Homeಕರ್ನಾಟಕಬಿಜೆಪಿ ಸೇರಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ ಆಸ್ತಿ 18 ತಿಂಗಳಲ್ಲಿ 185 ಕೋಟಿ ಏರಿಕೆ!!

ಬಿಜೆಪಿ ಸೇರಿದ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ ಆಸ್ತಿ 18 ತಿಂಗಳಲ್ಲಿ 185 ಕೋಟಿ ಏರಿಕೆ!!

ಆಗಸ್ಟ್‌ 2 ರಿಂದ 7ರವರೆಗೆ ಒಟ್ಟು 53 ಬಾರಿ 90 ಲಕ್ಷಕ್ಕೂ ಅಧಿಕ ಮತ್ತು ಒಂದು ಕೋಟಿಗಿಂತ ಕಡಿಮೆ ಮೊತ್ತದ ಹಣವನ್ನು ಅಂದರೆ 48 ಕೋಟಿ ರೂಗಳನ್ನು ಎಂಟಿಬಿ ನಾಗರಾಜ್‌ರವರ ಖಾತೆಗೆ ಜಮಾ ಮಾಡಲಾಗಿದೆ

- Advertisement -
- Advertisement -

ಆಪರೇಷನ್‌ ಕಮಲಕ್ಕೆ ಒಳಗಾಗಿ ಕಾಂಗ್ರೆಸ್‌-ಜೆಡಿಎಸ್‌ ಸರ್ಕಾರದ ಪತನಕ್ಕೆ ಕಾರಣನಾಗಿದ್ದ ಅನರ್ಹ ಶಾಸಕ ಎಂಟಿಬಿ ನಾಗರಾಜ್‌ರವರ ಆಸ್ತಿಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಕುತೂಹಲದ ವಿಚಾರವೆಂದರೆ ಅವರು ರಾಜಿನಾಮೇ ನೀಡಿದ ಹದಿನೈದು ದಿನಗಳ ಅವಧಿಯಲ್ಲಿಯೇ ಮುಖ್ಯವಾಗಿ ಆಗಸ್ಟ್ 2 ಮತ್ತು 7 ರ ನಡುವೆ 48 ಕೋಟಿ ರೂ. ಅವರ ಖಾತೆಗೆ ಜಮಾ ಆಗಿದೆ ಎಂದು ಹಲವು ವರದಿಗಳು ತೋರಿಸಿವೆ.

ಕರ್ನಾಟಕದ ಶ್ರೀಮಂತ ರಾಜಕಾರಣಿಯಾದ ಎಂಟಿಬಿ ನಾಗರಾಜ್ ಆಸ್ತಿಯಲ್ಲಿ ಕೇವಲ 18 ತಿಂಗಳ ಅವಧಿಯಲ್ಲಿ 185.7 ಕೋಟಿ ರೂ ಏರಿಕೆಯಾಗಿದೆ ಎಂದು ಅವರ ಇತ್ತೀಚಿನ ಉಪಚುನಾವಣಾ ಅಫಿಡವಿಟ್ ತೋರಿಸುತ್ತದೆ.

