Homeಚಳವಳಿಕೋವಿಡ್‌ ಬಿಕ್ಕಟ್ಟಿನಿಂದ ಮಕ್ಕಳ ಕಲಿಕೆಗೆ ಅಡ್ಡಿ: ಪರಿಹಾರದ ಮಾರ್ಗಗಳು

ಕೋವಿಡ್‌ ಬಿಕ್ಕಟ್ಟಿನಿಂದ ಮಕ್ಕಳ ಕಲಿಕೆಗೆ ಅಡ್ಡಿ: ಪರಿಹಾರದ ಮಾರ್ಗಗಳು

ಲಾಕ್‌ಡೌನ್‌ನಿಂದ ಹಲವು ಮಕ್ಕಳು ಶಾಲೆ ಬಿಟ್ಟು ಕೂಲಿ ಕೆಲಸಕ್ಕೆ ಸೇರಿದ್ದಾರೆ, ಬಾಲ್ಯ ವಿವಾಹಗಳು ಹೆಚ್ಚಾಗಿವೆ, ಮಕ್ಕಳಲ್ಲಿ ಅಪೌಷ್ಟಿಕತೆ  ಹೆಚ್ಚಾಗುವ ಭೀತಿ ಎದುರಾಗಿದೆ.

- Advertisement -
- Advertisement -

ಕೋವಿಡ್ ಸಾಂಕ್ರಾಮಿಕ ರೋಗ ಎಂಥವರನ್ನೂ ತೀರಾ ಸಂಕಷ್ಟಕ್ಕೆ ದೂಡಿದೆ. ಕೋವಿಡ್ ಮೊದಲ ಅಲೆಯ ಸಂದಿಗ್ಧ ಪರಿಸ್ಥಿತಿಯ ಗಾಯ ಮಾಸುವ ಮುನ್ನವೇ ಕೋವಿಡ್ ಎರಡನೇ ಅಲೆಯ ತೀವ್ರತೆ ಜನರಿಗೆ ಮತ್ತಷ್ಟು ಕುಗ್ಗಿಸಿದೆ. ಕೋವಿಡ್ ಮೊದಲ ಅಲೆಯಲ್ಲಿ ಸಾವಿನ ಪ್ರಮಾಣ ಕಡಿಮೆ ಇತ್ತು, ಆದರೆ ಎರಡನೇ ಅಲೆಯ ಅಬ್ಬರದಲ್ಲಿ ಕೋವಿಡ್ ಸೋಂಕಿತರ ಡೆತ್ ರೇಟ್ ಗಣನೀಯವಾಗಿ ಏರಿಕೆಯಾಗಿತ್ತು, ಅಷ್ಟೇ ಆತಂಕ ಸೃಷ್ಟಿಸಿತ್ತು. ಈ ಕಾರಣದಿಂದ ಮತ್ತೊಮ್ಮೆ ಗೃಹಬಂಧನಕ್ಕೆ ಒಳಗಾಗುವ ಅತಿ ಕೆಟ್ಟ ಕಾಲ ಬಂದೊದಗಿತ್ತು.

