Homeಮುಖಪುಟಹರಿಯಾಣ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ: 40ಕ್ಕೂ ಹೆಚ್ಚು ನಾಯಕರಿಂದ ರಾಜೀನಾಮೆ

ಹರಿಯಾಣ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ: 40ಕ್ಕೂ ಹೆಚ್ಚು ನಾಯಕರಿಂದ ರಾಜೀನಾಮೆ

- Advertisement -
- Advertisement -

ಹರಿಯಾಣದ ಬಿಜೆಪಿಯಲ್ಲಿ ಭಿನ್ನಮತದ ಅಲೆ ಎದ್ದಿದ್ದು, 40ಕ್ಕೂ ಹೆಚ್ಚು ನಾಯಕರ ರಾಜೀನಾಮೆ ನೀಡಿದ್ದಾರೆ. 9ನೇ ಶತಮಾನದ ಆಡಳಿತಗಾರ ಸಾಮ್ರಾಟ್ ಮಿಹಿರ್ ಭೋಜ್ ಅವರ ಪ್ರತಿಮೆಯ ಅನಾವರಣ ಸಮಾರಂಭದಲ್ಲಿ ನಡೆದ ಗಲಾಟೆಯಿಂದ ಈ ಬೆಳವಣಿಗೆ ನಡೆದಿದೆ.

ಒಂದೆಡೆ ನಾಯಕರು ಪಕ್ಷ ತೊರೆಯುತ್ತಿದ್ದರೆ, ಮತ್ತೊಂಡೆದೆ ಹಲವಾರು ಗ್ರಾಮಗಳಲ್ಲಿ ಬಿಜೆಪಿ ನಾಯಕರ ಪ್ರವೇಶವನ್ನು ನಿಷೇಧಿಸಲಾಗುತ್ತಿದೆ. ನಾಲ್ಕು ದಿನಗಳ ಹಿಂದೆ ಬಿಜೆಪಿ ಕೈತಾಲ್ ಶಾಸಕಿ ಲೀಲಾ ರಾಮ್ ಗುರ್ಜರ್ ಮತ್ತು ಗುರ್ಜರ್ ಸಮುದಾಯದ ಇತರ ನಾಯಕರು ಬಿಗಿ ಭದ್ರತೆಯ ನಡುವೆ ಜುಲೈ 20ರಂದು ಪ್ರತಿಮೆಯನ್ನು ಅನಾವರಣಗೊಳಿಸಿದರು. ಅಂದಿನಿಂದ, ರಾಜ್ಯದಲ್ಲಿ ಸುಮಾರು 40 ಪದಾಧಿಕಾರಿಗಳು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಜುಲೈ 20 ರಂದು, ಬಿಜೆಪಿಯು ಸಾಮ್ರಾಟ್ ಮಿಹಿರ್ ಭೋಜ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿತು. ಈ ಸಮಾರಂಭದಿಂದ ರಾಜ್ಯದ ಎರಡು ಸಮುದಾಯಗಳ ಗಲಾಟೆಗೆ ಕಾರಣವಾಯಿತು. ಈ ಸಮಾರಂಭದ ಬಳಿಕ ‘ಗುರ್ಜರ್‌ಗಳು’ ಮತ್ತು ‘ರಜಪೂತರು’ ಜಗಳವಾಡಿದರು. ಅನಾವರಣ ಸಮಾರಂಭದ ಮೊದಲು, ರಜಪೂತ ಸಮುದಾಯದ ಸದಸ್ಯರು ಪ್ರತಿಮೆಯ ಮೇಲೆ ಕೆತ್ತಲಾದ ‘ಗುಜ್ಜರ್’ ಪದವನ್ನು ತೆಗೆದುಹಾಕಲು ಒತ್ತಾಯಿಸಿದರು. ಅದಕ್ಕಾಗಿ ಸಮಾಜದ ಮುಖಂಡರು ಪ್ರತಿಭಟನೆ ಆರಂಭಿಸಿದರು. ಪ್ರತಿಮೆಯ ಮೇಲೆ ‘ಹಿಂದೂ ಸಾಮ್ರಾಟ್’ ಎಂಬ ವಿಶೇಷಣವನ್ನು ಸೇರಿಸಬೇಕೆಂದು ಅವರು ಒತ್ತಾಯಿಸಿದರು. ಕೂಡಲೇ ಪ್ರತಿಭಟನೆಗಾಗಿ ಅವರ ಮೇಲೆ ಲಾಠಿ ಚಾರ್ಜ್ ಮಾಡಲಾಯಿತು.

