Homeಮುಖಪುಟಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿಗೆ ಅಗೌರವ; ಐಪಿಎಸ್ ಅಧಿಕಾರಿ ಪಾಂಡಿಯನ್ ವಿರುದ್ಧ ದಲಿತರ ಪ್ರತಿಭಟನೆ

ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿಗೆ ಅಗೌರವ; ಐಪಿಎಸ್ ಅಧಿಕಾರಿ ಪಾಂಡಿಯನ್ ವಿರುದ್ಧ ದಲಿತರ ಪ್ರತಿಭಟನೆ

- Advertisement -
- Advertisement -

ವಡ್ಗಾಮ್ ಶಾಸಕ ಜಿಗ್ನೇಶ್ ಮೇವಾನಿ ಅವರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಸ್‌ಸಿ/ಎಸ್‌ಟಿ ಸೆಲ್) ರಾಜ್‌ಕುಮಾರ್ ಪಾಂಡಿಯನ್ ಅವರನ್ನು 24 ಗಂಟೆಗಳ ಒಳಗೆ ಹುದ್ದೆಯಿಂದ ವಜಾಗೊಳಿಸಲು ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್ (ಆರ್‌ಡಿಎಎಮ್) ಮತ್ತು ಇತರ ಸಂಬಂಧಿತ ಗುಂಪುಗಳು ಗುರುವಾರ ಕೋರಿವೆ.

ಐಪಿಎಸ್ ಅಧಿಕಾರಿ ರಾಜ್‌ಕುಮಾರ್ ಪಾಂಡಿಯನ್ ಅವರೊಂದಿಗಿನ ಜಗಳದಲ್ಲಿ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಅವರಿಗಾದ ‘ಅಗೌರವ’ದಿಂದ ಕುಪಿತಗೊಂಡಿರುವ ಗುಜರಾತ್‌ನ ದಲಿತ ಸಮುದಾಯವು ಅಕ್ಟೋಬರ್ 23 ರಂದು ಪೊಲೀಸ್ ಪ್ರಧಾನ ಕಚೇರಿಯ ಹೊರಗೆ ಪ್ರತಿಭಟನೆಯನ್ನು ಆಯೋಜಿಸುತ್ತಿದೆ.

ಮಂಗಳವಾರ ಪೊಲೀಸ್ ಕೇಂದ್ರ ಕಚೇರಿಯಲ್ಲಿ ದಲಿತರ ಸಮಸ್ಯೆಗಳನ್ನು ಮಂಡಿಸಲು ಹೋದ ಮೇವಾನಿ ಅವರನ್ನು ಐಪಿಎಸ್ ಪಾಂಡಿಯನ್ ಅವರು ಮೊಬೈಲ್ ಫೋನ್ ಹೊರಗೆ ಬಿಡುವಂತೆ ಕೇಳಿದಾಗ ಮೇವಾನಿ ಮತ್ತು ಐಪಿಎಸ್ ಪಾಂಡಿಯನ್ ನಡುವೆ ತೀವ್ರ ವಾಗ್ವಾದ ನಡೆಯಿತು.

ಅಕ್ಟೋಬರ್ 15 ರಂದು, ಕಛ್ ಜಿಲ್ಲೆಯಲ್ಲಿ ಕೃಷಿ ಭೂ ಸೀಲಿಂಗ್ ಕಾಯ್ದೆಯಡಿ ದಲಿತರಿಗೆ ಮಂಜೂರು ಮಾಡಲಾದ ಭೂಮಿ ಒತ್ತುವರಿ ಸೇರಿದಂತೆ ಗುಜರಾತ್‌ನಲ್ಲಿ ದಲಿತರ ಸಮಸ್ಯೆಗಳನ್ನು ಚರ್ಚಿಸಲು ಮೇವಾನಿ ಪಾಂಡಿಯನ್ ಅವರನ್ನು ಭೇಟಿಯಾಗಿದ್ದರು.

