Homeಕರ್ನಾಟಕಬಾಬಾ ಸಾಹೇಬರಿಗೆ ಅಗೌರವ: ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌’ ಎಂಬ ಸಾಲನ್ನೇ ಕತ್ತರಿಸಿದ ಚಕ್ರತೀರ್ಥ ಸಮಿತಿ!

ಬಾಬಾ ಸಾಹೇಬರಿಗೆ ಅಗೌರವ: ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌’ ಎಂಬ ಸಾಲನ್ನೇ ಕತ್ತರಿಸಿದ ಚಕ್ರತೀರ್ಥ ಸಮಿತಿ!

- Advertisement -
- Advertisement -

ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಮಾಡಿರುವ ಎಡವಟ್ಟುಗಳು ಒಂದೊಂದಾಗಿ ಹೊರಬೀಳತೊಡಗಿವೆ. ಅಗೆದಷ್ಟು ಬ್ರಾಹ್ಮಣೀಕರಣ, ಮೊಗೆದಷ್ಟು ಎಡವಟ್ಟುಗಳು ಬಿಚ್ಚಿಕೊಳ್ಳತೊಡಗಿವೆ. ಹಳೆಯ ಪಠ್ಯದಲ್ಲಿದ್ದ ಹಲವಾರು ಮೌಲ್ಯಯುತ ವಿಚಾರಗಳಿಗೆ ಕತ್ತರಿ ಪ್ರಯೋಗ ಮಾಡಿರುವ ಸಮಿತಿಯು, ‘ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌’ ಕುರಿತ ವಿಚಾರಗಳನ್ನೂ ತಿರುಚುವ ಕೆಲಸ ಮಾಡಿದೆ.

ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಬೌದ್ಧಧರ್ಮಕ್ಕೆ ಮರಳಿದ್ದು ಏಕೆಂಬ ವಿಷಯವನ್ನು ಹೊಸ ಪಠ್ಯದಲ್ಲಿ ಮರೆಮಾಚಿರುವುದು ಬೆಳಕಿಗೆ ಬಂದಿತ್ತು. ಇತಿಹಾಸವಷ್ಟೇ ಅಲ್ಲದೇ ರಾಜಶಾಸ್ತ್ರ ವಿಭಾಗದಲ್ಲೂ ಬಾಬಾ ಸಾಹೇಬರ ವಿಚಾರಗಳಲ್ಲಿ ಕತ್ತರಿ ಪ್ರಯೋಗ ಮಾಡಿದ್ದಾರೆ.

9ನೇ ತರಗತಿಯ ಸಮಾಜ ವಿಜ್ಞಾನ ಭಾಗ-1ರಲ್ಲಿನ ‘ರಾಜ್ಯಶಾಸ್ತ್ರ’ ವಿಭಾಗದಲ್ಲಿನ ‘ನಮ್ಮ ಸಂವಿಧಾನ’ ಪಾಠದಲ್ಲಿ ಬದಲಾವಣೆ ಮಾಡಿರುವುದು ಬೆಳಕಿಗೆ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಕರಡು ರಚನಾ ಸಮಿತಿ’ ಉಪಶೀರ್ಷಿಕೆಯಲ್ಲಿ ನೀಡಲಾಗಿದ್ದ ಹಳೆಯ ಪಠ್ಯದಲ್ಲಿ ಹೀಗಿತ್ತು: “ಸಂವಿಧಾನ ರಚನಾ ಸಭೆಯು ರಾಷ್ಟ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ವಿವರವಾಗಿ ಪರಿಶೀಲಿಸಲು 22 ಸಮಿತಿಗಳನ್ನು, 5 ಉಪಸಮಿತಿಗಳನ್ನು ಹೊಂದಿತ್ತು. ಇವುಗಳಲ್ಲಿ ಪ್ರಮುಖವಾದುದು ಕರಡು ಸಮಿತಿ. ಡಾ.ಬಿ.ಆರ್‌.ಅಂಬೇಡ್ಕರ್‌ರವರು ಇದರ ಅಧ್ಯಕ್ಷರಾಗಿದ್ದರು. ಇವರು ಸಂವಿಧಾನ ರಚನೆಗೆ ನೀಡಿದ ಕೊಡುಗೆಯನ್ನು ಆಧರಿಸಿ ಅವರನ್ನು ‘ಸಂವಿಧಾನದ ಶಿಲ್ಪಿ’ ಎಂದು ಕರೆಯಲಾಗಿದೆ. ಈ ಕರಡು ಸಮಿತಿಯಲ್ಲಿ ಎನ್.ಗೋಪಾಲಸ್ವಾಮಿ ಅಯ್ಯಂಗಾರ್‌, ಅಲ್ಲಾಡಿ ಕೃಷ್ಣಸ್ವಾಮಿ ಅಯ್ಯರ್‌, ಕೆ.ಎಂ.ಮುನ್ಷಿ, ಟಿ.ಟಿ.ಕೃಷ್ಣಮಾಚಾರಿ, ಮಹಮ್ಮದ್‌ ಸಾದುಲ್ಲಾ, ಸಿ.ಮಾಧವರಾವ್‌ ಅವರು ಸದಸ್ಯರಾಗಿದ್ದರು.”

ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ರೂಪಿಸಲಾಗಿದ್ದ ಪಠ್ಯದಲ್ಲಿನ ಸಾಲುಗಳು

ಇದನ್ನೂ ಓದಿರಿ: ಚೀನಾವೂ ಭಾರತಕ್ಕೆ ಸೇರಿತ್ತು; ಪಠ್ಯಕ್ಕೆ ನುಸುಳಿದೆ ‘ಆರ್‌ಎಸ್‌ಎಸ್‌ ಅಖಂಡ ಭಾರತ!’

ಹೊಸಪಠ್ಯದಲ್ಲಿ ‘ಸಂವಿಧಾನದ ಶಿಲ್ಪಿ’ ಬಿರುದು ತೆರವು

ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಸಮಿತಿಯು ‘ಕರಡು ಸಮಿತಿ’ ಉಪಶೀರ್ಷಿಕೆಯಲ್ಲಿದ ವಿಷಯಗಳನ್ನು ಹೀಗೆ ಪರಿಷ್ಕರಣೆ ಮಾಡಿದೆ: “ಸಂವಿಧಾನ ರಚನಾ ಸಭೆಯು ರಾಷ್ಟ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ವಿವರವಾಗಿ ಪರಿಶೀಲಿಸಲು ಅನೇಕ ಸಮಿತಿಗಳನ್ನು ರಚಿಸಿತು. ಅವುಗಳಲ್ಲಿ ಮುಖ್ಯವಾದುದು ಕರಡು ಸಮಿತಿ. ಡಾ.ಬಿ.ಆರ್‌.ಅಂಬೇಡ್ಕರ್‌ ಅದರ ಅಧ್ಯಕ್ಷರಾಗಿದ್ದರು. ಈ ಸಮಿತಿಯಲ್ಲಿ ಎನ್‌.ಗೋಪಾಲಸ್ವಾಮಿ ಅಯ್ಯಂಗಾರ್‌, ಅಲ್ಲಾದಿ ಕೃಷ್ಣಸ್ವಾಮಿ ಅಯ್ಯರ್‌, ಕೆ.ಎಂ.ಮುನ್ಷಿ, ಟಿ.ಟಿ.ಕೃಷ್ಣಮಾಚಾರಿ ಮುಂತಾದ ಮುಸ್ಸದ್ಧಿಗಳು ಸದಸ್ಯರುಗಳಾಗಿದ್ದರು”- ಇಷ್ಟು ಮಾತ್ರ ಉಳಿಸಿಕೊಂಡು “ಇವರು (ಅಂಬೇಡ್ಕರ್‌) ಸಂವಿಧಾನ ರಚನೆಗೆ ನೀಡಿದ ಕೊಡುಗೆಯನ್ನು ಆಧರಿಸಿ ಅವರನ್ನು ‘ಸಂವಿಧಾನದ ಶಿಲ್ಪಿ’ ಎಂದು ಕರೆಯಲಾಗಿದೆ” ಎಂಬ ಸಾಲನ್ನು ಕಿತ್ತುಹಾಕಲಾಗಿದೆ.

ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯಪರಿಶೀಲನಾ ಸಮಿತಿ ಮಾಡಿರುವ ಎಡವಟ್ಟು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಗೌರವ ತೋರಿಸಿರುವ ವಕ್ರತೀರ್ತನ ವಿರುದ್ಧ ವಿರುದ್ಧ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಬೇಕು.

  2. ಸಂವಿಧಾನ ಶಿಲ್ಪಿ ಗೆ ಈ ರೀತಿಯ ಅಪಮಾನ ಅಕ್ಷಮ್ಯ ಅಪರಾಧ. ಚಕ್ರ ತೀರ್ಥ ರವರಿಗೆ ಶಿಕ್ಷೆಯಾಗಲೇಬೇಕು

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...