ಈ ಘಟನೆ ನಡೆದಾಗಿನಿಂದ ರಜಪೂತ ಸಮುದಾಯದ ಮುಖಂಡರು ಬಿಜೆಪಿ ವಿರುದ್ಧ ತಿರುಗಿಬಿದ್ದಿದ್ದಾರೆ. ಇತ್ತೀಚೆಗೆ, ರಜಪೂತ ಸಮುದಾಯದ ಪ್ರಾಬಲ್ಯವಿರುವ ಹರಿಯಾಣದ ಹಲವು ಗ್ರಾಮಗಳು ಬಿಜೆಪಿ ನಾಯಕರ ಪ್ರವೇಶಕ್ಕೆ ನಿಷೇಧ ಹೇರಿವೆ ಎಂದು ದಿ ಹಿಂದೂ ವರದಿ ಮಾಡಿದೆ.

ಈ ಬಗ್ಗೆ ಎಎನ್‌ಐ ಜೊತೆ ಮಾತನಾಡಿರುವ ಬಿಜೆಪಿಯ ಕಿಸಾನ್ ಮೋರ್ಚಾದ ಜಿಲ್ಲಾ ಮುಖ್ಯಸ್ಥ ಸಂಜೀವ್ ರಾಣಾ ಅವರು, ”ನಮ್ಮ ಮಹಾನ್ ನಾಯಕ ಮಿಹಿರ್ ಭೋಜ್ ಅವರ ಪ್ರತಿಮೆಯನ್ನು ‘ಹಿಂದೂ ಸಾಮ್ರಾಟ್’ ಎಂದು ಕೆತ್ತಿಸಬೇಕೆಂದು ನಾವು ಒತ್ತಾಯಿಸುತ್ತಿದ್ದೆವು. ನಾವು ಅದರ ಮೇಲೆ ‘ರಜಪೂತ್’ ಅಥವಾ ‘ಗುಜ್ಜರ್’ ಎಂದು ಬರೆಯಿರಿ ಎಂದೂ ಹೇಳಿಲ್ಲ” ಎಂದು ಹೇಳಿದ್ದಾರೆ.

”ನಮ್ಮ ಸಮುದಾಯದ ಸದಸ್ಯರು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರು ಆದರೆ ಪೊಲೀಸರು ನಮ್ಮ ಮೇಲೆ ಲಾಠಿ ಬೀಸಿದರು” ಎಂದು ಅವರು ಆರೋಪ ಮಾಡಿದ್ದಾರೆ.

ಪ್ರತಿಮೆಯ ಅನಾವರಣ ಸಮಾರಂಭ ಮತ್ತು ಲಾಠಿ ಚಾರ್ಜ್ ಘಟನೆಯ ನಂತರ, ಸರ್ಕಾರವು ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಕಾರ್ಯಕ್ರಮವನ್ನು ಆಯೋಜಿಸಿತು. ಈ ಕ್ರಮವು ರಜಪೂತ ಸಮುದಾಯದ ಬಿಜೆಪಿ ನಾಯಕರನ್ನು ಮತ್ತಷ್ಟು ಕೆರಳಿಸಿತು.

