Homeಮುಖಪುಟಹರಿಯಾಣ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ: 40ಕ್ಕೂ ಹೆಚ್ಚು ನಾಯಕರಿಂದ ರಾಜೀನಾಮೆ

ಹರಿಯಾಣ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ: 40ಕ್ಕೂ ಹೆಚ್ಚು ನಾಯಕರಿಂದ ರಾಜೀನಾಮೆ

- Advertisement -
- Advertisement -

ಹರಿಯಾಣದ ಬಿಜೆಪಿಯಲ್ಲಿ ಭಿನ್ನಮತದ ಅಲೆ ಎದ್ದಿದ್ದು, 40ಕ್ಕೂ ಹೆಚ್ಚು ನಾಯಕರ ರಾಜೀನಾಮೆ ನೀಡಿದ್ದಾರೆ. 9ನೇ ಶತಮಾನದ ಆಡಳಿತಗಾರ ಸಾಮ್ರಾಟ್ ಮಿಹಿರ್ ಭೋಜ್ ಅವರ ಪ್ರತಿಮೆಯ ಅನಾವರಣ ಸಮಾರಂಭದಲ್ಲಿ ನಡೆದ ಗಲಾಟೆಯಿಂದ ಈ ಬೆಳವಣಿಗೆ ನಡೆದಿದೆ.

ಒಂದೆಡೆ ನಾಯಕರು ಪಕ್ಷ ತೊರೆಯುತ್ತಿದ್ದರೆ, ಮತ್ತೊಂಡೆದೆ ಹಲವಾರು ಗ್ರಾಮಗಳಲ್ಲಿ ಬಿಜೆಪಿ ನಾಯಕರ ಪ್ರವೇಶವನ್ನು ನಿಷೇಧಿಸಲಾಗುತ್ತಿದೆ. ನಾಲ್ಕು ದಿನಗಳ ಹಿಂದೆ ಬಿಜೆಪಿ ಕೈತಾಲ್ ಶಾಸಕಿ ಲೀಲಾ ರಾಮ್ ಗುರ್ಜರ್ ಮತ್ತು ಗುರ್ಜರ್ ಸಮುದಾಯದ ಇತರ ನಾಯಕರು ಬಿಗಿ ಭದ್ರತೆಯ ನಡುವೆ ಜುಲೈ 20ರಂದು ಪ್ರತಿಮೆಯನ್ನು ಅನಾವರಣಗೊಳಿಸಿದರು. ಅಂದಿನಿಂದ, ರಾಜ್ಯದಲ್ಲಿ ಸುಮಾರು 40 ಪದಾಧಿಕಾರಿಗಳು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಜುಲೈ 20 ರಂದು, ಬಿಜೆಪಿಯು ಸಾಮ್ರಾಟ್ ಮಿಹಿರ್ ಭೋಜ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿತು. ಈ ಸಮಾರಂಭದಿಂದ ರಾಜ್ಯದ ಎರಡು ಸಮುದಾಯಗಳ ಗಲಾಟೆಗೆ ಕಾರಣವಾಯಿತು. ಈ ಸಮಾರಂಭದ ಬಳಿಕ ‘ಗುರ್ಜರ್‌ಗಳು’ ಮತ್ತು ‘ರಜಪೂತರು’ ಜಗಳವಾಡಿದರು. ಅನಾವರಣ ಸಮಾರಂಭದ ಮೊದಲು, ರಜಪೂತ ಸಮುದಾಯದ ಸದಸ್ಯರು ಪ್ರತಿಮೆಯ ಮೇಲೆ ಕೆತ್ತಲಾದ ‘ಗುಜ್ಜರ್’ ಪದವನ್ನು ತೆಗೆದುಹಾಕಲು ಒತ್ತಾಯಿಸಿದರು. ಅದಕ್ಕಾಗಿ ಸಮಾಜದ ಮುಖಂಡರು ಪ್ರತಿಭಟನೆ ಆರಂಭಿಸಿದರು. ಪ್ರತಿಮೆಯ ಮೇಲೆ ‘ಹಿಂದೂ ಸಾಮ್ರಾಟ್’ ಎಂಬ ವಿಶೇಷಣವನ್ನು ಸೇರಿಸಬೇಕೆಂದು ಅವರು ಒತ್ತಾಯಿಸಿದರು. ಕೂಡಲೇ ಪ್ರತಿಭಟನೆಗಾಗಿ ಅವರ ಮೇಲೆ ಲಾಠಿ ಚಾರ್ಜ್ ಮಾಡಲಾಯಿತು.

