Homeಮುಖಪುಟಹರಿಯಾಣ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ: 40ಕ್ಕೂ ಹೆಚ್ಚು ನಾಯಕರಿಂದ ರಾಜೀನಾಮೆ

ಹರಿಯಾಣ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ: 40ಕ್ಕೂ ಹೆಚ್ಚು ನಾಯಕರಿಂದ ರಾಜೀನಾಮೆ

- Advertisement -
- Advertisement -

ಹರಿಯಾಣದ ಬಿಜೆಪಿಯಲ್ಲಿ ಭಿನ್ನಮತದ ಅಲೆ ಎದ್ದಿದ್ದು, 40ಕ್ಕೂ ಹೆಚ್ಚು ನಾಯಕರ ರಾಜೀನಾಮೆ ನೀಡಿದ್ದಾರೆ. 9ನೇ ಶತಮಾನದ ಆಡಳಿತಗಾರ ಸಾಮ್ರಾಟ್ ಮಿಹಿರ್ ಭೋಜ್ ಅವರ ಪ್ರತಿಮೆಯ ಅನಾವರಣ ಸಮಾರಂಭದಲ್ಲಿ ನಡೆದ ಗಲಾಟೆಯಿಂದ ಈ ಬೆಳವಣಿಗೆ ನಡೆದಿದೆ.

ಒಂದೆಡೆ ನಾಯಕರು ಪಕ್ಷ ತೊರೆಯುತ್ತಿದ್ದರೆ, ಮತ್ತೊಂಡೆದೆ ಹಲವಾರು ಗ್ರಾಮಗಳಲ್ಲಿ ಬಿಜೆಪಿ ನಾಯಕರ ಪ್ರವೇಶವನ್ನು ನಿಷೇಧಿಸಲಾಗುತ್ತಿದೆ. ನಾಲ್ಕು ದಿನಗಳ ಹಿಂದೆ ಬಿಜೆಪಿ ಕೈತಾಲ್ ಶಾಸಕಿ ಲೀಲಾ ರಾಮ್ ಗುರ್ಜರ್ ಮತ್ತು ಗುರ್ಜರ್ ಸಮುದಾಯದ ಇತರ ನಾಯಕರು ಬಿಗಿ ಭದ್ರತೆಯ ನಡುವೆ ಜುಲೈ 20ರಂದು ಪ್ರತಿಮೆಯನ್ನು ಅನಾವರಣಗೊಳಿಸಿದರು. ಅಂದಿನಿಂದ, ರಾಜ್ಯದಲ್ಲಿ ಸುಮಾರು 40 ಪದಾಧಿಕಾರಿಗಳು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಜುಲೈ 20 ರಂದು, ಬಿಜೆಪಿಯು ಸಾಮ್ರಾಟ್ ಮಿಹಿರ್ ಭೋಜ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿತು. ಈ ಸಮಾರಂಭದಿಂದ ರಾಜ್ಯದ ಎರಡು ಸಮುದಾಯಗಳ ಗಲಾಟೆಗೆ ಕಾರಣವಾಯಿತು. ಈ ಸಮಾರಂಭದ ಬಳಿಕ ‘ಗುರ್ಜರ್‌ಗಳು’ ಮತ್ತು ‘ರಜಪೂತರು’ ಜಗಳವಾಡಿದರು. ಅನಾವರಣ ಸಮಾರಂಭದ ಮೊದಲು, ರಜಪೂತ ಸಮುದಾಯದ ಸದಸ್ಯರು ಪ್ರತಿಮೆಯ ಮೇಲೆ ಕೆತ್ತಲಾದ ‘ಗುಜ್ಜರ್’ ಪದವನ್ನು ತೆಗೆದುಹಾಕಲು ಒತ್ತಾಯಿಸಿದರು. ಅದಕ್ಕಾಗಿ ಸಮಾಜದ ಮುಖಂಡರು ಪ್ರತಿಭಟನೆ ಆರಂಭಿಸಿದರು. ಪ್ರತಿಮೆಯ ಮೇಲೆ ‘ಹಿಂದೂ ಸಾಮ್ರಾಟ್’ ಎಂಬ ವಿಶೇಷಣವನ್ನು ಸೇರಿಸಬೇಕೆಂದು ಅವರು ಒತ್ತಾಯಿಸಿದರು. ಕೂಡಲೇ ಪ್ರತಿಭಟನೆಗಾಗಿ ಅವರ ಮೇಲೆ ಲಾಠಿ ಚಾರ್ಜ್ ಮಾಡಲಾಯಿತು.

