Homeಮುಖಪುಟಹರಿಯಾಣ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ: 40ಕ್ಕೂ ಹೆಚ್ಚು ನಾಯಕರಿಂದ ರಾಜೀನಾಮೆ

ಹರಿಯಾಣ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ: 40ಕ್ಕೂ ಹೆಚ್ಚು ನಾಯಕರಿಂದ ರಾಜೀನಾಮೆ

- Advertisement -
- Advertisement -

ಹರಿಯಾಣದ ಬಿಜೆಪಿಯಲ್ಲಿ ಭಿನ್ನಮತದ ಅಲೆ ಎದ್ದಿದ್ದು, 40ಕ್ಕೂ ಹೆಚ್ಚು ನಾಯಕರ ರಾಜೀನಾಮೆ ನೀಡಿದ್ದಾರೆ. 9ನೇ ಶತಮಾನದ ಆಡಳಿತಗಾರ ಸಾಮ್ರಾಟ್ ಮಿಹಿರ್ ಭೋಜ್ ಅವರ ಪ್ರತಿಮೆಯ ಅನಾವರಣ ಸಮಾರಂಭದಲ್ಲಿ ನಡೆದ ಗಲಾಟೆಯಿಂದ ಈ ಬೆಳವಣಿಗೆ ನಡೆದಿದೆ.

ಒಂದೆಡೆ ನಾಯಕರು ಪಕ್ಷ ತೊರೆಯುತ್ತಿದ್ದರೆ, ಮತ್ತೊಂಡೆದೆ ಹಲವಾರು ಗ್ರಾಮಗಳಲ್ಲಿ ಬಿಜೆಪಿ ನಾಯಕರ ಪ್ರವೇಶವನ್ನು ನಿಷೇಧಿಸಲಾಗುತ್ತಿದೆ. ನಾಲ್ಕು ದಿನಗಳ ಹಿಂದೆ ಬಿಜೆಪಿ ಕೈತಾಲ್ ಶಾಸಕಿ ಲೀಲಾ ರಾಮ್ ಗುರ್ಜರ್ ಮತ್ತು ಗುರ್ಜರ್ ಸಮುದಾಯದ ಇತರ ನಾಯಕರು ಬಿಗಿ ಭದ್ರತೆಯ ನಡುವೆ ಜುಲೈ 20ರಂದು ಪ್ರತಿಮೆಯನ್ನು ಅನಾವರಣಗೊಳಿಸಿದರು. ಅಂದಿನಿಂದ, ರಾಜ್ಯದಲ್ಲಿ ಸುಮಾರು 40 ಪದಾಧಿಕಾರಿಗಳು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಜುಲೈ 20 ರಂದು, ಬಿಜೆಪಿಯು ಸಾಮ್ರಾಟ್ ಮಿಹಿರ್ ಭೋಜ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿತು. ಈ ಸಮಾರಂಭದಿಂದ ರಾಜ್ಯದ ಎರಡು ಸಮುದಾಯಗಳ ಗಲಾಟೆಗೆ ಕಾರಣವಾಯಿತು. ಈ ಸಮಾರಂಭದ ಬಳಿಕ ‘ಗುರ್ಜರ್‌ಗಳು’ ಮತ್ತು ‘ರಜಪೂತರು’ ಜಗಳವಾಡಿದರು. ಅನಾವರಣ ಸಮಾರಂಭದ ಮೊದಲು, ರಜಪೂತ ಸಮುದಾಯದ ಸದಸ್ಯರು ಪ್ರತಿಮೆಯ ಮೇಲೆ ಕೆತ್ತಲಾದ ‘ಗುಜ್ಜರ್’ ಪದವನ್ನು ತೆಗೆದುಹಾಕಲು ಒತ್ತಾಯಿಸಿದರು. ಅದಕ್ಕಾಗಿ ಸಮಾಜದ ಮುಖಂಡರು ಪ್ರತಿಭಟನೆ ಆರಂಭಿಸಿದರು. ಪ್ರತಿಮೆಯ ಮೇಲೆ ‘ಹಿಂದೂ ಸಾಮ್ರಾಟ್’ ಎಂಬ ವಿಶೇಷಣವನ್ನು ಸೇರಿಸಬೇಕೆಂದು ಅವರು ಒತ್ತಾಯಿಸಿದರು. ಕೂಡಲೇ ಪ್ರತಿಭಟನೆಗಾಗಿ ಅವರ ಮೇಲೆ ಲಾಠಿ ಚಾರ್ಜ್ ಮಾಡಲಾಯಿತು.

