Homeಕರ್ನಾಟಕಬಿಜೆಪಿ ಸೇರಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ ಆಸ್ತಿ 18 ತಿಂಗಳಲ್ಲಿ 185 ಕೋಟಿ ಏರಿಕೆ!!

ಬಿಜೆಪಿ ಸೇರಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ ಆಸ್ತಿ 18 ತಿಂಗಳಲ್ಲಿ 185 ಕೋಟಿ ಏರಿಕೆ!!

ಆಗಸ್ಟ್‌ 2 ರಿಂದ 7ರವರೆಗೆ ಒಟ್ಟು 53 ಬಾರಿ 90 ಲಕ್ಷಕ್ಕೂ ಅಧಿಕ ಮತ್ತು ಒಂದು ಕೋಟಿಗಿಂತ ಕಡಿಮೆ ಮೊತ್ತದ ಹಣವನ್ನು ಅಂದರೆ 48 ಕೋಟಿ ರೂಗಳನ್ನು ಎಂಟಿಬಿ ನಾಗರಾಜ್‌ರವರ ಖಾತೆಗೆ ಜಮಾ ಮಾಡಲಾಗಿದೆ

- Advertisement -
- Advertisement -

ಆಪರೇಷನ್‌ ಕಮಲಕ್ಕೆ ಒಳಗಾಗಿ ಕಾಂಗ್ರೆಸ್‌-ಜೆಡಿಎಸ್‌ ಸರ್ಕಾರದ ಪತನಕ್ಕೆ ಕಾರಣನಾಗಿದ್ದ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ರವರ ಆಸ್ತಿಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಕುತೂಹಲದ ವಿಚಾರವೆಂದರೆ ಅವರು ರಾಜಿನಾಮೇ ನೀಡಿದ ಹದಿನೈದು ದಿನಗಳ ಅವಧಿಯಲ್ಲಿಯೇ ಮುಖ್ಯವಾಗಿ ಆಗಸ್ಟ್ 2 ಮತ್ತು 7 ರ ನಡುವೆ 48 ಕೋಟಿ ರೂ. ಅವರ ಖಾತೆಗೆ ಜಮಾ ಆಗಿದೆ ಎಂದು ಹಲವು ವರದಿಗಳು ತೋರಿಸಿವೆ.

ಕರ್ನಾಟಕದ ಶ್ರೀಮಂತ ರಾಜಕಾರಣಿಯಾದ ಎಂಟಿಬಿ ನಾಗರಾಜ್ ಆಸ್ತಿಯಲ್ಲಿ ಕೇವಲ 18 ತಿಂಗಳ ಅವಧಿಯಲ್ಲಿ 185.7 ಕೋಟಿ ರೂ ಏರಿಕೆಯಾಗಿದೆ ಎಂದು ಅವರ ಇತ್ತೀಚಿನ ಉಪಚುನಾವಣಾ ಅಫಿಡವಿಟ್ ತೋರಿಸುತ್ತದೆ.

ಹೊಸಕೋಟೆಯ ಬಿಜೆಪಿ ಅಭ್ಯರ್ಥಿಯಾಗಿ ಅವರು ಸಲ್ಲಿಸಿದ ಇತ್ತೀಚಿನ ಅಫಿಡವಿಟ್ ಪ್ರಕಾರ, ನಾಗರಾಜ್ ಮತ್ತು ಅವರ ಪತ್ನಿ ಶಾಂತಕುಮಾರಿ ಅವರ ಒಟ್ಟು ಆಸ್ತಿ ಮೌಲ್ಯ 1201.50 ಕೋಟಿ ರೂ ಆಗಿದೆ. ಆದರೆ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ 2018 ರ ಮೇನಲ್ಲಿ ಅವರು ಘೋಷಿಸಿದ ಸ್ವತ್ತುಗಳಿಗೆ ಹೋಲಿಸಿದರೆ ಇದು ಅವರ ಸಂಪತ್ತಿನ 15.5% ಹೆಚ್ಚಳವಾಗಿದೆ. 2018 ಮತ್ತು 2019 ರಲ್ಲಿ ಸಲ್ಲಿಸಲಾದ ಅಫಿಡವಿಟ್‌ಗೆ ಹೋಲಿಸಿದಲ್ಲಿ ನಾಗರಾಜ್ ಅವರ ಆಸ್ತಿ 104.53 ಕೋಟಿ ರೂ.ಗಳಷ್ಟು ಹೆಚ್ಚಾಗಿದೆ  ಮತ್ತು ಅವರ ಪತ್ನಿ ಶಾಂತಕುಮಾರಿಯ ಆಸ್ತಿ 44.95 ಕೋಟಿ ರೂ ಹೆಚ್ಚಾಗಿದೆ ಎಂದು ತೋರಿಸುತ್ತದೆ.

ಹಾಗಾದರೆ ಎಂಟಿಬಿ ನಾಗರಾಜ್ ಇಷ್ಟು ಕಡಿಮೆ ಅವಧಿಯಲ್ಲಿ ಇಷ್ಟು ಹಣವನ್ನು ಹೇಗೆ ಸಂಗ್ರಹಿಸಿದರು ಎಂದು ಅವರ ವಿರೋಧಿಗಳು ಪ್ರಶ್ನಿಸುತ್ತಿದ್ದಾರೆ. ಅದರಲ್ಲಿಯೂ ಮುಖ್ಯವಾಗಿ ನಾಗರಾಜ್ ಅವರು ಬಿಜೆಪಿಯಿಂದ ಕಣಕ್ಕಿಳಿದಿದ್ದನ್ನು ವಿರೋಧಿಸುವ ಬಿಜೆಪಿಯ ಮೂಲಗಳು, “ಎಂಟಿಬಿ ನಾಗರಾಜ್ ಅವರು ಕಾಂಗ್ರೆಸ್‌ನಿಂದ ಬಿಜೆಪಿಗೆ ಪಕ್ಷಾಂತರಗೊಂಡಿದ್ದಕ್ಕಾಗಿ ಅವರಿಗೆ ಮತ್ತು ಇನ್ನೊಬ್ಬ ಶಾಸಕ ಡಾ.ಕೆ ಸುಧಾಕರ್‌ರವರಿಗೆ ತಲಾ 50 ಕೋಟಿ ರೂ ಹಣ ನೀಡಲಾಗಿದೆ ಎಂದು ತಿಳಿಸಿದ್ದಾರೆಂದು ದಿ ನ್ಯೂಸ್‌ ಮಿನಿಟ್‌ ವರದಿ ಮಾಡಿದೆ.