”ನಾವು ಕ್ರಿಮಿನಲ್‌ಗಳಾಗಿದ್ದೇವೆಯೇ? ಸರ್ಕಾರದ ಆಜ್ಞೆಯ ಮೇರೆಗೆ ಪೊಲೀಸರು ನಮ್ಮ ಮೇಲೆ ಲಾಠಿ ಚಾರ್ಜ್ ಮತ್ತು ಅಶ್ರುವಾಯು ಶೆಲ್‌ಗಳ ದಾಳಿ ಮಾಡಿದರು. ಘಟನೆಯ ಒಂದು ದಿನದ ನಂತರ, ಸರ್ಕಾರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಕಾರ್ಯಕ್ರಮವನ್ನು ಆಯೋಜಿಸಿತು. ಇದು ಬಿಜೆಪಿಗೆ ರಜಪೂತರ ಅಗತ್ಯವಿಲ್ಲ ಎಂದು ತೋರಿಸುತ್ತದೆ” ಎಂದು ಸಂಜೀವ್ ರಾಣಾ ಆಕ್ರೋಶ ಹೊರಹಾಕಿದರು.

ಸರ್ಕಾರದ ನಡೆಯ ವಿರೋಧದ ಕ್ರಮವಾಗಿ ಬಿಜೆಪಿಯ ಎಲ್ಲಾ ರಜಪೂತ ನಾಯಕರು ತಮ್ಮ ರಾಜೀನಾಮೆಯನ್ನು ಹರಿಯಾಣ ರಾಜ್ಯ ಅಧ್ಯಕ್ಷ ಓಂ ಪ್ರಕಾಶ್ ಧನಾರ್ ಅವರಿಗೆ ಸಲ್ಲಿಸಿದ್ದಾರೆ.

ಸಾಮೂಹಿಕ ರಾಜೀನಾಮೆ ನೀಡಿದ ಬಿಜೆಪಿ ಮುಖಂಡರಲ್ಲಿ ಮಹಿಪಾಲ್ ರಾಣಾ, ವಿಭಾಗೀಯ ಅಧ್ಯಕ್ಷ ಕಲಾಯತ್, ಸಂಜೀವ್ ರಾಣಾ, ಕಿಸಾನ್ ಮೋರ್ಚಾದ ಜಿಲ್ಲಾ ಮುಖಂಡ ಜೈದೀಪ್ ರಾಣಾ, ಕಿಸಾನ್ ಮೋರ್ಚಾ ಉಪಾಧ್ಯಕ್ಷ ಕೈತಾಲ್ ಸಂದೀಪ್ ರಾಣಾ, ಜಿಲ್ಲಾ ಸಂಚಾಲಕ ರಾಹುಲ್ ರಾಣಾ, ವಿಭಾಗೀಯ ಪ್ರಧಾನ ಕಾರ್ಯದರ್ಶಿ ಕಲಾಯತ್, ಮತ್ತು ಮಂಡಲ ಅಧ್ಯಕ್ಷ ಅಮಿತ್ ರಾಣಾ ಇತರರು ಇದ್ದರು.

ಈ ಕುರಿತು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಸ್ಪಷ್ಟನೆ ಹಾಗೂ ಪೊಲೀಸ್ ಕ್ರಮದ ಬಗ್ಗೆ ಪ್ರತಿಕ್ರಿಯೆಗೆ ರಜಪೂತ ಮುಖಂಡರು ಆಗ್ರಹಿಸಿದ್ದಾರೆ. ಸಿಎಂ ಖಟ್ಟರ್ ನಮ್ಮೊಂದಿಗೆ ಚರ್ಚಿಸುವವರೆಗೂ ನಾವು ಬಿಜೆಪಿಯಿಂದ ಹೊರಗುಳಿಯುತ್ತೇವೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಕುಸ್ತಿಪಟುಗಳ ಪ್ರತಿಭಟನೆ: ಕೇಂದ್ರ ಸರ್ಕಾರದ ನಡೆಯಿಂದ ಹರಿಯಾಣ ಬಿಜೆಪಿ ಘಟಕದಲ್ಲಿ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...