Homeಕರ್ನಾಟಕಬಾಬಾ ಸಾಹೇಬರಿಗೆ ಅಗೌರವ: ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌’ ಎಂಬ ಸಾಲನ್ನೇ ಕತ್ತರಿಸಿದ ಚಕ್ರತೀರ್ಥ ಸಮಿತಿ!

ಬಾಬಾ ಸಾಹೇಬರಿಗೆ ಅಗೌರವ: ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌’ ಎಂಬ ಸಾಲನ್ನೇ ಕತ್ತರಿಸಿದ ಚಕ್ರತೀರ್ಥ ಸಮಿತಿ!

- Advertisement -
- Advertisement -

ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಮಾಡಿರುವ ಎಡವಟ್ಟುಗಳು ಒಂದೊಂದಾಗಿ ಹೊರಬೀಳತೊಡಗಿವೆ. ಅಗೆದಷ್ಟು ಬ್ರಾಹ್ಮಣೀಕರಣ, ಮೊಗೆದಷ್ಟು ಎಡವಟ್ಟುಗಳು ಬಿಚ್ಚಿಕೊಳ್ಳತೊಡಗಿವೆ. ಹಳೆಯ ಪಠ್ಯದಲ್ಲಿದ್ದ ಹಲವಾರು ಮೌಲ್ಯಯುತ ವಿಚಾರಗಳಿಗೆ ಕತ್ತರಿ ಪ್ರಯೋಗ ಮಾಡಿರುವ ಸಮಿತಿಯು, ‘ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌’ ಕುರಿತ ವಿಚಾರಗಳನ್ನೂ ತಿರುಚುವ ಕೆಲಸ ಮಾಡಿದೆ.

ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಬೌದ್ಧಧರ್ಮಕ್ಕೆ ಮರಳಿದ್ದು ಏಕೆಂಬ ವಿಷಯವನ್ನು ಹೊಸ ಪಠ್ಯದಲ್ಲಿ ಮರೆಮಾಚಿರುವುದು ಬೆಳಕಿಗೆ ಬಂದಿತ್ತು. ಇತಿಹಾಸವಷ್ಟೇ ಅಲ್ಲದೇ ರಾಜಶಾಸ್ತ್ರ ವಿಭಾಗದಲ್ಲೂ ಬಾಬಾ ಸಾಹೇಬರ ವಿಚಾರಗಳಲ್ಲಿ ಕತ್ತರಿ ಪ್ರಯೋಗ ಮಾಡಿದ್ದಾರೆ.

9ನೇ ತರಗತಿಯ ಸಮಾಜ ವಿಜ್ಞಾನ ಭಾಗ-1ರಲ್ಲಿನ ‘ರಾಜ್ಯಶಾಸ್ತ್ರ’ ವಿಭಾಗದಲ್ಲಿನ ‘ನಮ್ಮ ಸಂವಿಧಾನ’ ಪಾಠದಲ್ಲಿ ಬದಲಾವಣೆ ಮಾಡಿರುವುದು ಬೆಳಕಿಗೆ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಕರಡು ರಚನಾ ಸಮಿತಿ’ ಉಪಶೀರ್ಷಿಕೆಯಲ್ಲಿ ನೀಡಲಾಗಿದ್ದ ಹಳೆಯ ಪಠ್ಯದಲ್ಲಿ ಹೀಗಿತ್ತು: “ಸಂವಿಧಾನ ರಚನಾ ಸಭೆಯು ರಾಷ್ಟ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ವಿವರವಾಗಿ ಪರಿಶೀಲಿಸಲು 22 ಸಮಿತಿಗಳನ್ನು, 5 ಉಪಸಮಿತಿಗಳನ್ನು ಹೊಂದಿತ್ತು. ಇವುಗಳಲ್ಲಿ ಪ್ರಮುಖವಾದುದು ಕರಡು ಸಮಿತಿ. ಡಾ.ಬಿ.ಆರ್‌.ಅಂಬೇಡ್ಕರ್‌ರವರು ಇದರ ಅಧ್ಯಕ್ಷರಾಗಿದ್ದರು. ಇವರು ಸಂವಿಧಾನ ರಚನೆಗೆ ನೀಡಿದ ಕೊಡುಗೆಯನ್ನು ಆಧರಿಸಿ ಅವರನ್ನು ‘ಸಂವಿಧಾನದ ಶಿಲ್ಪಿ’ ಎಂದು ಕರೆಯಲಾಗಿದೆ. ಈ ಕರಡು ಸಮಿತಿಯಲ್ಲಿ ಎನ್.ಗೋಪಾಲಸ್ವಾಮಿ ಅಯ್ಯಂಗಾರ್‌, ಅಲ್ಲಾಡಿ ಕೃಷ್ಣಸ್ವಾಮಿ ಅಯ್ಯರ್‌, ಕೆ.ಎಂ.ಮುನ್ಷಿ, ಟಿ.ಟಿ.ಕೃಷ್ಣಮಾಚಾರಿ, ಮಹಮ್ಮದ್‌ ಸಾದುಲ್ಲಾ, ಸಿ.ಮಾಧವರಾವ್‌ ಅವರು ಸದಸ್ಯರಾಗಿದ್ದರು.”

ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ರೂಪಿಸಲಾಗಿದ್ದ ಪಠ್ಯದಲ್ಲಿನ ಸಾಲುಗಳು

ಇದನ್ನೂ ಓದಿರಿ: ಚೀನಾವೂ ಭಾರತಕ್ಕೆ ಸೇರಿತ್ತು; ಪಠ್ಯಕ್ಕೆ ನುಸುಳಿದೆ ‘ಆರ್‌ಎಸ್‌ಎಸ್‌ ಅಖಂಡ ಭಾರತ!’

ಹೊಸಪಠ್ಯದಲ್ಲಿ ‘ಸಂವಿಧಾನದ ಶಿಲ್ಪಿ’ ಬಿರುದು ತೆರವು

ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಸಮಿತಿಯು ‘ಕರಡು ಸಮಿತಿ’ ಉಪಶೀರ್ಷಿಕೆಯಲ್ಲಿದ ವಿಷಯಗಳನ್ನು ಹೀಗೆ ಪರಿಷ್ಕರಣೆ ಮಾಡಿದೆ: “ಸಂವಿಧಾನ ರಚನಾ ಸಭೆಯು ರಾಷ್ಟ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ವಿವರವಾಗಿ ಪರಿಶೀಲಿಸಲು ಅನೇಕ ಸಮಿತಿಗಳನ್ನು ರಚಿಸಿತು. ಅವುಗಳಲ್ಲಿ ಮುಖ್ಯವಾದುದು ಕರಡು ಸಮಿತಿ. ಡಾ.ಬಿ.ಆರ್‌.ಅಂಬೇಡ್ಕರ್‌ ಅದರ ಅಧ್ಯಕ್ಷರಾಗಿದ್ದರು. ಈ ಸಮಿತಿಯಲ್ಲಿ ಎನ್‌.ಗೋಪಾಲಸ್ವಾಮಿ ಅಯ್ಯಂಗಾರ್‌, ಅಲ್ಲಾದಿ ಕೃಷ್ಣಸ್ವಾಮಿ ಅಯ್ಯರ್‌, ಕೆ.ಎಂ.ಮುನ್ಷಿ, ಟಿ.ಟಿ.ಕೃಷ್ಣಮಾಚಾರಿ ಮುಂತಾದ ಮುಸ್ಸದ್ಧಿಗಳು ಸದಸ್ಯರುಗಳಾಗಿದ್ದರು”- ಇಷ್ಟು ಮಾತ್ರ ಉಳಿಸಿಕೊಂಡು “ಇವರು (ಅಂಬೇಡ್ಕರ್‌) ಸಂವಿಧಾನ ರಚನೆಗೆ ನೀಡಿದ ಕೊಡುಗೆಯನ್ನು ಆಧರಿಸಿ ಅವರನ್ನು ‘ಸಂವಿಧಾನದ ಶಿಲ್ಪಿ’ ಎಂದು ಕರೆಯಲಾಗಿದೆ” ಎಂಬ ಸಾಲನ್ನು ಕಿತ್ತುಹಾಕಲಾಗಿದೆ.

ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯಪರಿಶೀಲನಾ ಸಮಿತಿ ಮಾಡಿರುವ ಎಡವಟ್ಟು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಗೌರವ ತೋರಿಸಿರುವ ವಕ್ರತೀರ್ತನ ವಿರುದ್ಧ ವಿರುದ್ಧ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಬೇಕು.

  2. ಸಂವಿಧಾನ ಶಿಲ್ಪಿ ಗೆ ಈ ರೀತಿಯ ಅಪಮಾನ ಅಕ್ಷಮ್ಯ ಅಪರಾಧ. ಚಕ್ರ ತೀರ್ಥ ರವರಿಗೆ ಶಿಕ್ಷೆಯಾಗಲೇಬೇಕು

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...