ಕೋವಿಡ್ 2ನೇ ಅಲೆಯಿಂದ ಕೂಲಿ ಕಾರ್ಮಿಕ ವರ್ಗ ಸೇರಿದಂತೆ ಇತರೆ ಅಸಂಘಟಿತ ಸಮುದಾಯದವರು ಅನಿವಾರ್ಯವಾಗಿ ಕೆಲಸ ಕಳೆದುಕೊಳ್ಳಬೇಕಾಯ್ತು, ಶಾಲೆಗಳಿಗೆ ಬೀಗ ಜಡೆದು ಮಕ್ಕಳಿಗೆ ಮನೆಯಲ್ಲಿ ಕೂಡಿಸಿ ಕಲಿಕೆಯಿಂದ ಒಂದಿಷ್ಟು ಅಂತರ ಕಾಪಾಡುವಂತೆ ಆರ್ಡರ್ ಮಾಡಿದ್ದೇವೆ. ಇದು ಅನಿವಾರ್ಯವೂ ಆಗಿತ್ತು. ಕೋವಿಡ್ ಲಾಕ್ ಡೌನ್ ದಿನಗಳಲ್ಲಿ ‘ಮನೆಯೇ ಪಾಠಶಾಲೆ’ ಯಾಗಿ ಪರಿವರ್ತಿಸಿಕೊಳ್ಳುವ ಅವಕಾಶ ಏನೋ ಇತ್ತು, ಆದರೆ ಆ ಸಂಕಟದ ದಿನಗಳಲ್ಲಿ ದುಗುಡ, ಮೌನ, ಆತಂಕ, ಎಲ್ಲೆಡೆ ಸೂತಕದ ಛಾಯೆ ಮನೆಮಾಡಿತ್ತು. ‘ನಮ್ಮ ಜೀವ ಉಳಿದರೆ ಸಾಕಪ್ಪಾ’ ಎನ್ನುವ ನಿರ್ಧಾರದ ಮಧ್ಯೆ ಎಲ್ಲಿಯ ಕಲಿಕೆ?

ಕಳೆದ ವರ್ಷ ಅಂದರೆ 2020 ಮಾರ್ಚ್ 20 ರಿಂದ ಶಾಲೆಗಳು ಬಂದ್ ಆಗಿದ್ದು ಪುನಃ ಆರಂಭವಾಗಿದ್ದು 2021 ಜನವರಿ ಮೊದಲ ವಾರದಲ್ಲಿ, ಹಿರಿಯ ಪ್ರಾಥಮಿಕ ವಿದ್ಯಾರ್ಥಿಗಳು ಶಾಲೆಗೆ ಪ್ರವೇಶ ಮಾಡುವ ಹೊತ್ತಿಗೆ ಮತ್ತೆ ವಕ್ಕರಿಸಿದ ಎರಡನೇ ಅಲೆ, ಮೂರು ತಿಂಗಳೊಳಗೆ ಮತ್ತೆ ಶಾಲೆಗಳಿಗೆ ಬೀಗ ಹಾಕಲಾಯ್ತು, ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮಕ್ಕಳ ಕಲಿಕೆಗೆ ಬ್ರೇಕ್ ಹಾಕಿ, ಪರೀಕ್ಷೆಗಳು ಮುಂದೂಡಲಾಯಿತು. ಇಂಥ ದುರಂತ ಸನ್ನಿವೇಶದಲ್ಲಿ ಎಲ್ಲವೂ ಅನಿವಾರ್ಯ ಎನಿಸುತ್ತದೆ, ಹಣ, ಆಸ್ತಿ, ಸಂಬಂಧ, ಕರ್ತವ್ಯ, ಕಲಿಕೆಗಿಂತ ‘ತನ್ನ ಜೀವ – ಜೀವನ’ ಉಳಿಸುವಕೊಳ್ಳುವ ಸಾಹಸವೂ  ಮುಖ್ಯವಾಗಿರುತ್ತದೆ.

