Homeಕರ್ನಾಟಕಬಿಜೆಪಿ ಸೇರಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ ಆಸ್ತಿ 18 ತಿಂಗಳಲ್ಲಿ 185 ಕೋಟಿ ಏರಿಕೆ!!

ಬಿಜೆಪಿ ಸೇರಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ ಆಸ್ತಿ 18 ತಿಂಗಳಲ್ಲಿ 185 ಕೋಟಿ ಏರಿಕೆ!!

ಆಗಸ್ಟ್‌ 2 ರಿಂದ 7ರವರೆಗೆ ಒಟ್ಟು 53 ಬಾರಿ 90 ಲಕ್ಷಕ್ಕೂ ಅಧಿಕ ಮತ್ತು ಒಂದು ಕೋಟಿಗಿಂತ ಕಡಿಮೆ ಮೊತ್ತದ ಹಣವನ್ನು ಅಂದರೆ 48 ಕೋಟಿ ರೂಗಳನ್ನು ಎಂಟಿಬಿ ನಾಗರಾಜ್‌ರವರ ಖಾತೆಗೆ ಜಮಾ ಮಾಡಲಾಗಿದೆ

- Advertisement -
- Advertisement -

ಆಪರೇಷನ್‌ ಕಮಲಕ್ಕೆ ಒಳಗಾಗಿ ಕಾಂಗ್ರೆಸ್‌-ಜೆಡಿಎಸ್‌ ಸರ್ಕಾರದ ಪತನಕ್ಕೆ ಕಾರಣನಾಗಿದ್ದ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ರವರ ಆಸ್ತಿಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಕುತೂಹಲದ ವಿಚಾರವೆಂದರೆ ಅವರು ರಾಜಿನಾಮೇ ನೀಡಿದ ಹದಿನೈದು ದಿನಗಳ ಅವಧಿಯಲ್ಲಿಯೇ ಮುಖ್ಯವಾಗಿ ಆಗಸ್ಟ್ 2 ಮತ್ತು 7 ರ ನಡುವೆ 48 ಕೋಟಿ ರೂ. ಅವರ ಖಾತೆಗೆ ಜಮಾ ಆಗಿದೆ ಎಂದು ಹಲವು ವರದಿಗಳು ತೋರಿಸಿವೆ.

ಕರ್ನಾಟಕದ ಶ್ರೀಮಂತ ರಾಜಕಾರಣಿಯಾದ ಎಂಟಿಬಿ ನಾಗರಾಜ್ ಆಸ್ತಿಯಲ್ಲಿ ಕೇವಲ 18 ತಿಂಗಳ ಅವಧಿಯಲ್ಲಿ 185.7 ಕೋಟಿ ರೂ ಏರಿಕೆಯಾಗಿದೆ ಎಂದು ಅವರ ಇತ್ತೀಚಿನ ಉಪಚುನಾವಣಾ ಅಫಿಡವಿಟ್ ತೋರಿಸುತ್ತದೆ.

ಹೊಸಕೋಟೆಯ ಬಿಜೆಪಿ ಅಭ್ಯರ್ಥಿಯಾಗಿ ಅವರು ಸಲ್ಲಿಸಿದ ಇತ್ತೀಚಿನ ಅಫಿಡವಿಟ್ ಪ್ರಕಾರ, ನಾಗರಾಜ್ ಮತ್ತು ಅವರ ಪತ್ನಿ ಶಾಂತಕುಮಾರಿ ಅವರ ಒಟ್ಟು ಆಸ್ತಿ ಮೌಲ್ಯ 1201.50 ಕೋಟಿ ರೂ ಆಗಿದೆ. ಆದರೆ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ 2018 ರ ಮೇನಲ್ಲಿ ಅವರು ಘೋಷಿಸಿದ ಸ್ವತ್ತುಗಳಿಗೆ ಹೋಲಿಸಿದರೆ ಇದು ಅವರ ಸಂಪತ್ತಿನ 15.5% ಹೆಚ್ಚಳವಾಗಿದೆ. 2018 ಮತ್ತು 2019 ರಲ್ಲಿ ಸಲ್ಲಿಸಲಾದ ಅಫಿಡವಿಟ್‌ಗೆ ಹೋಲಿಸಿದಲ್ಲಿ ನಾಗರಾಜ್ ಅವರ ಆಸ್ತಿ 104.53 ಕೋಟಿ ರೂ.ಗಳಷ್ಟು ಹೆಚ್ಚಾಗಿದೆ  ಮತ್ತು ಅವರ ಪತ್ನಿ ಶಾಂತಕುಮಾರಿಯ ಆಸ್ತಿ 44.95 ಕೋಟಿ ರೂ ಹೆಚ್ಚಾಗಿದೆ ಎಂದು ತೋರಿಸುತ್ತದೆ.

ಹಾಗಾದರೆ ಎಂಟಿಬಿ ನಾಗರಾಜ್ ಇಷ್ಟು ಕಡಿಮೆ ಅವಧಿಯಲ್ಲಿ ಇಷ್ಟು ಹಣವನ್ನು ಹೇಗೆ ಸಂಗ್ರಹಿಸಿದರು ಎಂದು ಅವರ ವಿರೋಧಿಗಳು ಪ್ರಶ್ನಿಸುತ್ತಿದ್ದಾರೆ. ಅದರಲ್ಲಿಯೂ ಮುಖ್ಯವಾಗಿ ನಾಗರಾಜ್ ಅವರು ಬಿಜೆಪಿಯಿಂದ ಕಣಕ್ಕಿಳಿದಿದ್ದನ್ನು ವಿರೋಧಿಸುವ ಬಿಜೆಪಿಯ ಮೂಲಗಳು, “ಎಂಟಿಬಿ ನಾಗರಾಜ್ ಅವರು ಕಾಂಗ್ರೆಸ್‌ನಿಂದ ಬಿಜೆಪಿಗೆ ಪಕ್ಷಾಂತರಗೊಂಡಿದ್ದಕ್ಕಾಗಿ ಅವರಿಗೆ ಮತ್ತು ಇನ್ನೊಬ್ಬ ಶಾಸಕ ಡಾ.ಕೆ ಸುಧಾಕರ್‌ರವರಿಗೆ ತಲಾ 50 ಕೋಟಿ ರೂ ಹಣ ನೀಡಲಾಗಿದೆ ಎಂದು ತಿಳಿಸಿದ್ದಾರೆಂದು ದಿ ನ್ಯೂಸ್‌ ಮಿನಿಟ್‌ ವರದಿ ಮಾಡಿದೆ.