ಹೊಸಕೋಟೆಯ ಬಿಜೆಪಿ ಅಭ್ಯರ್ಥಿಯಾಗಿ ಅವರು ಸಲ್ಲಿಸಿದ ಇತ್ತೀಚಿನ ಅಫಿಡವಿಟ್ ಪ್ರಕಾರ, ನಾಗರಾಜ್ ಮತ್ತು ಅವರ ಪತ್ನಿ ಶಾಂತಕುಮಾರಿ ಅವರ ಒಟ್ಟು ಆಸ್ತಿ ಮೌಲ್ಯ 1201.50 ಕೋಟಿ ರೂ ಆಗಿದೆ. ಆದರೆ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ 2018 ರ ಮೇನಲ್ಲಿ ಅವರು ಘೋಷಿಸಿದ ಸ್ವತ್ತುಗಳಿಗೆ ಹೋಲಿಸಿದರೆ ಇದು ಅವರ ಸಂಪತ್ತಿನ 15.5% ಹೆಚ್ಚಳವಾಗಿದೆ. 2018 ಮತ್ತು 2019 ರಲ್ಲಿ ಸಲ್ಲಿಸಲಾದ ಅಫಿಡವಿಟ್‌ಗೆ ಹೋಲಿಸಿದಲ್ಲಿ ನಾಗರಾಜ್ ಅವರ ಆಸ್ತಿ 104.53 ಕೋಟಿ ರೂ.ಗಳಷ್ಟು ಹೆಚ್ಚಾಗಿದೆ  ಮತ್ತು ಅವರ ಪತ್ನಿ ಶಾಂತಕುಮಾರಿಯ ಆಸ್ತಿ 44.95 ಕೋಟಿ ರೂ ಹೆಚ್ಚಾಗಿದೆ ಎಂದು ತೋರಿಸುತ್ತದೆ.

ಹಾಗಾದರೆ ಎಂಟಿಬಿ ನಾಗರಾಜ್ ಇಷ್ಟು ಕಡಿಮೆ ಅವಧಿಯಲ್ಲಿ ಇಷ್ಟು ಹಣವನ್ನು ಹೇಗೆ ಸಂಗ್ರಹಿಸಿದರು ಎಂದು ಅವರ ವಿರೋಧಿಗಳು ಪ್ರಶ್ನಿಸುತ್ತಿದ್ದಾರೆ. ಅದರಲ್ಲಿಯೂ ಮುಖ್ಯವಾಗಿ ನಾಗರಾಜ್ ಅವರು ಬಿಜೆಪಿಯಿಂದ ಕಣಕ್ಕಿಳಿದಿದ್ದನ್ನು ವಿರೋಧಿಸುವ ಬಿಜೆಪಿಯ ಮೂಲಗಳು, “ಎಂಟಿಬಿ ನಾಗರಾಜ್ ಅವರು ಕಾಂಗ್ರೆಸ್‌ನಿಂದ ಬಿಜೆಪಿಗೆ ಪಕ್ಷಾಂತರಗೊಂಡಿದ್ದಕ್ಕಾಗಿ ಅವರಿಗೆ ಮತ್ತು ಇನ್ನೊಬ್ಬ ಶಾಸಕ ಡಾ.ಕೆ ಸುಧಾಕರ್‌ರವರಿಗೆ ತಲಾ 50 ಕೋಟಿ ರೂ ಹಣ ನೀಡಲಾಗಿದೆ ಎಂದು ತಿಳಿಸಿದ್ದಾರೆಂದು ದಿ ನ್ಯೂಸ್‌ ಮಿನಿಟ್‌ ವರದಿ ಮಾಡಿದೆ.

ಅದೇ ಸಂದರ್ಭದಲ್ಲಿ ಕಾಂಗ್ರೆಸ್‌ನ ಡಿ.ಕೆ ಶಿವಕುಮಾರ್‌ ಸೇರಿದಂತೆ ಇತರ ನಾಯಕರು ಎಂಟಿಬಿ ನಾಗರಾಜ್‌ರವರನ್ನು ರಾಜಿನಾಮೆ ಹಿಂಪಡೆಯುವಂತೆ ಮನವೊಲಿಸಿದ್ದರು. ಆಗ ಎಂಟಿಬಿ ನಾಗರಾಜ್‌ ಸುಧಾಕರ್‌ರವರು ರಾಜಿನಾಮೆ ವಾಪಸ್‌ ಪಡೆದರೆ ನಾನು ಕೂಡ ರಾಜಿನಾಮೆ ವಾಪಸ್‌ ಪಡೆಯುತ್ತೇನೆ ಎಂಬ ಷರತ್ತು ಹಾಕಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ. ಅದಾದ ನಂತರ ಜುಲೈ 15 ರಂದು ನಾಗರಾಜ್‌ ತಮ್ಮ ರಾಜೀನಾಮೆಯನ್ನು ಹಿಂತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಘೋಷಿಸಿದರು. ಅವರು ಈ ಹೇಳಿಕೆ ನೀಡಿದ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರ ಸಹಾಯಕ ಸಂತೋಷ್ ಅವರೊಂದಿಗೆ ಖಾಸಗಿ ಚಾರ್ಟರ್ ವಿಮಾನದಲ್ಲಿ ಮುಂಬೈಗೆ ತೆರಳಿದ್ದರು.