ಈ ಮಧ್ಯೆ ಮಕ್ಕಳ ಕಲಿಕೆಗೆ ತಾತ್ಕಾಲಿಕವಾಗಿ ‘ಆನ್ ಲೈನ್ ಶಿಕ್ಷಣ’ ಪದ್ಧತಿ ಜಾರಿಗೊಳಿಸಲು ಸರ್ಕಾರ ತೀರ್ಮಾನ ಕೈಗೊಂಡು, ಶೈಕ್ಷಣಿಕ ಕಲಿಕೆಗೆ ಆನ್ ಲೈನ್ ಶಿಕ್ಷಣ ಪರ್ಯಾಯ ಮಾರ್ಗ ಎಂದು ಪರಿಗಣಿಸಿ ಮುಂದುವರಿಸಿತ್ತು. ಆ ಕಠಿಣ ದಿನಗಳಲ್ಲಿ ಆನ್ ಲೈನ್ ತರಗತಿ ಅನಿವಾರ್ಯ ಎಂದು ಒಪ್ಪಬಹುದು. ಆದರೆ ‘ಆನ್ ಲೈನ್’ ಶಿಕ್ಷಣವೇ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅಡಿಪಾಯ ನಿರ್ಮಿಸಬಲ್ಲದು ಎಂದು ಹೇಳುವುದು ಅಷ್ಟು ಸೂಕ್ತವಲ್ಲ. ಆನ್ಲೈನ್ ತರಗತಿಗಳಿಂದ ‘ಗುಣಮಟ್ಟ ಶಿಕ್ಷಣ’ ನಿರೀಕ್ಷಿಸಲೂ ಅಸಾಧ್ಯ. ಆನ್ ಲೈನ್  ಶಿಕ್ಷಣ ಪದ್ಧತಿಯಿಂದ ಮಕ್ಕಳನ್ನು ಬರೀ ‘ರೋಬೋಟ್’ ಗಳಂತೆ ಸಿದ್ದ ಮಾಡಬಹುದೇ, ಹೊರತು ನಾವು ನಿರೀಕ್ಷಿಸಿದಂತೆ ಮಕ್ಕಳ ಬೌದ್ದಿಕ ಸಾಮರ್ಥ್ಯ ಹೆಚ್ಚಿಸಲು ಮಕ್ಕಳು ತಯಾರಿ ಮಾಡಲು ಎಂದಿಗೂ ಸಾಧ್ಯವಾಗದು. ಇನ್ನು ಎಲ್ಲರಿಗೂ ಆನ್‌ಲೈನ್ ಶಿಕ್ಷಣ ಸಿಗುವುದು ಕನಸಿನ ಮಾತೇ ಸರಿ..


ಇದನ್ನೂ ಓದಿ; ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!


ಕೊರೊನಾ ಎರಡನೇ ಅಲೆಯ ತೀವ್ರತೆ ಸದ್ಯಕ್ಕೆ ತಗ್ಗಿದರೂ ಸಾವಿನ ಪ್ರಮಾಣ ನಿರೀಕ್ಷೆಯಂತೆ ಇಳಿಕೆ ಕಂಡಿಲ್ಲ. ಆದರೆ ಒಂದಿಷ್ಟು ನೆಮ್ಮದಿಯ ನಿಟ್ಟುಸಿರು ಬಿಟ್ಟಂತಾಗಿದೆ. ಕೋವಿಡ್ ಎರಡನೇ ಅಲೆಯ ಭೀತಿಯಿಂದ ಹೊರಬರುವ ಮುಂಚೆಯೇ ಮೂರನೇ ಅಲೆಯ ‘ಭಯಾನಕತೆ’ ಕುರಿತು ದಿನಕ್ಕೊಂದು ಸುದ್ದಿಗಳು ಹರಿದಾಡುತ್ತಿವೆ. ಮೂರನೇ ಅಲೆ ಮಕ್ಕಳಿಗೆ ಹೆಚ್ಚು ಕಂಟಕವಾಗಲಿದೆ ಎನ್ನುವ ವರದಿ ಎಷ್ಟು ಸತ್ಯವೋ ಅಷ್ಟೇ ಸುಳ್ಳು ಇರಬಹುದು ಎನ್ನುವುದು ತೀರಾ ಗೊಂದಲದ ಪ್ರಶ್ನೆ.