ಅದೇ ಸಂದರ್ಭದಲ್ಲಿ ಕಾಂಗ್ರೆಸ್‌ನ ಡಿ.ಕೆ ಶಿವಕುಮಾರ್‌ ಸೇರಿದಂತೆ ಇತರ ನಾಯಕರು ಎಂಟಿಬಿ ನಾಗರಾಜ್‌ರವರನ್ನು ರಾಜಿನಾಮೆ ಹಿಂಪಡೆಯುವಂತೆ ಮನವೊಲಿಸಿದ್ದರು. ಆಗ ಎಂಟಿಬಿ ನಾಗರಾಜ್‌ ಸುಧಾಕರ್‌ರವರು ರಾಜಿನಾಮೆ ವಾಪಸ್‌ ಪಡೆದರೆ ನಾನು ಕೂಡ ರಾಜಿನಾಮೆ ವಾಪಸ್‌ ಪಡೆಯುತ್ತೇನೆ ಎಂಬ ಷರತ್ತು ಹಾಕಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ. ಅದಾದ ನಂತರ ಜುಲೈ 15 ರಂದು ನಾಗರಾಜ್‌ ತಮ್ಮ ರಾಜೀನಾಮೆಯನ್ನು ಹಿಂತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಘೋಷಿಸಿದರು. ಅವರು ಈ ಹೇಳಿಕೆ ನೀಡಿದ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರ ಸಹಾಯಕ ಸಂತೋಷ್ ಅವರೊಂದಿಗೆ ಖಾಸಗಿ ಚಾರ್ಟರ್ ವಿಮಾನದಲ್ಲಿ ಮುಂಬೈಗೆ ತೆರಳಿದ್ದರು.

ಜುಲೈ 23 ರಂದು ಎಚ್‌.ಡಿ ಕುಮಾರಸ್ವಾಮಿಯವರು ಬಹುಮತ ಸಾಬೀತುಪಡಿಸಲು ವಿಫಲವಾದ ನಂತರ ಮೈತ್ರಿ ಸರ್ಕಾರ ಬಿದ್ದುಹೋಯಿತು. ಜುಲೈ 26 ರಂದು ಬಿ.ಎಸ್‌ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಆಗ ಅನರ್ಹಗೊಂಡಿದ್ದ ಶಾಸಕರು ಮುಂಬೈನ ಐಷರಾಮಿ ಹೋಟೆಲ್‌ನಿಂದ ಕರ್ನಾಟಕ್ಕೆ ವಾಪಸ್‌ ಆದರು.

ಅದಾಗಿ ನಾಲ್ಕು ದಿನಗಳ ನಂತರ ಆಗಸ್ಟ್‌ 2 ರಿಂದ 7ರವರೆಗೆ ಒಟ್ಟು 53 ಬಾರಿ 90 ಲಕ್ಷಕ್ಕೂ ಅಧಿಕ ಮತ್ತು ಒಂದು ಕೋಟಿಗಿಂತ ಕಡಿಮೆ ಮೊತ್ತದ ಹಣವನ್ನು ಅಂದರೆ 48 ಕೋಟಿ ರೂಗಳನ್ನು ಎಂಟಿಬಿ ನಾಗರಾಜ್‌ರವರ ಖಾತೆಗೆ ಜಮಾ ಮಾಡಲಾಗಿದೆ. ಅದರ ವಿವರ ಕೆಳಗಿನಂತಿದೆ.

ಚಿತ್ರಕೃಪೆ: ದಿ ನ್ಯೂಸ್‌ ಮಿನಿಟ್

ಒಟ್ಟಿನಲ್ಲಿ ಆಪರೇಷನ್ ಕಮಲ ನಡದೇ ಇಲ್ಲ ಎಂದು ಆಗ ಯಡಿಯೂರಪ್ಪ ಘಂಟಾಘೋಷವಾಗಿ ಹೇಳುತ್ತಿದ್ದರು. ರಾಜಿನಾಮೆ ನೀಡಿದ ಶಾಸಕರಿಗೂ ನಮಗೂ ಸಂಬಂಧವೇ ಇಲ್ಲ ಎಂದಿದ್ದವರು ಈಗ ಅವರನ್ನು ಬಿಜೆಪಿಗೆ ಸೇರಿಸಿಕೊಂಡು ಗೆಲ್ಲಿಸಿ ಮಂತ್ರಿ ಮಾಡುತ್ತೇನೆ ಎಂದು ಸಾರುತ್ತಿದ್ದಾರೆ.

ಇನ್ನೊಂದು ಕಡೆ ಅನರ್ಹ ಶಾಸಕರ ಆಸ್ತಿ ಏರುತ್ತಲೇ ಇದೆ. ಕುದುರೆ ವ್ಯಾಪರ ನಡೆದಿದೆ ಎಂಬ ಆರೋಪಕ್ಕೆ ಇವೆಲ್ಲವೂ ದಟ್ಟ ಸಾಕ್ಷಿಗಳಾಗುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...