ಜುಲೈ 23 ರಂದು ಎಚ್‌.ಡಿ ಕುಮಾರಸ್ವಾಮಿಯವರು ಬಹುಮತ ಸಾಬೀತುಪಡಿಸಲು ವಿಫಲವಾದ ನಂತರ ಮೈತ್ರಿ ಸರ್ಕಾರ ಬಿದ್ದುಹೋಯಿತು. ಜುಲೈ 26 ರಂದು ಬಿ.ಎಸ್‌ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಆಗ ಅನರ್ಹಗೊಂಡಿದ್ದ ಶಾಸಕರು ಮುಂಬೈನ ಐಷರಾಮಿ ಹೋಟೆಲ್‌ನಿಂದ ಕರ್ನಾಟಕ್ಕೆ ವಾಪಸ್‌ ಆದರು.

ಅದಾಗಿ ನಾಲ್ಕು ದಿನಗಳ ನಂತರ ಆಗಸ್ಟ್‌ 2 ರಿಂದ 7ರವರೆಗೆ ಒಟ್ಟು 53 ಬಾರಿ 90 ಲಕ್ಷಕ್ಕೂ ಅಧಿಕ ಮತ್ತು ಒಂದು ಕೋಟಿಗಿಂತ ಕಡಿಮೆ ಮೊತ್ತದ ಹಣವನ್ನು ಅಂದರೆ 48 ಕೋಟಿ ರೂಗಳನ್ನು ಎಂಟಿಬಿ ನಾಗರಾಜ್‌ರವರ ಖಾತೆಗೆ ಜಮಾ ಮಾಡಲಾಗಿದೆ. ಅದರ ವಿವರ ಕೆಳಗಿನಂತಿದೆ.

ಚಿತ್ರಕೃಪೆ: ದಿ ನ್ಯೂಸ್‌ ಮಿನಿಟ್

ಒಟ್ಟಿನಲ್ಲಿ ಆಪರೇಷನ್ ಕಮಲ ನಡದೇ ಇಲ್ಲ ಎಂದು ಆಗ ಯಡಿಯೂರಪ್ಪ ಘಂಟಾಘೋಷವಾಗಿ ಹೇಳುತ್ತಿದ್ದರು. ರಾಜಿನಾಮೆ ನೀಡಿದ ಶಾಸಕರಿಗೂ ನಮಗೂ ಸಂಬಂಧವೇ ಇಲ್ಲ ಎಂದಿದ್ದವರು ಈಗ ಅವರನ್ನು ಬಿಜೆಪಿಗೆ ಸೇರಿಸಿಕೊಂಡು ಗೆಲ್ಲಿಸಿ ಮಂತ್ರಿ ಮಾಡುತ್ತೇನೆ ಎಂದು ಸಾರುತ್ತಿದ್ದಾರೆ.

ಇನ್ನೊಂದು ಕಡೆ ಅನರ್ಹ ಶಾಸಕರ ಆಸ್ತಿ ಏರುತ್ತಲೇ ಇದೆ. ಕುದುರೆ ವ್ಯಾಪರ ನಡೆದಿದೆ ಎಂಬ ಆರೋಪಕ್ಕೆ ಇವೆಲ್ಲವೂ ದಟ್ಟ ಸಾಕ್ಷಿಗಳಾಗುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...