Homeಮುಖಪುಟಅನರ್ಹ ಸಂಸದ ರಾಹುಲ್ ಏ. 22ರೊಳಗೆ ಸರ್ಕಾರಿ ಬಂಗಲೆ ಖಾಲಿ ಮಾಡಬೇಕು: ಸೆಕ್ರೆಟರಿಯೇಟ್ ನೋಟಿಸ್

ಅನರ್ಹ ಸಂಸದ ರಾಹುಲ್ ಏ. 22ರೊಳಗೆ ಸರ್ಕಾರಿ ಬಂಗಲೆ ಖಾಲಿ ಮಾಡಬೇಕು: ಸೆಕ್ರೆಟರಿಯೇಟ್ ನೋಟಿಸ್

- Advertisement -
- Advertisement -

ಲೋಕಸಭೆಯ ಸೆಕ್ರೆಟರಿಯೇಟ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ನಂತರ ದೆಹಲಿಯಲ್ಲಿ ಅವರಿಗೆ ನೀಡಲಾದ ಸರ್ಕಾರಿ ಬಂಗಲೆಯನ್ನು ಏಪ್ರಿಲ್ 22 ರೊಳಗೆ ಖಾಲಿ ಮಾಡುವಂತೆ ಸೋಮವಾರ ನೋಟಿಸ್ ನೀಡಿದೆ.

2019 ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ರ್ಯಾಲಿಯಲ್ಲಿ ರಾಹುಲ್ ಭಾಷಣದ ಮಧ್ಯೆ ”ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಸಾಮಾನ್ಯವಾಗಿ ಇರುವುದು ಹೇಗೆ?” ಎಂದು ಪ್ರಶ್ನಿಸಿದ್ದರು. ಈ ಹೇಳಿಕೆ ವಿರುದ್ಧ ಬಿಜೆಪಿ ಶಾಸಕ ಮತ್ತು ಗುಜರಾತ್‌ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ದೂರು ನೀಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್‌ನ ಮುಖ್ಯ ನ್ಯಾಯಾಂಗೀಯ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ರಾಹುಲ್‌ ಅವರಿಗೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು. ಈ ಕಾರಣದಿಂದ ಅವರ ಲೋಕಸಭಾ ಸದಸ್ಯತ್ವ ರದ್ದಾಗಿದೆ ಎಂದು ಲೋಕಸಭಾ ಕಾರ್ಯಾಲಯವು ಅಧಿಸೂಚನೆಯಲ್ಲಿ ತಿಳಿಸಿದೆ. ತೀರ್ಪು ಪ್ರಕಟವಾದ 2023ರ ಮಾರ್ಚ್‌ 23ರಿಂದಲೇ ಅನರ್ಹತೆ ಅನ್ವಯ ಎಂದೂ ಹೇಳಲಾಗಿದೆ.

ಪ್ರಜಾಪ್ರತಿನಿಧಿ ಕಾಯಿದೆ, 1951ರ ಅಡಿಯಲ್ಲಿ, ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಗೆ ಜೈಲು ಶಿಕ್ಷೆಗೆ ಗುರಿಯಾದ ಶಾಸಕರು ಶಿಕ್ಷೆಯ ದಿನಾಂಕದಿಂದ ಆರು ವರ್ಷಗಳ ಅವಧಿಯ ನಂತರ ಅನರ್ಹರಾಗುತ್ತಾರೆ.

ಇದನ್ನೂ ಓದಿ: ‘ಗಾಂಧಿ ತತ್ವಗಳಿಗೆ ಎಸಗಿದ ದೊಡ್ಡ ದ್ರೋಹ’: ರಾಹುಲ್ ಅಮಾನತ್ತಿಗೆ ಅಮೆರಿಕ ಸಂಸದರಿಂದ ಖಂಡನೆ

ಅನರ್ಹಗೊಂಡ ಲೋಕಸಭಾ ಸದಸ್ಯರು ಸದಸ್ಯತ್ವವನ್ನು ಕಳೆದುಕೊಂಡ ಒಂದು ತಿಂಗಳೊಳಗೆ ಅಧಿಕೃತ ಬಂಗಲೆಯನ್ನು ಖಾಲಿ ಮಾಡಬೇಕು ಎಂದು ಸೋಮವಾರ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದರು.

ರಾಹುಲ್ ಗಾಂಧಿ ಅವರು 2014ರಿಂದ 12, ತುಘಲಕ್ ಲೇನ್ ಬಂಗಲೆಯಲ್ಲಿ ತಂಗಿದ್ದರು.

ಬಂಗಲೆಯಲ್ಲಿ ಹೆಚ್ಚಿನ ಅವಧಿಯವರೆಗೆ ವಾಸ್ತವ್ಯಕ್ಕಾಗಿ ರಾಹುಲ್ ಗಾಂಧಿ ಲೋಕಸಭೆಯ ವಸತಿ ಸಮಿತಿಗೆ ಪತ್ರ ಬರೆಯಬಹುದು ಎಂದು ಹೆಸರು ಹೇಳಲಿಚ್ಚಿಸದ ಮತ್ತೊಬ್ಬ ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ,

”ನಿಮಗೆ ನೀಡಲಾಗಿದ್ದ ಸಕಾರದ ವಸತಿ ಸೌಲಭ್ಯವನ್ನು 23.04.2023ರಂದು ರದ್ದುಗೊಳಿಸಲಾಗಿದೆ ಎಂದು ಪರಿಗಣಿಸಬೇಕು” ಎಂದು ಲೋಕಸಭೆಯ ಸಚಿವಾಲಯವು ನೋಟಿಸ್‌ನಲ್ಲಿ ತಿಳಿಸಿದೆ.

ಕಾಂಗ್ರೆಸ್ ಸಂಸದ ಸೈಯದ್ ನಸೀರ್ ಹುಸೇನ್ ಎನ್‌ಡಿಟಿವಿ ಜೊತೆ ಮಾತನಾಡಿ, ”ಬಿಜೆಪಿ ಸರ್ಕಾರವು ರಾಹುಲ್ ಗಾಂಧಿಯನ್ನು ಗುರಿಯಾಗಿಸಿಕೊಂಡಿದೆ. ಬಿಜೆಪಿಯು ಮಾಟಗಾತಿ ಬೇಟೆಯಲ್ಲಿ ತೊಡಗಿರುವ ಕಾರಣ ಬಿಜೆಪಿಯಿಂದ ಇದನ್ನು ನಾವು ನಿರೀಕ್ಷೆ ಮಾಡಿದ್ದೆವು. ಅವರು ಭಿನ್ನಾಭಿಪ್ರಾಯದ ಧ್ವನಿಗಳನ್ನು ಮೌನಗೊಳಿಸಲು ಎಲ್ಲಾ ರೀತಿಯ ತಂತ್ರಗಳನ್ನು ಬಳಸುತ್ತಾರೆ. ಅವರು ನಮ್ಮ ಪ್ರಮುಖ ನಾಯಕರೊಬ್ಬರನ್ನು ನೀಚತನದಿಂದ ಸಂಸತ್ತಿನಿಂದ ಹೊರಹಾಕಿದ್ದಾರೆ ಮತ್ತು ಇದು ಹೊಸದೇನಲ್ಲ” ಎಂದು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...