Homeಮುಖಪುಟಅಂಬೇಡ್ಕರ್‌ಗೆ ಅಗೌರವ ತೋರಿದ ಕಾಂಗ್ರೆಸ್ ವಂಚನೆಯ ರಾಜಕಾರಣ ಮಾಡುತ್ತಿದೆ: ಮಾಯಾವತಿ

ಅಂಬೇಡ್ಕರ್‌ಗೆ ಅಗೌರವ ತೋರಿದ ಕಾಂಗ್ರೆಸ್ ವಂಚನೆಯ ರಾಜಕಾರಣ ಮಾಡುತ್ತಿದೆ: ಮಾಯಾವತಿ

- Advertisement -
- Advertisement -

ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಬಿ.ಆರ್. ಅಂಬೇಡ್ಕರ್ ಅವರಿಗೆ ಅಗೌರವ ತೋರಿದ್ದಾರೆ ಎಂದು ವಿರೋಧಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯ ಪ್ರಾಮಾಣಿಕತೆಯನ್ನು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು ಭಾನುವಾರ ಪ್ರಶ್ನಿಸಿದ್ದಾರೆ. ದೇಶಕ್ಕಾಗಿ ಅಂಬೇಡ್ಕರ್ ನಡೆಸಿದ ಹೋರಾಟವನ್ನು ನಿರ್ಲಕ್ಷಿಸಿ ಅದನ್ನು ದುರ್ಬಲಗೊಳಿಸಿದ ಕಾಂಗ್ರೆಸ್ ಪಕ್ಷವು “ಶುದ್ಧ ವಂಚನೆ ಮತ್ತು ಸ್ವಾರ್ಥದ ರಾಜಕೀಯ” ದಲ್ಲಿ ತೊಡಗಿದೆ ಎಂದು ಅವರು ಹೇಳಿದ್ದಾರೆ. ಅಂಬೇಡ್ಕರ್‌ಗೆ ಅಗೌರವ

ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಅಂಬೇಡ್ಕರ್ ಅವರ ಹೆಸರನ್ನು ತೆಗೆದುಕೊಳ್ಳುವಲ್ಲಿ ಆಡಳಿತ ಪಕ್ಷ ಮತ್ತು ಕಾಂಗ್ರೆಸ್ ಒಂದೇ ಎಂದು ಅವರು ಆರೋಪಿಸಿದ್ದಾರೆ. ಈ ನಡುವೆ ಕಾಂಗ್ರೆಸ್, ಅಂಬೇಡ್ಕರ್ ಅವರನ್ನು “ಅವಮಾನ” ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಪ್ರತಿಭಟನಾ ಮೆರವಣಿಗೆಗಳನ್ನು ನಡೆಸುವುದಾಗಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ವಾಸ್ತವದಲ್ಲಿ, ಬಾಬಾ ಸಾಹೇಬ್ ಸೇರಿದಂತೆ ಬಹುಜನ ಸಮಾಜದಲ್ಲಿ ಜನಿಸಿದ ಸಂತರು, ಗುರುಗಳು ಮತ್ತು ಮಹಾನ್ ವ್ಯಕ್ತಿಗಳಿಗೆ ಸಂಪೂರ್ಣ ಗೌರವ ಸಿಕ್ಕಿದ್ದ ಬಿಎಸ್‌ಪಿ ಸರ್ಕಾರ ಇದ್ದಾಗ ಮಾತ್ರ. ಇದನ್ನು ಈ ಜಾತಿವಾದಿ ಪಕ್ಷಗಳು ಅರಗಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಯೂ ಆಗಿರುವ ಮಾಯಾವತಿ ಅವರು ಹೇಳಿದ್ದಾರೆ.

ಭಾನುವಾರ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಮಾಯಾವತಿ ಅವರು, “ಅತ್ಯಂತ ಪೂಜ್ಯ ಬಾಬಾ ಸಾಹೇಬ್ ಡಾ. ಭೀಮರಾವ್ ಅಂಬೇಡ್ಕರ್ ಅವರನ್ನು ಸಂಸತ್ತಿನಲ್ಲಿ ಅಮಿತ್ ಶಾ ಅವರು ಅವಮಾನ ಮಾಡಿದ್ದಕ್ಕಾಗಿ ದೇಶಾದ್ಯಂತ ಜನರಲ್ಲಿ ಭಾರಿ ಆಕ್ರೋಶವಿದೆ. ಆದರೆ ಕಾಂಗ್ರೆಸ್ ಪಕ್ಷದ ದೇಶಕ್ಕಾಗಿ ಹೋರಾಟ ಮಾಡಿದ ಅವನ್ನು ಯಾವಾಗಲೂ ನಿರ್ಲಕ್ಷಿಸಿ ನೋಯಿಸುತ್ತಿದೆ. ಕಾಂಗ್ರೆಸ್‌ನದ್ದು ಶುದ್ಧ ವಂಚನೆ ಮತ್ತು ಸ್ವಾರ್ಥದ ರಾಜಕಾರಣ” ಎಂದು ಹೇಳಿದ್ದಾರೆ. ಅಂಬೇಡ್ಕರ್‌ಗೆ ಅಗೌರವ

“ಭಾರತದ ಸಂವಿಧಾನದ 75 ವರ್ಷಗಳ ಅದ್ಭುತ ಪಯಣ” ಎಂಬ ಎರಡು ದಿನಗಳ ಚರ್ಚೆಯ ಮುಕ್ತಾಯದಲ್ಲಿ ರಾಜ್ಯಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ, “ಅಭಿ ಏಕ್ ಫ್ಯಾಶನ್ ಹೋ ಗಯಾ ಹೈ – ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್. ಇತ್ನಾ ನಾಮ್ ಅಗರ್ ಭಗವಾನ್ ಕಾ ಲೇತೆ ತೋ ಸಾತ್ ಜನ್ಮೋನ್ ತಕ್ ಸ್ವರ್ಗ್ ಮಿಲ್ ಜಾತಾ” (ಈ ಒಂದು ಫ್ಯಾಶನ್ ಆಗಿ ಹೋಗಿದೆ. ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್… ಇಷ್ಟು ಬಾರಿ ಭಗವಂತನ ಹೆಸರನ್ನು ಹೇಳಿದ್ದರೆ, ಏಳು ಜನ್ಮಕ್ಕೂ ಸ್ವರ್ಗ ಸಿಗುತ್ತಿತ್ತು) ಎಂದು ಅಮಿತ್ ಶಾ ಹೇಳಿದ್ದರು.

ಇದನ್ನೂ ಓದಿ: ಅಂಬೇಡ್ಕರ್‌ಗೆ ಅವಮಾನ| ‘ಅಮಿತ್ ಶಾಗೆ ಹುಚ್ಚು ಹಿಡಿದಿದೆ, ಅವರು ರಾಜಕೀಯ ತ್ಯಜಿಸಬೇಕು’ ಎಂದ ಲಾಲು ಪ್ರಸಾದ್

ಅಂಬೇಡ್ಕರ್‌ಗೆ ಅವಮಾನ| ‘ಅಮಿತ್ ಶಾಗೆ ಹುಚ್ಚು ಹಿಡಿದಿದೆ, ಅವರು ರಾಜಕೀಯ ತ್ಯಜಿಸಬೇಕು’ ಎಂದ ಲಾಲು ಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...