ರಾಜ್ಯದಲ್ಲಿ ಈಗಾಗಲೇ ಕೊರೊನಾ ಹೊಸ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಅನ್ ಲಾಕ್ ಪ್ರಕ್ರಿಯೆ ಆರಂಭವಾಗಿದೆ, ಎಂದಿನಂತೆ ಬಸ್ ಸಂಚಾರ ಶುರುವಾಗಿದೆ, ವ್ಯಾಪಾರ, ವಹಿವಾಟು, ಮಾರುಕಟ್ಟೆ, ಕೈಗಾರಿಕೆಗಳು ಕೋವಿಡ್ ಮಾರ್ಗಸೂಚಿಯಂತೆ ಓಪನ್ ಆಗಿವೆ. ಕೋವಿಡ್ ಎರಡನೇ ಅಲೆಯ ಹೊಡೆತಕ್ಕೆ ಸಿಲುಕಿದ ಹಲವು ಸಂಘಟಿತ, ಅಸಂಘಟಿತ ವರ್ಗದ ಜನರು ಸಂಕಷ್ಟದ ದಿನಗಳಿಂದ ಪಾರಾಗಿ ಮತ್ತೆ ಬದುಕು ಕಟ್ಟಿಕೊಳ್ಳಲು ಹೊರಟಿದ್ದಾರೆ. ಆದರೆ ಬಡವರ ಆರ್ಥಿಕ ಪರಿಸ್ಥಿತಿ ಹಿಂದಿಗಿಂತ ಮತ್ತಷ್ಟು ಗಂಭೀರವಾಗಿದೆ, ಕೋವಿಡ್ ಸಂಕಟದಿಂದ ಬಡವರು ಇನ್ನಷ್ಟು ಬಡವರಾಗಿಯೇ ಉಳಿದುಕೊಳ್ಳಬೇಕಾದ ದಾರುಣ ಪರಿಸ್ಥಿತಿ ಎದುರಾಗಿದೆ. ಕೋವಿಡ್ ದಿಂದ ಮಧ್ಯಮ ವರ್ಗದವರು ಬಡತನದ ಕೂಪಕ್ಕೆ ಸಿಲುಕಿದ್ದಾರೆ. ಮತ್ತೊಮ್ಮೆ ಬಡವರ ಸಂಖ್ಯೆ ಏರಿಕೆಯಾಗಿದೆ. ನಿರುದ್ಯೋಗ, ಹಸಿವಿನಿಂದ ಬಳಲುತ್ತಿರುವರ ಸಂಖ್ಯೆಯೂ ಹೆಚ್ಚಾಗಿದೆ.

ಈ ಮಧ್ಯೆ ಗ್ರಾಮೀಣ ಭಾಗದ ಬಹುತೇಕ ವಿದ್ಯಾರ್ಥಿಗಳು ಶಾಲೆಯ ಸಹವಾಸವೇ ಬೇಡವೆಂದು ಕೂಲಿ ಕೆಲಸಕ್ಕೆ ಸೇರಿಕೊಂಡರೆ, ಇನ್ನು ಕೆಲವರು ತಮ್ಮ ಬಳಿ ಸ್ಮಾರ್ಟ್ ಫೋನ್ ಇಲ್ಲದೇ ಕಲಿಕೆಯಿಂದ ಬಹುದೂರ ಉಳಿದುಕೊಂಡಿದ್ದಾರೆ. ಕೊರೊನಾ ಲಾಕ್ ಡೌನ್ ಬಿಕ್ಕಟ್ಟಿನಲ್ಲಿ ಕಳೆದ ಒಂದುವರೆ ವರ್ಷದಿಂದ ಹೆಚ್ಚಿನ ಆದಾಯ ಇಲ್ಲದೆ, ಸರಿಯಾಗಿ ಕೆಲಸ ಸಿಗದ ಕಾರಣಕ್ಕೆ ಮನೆಯಲ್ಲಿರುವ ಪೋಷಕರು ಇಂಥ ಸಂಕಷ್ಟದ ಕಾಲದಲ್ಲಿ ಸ್ಮಾರ್ಟ್ ಫೋನ್ ಖರೀದಿಸಲು  ದುಡ್ಡು ಎಲ್ಲಿಂದ ತರಬೇಕು? ಜೀವನ ನಿರ್ವಹಣೆ ಹೇಗೆ ಎನ್ನುವ ಚಿಂತೆಯ ನಡುವೆ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ! ಎನ್ನುವ ಕೊರಗು ಗಾಢವಾಗಿ ಕಾಡುತ್ತಿದೆ. ಇನ್ನೂ ಪೋಷಕರಿಗೆ ಖಾಸಗಿ ಶಾಲೆಗಳ ‘ಫೀಸ್’ ವಸೂಲಿಯ ಕಿರಿಕಿರಿ ಬೇರೆ ತಲೆನೋವಾಗಿ ಪರಿಣಮಿಸಿದೆ.