ಈ ಘಟನೆ ನಡೆದಾಗಿನಿಂದ ರಜಪೂತ ಸಮುದಾಯದ ಮುಖಂಡರು ಬಿಜೆಪಿ ವಿರುದ್ಧ ತಿರುಗಿಬಿದ್ದಿದ್ದಾರೆ. ಇತ್ತೀಚೆಗೆ, ರಜಪೂತ ಸಮುದಾಯದ ಪ್ರಾಬಲ್ಯವಿರುವ ಹರಿಯಾಣದ ಹಲವು ಗ್ರಾಮಗಳು ಬಿಜೆಪಿ ನಾಯಕರ ಪ್ರವೇಶಕ್ಕೆ ನಿಷೇಧ ಹೇರಿವೆ ಎಂದು ದಿ ಹಿಂದೂ ವರದಿ ಮಾಡಿದೆ.

ಈ ಬಗ್ಗೆ ಎಎನ್‌ಐ ಜೊತೆ ಮಾತನಾಡಿರುವ ಬಿಜೆಪಿಯ ಕಿಸಾನ್ ಮೋರ್ಚಾದ ಜಿಲ್ಲಾ ಮುಖ್ಯಸ್ಥ ಸಂಜೀವ್ ರಾಣಾ ಅವರು, ”ನಮ್ಮ ಮಹಾನ್ ನಾಯಕ ಮಿಹಿರ್ ಭೋಜ್ ಅವರ ಪ್ರತಿಮೆಯನ್ನು ‘ಹಿಂದೂ ಸಾಮ್ರಾಟ್’ ಎಂದು ಕೆತ್ತಿಸಬೇಕೆಂದು ನಾವು ಒತ್ತಾಯಿಸುತ್ತಿದ್ದೆವು. ನಾವು ಅದರ ಮೇಲೆ ‘ರಜಪೂತ್’ ಅಥವಾ ‘ಗುಜ್ಜರ್’ ಎಂದು ಬರೆಯಿರಿ ಎಂದೂ ಹೇಳಿಲ್ಲ” ಎಂದು ಹೇಳಿದ್ದಾರೆ.

”ನಮ್ಮ ಸಮುದಾಯದ ಸದಸ್ಯರು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರು ಆದರೆ ಪೊಲೀಸರು ನಮ್ಮ ಮೇಲೆ ಲಾಠಿ ಬೀಸಿದರು” ಎಂದು ಅವರು ಆರೋಪ ಮಾಡಿದ್ದಾರೆ.

ಪ್ರತಿಮೆಯ ಅನಾವರಣ ಸಮಾರಂಭ ಮತ್ತು ಲಾಠಿ ಚಾರ್ಜ್ ಘಟನೆಯ ನಂತರ, ಸರ್ಕಾರವು ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಕಾರ್ಯಕ್ರಮವನ್ನು ಆಯೋಜಿಸಿತು. ಈ ಕ್ರಮವು ರಜಪೂತ ಸಮುದಾಯದ ಬಿಜೆಪಿ ನಾಯಕರನ್ನು ಮತ್ತಷ್ಟು ಕೆರಳಿಸಿತು.