ಐಪಿಎಸ್ ಪಾಂಡಿಯನ್ ಸೇರಿದಂತೆ ಅಧಿಕಾರಿಗಳು ತಮ್ಮ ಸಮಸ್ಯೆಗಳಿಗೆ ಕಿವಿಗೊಡುವುದಿಲ್ಲ ಎಂದು ದಲಿತರು ಆರೋಪಿಸಿದರು. “ಯಾರೂ ನಮ್ಮ ಮಾತನ್ನು ಕೇಳಲು ಬಯಸುವುದಿಲ್ಲ” ಎಂದು ಹೇಳುವ ಮೂಲಕ ಪೊಲೀಸ್ ಅಧಿಕಾರಿಗಳ ನಡವಳಿಕೆ ಬದಲಾಗಿದೆ ಎಂದು ಅವರು ಹೇಳಿದ್ದಾರೆ.

ಅಹಮದಾಬಾದ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆರ್‌ಡಿಎಎಮ್‌ನ ಗುಜರಾತ್ ರಾಜ್ಯ ಸಂಚಾಲಕ ಸುಬೋಧ್ ಕುಮುದ್, ದಲಿತ ಶಾಸಕರಾಗಿದ್ದ ಮೇವಾನಿ ಅವರನ್ನು ಭೇಟಿ ಮಾಡಲು ಹೋದಾಗ ಪಾಂಡಿಯನ್ ಅವರ ದುರಹಂಕಾರದ ವರ್ತನೆ ಸಹಿಸಲಾಗದು ಎಂದು ಹೇಳಿದರು.

“ಪಾಂಡಿಯನ್ ಅವರಿಗೆ ಚೇಂಬರ್ ಹೊರಗೆ ಮೊಬೈಲ್ ಫೋನ್ ಇಡಬೇಕಿತ್ತು. ರೆಕಾರ್ಡ್ ಆಗುವಂತಹದದ್ದು ಅವರು ಚೇಂಬರ್‌ನಲ್ಲಿ ಏನು ಮಾಡುತ್ತಿದ್ದಾರೆ”. ಗುಜರಾತ್‌ನಲ್ಲಿ ದಲಿತರ ಸಮಸ್ಯೆಗಳನ್ನು ಆಲಿಸುವ ಜವಾಬ್ದಾರಿಯನ್ನು ಸರ್ಕಾರ ಪಾಂಡ್ಯನ್‌ಗೆ ನೀಡಿದೆ” ಎಂದು ಅವರು ಹೇಳಿದರು.

“ಚುನಾಯಿತ ಪ್ರತಿನಿಧಿಯೊಂದಿಗೆ ಅವರು ಈ ರೀತಿ ವರ್ತಿಸುತ್ತಿದ್ದರೆ, ಸಾಮಾನ್ಯ ದಲಿತರಿಗೆ ಅವರು ಏನು ಮಾಡುತ್ತಾರೆಂದು ಊಹಿಸಿ. ಮುಂದಿನ 24 ಗಂಟೆಗಳಲ್ಲಿ ಸರ್ಕಾರ ಅವರನ್ನು ಎಡಿಜಿಪಿ (ಎಸ್‌ಸಿ/ಎಸ್‌ಟಿ ಸೆಲ್) ಉಸ್ತುವಾರಿಯಿಂದ ತೆಗೆದುಹಾಕದಿದ್ದರೆ ಹೋರಾಟ ಅನಿವಾರ್ಯ” ಎಂದು ಕುಮುದ್ ಹೇಳಿದರು.

“ಮುಂಬರುವ ವಾವ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ್ತು ಮಹಾರಾಷ್ಟ್ರದ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರಚಾರ ಮಾಡುವ ಮೂಲಕ ದಲಿತರು ತಮ್ಮ ಶಕ್ತಿಯನ್ನು ತೋರಿಸಲಿದ್ದಾರೆ” ಎಂದು ಎಚ್ಚರಿಕೆ ನೀಡಿದರು.

