ್ಷಾಂತರಗೊಂಡಿದ್ದಕ್ಕಾಗಿ ಅವರಿಗೆ ಮತ್ತು ಇನ್ನೊಬ್ಬ ಶಾಸಕ ಡಾ.ಕೆ ಸುಧಾಕರ್‌ರವರಿಗೆ ತಲಾ 50 ಕೋಟಿ ರೂ ಹಣ ನೀಡಲಾಗಿದೆ ಎಂದು ತಿಳಿಸಿದ್ದಾರೆಂದು ದಿ ನ್ಯೂಸ್‌ ಮಿನಿಟ್‌ ವರದಿ ಮಾಡಿದೆ.

ಅದೇ ಸಂದರ್ಭದಲ್ಲಿ ಕಾಂಗ್ರೆಸ್‌ನ ಡಿ.ಕೆ ಶಿವಕುಮಾರ್‌ ಸೇರಿದಂತೆ ಇತರ ನಾಯಕರು ಎಂಟಿಬಿ ನಾಗರಾಜ್‌ರವರನ್ನು ರಾಜಿನಾಮೆ ಹಿಂಪಡೆಯುವಂತೆ ಮನವೊಲಿಸಿದ್ದರು. ಆಗ ಎಂಟಿಬಿ ನಾಗರಾಜ್‌ ಸುಧಾಕರ್‌ರವರು ರಾಜಿನಾಮೆ ವಾಪಸ್‌ ಪಡೆದರೆ ನಾನು ಕೂಡ ರಾಜಿನಾಮೆ ವಾಪಸ್‌ ಪಡೆಯುತ್ತೇನೆ ಎಂಬ ಷರತ್ತು ಹಾಕಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ. ಅದಾದ ನಂತರ ಜುಲೈ 15 ರಂದು ನಾಗರಾಜ್‌ ತಮ್ಮ ರಾಜೀನಾಮೆಯನ್ನು ಹಿಂತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಘೋಷಿಸಿದರು. ಅವರು ಈ ಹೇಳಿಕೆ ನೀಡಿದ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರ ಸಹಾಯಕ ಸಂತೋಷ್ ಅವರೊಂದಿಗೆ ಖಾಸಗಿ ಚಾರ್ಟರ್ ವಿಮಾನದಲ್ಲಿ ಮುಂಬೈಗೆ ತೆರಳಿದ್ದರು.

ಜುಲೈ 23 ರಂದು ಎಚ್‌.ಡಿ ಕುಮಾರಸ್ವಾಮಿಯವರು ಬಹುಮತ ಸಾಬೀತುಪಡಿಸಲು ವಿಫಲವಾದ ನಂತರ ಮೈತ್ರಿ ಸರ್ಕಾರ ಬಿದ್ದುಹೋಯಿತು. ಜುಲೈ 26 ರಂದು ಬಿ.ಎಸ್‌ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಆಗ ಅನರ್ಹಗೊಂಡಿದ್ದ ಶಾಸಕರು ಮುಂಬೈನ ಐಷರಾಮಿ ಹೋಟೆಲ್‌ನಿಂದ ಕರ್ನಾಟಕ್ಕೆ ವಾಪಸ್‌ ಆದರು.

ಅದಾಗಿ ನಾಲ್ಕು ದಿನಗಳ ನಂತರ ಆಗಸ್ಟ್‌ 2 ರಿಂದ 7ರವರೆಗೆ ಒಟ್ಟು 53 ಬಾರಿ 90 ಲಕ್ಷಕ್ಕೂ ಅಧಿಕ ಮತ್ತು ಒಂದು ಕೋಟಿಗಿಂತ ಕಡಿಮೆ ಮೊತ್ತದ ಹಣವನ್ನು ಅಂದರೆ 48 ಕೋಟಿ ರೂಗಳನ್ನು ಎಂಟಿಬಿ ನಾಗರಾಜ್‌ರವರ ಖಾತೆಗೆ ಜಮಾ ಮಾಡಲಾಗಿದೆ. ಅದರ ವಿವರ ಕೆಳಗಿನಂತಿದೆ.

ಚಿತ್ರಕೃಪೆ: ದಿ ನ್ಯೂಸ್‌ ಮಿನಿಟ್

ಒಟ್ಟಿನಲ್ಲಿ ಆಪರೇಷನ್ ಕಮಲ ನಡದೇ ಇಲ್ಲ ಎಂದು ಆಗ ಯಡಿಯೂರಪ್ಪ ಘಂಟಾಘೋಷವಾಗಿ ಹೇಳುತ್ತಿದ್ದರು. ರಾಜಿನಾಮೆ ನೀಡಿದ ಶಾಸಕರಿಗೂ ನಮಗೂ ಸಂಬಂಧವೇ ಇಲ್ಲ ಎಂದಿದ್ದವರು ಈಗ ಅವರನ್ನು ಬಿಜೆಪಿಗೆ ಸೇರಿಸಿಕೊಂಡು ಗೆಲ್ಲಿಸಿ ಮಂತ್ರಿ ಮಾಡುತ್ತೇನೆ ಎಂದು ಸಾರುತ್ತಿದ್ದಾರೆ.

ಇನ್ನೊಂದು ಕಡೆ ಅನರ್ಹ ಶಾಸಕರ ಆಸ್ತಿ ಏರುತ್ತಲೇ ಇದೆ. ಕುದುರೆ ವ್ಯಾಪರ ನಡೆದಿದೆ ಎಂಬ ಆರೋಪಕ್ಕೆ ಇವೆಲ್ಲವೂ ದಟ್ಟ ಸಾಕ್ಷಿಗಳಾಗುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...