Homeಕರ್ನಾಟಕಬಾಬಾ ಸಾಹೇಬರಿಗೆ ಅಗೌರವ: ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌’ ಎಂಬ ಸಾಲನ್ನೇ ಕತ್ತರಿಸಿದ ಚಕ್ರತೀರ್ಥ ಸಮಿತಿ!

ಬಾಬಾ ಸಾಹೇಬರಿಗೆ ಅಗೌರವ: ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌’ ಎಂಬ ಸಾಲನ್ನೇ ಕತ್ತರಿಸಿದ ಚಕ್ರತೀರ್ಥ ಸಮಿತಿ!

- Advertisement -
- Advertisement -

ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಮಾಡಿರುವ ಎಡವಟ್ಟುಗಳು ಒಂದೊಂದಾಗಿ ಹೊರಬೀಳತೊಡಗಿವೆ. ಅಗೆದಷ್ಟು ಬ್ರಾಹ್ಮಣೀಕರಣ, ಮೊಗೆದಷ್ಟು ಎಡವಟ್ಟುಗಳು ಬಿಚ್ಚಿಕೊಳ್ಳತೊಡಗಿವೆ. ಹಳೆಯ ಪಠ್ಯದಲ್ಲಿದ್ದ ಹಲವಾರು ಮೌಲ್ಯಯುತ ವಿಚಾರಗಳಿಗೆ ಕತ್ತರಿ ಪ್ರಯೋಗ ಮಾಡಿರುವ ಸಮಿತಿಯು, ‘ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌’ ಕುರಿತ ವಿಚಾರಗಳನ್ನೂ ತಿರುಚುವ ಕೆಲಸ ಮಾಡಿದೆ.

ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಬೌದ್ಧಧರ್ಮಕ್ಕೆ ಮರಳಿದ್ದು ಏಕೆಂಬ ವಿಷಯವನ್ನು ಹೊಸ ಪಠ್ಯದಲ್ಲಿ ಮರೆಮಾಚಿರುವುದು ಬೆಳಕಿಗೆ ಬಂದಿತ್ತು. ಇತಿಹಾಸವಷ್ಟೇ ಅಲ್ಲದೇ ರಾಜಶಾಸ್ತ್ರ ವಿಭಾಗದಲ್ಲೂ ಬಾಬಾ ಸಾಹೇಬರ ವಿಚಾರಗಳಲ್ಲಿ ಕತ್ತರಿ ಪ್ರಯೋಗ ಮಾಡಿದ್ದಾರೆ.

9ನೇ ತರಗತಿಯ ಸಮಾಜ ವಿಜ್ಞಾನ ಭಾಗ-1ರಲ್ಲಿನ ‘ರಾಜ್ಯಶಾಸ್ತ್ರ’ ವಿಭಾಗದಲ್ಲಿನ ‘ನಮ್ಮ ಸಂವಿಧಾನ’ ಪಾಠದಲ್ಲಿ ಬದಲಾವಣೆ ಮಾಡಿರುವುದು ಬೆಳಕಿಗೆ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಕರಡು ರಚನಾ ಸಮಿತಿ’ ಉಪಶೀರ್ಷಿಕೆಯಲ್ಲಿ ನೀಡಲಾಗಿದ್ದ ಹಳೆಯ ಪಠ್ಯದಲ್ಲಿ ಹೀಗಿತ್ತು: “ಸಂವಿಧಾನ ರಚನಾ ಸಭೆಯು ರಾಷ್ಟ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ವಿವರವಾಗಿ ಪರಿಶೀಲಿಸಲು 22 ಸಮಿತಿಗಳನ್ನು, 5 ಉಪಸಮಿತಿಗಳನ್ನು ಹೊಂದಿತ್ತು. ಇವುಗಳಲ್ಲಿ ಪ್ರಮುಖವಾದುದು ಕರಡು ಸಮಿತಿ. ಡಾ.ಬಿ.ಆರ್‌.ಅಂಬೇಡ್ಕರ್‌ರವರು ಇದರ ಅಧ್ಯಕ್ಷರಾಗಿದ್ದರು. ಇವರು ಸಂವಿಧಾನ ರಚನೆಗೆ ನೀಡಿದ ಕೊಡುಗೆಯನ್ನು ಆಧರಿಸಿ ಅವರನ್ನು ‘ಸಂವಿಧಾನದ ಶಿಲ್ಪಿ’ ಎಂದು ಕರೆಯಲಾಗಿದೆ. ಈ ಕರಡು ಸಮಿತಿಯಲ್ಲಿ ಎನ್.ಗೋಪಾಲಸ್ವಾಮಿ ಅಯ್ಯಂಗಾರ್‌, ಅಲ್ಲಾಡಿ ಕೃಷ್ಣಸ್ವಾಮಿ ಅಯ್ಯರ್‌, ಕೆ.ಎಂ.ಮುನ್ಷಿ, ಟಿ.ಟಿ.ಕೃಷ್ಣಮಾಚಾರಿ, ಮಹಮ್ಮದ್‌ ಸಾದುಲ್ಲಾ, ಸಿ.ಮಾಧವರಾವ್‌ ಅವರು ಸದಸ್ಯರಾಗಿದ್ದರು.”

ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ರೂಪಿಸಲಾಗಿದ್ದ ಪಠ್ಯದಲ್ಲಿನ ಸಾಲುಗಳು

ಇದನ್ನೂ ಓದಿರಿ: ಚೀನಾವೂ ಭಾರತಕ್ಕೆ ಸೇರಿತ್ತು; ಪಠ್ಯಕ್ಕೆ ನುಸುಳಿದೆ ‘ಆರ್‌ಎಸ್‌ಎಸ್‌ ಅಖಂಡ ಭಾರತ!’

ಹೊಸಪಠ್ಯದಲ್ಲಿ ‘ಸಂವಿಧಾನದ ಶಿಲ್ಪಿ’ ಬಿರುದು ತೆರವು

ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಸಮಿತಿಯು ‘ಕರಡು ಸಮಿತಿ’ ಉಪಶೀರ್ಷಿಕೆಯಲ್ಲಿದ ವಿಷಯಗಳನ್ನು ಹೀಗೆ ಪರಿಷ್ಕರಣೆ ಮಾಡಿದೆ: “ಸಂವಿಧಾನ ರಚನಾ ಸಭೆಯು ರಾಷ್ಟ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ವಿವರವಾಗಿ ಪರಿಶೀಲಿಸಲು ಅನೇಕ ಸಮಿತಿಗಳನ್ನು ರಚಿಸಿತು. ಅವುಗಳಲ್ಲಿ ಮುಖ್ಯವಾದುದು ಕರಡು ಸಮಿತಿ. ಡಾ.ಬಿ.ಆರ್‌.ಅಂಬೇಡ್ಕರ್‌ ಅದರ ಅಧ್ಯಕ್ಷರಾಗಿದ್ದರು. ಈ ಸಮಿತಿಯಲ್ಲಿ ಎನ್‌.ಗೋಪಾಲಸ್ವಾಮಿ ಅಯ್ಯಂಗಾರ್‌, ಅಲ್ಲಾದಿ ಕೃಷ್ಣಸ್ವಾಮಿ ಅಯ್ಯರ್‌, ಕೆ.ಎಂ.ಮುನ್ಷಿ, ಟಿ.ಟಿ.ಕೃಷ್ಣಮಾಚಾರಿ ಮುಂತಾದ ಮುಸ್ಸದ್ಧಿಗಳು ಸದಸ್ಯರುಗಳಾಗಿದ್ದರು”- ಇಷ್ಟು ಮಾತ್ರ ಉಳಿಸಿಕೊಂಡು “ಇವರು (ಅಂಬೇಡ್ಕರ್‌) ಸಂವಿಧಾನ ರಚನೆಗೆ ನೀಡಿದ ಕೊಡುಗೆಯನ್ನು ಆಧರಿಸಿ ಅವರನ್ನು ‘ಸಂವಿಧಾನದ ಶಿಲ್ಪಿ’ ಎಂದು ಕರೆಯಲಾಗಿದೆ” ಎಂಬ ಸಾಲನ್ನು ಕಿತ್ತುಹಾಕಲಾಗಿದೆ.

ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯಪರಿಶೀಲನಾ ಸಮಿತಿ ಮಾಡಿರುವ ಎಡವಟ್ಟು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಗೌರವ ತೋರಿಸಿರುವ ವಕ್ರತೀರ್ತನ ವಿರುದ್ಧ ವಿರುದ್ಧ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಬೇಕು.

  2. ಸಂವಿಧಾನ ಶಿಲ್ಪಿ ಗೆ ಈ ರೀತಿಯ ಅಪಮಾನ ಅಕ್ಷಮ್ಯ ಅಪರಾಧ. ಚಕ್ರ ತೀರ್ಥ ರವರಿಗೆ ಶಿಕ್ಷೆಯಾಗಲೇಬೇಕು

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...