ಈ ಘಟನೆ ನಡೆದಾಗಿನಿಂದ ರಜಪೂತ ಸಮುದಾಯದ ಮುಖಂಡರು ಬಿಜೆಪಿ ವಿರುದ್ಧ ತಿರುಗಿಬಿದ್ದಿದ್ದಾರೆ. ಇತ್ತೀಚೆಗೆ, ರಜಪೂತ ಸಮುದಾಯದ ಪ್ರಾಬಲ್ಯವಿರುವ ಹರಿಯಾಣದ ಹಲವು ಗ್ರಾಮಗಳು ಬಿಜೆಪಿ ನಾಯಕರ ಪ್ರವೇಶಕ್ಕೆ ನಿಷೇಧ ಹೇರಿವೆ ಎಂದು ದಿ ಹಿಂದೂ ವರದಿ ಮಾಡಿದೆ.

ಈ ಬಗ್ಗೆ ಎಎನ್‌ಐ ಜೊತೆ ಮಾತನಾಡಿರುವ ಬಿಜೆಪಿಯ ಕಿಸಾನ್ ಮೋರ್ಚಾದ ಜಿಲ್ಲಾ ಮುಖ್ಯಸ್ಥ ಸಂಜೀವ್ ರಾಣಾ ಅವರು, ”ನಮ್ಮ ಮಹಾನ್ ನಾಯಕ ಮಿಹಿರ್ ಭೋಜ್ ಅವರ ಪ್ರತಿಮೆಯನ್ನು ‘ಹಿಂದೂ ಸಾಮ್ರಾಟ್’ ಎಂದು ಕೆತ್ತಿಸಬೇಕೆಂದು ನಾವು ಒತ್ತಾಯಿಸುತ್ತಿದ್ದೆವು. ನಾವು ಅದರ ಮೇಲೆ ‘ರಜಪೂತ್’ ಅಥವಾ ‘ಗುಜ್ಜರ್’ ಎಂದು ಬರೆಯಿರಿ ಎಂದೂ ಹೇಳಿಲ್ಲ” ಎಂದು ಹೇಳಿದ್ದಾರೆ.

”ನಮ್ಮ ಸಮುದಾಯದ ಸದಸ್ಯರು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರು ಆದರೆ ಪೊಲೀಸರು ನಮ್ಮ ಮೇಲೆ ಲಾಠಿ ಬೀಸಿದರು” ಎಂದು ಅವರು ಆರೋಪ ಮಾಡಿದ್ದಾರೆ.

ಪ್ರತಿಮೆಯ ಅನಾವರಣ ಸಮಾರಂಭ ಮತ್ತು ಲಾಠಿ ಚಾರ್ಜ್ ಘಟನೆಯ ನಂತರ, ಸರ್ಕಾರವು ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಕಾರ್ಯಕ್ರಮವನ್ನು ಆಯೋಜಿಸಿತು. ಈ ಕ್ರಮವು ರಜಪೂತ ಸಮುದಾಯದ ಬಿಜೆಪಿ ನಾಯಕರನ್ನು ಮತ್ತಷ್ಟು ಕೆರಳಿಸಿತು.

”ನಾವು ಕ್ರಿಮಿನಲ್‌ಗಳಾಗಿದ್ದೇವೆಯೇ? ಸರ್ಕಾರದ ಆಜ್ಞೆಯ ಮೇರೆಗೆ ಪೊಲೀಸರು ನಮ್ಮ ಮೇಲೆ ಲಾಠಿ ಚಾರ್ಜ್ ಮತ್ತು ಅಶ್ರುವಾಯು ಶೆಲ್‌ಗಳ ದಾಳಿ ಮಾಡಿದರು. ಘಟನೆಯ ಒಂದು ದಿನದ ನಂತರ, ಸರ್ಕಾರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಕಾರ್ಯಕ್ರಮವನ್ನು ಆಯೋಜಿಸಿತು. ಇದು ಬಿಜೆಪಿಗೆ ರಜಪೂತರ ಅಗತ್ಯವಿಲ್ಲ ಎಂದು ತೋರಿಸುತ್ತದೆ” ಎಂದು ಸಂಜೀವ್ ರಾಣಾ ಆಕ್ರೋಶ ಹೊರಹಾಕಿದರು.

