Homeಕರ್ನಾಟಕಶಿರಾ: ಹಣ ಹಂಚಿದ ಬಿಜೆಪಿ ಅಭ್ಯರ್ಥಿಯನ್ನು ಅನರ್ಹಗೊಳಿಸಿ; ಕಾಂಗ್ರೆಸ್ ದೂರು

ಶಿರಾ: ಹಣ ಹಂಚಿದ ಬಿಜೆಪಿ ಅಭ್ಯರ್ಥಿಯನ್ನು ಅನರ್ಹಗೊಳಿಸಿ; ಕಾಂಗ್ರೆಸ್ ದೂರು

ಬಿಜೆಪಿ  ಅಭ್ಯರ್ಥಿ ರಾಜೇಶ್ ಗೌಡ ಮತ್ತು ಪಕ್ಷದ ಕಾರ್ಯಕರ್ತರು ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಮತದಾರರ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

- Advertisement -
- Advertisement -

ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಮುಖಂಡರು ಮತದಾರರಿಗೆ ಹಣ, ಮದ್ಯ ಮತ್ತು ಇತರೆ ಮೌಲ್ಯಯುತ ಉಡುಗೊರೆಗಳನ್ನು ನೀಡುತ್ತಿರುವ ಆರೋಪ ಕೇಳಿಬಂದಿದ್ದು, ಕೂಡಲೇ ಹಣ ಹಂಚಿದ ಬಿಜೆಪಿ ಅಭ್ಯರ್ಥಿಯನ್ನು (ರಾಜೇಶ್ ಗೌಡ) ಅನರ್ಹಗೊಳಿಸಬೇಕೆಂದು ಕಾಂಗ್ರೆಸ್ ಮುಖಂಡರು ಚುನಾವಣಾ ಆಯೋಗಕ್ಕೆ ದೂರು ನೀಡಿ ಒತ್ತಾಯಿಸಿದ್ದಾರೆ.

ಕೆಪಿಸಿಸಿಯ ಕಾನೂನು ಸುಧಾರಣಾ ವಿಭಾಗದ ಅಧ್ಯಕ್ಷ ಮತ್ತು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ನೇತೃತ್ವದ ನಿಯೋಗ ಬೆಂಗಳೂರಿನಲ್ಲಿ ರಾಜ್ಯ ಚುನಾವಣಾಧಿಕಾರಿಗಳನ್ನು ಭೇಟಿ ಮಾಡಿ, ಬಿಜೆಪಿ  ಅಭ್ಯರ್ಥಿ ರಾಜೇಶ್ ಗೌಡ ಮತ್ತು ಅವರ ಏಜೆಂಟರು ಮತ್ತು ಪಕ್ಷದ ಕಾರ್ಯಕರ್ತರು ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಮತದಾರರ ಮೇಲೆ ಪ್ರಭಾವ ಬೀರುತ್ತಿದ್ದಾರೆ.  ಹಣ ಹಂಚಿಕೆ ಅಡೆತಡೆಯಿಲ್ಲದೆ ಸಾಗುತ್ತಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರು ಹುಲಿಕುಂಟೆ ಹೋಬಳಿಯ ಚಿರತಹಳ್ಳಿಯಲ್ಲಿ ಅಕ್ಟೋಬರ್ 26ರಂದು ರಾತ್ರಿ 9.30ರ ಸಮಯದಲ್ಲಿ ಮಹಿಳೆಯರನ್ನು ಒಂದೆಡೆ ಸೇರಿಸಿ ಹಣ ಹಂಚಿಕೆ ಮಾಡಿದ್ದಾರೆ. ಹಾಸನದ ಬಿಜೆಪಿ ಶಾಸಕ ಪ್ರೀತಂಗೌಡ ಹೇಳಿದರೆಂದು ಹಣ ಹಂಚಿಕೆ ಮಾಡುತ್ತಿದ್ದೇವೆ ಎಂದು ಭಾಷಣಕಾರರು ಹೇಳಿದ್ದಾರೆ. ಮತದಾರರ ಮೇಲೆ ಪ್ರಭಾವ ಬೀರುವ ಹಿನ್ನೆಲೆಯಲ್ಲಿ ಲಂಚ, ಭ್ರಷ್ಟಾಚಾರಕ್ಕೆ ಬಿಜೆಪಿ ಅಭ್ಯರ್ಥಿ, ಏಜೆಂಟರು ಮತ್ತು ಬಿಜೆಪಿ ಮುಖಂಡರು ಎಡೆಮಾಡಿಕೊಟ್ಟಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮತದಾರರಿಗೆ ಹಣ ಹಂಚುತ್ತಿರುವ ಬಿಜೆಪಿ?