ತಕ್ಷಣವೇ ಸರ್ಕಾರ ಹಂತ ಹಂತವಾಗಿ ಮಕ್ಕಳಿಗೆ ಭೌತಿಕ ತರಗತಿಗಳು ಆರಂಭಿಸಬೇಕಾಗಿದೆ. ಆನ್ ಲೈನ್ ಪಾಠ ಬರೀ ಪರೀಕ್ಷೆಗೆ ಸೀಮಿತ ಎನ್ನಲಾಗುತ್ತಿದೆ. ಮಕ್ಕಳಿಗೆ ಹೆಚ್ಚಿನ ಜ್ಞಾನಾರ್ಜನೆಗೆ ಶಾಲೆಯ ಪಾಠವೇ ಅತ್ಯಂತ ಸೂಕ್ತ ವಾತಾವರಣ. ಒಂದು ಗಂಟೆಯ ಆನ್ ಲೈನ್  ಪಾಠದ ಜೊತೆಗೆ ಇತರೆ ಎಲ್ಲ ಕೆಲಸಗಳನ್ನೂ ಮಕ್ಕಳ ತಲೆಗೆ ಕಟ್ಟಲಾಗುತ್ತಿದೆ. ಕ್ಲಾಸ್ ಅಟೆಂಡ್ ಮಾಡುವ ಬಹುತೇಕ ಮಕ್ಕಳು ಆನ್ ಲೈನ್ ಕ್ಲಾಸ್ ನೆಪವೊಡ್ಡಿ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಕಾಲಕಳೆಯುತ್ತಿದ್ದಾರೆ. ಇದರಿಂದ ಮಕ್ಕಳ ಅಮೂಲ್ಯವಾದ ಕಲಿಕೆಯ ಸಮಯ ವ್ಯರ್ಥವಾಗುತ್ತಿದೆ. ಆನ್ ಲೈನ್ ತರಗತಿಗಳಿಗಾಗಿ ಇಡೀ ದಿನ ಮೊಬೈಲ್, ಲ್ಯಾಪ್ ಟಾಪ್ ಗಳಲ್ಲೇ ಮಗ್ನರಾಗಿ ಕಾಲಕಳೆಯುವಂತಾಗಿದೆ. ಇದು ಮಕ್ಕಳ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟು ಮಾಡಬಲ್ಲದು. ಮತ್ತೆ ವರ್ಷದಿಂದ ಶಾಲೆ ತೊರೆದು ಮನೆಯಲ್ಲಿಯೇ ಬಂಧಿತರಾದ ಮಕ್ಕಳು ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ.

ಇದನ್ನೂ ಓದಿ; ‘ಆನ್‌ಲೈನ್ ತರಗತಿ ಮತ್ತು ಆನ್‌ಲೈನ್ ಶಿಕ್ಷಣ ಬೇಡ’ – ಸಾಮಾನ್ಯ ಖಾಸಗಿ ಶಾಲೆಗಳ ಮನವಿ!

ಈಗಾಗಲೇ ಶಾಲಾ ಶೈಕ್ಷಣಿಕ ವರ್ಷ ಪ್ರಾರಂಭವಾಗಿದೆ, ಮಕ್ಕಳ ಹಾಗೂ ಶಿಕ್ಷಕರ ಆರೋಗ್ಯ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮಗಳೊಂದಿಗೆ ಶಾಲೆ ಆರಂಭಿಸಬೇಕು. ಮಕ್ಕಳ ಸಂಪೂರ್ಣ ಭವಿಷ್ಯ ಶಿಕ್ಷಕರ ಕೈಯಲ್ಲಿದೆ. ಶಿಕ್ಷಕರು ತಪ್ಪು ಮಾಡಿದರೆ ಕಮರಲೂಬಹದು. ನಗರ ಪ್ರದೇಶದ ಮಕ್ಕಳ ಶೈಕ್ಷಣಿಕ ಗುಣಮಟ್ಟದ  ಕುರಿತು ಚರ್ಚಿಸಿ ಅದನ್ನೇ ಗಮನದಲ್ಲಿಟ್ಟುಕೊಂಡು ಆನ್ ಲೈನ್ ಶಿಕ್ಷಣ ಮುಂದುವರೆಸಲು ಹೊರಟಿದರೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸಂಪೂರ್ಣವಾಗಿ ಶಿಕ್ಷಣದಿಂದ ವಂಚಿತರಾಗುವುದು ಗ್ಯಾರಂಟಿ.

