Homeಮುಖಪುಟಅಂಬೇಡ್ಕರ್‌ಗೆ ಅಗೌರವ ತೋರಿದ ಕಾಂಗ್ರೆಸ್ ವಂಚನೆಯ ರಾಜಕಾರಣ ಮಾಡುತ್ತಿದೆ: ಮಾಯಾವತಿ

ಅಂಬೇಡ್ಕರ್‌ಗೆ ಅಗೌರವ ತೋರಿದ ಕಾಂಗ್ರೆಸ್ ವಂಚನೆಯ ರಾಜಕಾರಣ ಮಾಡುತ್ತಿದೆ: ಮಾಯಾವತಿ

- Advertisement -
- Advertisement -

ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಬಿ.ಆರ್. ಅಂಬೇಡ್ಕರ್ ಅವರಿಗೆ ಅಗೌರವ ತೋರಿದ್ದಾರೆ ಎಂದು ವಿರೋಧಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯ ಪ್ರಾಮಾಣಿಕತೆಯನ್ನು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು ಭಾನುವಾರ ಪ್ರಶ್ನಿಸಿದ್ದಾರೆ. ದೇಶಕ್ಕಾಗಿ ಅಂಬೇಡ್ಕರ್ ನಡೆಸಿದ ಹೋರಾಟವನ್ನು ನಿರ್ಲಕ್ಷಿಸಿ ಅದನ್ನು ದುರ್ಬಲಗೊಳಿಸಿದ ಕಾಂಗ್ರೆಸ್ ಪಕ್ಷವು “ಶುದ್ಧ ವಂಚನೆ ಮತ್ತು ಸ್ವಾರ್ಥದ ರಾಜಕೀಯ” ದಲ್ಲಿ ತೊಡಗಿದೆ ಎಂದು ಅವರು ಹೇಳಿದ್ದಾರೆ. ಅಂಬೇಡ್ಕರ್‌ಗೆ ಅಗೌರವ

ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಅಂಬೇಡ್ಕರ್ ಅವರ ಹೆಸರನ್ನು ತೆಗೆದುಕೊಳ್ಳುವಲ್ಲಿ ಆಡಳಿತ ಪಕ್ಷ ಮತ್ತು ಕಾಂಗ್ರೆಸ್ ಒಂದೇ ಎಂದು ಅವರು ಆರೋಪಿಸಿದ್ದಾರೆ. ಈ ನಡುವೆ ಕಾಂಗ್ರೆಸ್, ಅಂಬೇಡ್ಕರ್ ಅವರನ್ನು “ಅವಮಾನ” ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಪ್ರತಿಭಟನಾ ಮೆರವಣಿಗೆಗಳನ್ನು ನಡೆಸುವುದಾಗಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ವಾಸ್ತವದಲ್ಲಿ, ಬಾಬಾ ಸಾಹೇಬ್ ಸೇರಿದಂತೆ ಬಹುಜನ ಸಮಾಜದಲ್ಲಿ ಜನಿಸಿದ ಸಂತರು, ಗುರುಗಳು ಮತ್ತು ಮಹಾನ್ ವ್ಯಕ್ತಿಗಳಿಗೆ ಸಂಪೂರ್ಣ ಗೌರವ ಸಿಕ್ಕಿದ್ದ ಬಿಎಸ್‌ಪಿ ಸರ್ಕಾರ ಇದ್ದಾಗ ಮಾತ್ರ. ಇದನ್ನು ಈ ಜಾತಿವಾದಿ ಪಕ್ಷಗಳು ಅರಗಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಯೂ ಆಗಿರುವ ಮಾಯಾವತಿ ಅವರು ಹೇಳಿದ್ದಾರೆ.

ಭಾನುವಾರ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಮಾಯಾವತಿ ಅವರು, “ಅತ್ಯಂತ ಪೂಜ್ಯ ಬಾಬಾ ಸಾಹೇಬ್ ಡಾ. ಭೀಮರಾವ್ ಅಂಬೇಡ್ಕರ್ ಅವರನ್ನು ಸಂಸತ್ತಿನಲ್ಲಿ ಅಮಿತ್ ಶಾ ಅವರು ಅವಮಾನ ಮಾಡಿದ್ದಕ್ಕಾಗಿ ದೇಶಾದ್ಯಂತ ಜನರಲ್ಲಿ ಭಾರಿ ಆಕ್ರೋಶವಿದೆ. ಆದರೆ ಕಾಂಗ್ರೆಸ್ ಪಕ್ಷದ ದೇಶಕ್ಕಾಗಿ ಹೋರಾಟ ಮಾಡಿದ ಅವನ್ನು ಯಾವಾಗಲೂ ನಿರ್ಲಕ್ಷಿಸಿ ನೋಯಿಸುತ್ತಿದೆ. ಕಾಂಗ್ರೆಸ್‌ನದ್ದು ಶುದ್ಧ ವಂಚನೆ ಮತ್ತು ಸ್ವಾರ್ಥದ ರಾಜಕಾರಣ” ಎಂದು ಹೇಳಿದ್ದಾರೆ. ಅಂಬೇಡ್ಕರ್‌ಗೆ ಅಗೌರವ

“ಭಾರತದ ಸಂವಿಧಾನದ 75 ವರ್ಷಗಳ ಅದ್ಭುತ ಪಯಣ” ಎಂಬ ಎರಡು ದಿನಗಳ ಚರ್ಚೆಯ ಮುಕ್ತಾಯದಲ್ಲಿ ರಾಜ್ಯಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ, “ಅಭಿ ಏಕ್ ಫ್ಯಾಶನ್ ಹೋ ಗಯಾ ಹೈ – ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್. ಇತ್ನಾ ನಾಮ್ ಅಗರ್ ಭಗವಾನ್ ಕಾ ಲೇತೆ ತೋ ಸಾತ್ ಜನ್ಮೋನ್ ತಕ್ ಸ್ವರ್ಗ್ ಮಿಲ್ ಜಾತಾ” (ಈ ಒಂದು ಫ್ಯಾಶನ್ ಆಗಿ ಹೋಗಿದೆ. ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್… ಇಷ್ಟು ಬಾರಿ ಭಗವಂತನ ಹೆಸರನ್ನು ಹೇಳಿದ್ದರೆ, ಏಳು ಜನ್ಮಕ್ಕೂ ಸ್ವರ್ಗ ಸಿಗುತ್ತಿತ್ತು) ಎಂದು ಅಮಿತ್ ಶಾ ಹೇಳಿದ್ದರು.

ಇದನ್ನೂ ಓದಿ: ಅಂಬೇಡ್ಕರ್‌ಗೆ ಅವಮಾನ| ‘ಅಮಿತ್ ಶಾಗೆ ಹುಚ್ಚು ಹಿಡಿದಿದೆ, ಅವರು ರಾಜಕೀಯ ತ್ಯಜಿಸಬೇಕು’ ಎಂದ ಲಾಲು ಪ್ರಸಾದ್

ಅಂಬೇಡ್ಕರ್‌ಗೆ ಅವಮಾನ| ‘ಅಮಿತ್ ಶಾಗೆ ಹುಚ್ಚು ಹಿಡಿದಿದೆ, ಅವರು ರಾಜಕೀಯ ತ್ಯಜಿಸಬೇಕು’ ಎಂದ ಲಾಲು ಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...