Homeಮುಖಪುಟಅನರ್ಹ ಸಂಸದ ರಾಹುಲ್ ಏ. 22ರೊಳಗೆ ಸರ್ಕಾರಿ ಬಂಗಲೆ ಖಾಲಿ ಮಾಡಬೇಕು: ಸೆಕ್ರೆಟರಿಯೇಟ್ ನೋಟಿಸ್

ಅನರ್ಹ ಸಂಸದ ರಾಹುಲ್ ಏ. 22ರೊಳಗೆ ಸರ್ಕಾರಿ ಬಂಗಲೆ ಖಾಲಿ ಮಾಡಬೇಕು: ಸೆಕ್ರೆಟರಿಯೇಟ್ ನೋಟಿಸ್

- Advertisement -
- Advertisement -

ಲೋಕಸಭೆಯ ಸೆಕ್ರೆಟರಿಯೇಟ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ನಂತರ ದೆಹಲಿಯಲ್ಲಿ ಅವರಿಗೆ ನೀಡಲಾದ ಸರ್ಕಾರಿ ಬಂಗಲೆಯನ್ನು ಏಪ್ರಿಲ್ 22 ರೊಳಗೆ ಖಾಲಿ ಮಾಡುವಂತೆ ಸೋಮವಾರ ನೋಟಿಸ್ ನೀಡಿದೆ.

2019 ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ರ್ಯಾಲಿಯಲ್ಲಿ ರಾಹುಲ್ ಭಾಷಣದ ಮಧ್ಯೆ ”ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಸಾಮಾನ್ಯವಾಗಿ ಇರುವುದು ಹೇಗೆ?” ಎಂದು ಪ್ರಶ್ನಿಸಿದ್ದರು. ಈ ಹೇಳಿಕೆ ವಿರುದ್ಧ ಬಿಜೆಪಿ ಶಾಸಕ ಮತ್ತು ಗುಜರಾತ್‌ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ದೂರು ನೀಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್‌ನ ಮುಖ್ಯ ನ್ಯಾಯಾಂಗೀಯ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ರಾಹುಲ್‌ ಅವರಿಗೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು. ಈ ಕಾರಣದಿಂದ ಅವರ ಲೋಕಸಭಾ ಸದಸ್ಯತ್ವ ರದ್ದಾಗಿದೆ ಎಂದು ಲೋಕಸಭಾ ಕಾರ್ಯಾಲಯವು ಅಧಿಸೂಚನೆಯಲ್ಲಿ ತಿಳಿಸಿದೆ. ತೀರ್ಪು ಪ್ರಕಟವಾದ 2023ರ ಮಾರ್ಚ್‌ 23ರಿಂದಲೇ ಅನರ್ಹತೆ ಅನ್ವಯ ಎಂದೂ ಹೇಳಲಾಗಿದೆ.

ಪ್ರಜಾಪ್ರತಿನಿಧಿ ಕಾಯಿದೆ, 1951ರ ಅಡಿಯಲ್ಲಿ, ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಗೆ ಜೈಲು ಶಿಕ್ಷೆಗೆ ಗುರಿಯಾದ ಶಾಸಕರು ಶಿಕ್ಷೆಯ ದಿನಾಂಕದಿಂದ ಆರು ವರ್ಷಗಳ ಅವಧಿಯ ನಂತರ ಅನರ್ಹರಾಗುತ್ತಾರೆ.

ಇದನ್ನೂ ಓದಿ: ‘ಗಾಂಧಿ ತತ್ವಗಳಿಗೆ ಎಸಗಿದ ದೊಡ್ಡ ದ್ರೋಹ’: ರಾಹುಲ್ ಅಮಾನತ್ತಿಗೆ ಅಮೆರಿಕ ಸಂಸದರಿಂದ ಖಂಡನೆ

ಅನರ್ಹಗೊಂಡ ಲೋಕಸಭಾ ಸದಸ್ಯರು ಸದಸ್ಯತ್ವವನ್ನು ಕಳೆದುಕೊಂಡ ಒಂದು ತಿಂಗಳೊಳಗೆ ಅಧಿಕೃತ ಬಂಗಲೆಯನ್ನು ಖಾಲಿ ಮಾಡಬೇಕು ಎಂದು ಸೋಮವಾರ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದರು.

ರಾಹುಲ್ ಗಾಂಧಿ ಅವರು 2014ರಿಂದ 12, ತುಘಲಕ್ ಲೇನ್ ಬಂಗಲೆಯಲ್ಲಿ ತಂಗಿದ್ದರು.

ಬಂಗಲೆಯಲ್ಲಿ ಹೆಚ್ಚಿನ ಅವಧಿಯವರೆಗೆ ವಾಸ್ತವ್ಯಕ್ಕಾಗಿ ರಾಹುಲ್ ಗಾಂಧಿ ಲೋಕಸಭೆಯ ವಸತಿ ಸಮಿತಿಗೆ ಪತ್ರ ಬರೆಯಬಹುದು ಎಂದು ಹೆಸರು ಹೇಳಲಿಚ್ಚಿಸದ ಮತ್ತೊಬ್ಬ ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ,

”ನಿಮಗೆ ನೀಡಲಾಗಿದ್ದ ಸಕಾರದ ವಸತಿ ಸೌಲಭ್ಯವನ್ನು 23.04.2023ರಂದು ರದ್ದುಗೊಳಿಸಲಾಗಿದೆ ಎಂದು ಪರಿಗಣಿಸಬೇಕು” ಎಂದು ಲೋಕಸಭೆಯ ಸಚಿವಾಲಯವು ನೋಟಿಸ್‌ನಲ್ಲಿ ತಿಳಿಸಿದೆ.

ಕಾಂಗ್ರೆಸ್ ಸಂಸದ ಸೈಯದ್ ನಸೀರ್ ಹುಸೇನ್ ಎನ್‌ಡಿಟಿವಿ ಜೊತೆ ಮಾತನಾಡಿ, ”ಬಿಜೆಪಿ ಸರ್ಕಾರವು ರಾಹುಲ್ ಗಾಂಧಿಯನ್ನು ಗುರಿಯಾಗಿಸಿಕೊಂಡಿದೆ. ಬಿಜೆಪಿಯು ಮಾಟಗಾತಿ ಬೇಟೆಯಲ್ಲಿ ತೊಡಗಿರುವ ಕಾರಣ ಬಿಜೆಪಿಯಿಂದ ಇದನ್ನು ನಾವು ನಿರೀಕ್ಷೆ ಮಾಡಿದ್ದೆವು. ಅವರು ಭಿನ್ನಾಭಿಪ್ರಾಯದ ಧ್ವನಿಗಳನ್ನು ಮೌನಗೊಳಿಸಲು ಎಲ್ಲಾ ರೀತಿಯ ತಂತ್ರಗಳನ್ನು ಬಳಸುತ್ತಾರೆ. ಅವರು ನಮ್ಮ ಪ್ರಮುಖ ನಾಯಕರೊಬ್ಬರನ್ನು ನೀಚತನದಿಂದ ಸಂಸತ್ತಿನಿಂದ ಹೊರಹಾಕಿದ್ದಾರೆ ಮತ್ತು ಇದು ಹೊಸದೇನಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....