ಶಾಲೆ ಆರಂಭಿಸುವ ಮುನ್ನ ಸರ್ಕಾರ ಕೋವಿಡ್ ಮಾರ್ಗಸೂಚಿ ಕಡ್ಡಾಯಗೊಳಿಸಬೇಕು‌.
ಸರ್ಕಾರಿ ಅನುದಾನಿತ ಹಾಗೂ ಖಾಸಗಿ ಶಾಲೆಗಳ ಎಲ್ಲಾ ಸಿಬ್ಬಂದಿ ವರ್ಗದವರಿಗೆ ಕಡ್ಡಾಯವಾಗಿ ಕೋವಿಡ್ ಲಸಿಕೆ ಹಾಕಿಸಬೇಕು. ಮೊದಲಿಗೆ ಪ್ರೌಢ, ಹಿರಿಯ ಪ್ರಾಥಮಿಕ ನಂತರ ಪ್ರಾಥಮಿಕ ಶಾಲೆಗಳು ತೆರೆಯಲು ಸಿದ್ಧತೆ ಮಾಡಿಕೊಳ್ಳಬೇಕು. ತರಗತಿಗಳು ನಡೆಸಲು ಪಾಳಿ ಪದ್ಧತಿ ಅನುಸರಿಸುವುದು ಸೂಕ್ತ, ಅನುಮತಿ ಇಲ್ಲದೆ ಯಾವುದೇ ಪೋಷಕರಿಗೆ ಶಾಲಾ ಪ್ರವೇಶ ನಿಷೇಧ, ಅದರಲ್ಲೂ 60 ವರ್ಷ ಮೇಲ್ಪಟ್ಟವರಿಗೆ ಮಕ್ಕಳಿಂದ ದೂರ ಇರುವಂತೆ ಕ್ರಮ ಕೈಗೊಳ್ಳಬೇಕು. ತರಗತಿ ಕೋಣೆ, ಶಾಲಾ ವಾಹನದಲ್ಲಿ ವೈಯಕ್ತಿಕ ಅಂತರ ಕಾಪಾಡುವುದು, ಕೋವಿಡ್ ಮಾರ್ಗಸೂಚಿ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡುವುದು. ಇಂಥ ಅಗತ್ಯ ನಿಯಮಗಳನ್ನು ಜಾರಿಗೊಳಿಸಿ ಶಾಲೆ ಆರಂಭಿಸುವುದು ತುಂಬಾ ಅನಿವಾರ್ಯತೆ ಇದೆ.

ಕೋವಿಡ್ ಎಂದಿಗೂ ಸಂಪೂರ್ಣವಾಗಿ ತೊಲಗಿ ಹೋಗಲು ಸಾಧ್ಯ ಇಲ್ಲ. ಲಸಿಕೆ ಪಡೆಯುವವರ ಸಂಖ್ಯೆ ಹೆಚ್ಚಾದಂತೆ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತದೆ, ಹಾಗೂ ಜನರಲ್ಲಿ ಅಡಗಿರುವ ರೋಗದ ಭೀತಿಯೂ ಕಡಿಮೆ ಆಗುತ್ತದೆ. ಕೋವಿಡ್ ಎರಡನೇ ಅಲೆಯ ಕರಾಳ ದಿನಗಳು, ಮೂರನೇ ಅಲೆಯ ಮುನ್ಸೂಚನೆ ಗಮನದಲ್ಲಿಟ್ಟುಕೊಂಡು ಶಾಲೆ ತೆರೆಯಲು ಮೀನಾಮೇಷ ಎಣಿಸುತ್ತಾ ಹಿಂದೇಟು ಹಾಕಿದರೆ ಮಕ್ಕಳಲ್ಲಿ ಶೈಕ್ಷಣಿಕ ಸಾಮರ್ಥ್ಯ ಊಹಿಸಲು ಸಾಧ್ಯವಾಗದಷ್ಟು ಕುಂಠಿತಗೊಳ್ಳುತ್ತದೆ.