ದಲಿತರ ನಿಯೋಗವು ಅಕ್ಟೋಬರ್ 23 ರಂದು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಪೊಲೀಸ್ ಮಹಾನಿರ್ದೇಶಕರನ್ನು ಭೇಟಿ ಮಾಡಲಿದೆ ಎಂದು ಕುಮುದ್ ಹೇಳಿದರು.

ಪೊಲೀಸ್ ಪ್ರಧಾನ ಕಛೇರಿಯಲ್ಲಿ ಮೇವಾನಿ ಮತ್ತು ಪಾಂಡಿಯನ್ ನಡುವೆ ನಡೆದಿದ್ದೇನು?

ದಲಿತ ಸಮುದಾಯದ ಸಮಸ್ಯೆಗಳನ್ನು ಪರಿಹರಿಸಲು, ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಮತ್ತು ಕಾಂಗ್ರೆಸ್‌ನ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಹಿತೇಶ್ ಪಿತಾಡಿಯಾ ಮಂಗಳವಾರ ಹೆಚ್ಚುವರಿ ಮಹಾನಿರ್ದೇಶಕ (ಎಡಿಜಿ) ರಾಜ್‌ಕುಮಾರ್ ಪಾಂಡಿಯನ್ ಅವರನ್ನು ಭೇಟಿ ಮಾಡಲು ತೆರಳಿದ್ದರು. ಎಡಿಜಿ ಪಾಂಡಿಯನ್ ಅವರು ತಮ್ಮ ಫೋನ್‌ಗಳನ್ನು ಕಚೇರಿಯ ಹೊರಗೆ ಬಿಡಲು ಶಾಸಕ ಮತ್ತು ಪಿತಾಡಿಯಾ ಅವರನ್ನು ಕೇಳಿದಾಗ ಘರ್ಷಣೆ ಪ್ರಾರಂಭವಾಯಿತು.

ಇದಕ್ಕೆ ಪ್ರತಿಕ್ರಿಯಿಸಿದ ಮೇವಾನಿ, ಹೆಚ್ಚಿನ ಸರ್ಕಾರಿ ಕಚೇರಿಗಳಲ್ಲಿ ಫೋನ್‌ಗಳನ್ನು ಅನುಮತಿಸಲಾಗಿರುವುದರಿಂದ ಸರ್ಕಾರವು ಫೋನ್‌ಗಳಿಗೆ ಸಂಬಂಧಿಸಿದಂತೆ ಯಾವುದೇ ಸೂಚನೆ ಅಥವಾ ಸುತ್ತೋಲೆಯನ್ನು ಹೊರಡಿಸಿದೆಯೇ ಎಂದು ತಿಳಿಯಲು ಪ್ರಯತ್ನಿಸಿದರು. ಇದರಿಂದ ಶಾಸಕ ಹಾಗೂ ಎಡಿಜಿಪಿ ನಡುವೆ ತೀವ್ರ ವಾಗ್ವಾದ ನಡೆಯಿತು.

ಶಾಸಕರಾಗಿ ಮಾಜಿ ಐಪಿಎಸ್ ಅಧಿಕಾರಿಯ ಘನತೆಗೆ ಭಂಗ ತಂದ ಆರೋಪದ ಮೇಲೆ ಮೇವಾನಿ ಅವರು ಗುಜರಾತ್ ಅಸೆಂಬ್ಲಿ ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ.  ಎರಡು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.

ಘಟನೆಯ ನಂತರ ಮೇವಾನಿ ಲಿಖಿತ ಅರ್ಜಿಯನ್ನು ಸಲ್ಲಿಸಿದರು ಮತ್ತು ಐಪಿಎಸ್ ವಿರುದ್ಧ ವಿಸ್ತೃತ ತನಿಖೆಗೆ ಕರೆ ಒತ್ತಾಯಿಸಿದರು.

ಇದನ್ನೂ ಓದಿ; ಸಲ್ಮಾನ್ ಖಾನ್‌ಗೆ ಮತ್ತೆ ಬೆದರಿಕೆ : ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ ಜೊತೆ ಸಂಧಾನಕ್ಕೆ ₹ 5 ಕೋಟಿ ಬೇಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...