”ನಾವು ಕ್ರಿಮಿನಲ್‌ಗಳಾಗಿದ್ದೇವೆಯೇ? ಸರ್ಕಾರದ ಆಜ್ಞೆಯ ಮೇರೆಗೆ ಪೊಲೀಸರು ನಮ್ಮ ಮೇಲೆ ಲಾಠಿ ಚಾರ್ಜ್ ಮತ್ತು ಅಶ್ರುವಾಯು ಶೆಲ್‌ಗಳ ದಾಳಿ ಮಾಡಿದರು. ಘಟನೆಯ ಒಂದು ದಿನದ ನಂತರ, ಸರ್ಕಾರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಕಾರ್ಯಕ್ರಮವನ್ನು ಆಯೋಜಿಸಿತು. ಇದು ಬಿಜೆಪಿಗೆ ರಜಪೂತರ ಅಗತ್ಯವಿಲ್ಲ ಎಂದು ತೋರಿಸುತ್ತದೆ” ಎಂದು ಸಂಜೀವ್ ರಾಣಾ ಆಕ್ರೋಶ ಹೊರಹಾಕಿದರು.

ಸರ್ಕಾರದ ನಡೆಯ ವಿರೋಧದ ಕ್ರಮವಾಗಿ ಬಿಜೆಪಿಯ ಎಲ್ಲಾ ರಜಪೂತ ನಾಯಕರು ತಮ್ಮ ರಾಜೀನಾಮೆಯನ್ನು ಹರಿಯಾಣ ರಾಜ್ಯ ಅಧ್ಯಕ್ಷ ಓಂ ಪ್ರಕಾಶ್ ಧನಾರ್ ಅವರಿಗೆ ಸಲ್ಲಿಸಿದ್ದಾರೆ.

ಸಾಮೂಹಿಕ ರಾಜೀನಾಮೆ ನೀಡಿದ ಬಿಜೆಪಿ ಮುಖಂಡರಲ್ಲಿ ಮಹಿಪಾಲ್ ರಾಣಾ, ವಿಭಾಗೀಯ ಅಧ್ಯಕ್ಷ ಕಲಾಯತ್, ಸಂಜೀವ್ ರಾಣಾ, ಕಿಸಾನ್ ಮೋರ್ಚಾದ ಜಿಲ್ಲಾ ಮುಖಂಡ ಜೈದೀಪ್ ರಾಣಾ, ಕಿಸಾನ್ ಮೋರ್ಚಾ ಉಪಾಧ್ಯಕ್ಷ ಕೈತಾಲ್ ಸಂದೀಪ್ ರಾಣಾ, ಜಿಲ್ಲಾ ಸಂಚಾಲಕ ರಾಹುಲ್ ರಾಣಾ, ವಿಭಾಗೀಯ ಪ್ರಧಾನ ಕಾರ್ಯದರ್ಶಿ ಕಲಾಯತ್, ಮತ್ತು ಮಂಡಲ ಅಧ್ಯಕ್ಷ ಅಮಿತ್ ರಾಣಾ ಇತರರು ಇದ್ದರು.

ಈ ಕುರಿತು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಸ್ಪಷ್ಟನೆ ಹಾಗೂ ಪೊಲೀಸ್ ಕ್ರಮದ ಬಗ್ಗೆ ಪ್ರತಿಕ್ರಿಯೆಗೆ ರಜಪೂತ ಮುಖಂಡರು ಆಗ್ರಹಿಸಿದ್ದಾರೆ. ಸಿಎಂ ಖಟ್ಟರ್ ನಮ್ಮೊಂದಿಗೆ ಚರ್ಚಿಸುವವರೆಗೂ ನಾವು ಬಿಜೆಪಿಯಿಂದ ಹೊರಗುಳಿಯುತ್ತೇವೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಕುಸ್ತಿಪಟುಗಳ ಪ್ರತಿಭಟನೆ: ಕೇಂದ್ರ ಸರ್ಕಾರದ ನಡೆಯಿಂದ ಹರಿಯಾಣ ಬಿಜೆಪಿ ಘಟಕದಲ್ಲಿ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...