Homeಮುಖಪುಟಅಧಿವೇಶನಕ್ಕೆ ಅಡ್ಡಿ: ಕಾಂಗ್ರೆಸ್, ಆಪ್ ಸಂಸದರ ವಿರುದ್ಧ ತನಿಖೆಗೆ ಜಗದೀಪ್ ಧಂಖರ್ ಮನವಿ

ಅಧಿವೇಶನಕ್ಕೆ ಅಡ್ಡಿ: ಕಾಂಗ್ರೆಸ್, ಆಪ್ ಸಂಸದರ ವಿರುದ್ಧ ತನಿಖೆಗೆ ಜಗದೀಪ್ ಧಂಖರ್ ಮನವಿ

- Advertisement -
- Advertisement -

ಬಜೆಟ್ ಅಧಿವೇಶನದ ಸಮಯದಲ್ಲಿ ಸಂಸದರ ನಡವಳಿಕೆಯಿಂದ ಅಸ್ತವ್ಯಸ್ತತೆ ಉಂಟಾಗಿದ್ದು, ಅದು ಸವಲತ್ತುಗಳ ಉಲ್ಲಂಘನೆಯಾಗಿದೆ ಎಂದು ರಾಜ್ಯಸಭೆಯ ಅಧ್ಯಕ್ಷ ಜಗದೀಪ್ ಧಂಖರ್ ಅವರು ಹೇಳಿದ್ದಾರೆ. ಈ ವಿಚಾರವಾಗಿ 12 ಪ್ರತಿಪಕ್ಷಗಳ ಸಂಸದರ ಹೆಸರನ್ನು ಉಲ್ಲೇಖಿಸಿ ಅವರ ಮೇಲೆ ತನಿಖೆ ನಡೆಸಲು ವಿಶೇಷಾಧಿಕಾರಗಳ ಸಮಿತಿಗೆ ಅವರು ತಿಳಿಸಿದ್ದಾರೆ.

ಸಂಸದರು ಪದೇ ಪದೇ ಸದನದ ಬಾವಿಗೆ ನುಗ್ಗಿ, ಘೋಷಣೆ ಕೂಗಿ ಕಲಾಪಕ್ಕೆ ಅಡ್ಡಿಪಡಿಸುವ ಮೂಲಕ ರಾಜ್ಯಸಭೆಯ ನಿಯಮಗಳು ಮತ್ತು ಶಿಷ್ಟಾಚಾರಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಫೆಬ್ರವರಿ 18 ರಂದು ಹೊರಡಿಸಲಾದ ರಾಜ್ಯಸಭೆಯ ಬುಲೆಟಿನ್ ಪ್ರಕಾರ, 12 ಸಂಸದರಲ್ಲಿ ಒಂಬತ್ತು ಕಾಂಗ್ರೆಸ್ ಮತ್ತು ಮೂವರು ಆಮ್ ಆದ್ಮಿ ಪಕ್ಷದವರಾಗಿದ್ದಾರೆ. ಶಕ್ತಿಸಿನ್ಹ್ ಗೋಹಿಲ್, ನರನ್‌ಭಾಯ್ ಜೆ ರಥ್ವಾ, ಸೈಯದ್ ನಾಸಿರ್ ಹುಸೇನ್, ಕುಮಾರ್ ಕೇತ್ಕರ್, ಇಮ್ರಾನ್ ಪ್ರತಾಪ್‌ಗರ್ಹಿ, ಎಲ್ ಹನುಮಂತಯ್ಯ, ಫುಲೋ ದೇವಿ ನೇತಮ್, ಜೆಬಿ ಮಾಥರ್ ಹಿಶಾಮ್ ಮತ್ತು ರಂಜೀತ್ ರಂಜನ್ ಅವರನ್ನು ಧನ್‌ಖರ್ ಹೆಸರಿಸಿದ ಕಾಂಗ್ರೆಸ್ ನಾಯಕರು. ಇನ್ನು ಆಮ್ ಆದ್ಮಿ ಪಕ್ಷದಿಂದ ಸಂಜಯ್ ಸಿಂಗ್, ಸುಶೀಲ್ ಕುಮಾರ್ ಗುಪ್ತಾ ಮತ್ತು ಸಂದೀಪ್ ಕುಮಾರ್ ಪಾಠಕ್ ಹೆಸರು ಹೇಳಲಾಗಿದೆ.

ಅದಾನಿ ಗ್ರೂಪ್‌ನ ಹಗರಣದ ಆರೋಪಗಳ ಕುರಿತು ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಒತ್ತಾಯಿಸಿ ವಿರೋಧ ಪಕ್ಷಗಳು ಬಜೆಟ್ ಅಧಿವೇಶನದಲ್ಲಿ ಪ್ರತಿಭಟನೆ ನಡೆಸಿದವು. ಇದು ಪುನರಾವರ್ತಿತ ಮುಂದೂಡಿಕೆ ಮತ್ತು ಗದ್ದಲಕ್ಕೆ ಸಾಕ್ಷಿಯಾಯಿತು. ಈಗ ಮಾರ್ಚ್ 13ರಂದು ಸಂಸತ್ತು ಮತ್ತೆ ಸೇರಲಿದೆ.

ಇದನ್ನೂ ಓದಿ: ಹಿಂಡೆನ್‌ಬರ್ಗ್ ವರದಿ ಎಫೆಕ್ಟ್: $48 ಶತಕೋಟಿಗೆ ಕುಸಿದ ಅದಾನಿ ಆಸ್ತಿ

ಸರ್ಕಾರಿ ಸ್ವಾಮ್ಯದ ಜೀವ ವಿಮಾ ನಿಗಮ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಂಸ್ಥೆಗಳು ಅದಾನಿ ಸಂಸ್ಥೆಯ ಜೊತೆಯಲ್ಲಿ ಹೂಡಿಕೆ ಮಾಡಿರುವುದರಿಂದ ಸಾಮಾನ್ಯ ನಾಗರಿಕರ ಹಣ ಕಳೆದುಹೋಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಈ ಕುರಿತು ಸಂಪೂರ್ಣ ತನಿಖೆಯಾಗಬೇಕೆಂದು ವಿರೋಧ ಪಕ್ಷಗಳ ಒಕ್ಕೂಟವು ಅಧಿವೇಶನದ ಸಮಯದಲ್ಲಿ ಒತ್ತಾಯಿಸಿದ್ದವು.

ದಶಕಗಳ ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಲೆಕ್ಕಪತ್ರ ವಂಚನೆಯಲ್ಲಿ ಅದಾನಿ ಗ್ರೂಪ್ ತೊಡಗಿದೆ ಎಂದು ಅಮೆರಿಕ ಮೂಲದ ಕಂಪನಿ ಹಿಂಡೆನ್‌ಬರ್ಗ್ ರಿಸರ್ಚ್‌ ಆರೋಪ ಮಾಡಿದೆ. ಈ ಕುರಿತು ಜಂಟಿ ಸಂಸದೀಯ ಸಮಿತಿ ಅಥವಾ ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯಿಂದ ತನಿಖೆ ನಡೆಸಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸಿ ಸದನದಲ್ಲಿ ಪ್ರತಿಭಟನೆ ನಡೆಸಿದ್ದವು. ಇದರಿಂದ ಸದನವನ್ನು ಪದೇ ಪದೇ ಮುಂದೂಡುತ್ತ ಹೋಗಿದ್ದರಿಂದ ಸರಿಯಾದ ರೀತಿಯಲ್ಲಿ ಸದನ ನಡೆಸಲು ಸಾಧ್ಯವಾಗಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...