ಈ ಘಟನೆ ನಡೆದಾಗಿನಿಂದ ರಜಪೂತ ಸಮುದಾಯದ ಮುಖಂಡರು ಬಿಜೆಪಿ ವಿರುದ್ಧ ತಿರುಗಿಬಿದ್ದಿದ್ದಾರೆ. ಇತ್ತೀಚೆಗೆ, ರಜಪೂತ ಸಮುದಾಯದ ಪ್ರಾಬಲ್ಯವಿರುವ ಹರಿಯಾಣದ ಹಲವು ಗ್ರಾಮಗಳು ಬಿಜೆಪಿ ನಾಯಕರ ಪ್ರವೇಶಕ್ಕೆ ನಿಷೇಧ ಹೇರಿವೆ ಎಂದು ದಿ ಹಿಂದೂ ವರದಿ ಮಾಡಿದೆ.

ಈ ಬಗ್ಗೆ ಎಎನ್‌ಐ ಜೊತೆ ಮಾತನಾಡಿರುವ ಬಿಜೆಪಿಯ ಕಿಸಾನ್ ಮೋರ್ಚಾದ ಜಿಲ್ಲಾ ಮುಖ್ಯಸ್ಥ ಸಂಜೀವ್ ರಾಣಾ ಅವರು, ”ನಮ್ಮ ಮಹಾನ್ ನಾಯಕ ಮಿಹಿರ್ ಭೋಜ್ ಅವರ ಪ್ರತಿಮೆಯನ್ನು ‘ಹಿಂದೂ ಸಾಮ್ರಾಟ್’ ಎಂದು ಕೆತ್ತಿಸಬೇಕೆಂದು ನಾವು ಒತ್ತಾಯಿಸುತ್ತಿದ್ದೆವು. ನಾವು ಅದರ ಮೇಲೆ ‘ರಜಪೂತ್’ ಅಥವಾ ‘ಗುಜ್ಜರ್’ ಎಂದು ಬರೆಯಿರಿ ಎಂದೂ ಹೇಳಿಲ್ಲ” ಎಂದು ಹೇಳಿದ್ದಾರೆ.

”ನಮ್ಮ ಸಮುದಾಯದ ಸದಸ್ಯರು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರು ಆದರೆ ಪೊಲೀಸರು ನಮ್ಮ ಮೇಲೆ ಲಾಠಿ ಬೀಸಿದರು” ಎಂದು ಅವರು ಆರೋಪ ಮಾಡಿದ್ದಾರೆ.

ಪ್ರತಿಮೆಯ ಅನಾವರಣ ಸಮಾರಂಭ ಮತ್ತು ಲಾಠಿ ಚಾರ್ಜ್ ಘಟನೆಯ ನಂತರ, ಸರ್ಕಾರವು ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಕಾರ್ಯಕ್ರಮವನ್ನು ಆಯೋಜಿಸಿತು. ಈ ಕ್ರಮವು ರಜಪೂತ ಸಮುದಾಯದ ಬಿಜೆಪಿ ನಾಯಕರನ್ನು ಮತ್ತಷ್ಟು ಕೆರಳಿಸಿತು.