ಅದೇ ಸಂದರ್ಭದಲ್ಲಿ ಕಾಂಗ್ರೆಸ್‌ನ ಡಿ.ಕೆ ಶಿವಕುಮಾರ್‌ ಸೇರಿದಂತೆ ಇತರ ನಾಯಕರು ಎಂಟಿಬಿ ನಾಗರಾಜ್‌ರವರನ್ನು ರಾಜಿನಾಮೆ ಹಿಂಪಡೆಯುವಂತೆ ಮನವೊಲಿಸಿದ್ದರು. ಆಗ ಎಂಟಿಬಿ ನಾಗರಾಜ್‌ ಸುಧಾಕರ್‌ರವರು ರಾಜಿನಾಮೆ ವಾಪಸ್‌ ಪಡೆದರೆ ನಾನು ಕೂಡ ರಾಜಿನಾಮೆ ವಾಪಸ್‌ ಪಡೆಯುತ್ತೇನೆ ಎಂಬ ಷರತ್ತು ಹಾಕಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ. ಅದಾದ ನಂತರ ಜುಲೈ 15 ರಂದು ನಾಗರಾಜ್‌ ತಮ್ಮ ರಾಜೀನಾಮೆಯನ್ನು ಹಿಂತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಘೋಷಿಸಿದರು. ಅವರು ಈ ಹೇಳಿಕೆ ನೀಡಿದ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರ ಸಹಾಯಕ ಸಂತೋಷ್ ಅವರೊಂದಿಗೆ ಖಾಸಗಿ ಚಾರ್ಟರ್ ವಿಮಾನದಲ್ಲಿ ಮುಂಬೈಗೆ ತೆರಳಿದ್ದರು.

ಜುಲೈ 23 ರಂದು ಎಚ್‌.ಡಿ ಕುಮಾರಸ್ವಾಮಿಯವರು ಬಹುಮತ ಸಾಬೀತುಪಡಿಸಲು ವಿಫಲವಾದ ನಂತರ ಮೈತ್ರಿ ಸರ್ಕಾರ ಬಿದ್ದುಹೋಯಿತು. ಜುಲೈ 26 ರಂದು ಬಿ.ಎಸ್‌ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಆಗ ಅನರ್ಹಗೊಂಡಿದ್ದ ಶಾಸಕರು ಮುಂಬೈನ ಐಷರಾಮಿ ಹೋಟೆಲ್‌ನಿಂದ ಕರ್ನಾಟಕ್ಕೆ ವಾಪಸ್‌ ಆದರು.

ಅದಾಗಿ ನಾಲ್ಕು ದಿನಗಳ ನಂತರ ಆಗಸ್ಟ್‌ 2 ರಿಂದ 7ರವರೆಗೆ ಒಟ್ಟು 53 ಬಾರಿ 90 ಲಕ್ಷಕ್ಕೂ ಅಧಿಕ ಮತ್ತು ಒಂದು ಕೋಟಿಗಿಂತ ಕಡಿಮೆ ಮೊತ್ತದ ಹಣವನ್ನು ಅಂದರೆ 48 ಕೋಟಿ ರೂಗಳನ್ನು ಎಂಟಿಬಿ ನಾಗರಾಜ್‌ರವರ ಖಾತೆಗೆ ಜಮಾ ಮಾಡಲಾಗಿದೆ. ಅದರ ವಿವರ ಕೆಳಗಿನಂತಿದೆ.

ಚಿತ್ರಕೃಪೆ: ದಿ ನ್ಯೂಸ್‌ ಮಿನಿಟ್

ಒಟ್ಟಿನಲ್ಲಿ ಆಪರೇಷನ್ ಕಮಲ ನಡದೇ ಇಲ್ಲ ಎಂದು ಆಗ ಯಡಿಯೂರಪ್ಪ ಘಂಟಾಘೋಷವಾಗಿ ಹೇಳುತ್ತಿದ್ದರು. ರಾಜಿನಾಮೆ ನೀಡಿದ ಶಾಸಕರಿಗೂ ನಮಗೂ ಸಂಬಂಧವೇ ಇಲ್ಲ ಎಂದಿದ್ದವರು ಈಗ ಅವರನ್ನು ಬಿಜೆಪಿಗೆ ಸೇರಿಸಿಕೊಂಡು ಗೆಲ್ಲಿಸಿ ಮಂತ್ರಿ ಮಾಡುತ್ತೇನೆ ಎಂದು ಸಾರುತ್ತಿದ್ದಾರೆ.

ಇನ್ನೊಂದು ಕಡೆ ಅನರ್ಹ ಶಾಸಕರ ಆಸ್ತಿ ಏರುತ್ತಲೇ ಇದೆ. ಕುದುರೆ ವ್ಯಾಪರ ನಡೆದಿದೆ ಎಂಬ ಆರೋಪಕ್ಕೆ ಇವೆಲ್ಲವೂ ದಟ್ಟ ಸಾಕ್ಷಿಗಳಾಗುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...