ಮಕ್ಕಳು ಓದು – ಬರೆಯದೇ ಪರೀಕ್ಷೆ ಪಾಸ್ ಮಾಡುವುದು ಮಕ್ಕಳ  ಆರೋಗ್ಯ ಹಿತದೃಷ್ಟಿಯಿಂದ ಮಾಡುವ ಮೌಲ್ಯಮಾಪನವೇ ಹೊರತು ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ಮಾನದಂಡವಲ್ಲ. ತರಗತಿ , ಪರೀಕ್ಷೆ ಇಲ್ಲದಿದ್ದರೆ ಮಕ್ಕಳ ಕಲಿಕೆಯ ಗುಣಮಟ್ಟ ಪ್ರಗತಿ ಹೊಂದಲು ಸಾಧ್ಯವಿಲ್ಲ. ಇದು ಶಿಕ್ಷಣ ವ್ಯವಸ್ಥೆಯ ನಿಯಮವೂ ಅಲ್ಲ. ಈಗಾಗಲೇ ವರ್ಷದಿಂದ ಮನೆಯಲ್ಲಿದ್ದು ಮುಂದಿನ ತರಗತಿಗೆ ಬಡ್ತಿ ಪಡೆದ ಮಕ್ಕಳಿಗೆ ‘ನಾನೀಗ ಎಷ್ಟು ತರಗತಿಯಲ್ಲಿದ್ದೇನೆ’ ಎನ್ನುವುದು ಮರೆತು ಬಿಟ್ಟಿದ್ದಾರೆ. ಹಲವಾರು ಮಕ್ಕಳ ‘ಟಿಸಿ’ ಮನೆಯಲ್ಲಿಯೇ ಉಳಿದಿವೆ. ಮಕ್ಕಳಿಗೆ ಚನ್ನಾಗಿ ಓದಿಸಬೇಕೆಂಬ ಉಲ್ಲಾಸದಲ್ಲಿದ್ದ ಪೋಷಕರು ನಿರುತ್ಸಾಹ ತೋರುತ್ತಿದ್ದಾರೆ. ಹಲವು ಮಕ್ಕಳು ಶಾಲೆ ಬಿಟ್ಟು ಕೂಲಿ ಕೆಲಸಕ್ಕೆ ಸೇರಿದ್ದಾರೆ, ಬಾಲ್ಯ ವಿವಾಹಗಳು ಹೆಚ್ಚಾಗಿವೆ, ಮಕ್ಕಳಲ್ಲಿ ಅಪೌಷ್ಟಿಕತೆ  ಹೆಚ್ಚಾಗುವ ಭೀತಿ ಎದುರಾಗಿದೆ. ಈ ಎಲ್ಲಾ ಸಮಸ್ಯೆಗಳಿಗೆ ಸರ್ಕಾರ ಸೂಕ್ತ ಪರಿಹಾರ ಕಂಡುಕೊಳ್ಳಲು ತಕ್ಷಣವೇ ಚಿಂತನೆ ನಡೆಸುವುದು ತೀರಾ ಅಗತ್ಯ.

  • ಬಾಲಾಜಿ ಕುಂಬಾರ, ಚಟ್ನಾಳ

(ಬೀದರ್‌ನಲ್ಲಿ ವಾಸವಿರುವ ಬಾಲಾಜಿ ಕುಂಬಾರ ಚಟ್ನಾಳರವರು ಶಿಕ್ಷಕರು ಮತ್ತು ಯುವಬರಹಗಾರರು.)


ಇದನ್ನೂ ಓದಿ: ಆನ್‌ಲೈನ್‌ ಕ್ಲಾಸ್‌ಗಳ ಭಾರ ಕಡಿಮೆ ಮಾಡುವಂತೆ ಪ್ರಧಾನಿಗೆ ಪುಟ್ಟ ಹುಡುಗಿಯ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...