ಶಿರಾ ಕ್ಷೇತ್ರದ ಸುಮಾರು ಒಂದು ಲಕ್ಷ ಮತದಾರರಿಗೆ ಬಿಜೆಪಿ ಮುಖಂಡರು ಹಣ ಹಂಚಿಕೆ ಮಾಡಿದ್ದಾರೆಂಬ ಆರೋಪ ಇದೆ. ಕನಿಷ್ಠ 2 ಕೋಟಿ ರೂಗಳಷ್ಟು ಹಣ ಹಂಚಿಕೆ ಮಾಡಲಾಗಿದೆ. ಇದು ಭಾರತ ದಂಡ ಸಂಹಿತೆ 171 ಬಿ, ಸಿ, ಇ, ಮತ್ತು ಜಿ ಪ್ರಕಾರ ಅಪರಾಧವಾಗಿದ್ದು ಅಭ್ಯರ್ಥಿಯನ್ನು ಕೂಡಲೇ ಅನರ್ಹಗೊಳಿಸಬೇಕು ಎಂದು ದೂರಿನಲ್ಲಿ ಕಾಂಗ್ರೆಸ್ ಆಗ್ರಹಿಸಿದೆ.

ಚುನಾವಣೆಯು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಯಬೇಕು. ಆದರೆ ಹಣ, ಮದ್ಯ, ಉಡುಗೊರೆಗಳನ್ನು ಹಂಚುವ ಮೂಲಕ ಕಾನೂನುಗಳನ್ನು ಗಾಳಿಗೆ ತೂರಲಾಗಿದೆ. ಇದು ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂಬುದನ್ನು ತೋರಿಸುತ್ತದೆ. ಇದೇ ವೇಳೆ ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸುರೇಶ್ ಗೌಡರು ಕೂಡ ಹಣ ಹಂಚಿಕೆ ಮಾಡಿದ್ದಾರೆ ಎಂಬುದಕ್ಕೆ ಅವರು ಮಾತನಾಡಿರುವ ಆಡಿಯೋವನ್ನು ದೂರಿನ ಜೊತೆ ನೀಡಲಾಗಿದೆ. ದೊಡ್ಡ ಪ್ರಮಾಣದಲ್ಲಿ ಹಣ ವರ್ಗಾವಣೆಯಾಗಿದೆ. ಹೀಗಾಗಿ ಈ ಅಕ್ರಮದಲ್ಲಿ ತೊಡಗಿರುವವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.

ನಿಯೋಗದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಕೆಪಿಸಿಸಿ ಕಾನೂನು ಮತ್ತು ಮಾನವ ಹಕ್ಕುಗಳ ವಿಭಾಗದ ಅಧ್ಯಕ್ಷ ಪೊನ್ನಣ್ಣ ಹಾಗೂ ಬಸವರಾಜು ಇದ್ದರು.


ಇದನ್ನೂ ಓದಿ: ಶಿರಾ ಉಪಚುನಾವಣೆ: ಹಿರಿಯರು, ವಿಶೇಷಚೇತನರಿಗೆ ಹಣ ಹಂಚಿಕೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...