”ನಾವು ಕ್ರಿಮಿನಲ್‌ಗಳಾಗಿದ್ದೇವೆಯೇ? ಸರ್ಕಾರದ ಆಜ್ಞೆಯ ಮೇರೆಗೆ ಪೊಲೀಸರು ನಮ್ಮ ಮೇಲೆ ಲಾಠಿ ಚಾರ್ಜ್ ಮತ್ತು ಅಶ್ರುವಾಯು ಶೆಲ್‌ಗಳ ದಾಳಿ ಮಾಡಿದರು. ಘಟನೆಯ ಒಂದು ದಿನದ ನಂತರ, ಸರ್ಕಾರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಕಾರ್ಯಕ್ರಮವನ್ನು ಆಯೋಜಿಸಿತು. ಇದು ಬಿಜೆಪಿಗೆ ರಜಪೂತರ ಅಗತ್ಯವಿಲ್ಲ ಎಂದು ತೋರಿಸುತ್ತದೆ” ಎಂದು ಸಂಜೀವ್ ರಾಣಾ ಆಕ್ರೋಶ ಹೊರಹಾಕಿದರು.

ಸರ್ಕಾರದ ನಡೆಯ ವಿರೋಧದ ಕ್ರಮವಾಗಿ ಬಿಜೆಪಿಯ ಎಲ್ಲಾ ರಜಪೂತ ನಾಯಕರು ತಮ್ಮ ರಾಜೀನಾಮೆಯನ್ನು ಹರಿಯಾಣ ರಾಜ್ಯ ಅಧ್ಯಕ್ಷ ಓಂ ಪ್ರಕಾಶ್ ಧನಾರ್ ಅವರಿಗೆ ಸಲ್ಲಿಸಿದ್ದಾರೆ.

ಸಾಮೂಹಿಕ ರಾಜೀನಾಮೆ ನೀಡಿದ ಬಿಜೆಪಿ ಮುಖಂಡರಲ್ಲಿ ಮಹಿಪಾಲ್ ರಾಣಾ, ವಿಭಾಗೀಯ ಅಧ್ಯಕ್ಷ ಕಲಾಯತ್, ಸಂಜೀವ್ ರಾಣಾ, ಕಿಸಾನ್ ಮೋರ್ಚಾದ ಜಿಲ್ಲಾ ಮುಖಂಡ ಜೈದೀಪ್ ರಾಣಾ, ಕಿಸಾನ್ ಮೋರ್ಚಾ ಉಪಾಧ್ಯಕ್ಷ ಕೈತಾಲ್ ಸಂದೀಪ್ ರಾಣಾ, ಜಿಲ್ಲಾ ಸಂಚಾಲಕ ರಾಹುಲ್ ರಾಣಾ, ವಿಭಾಗೀಯ ಪ್ರಧಾನ ಕಾರ್ಯದರ್ಶಿ ಕಲಾಯತ್, ಮತ್ತು ಮಂಡಲ ಅಧ್ಯಕ್ಷ ಅಮಿತ್ ರಾಣಾ ಇತರರು ಇದ್ದರು.

ಈ ಕುರಿತು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಸ್ಪಷ್ಟನೆ ಹಾಗೂ ಪೊಲೀಸ್ ಕ್ರಮದ ಬಗ್ಗೆ ಪ್ರತಿಕ್ರಿಯೆಗೆ ರಜಪೂತ ಮುಖಂಡರು ಆಗ್ರಹಿಸಿದ್ದಾರೆ. ಸಿಎಂ ಖಟ್ಟರ್ ನಮ್ಮೊಂದಿಗೆ ಚರ್ಚಿಸುವವರೆಗೂ ನಾವು ಬಿಜೆಪಿಯಿಂದ ಹೊರಗುಳಿಯುತ್ತೇವೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಕುಸ್ತಿಪಟುಗಳ ಪ್ರತಿಭಟನೆ: ಕೇಂದ್ರ ಸರ್ಕಾರದ ನಡೆಯಿಂದ ಹರಿಯಾಣ ಬಿಜೆಪಿ ಘಟಕದಲ್ಲಿ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...