ಸರ್ಕಾರದ ನಡೆಯ ವಿರೋಧದ ಕ್ರಮವಾಗಿ ಬಿಜೆಪಿಯ ಎಲ್ಲಾ ರಜಪೂತ ನಾಯಕರು ತಮ್ಮ ರಾಜೀನಾಮೆಯನ್ನು ಹರಿಯಾಣ ರಾಜ್ಯ ಅಧ್ಯಕ್ಷ ಓಂ ಪ್ರಕಾಶ್ ಧನಾರ್ ಅವರಿಗೆ ಸಲ್ಲಿಸಿದ್ದಾರೆ.

ಸಾಮೂಹಿಕ ರಾಜೀನಾಮೆ ನೀಡಿದ ಬಿಜೆಪಿ ಮುಖಂಡರಲ್ಲಿ ಮಹಿಪಾಲ್ ರಾಣಾ, ವಿಭಾಗೀಯ ಅಧ್ಯಕ್ಷ ಕಲಾಯತ್, ಸಂಜೀವ್ ರಾಣಾ, ಕಿಸಾನ್ ಮೋರ್ಚಾದ ಜಿಲ್ಲಾ ಮುಖಂಡ ಜೈದೀಪ್ ರಾಣಾ, ಕಿಸಾನ್ ಮೋರ್ಚಾ ಉಪಾಧ್ಯಕ್ಷ ಕೈತಾಲ್ ಸಂದೀಪ್ ರಾಣಾ, ಜಿಲ್ಲಾ ಸಂಚಾಲಕ ರಾಹುಲ್ ರಾಣಾ, ವಿಭಾಗೀಯ ಪ್ರಧಾನ ಕಾರ್ಯದರ್ಶಿ ಕಲಾಯತ್, ಮತ್ತು ಮಂಡಲ ಅಧ್ಯಕ್ಷ ಅಮಿತ್ ರಾಣಾ ಇತರರು ಇದ್ದರು.

ಈ ಕುರಿತು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಸ್ಪಷ್ಟನೆ ಹಾಗೂ ಪೊಲೀಸ್ ಕ್ರಮದ ಬಗ್ಗೆ ಪ್ರತಿಕ್ರಿಯೆಗೆ ರಜಪೂತ ಮುಖಂಡರು ಆಗ್ರಹಿಸಿದ್ದಾರೆ. ಸಿಎಂ ಖಟ್ಟರ್ ನಮ್ಮೊಂದಿಗೆ ಚರ್ಚಿಸುವವರೆಗೂ ನಾವು ಬಿಜೆಪಿಯಿಂದ ಹೊರಗುಳಿಯುತ್ತೇವೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಕುಸ್ತಿಪಟುಗಳ ಪ್ರತಿಭಟನೆ: ಕೇಂದ್ರ ಸರ್ಕಾರದ ನಡೆಯಿಂದ ಹರಿಯಾಣ ಬಿಜೆಪಿ ಘಟಕದಲ್ಲಿ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆಫ್ರಿ ಎಪ್‌ಸ್ಟೀನ್ ಫೈಲ್ಸ್: ನ್ಯಾಯಾಂಗ ಇಲಾಖೆಯ ವೆಬ್ ಪುಟದಿಂದ ಟ್ರಂಪ್ ಫೋಟೋ ಸೇರಿದಂತೆ 16 ದಾಖಲೆಗಳು ಕಣ್ಮರೆ 

ನ್ಯೂಯಾರ್ಕ್: ಜೆಫ್ರಿ ಎಪ್‌ಸ್ಟೀನ್ ಗೆ ಸಂಬಂಧಿಸಿದ ದಾಖಲೆಗಳಿರುವ ಅಮೆರಿಕದ ನ್ಯಾಯ ಇಲಾಖೆಯ (Justice Department) ಸಾರ್ವಜನಿಕ ವೆಬ್‌ಪುಟದಿಂದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಸೇರಿದಂತೆ ಕನಿಷ್ಟ 16 ದಾಖಲೆಗಳು ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಅಪ್ರಾಪ್ತ...

ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂಸಾಚಾರ| ಬಿಎನ್‌ಪಿ ನಾಯಕನ ಮನೆಗೆ ಬೆಂಕಿ : 7 ವರ್ಷದ ಮಗಳು ಸಜೀವ ದಹನ

ವಿದ್ಯಾರ್ಥಿ ನಾಯಕ ಹಾಗೂ ಸ್ವತಂತ್ರ ರಾಜಕಾರಣಿ ಷರೀಫ್ ಉಸ್ಮಾನ್ ಹಾದಿ ಅವರ ಸಾವಿನ ಬಳಿಕ ಬಾಂಗ್ಲಾ ದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಿಂಸಾತ್ಮಕ ಪ್ರತಿಭಟನೆಯ ಮೂರನೇ ದಿನವಾದ ಶನಿವಾರ, ಪ್ರತಿಭಟನಾಕಾರರು ಬಾಂಗ್ಲಾದೇಶ್...

ದಕ್ಷಿಣ ಆಫ್ರಿಕಾದಲ್ಲಿ ಸಾರ್ವಜನಿಕರ ಮೇಲೆ ದಾಳಿಕೋರರು ನಡೆಸಿದ ಗುಂಡಿನ ದಾಳಿಯಲ್ಲಿ 9 ಜನರ ಸಾವು 

ಜೋಹಾನ್ಸ್‌ಬರ್ಗ್‌ನ ಹೊರಗಿನ ಬಾರ್‌ನಲ್ಲಿ ಭಾನುವಾರ ಮುಂಜಾನೆ ಅಪರಿಚಿತ ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ತಿಂಗಳು ದಕ್ಷಿಣ ಆಫ್ರಿಕಾದಲ್ಲಿ ನಡೆದ ಎರಡನೇ ಗುಂಡಿನ ದಾಳಿ...

ಬೆಂಗಳೂರು : ಜಿಬಿಎ ಅಧಿಕಾರಿಗಳಿಂದ 200ರಷ್ಟು ಮನೆಗಳ ನೆಲಸಮ : ಬೀದಿಗೆ ಬಿದ್ದ ಬಡ ಜನರು

ಅತಿಕ್ರಮಣ ಆರೋಪದ ಮೇಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳು ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಬಂಡೆ ಬಳಿಯ 5 ಎಕರೆ ಜಾಗದಲ್ಲಿದ್ದ ಸುಮಾರು 200ರಷ್ಟು ಮನೆಗಳನ್ನು ಶನಿವಾರ (ಡಿ.20)...

ಕೇರಳ ದಲಿತ ಕಾರ್ಮಿಕನ ಗುಂಪುಹತ್ಯೆ: ನನ್ನ ವೃತ್ತಿ ಬದುಕಿನಲ್ಲೇ ಇಂತಹ ಹಿಂಸಾಚಾರ ನೋಡಿಲ್ಲ ಎಂದ ವೈದ್ಯರು

ಕೇರಳದ ಪಾಲಕ್ಕಾಡ್ ಜಿಲ್ಲೆಯ ವಲಯಾರ್‌ನಲ್ಲಿ ಗುಂಪೊಂದು ಹಲ್ಲೆ ನಡೆಸಿ ಹತ್ಯೆ ಮಾಡಿದ ಛತ್ತೀಸ್‌ಗಢದ ದಲಿತ ವಲಸೆ ಕಾರ್ಮಿಕ ರಾಮ್ ನಾರಾಯಣ್ ಅವರ ಮರಣೋತ್ತರ ಪರೀಕ್ಷೆಯು ದಾಳಿಯ ತೀವ್ರ ಕ್ರೌರ್ಯವನ್ನು ಬಹಿರಂಗಪಡಿಸಿದೆ, ದೇಹದ ಒಂದು...

ಪೊಲೀಸ್ ಕಾರ್ಯಾಚರಣೆ ತಡೆದು ಕೋಳಿ ಅಂಕ : ಪುತ್ತೂರು ಶಾಸಕ ಅಶೋಕ್ ರೈ ಸೇರಿ 17 ಮಂದಿ ವಿರುದ್ಧ ಪ್ರಕರಣ ದಾಖಲು

ಶಾಸಕರೇ ಮುಂದೆ ನಿಂತು ಕಾನೂನುಬಾಹಿರ ಚಟುವಟಿಕೆ ನಡೆಸಲು ಜನರನ್ನು ಪ್ರೋತ್ಸಾಹಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಬಳಿ ಶನಿವಾರ (ಡಿ.20) ನಡೆದಿದೆ. ಕೇಪು ಶ್ರೀ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ನಡೆಯುತ್ತಿದ್ದ...

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...