Homeಮುಖಪುಟಹರಿಯಾಣ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ: 40ಕ್ಕೂ ಹೆಚ್ಚು ನಾಯಕರಿಂದ ರಾಜೀನಾಮೆ

ಹರಿಯಾಣ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ: 40ಕ್ಕೂ ಹೆಚ್ಚು ನಾಯಕರಿಂದ ರಾಜೀನಾಮೆ

- Advertisement -
- Advertisement -

ಹರಿಯಾಣದ ಬಿಜೆಪಿಯಲ್ಲಿ ಭಿನ್ನಮತದ ಅಲೆ ಎದ್ದಿದ್ದು, 40ಕ್ಕೂ ಹೆಚ್ಚು ನಾಯಕರ ರಾಜೀನಾಮೆ ನೀಡಿದ್ದಾರೆ. 9ನೇ ಶತಮಾನದ ಆಡಳಿತಗಾರ ಸಾಮ್ರಾಟ್ ಮಿಹಿರ್ ಭೋಜ್ ಅವರ ಪ್ರತಿಮೆಯ ಅನಾವರಣ ಸಮಾರಂಭದಲ್ಲಿ ನಡೆದ ಗಲಾಟೆಯಿಂದ ಈ ಬೆಳವಣಿಗೆ ನಡೆದಿದೆ.

ಒಂದೆಡೆ ನಾಯಕರು ಪಕ್ಷ ತೊರೆಯುತ್ತಿದ್ದರೆ, ಮತ್ತೊಂಡೆದೆ ಹಲವಾರು ಗ್ರಾಮಗಳಲ್ಲಿ ಬಿಜೆಪಿ ನಾಯಕರ ಪ್ರವೇಶವನ್ನು ನಿಷೇಧಿಸಲಾಗುತ್ತಿದೆ. ನಾಲ್ಕು ದಿನಗಳ ಹಿಂದೆ ಬಿಜೆಪಿ ಕೈತಾಲ್ ಶಾಸಕಿ ಲೀಲಾ ರಾಮ್ ಗುರ್ಜರ್ ಮತ್ತು ಗುರ್ಜರ್ ಸಮುದಾಯದ ಇತರ ನಾಯಕರು ಬಿಗಿ ಭದ್ರತೆಯ ನಡುವೆ ಜುಲೈ 20ರಂದು ಪ್ರತಿಮೆಯನ್ನು ಅನಾವರಣಗೊಳಿಸಿದರು. ಅಂದಿನಿಂದ, ರಾಜ್ಯದಲ್ಲಿ ಸುಮಾರು 40 ಪದಾಧಿಕಾರಿಗಳು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಜುಲೈ 20 ರಂದು, ಬಿಜೆಪಿಯು ಸಾಮ್ರಾಟ್ ಮಿಹಿರ್ ಭೋಜ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿತು. ಈ ಸಮಾರಂಭದಿಂದ ರಾಜ್ಯದ ಎರಡು ಸಮುದಾಯಗಳ ಗಲಾಟೆಗೆ ಕಾರಣವಾಯಿತು. ಈ ಸಮಾರಂಭದ ಬಳಿಕ ‘ಗುರ್ಜರ್‌ಗಳು’ ಮತ್ತು ‘ರಜಪೂತರು’ ಜಗಳವಾಡಿದರು. ಅನಾವರಣ ಸಮಾರಂಭದ ಮೊದಲು, ರಜಪೂತ ಸಮುದಾಯದ ಸದಸ್ಯರು ಪ್ರತಿಮೆಯ ಮೇಲೆ ಕೆತ್ತಲಾದ ‘ಗುಜ್ಜರ್’ ಪದವನ್ನು ತೆಗೆದುಹಾಕಲು ಒತ್ತಾಯಿಸಿದರು. ಅದಕ್ಕಾಗಿ ಸಮಾಜದ ಮುಖಂಡರು ಪ್ರತಿಭಟನೆ ಆರಂಭಿಸಿದರು. ಪ್ರತಿಮೆಯ ಮೇಲೆ ‘ಹಿಂದೂ ಸಾಮ್ರಾಟ್’ ಎಂಬ ವಿಶೇಷಣವನ್ನು ಸೇರಿಸಬೇಕೆಂದು ಅವರು ಒತ್ತಾಯಿಸಿದರು. ಕೂಡಲೇ ಪ್ರತಿಭಟನೆಗಾಗಿ ಅವರ ಮೇಲೆ ಲಾಠಿ ಚಾರ್ಜ್ ಮಾಡಲಾಯಿತು.

ಈ ಘಟನೆ ನಡೆದಾಗಿನಿಂದ ರಜಪೂತ ಸಮುದಾಯದ ಮುಖಂಡರು ಬಿಜೆಪಿ ವಿರುದ್ಧ ತಿರುಗಿಬಿದ್ದಿದ್ದಾರೆ. ಇತ್ತೀಚೆಗೆ, ರಜಪೂತ ಸಮುದಾಯದ ಪ್ರಾಬಲ್ಯವಿರುವ ಹರಿಯಾಣದ ಹಲವು ಗ್ರಾಮಗಳು ಬಿಜೆಪಿ ನಾಯಕರ ಪ್ರವೇಶಕ್ಕೆ ನಿಷೇಧ ಹೇರಿವೆ ಎಂದು ದಿ ಹಿಂದೂ ವರದಿ ಮಾಡಿದೆ.

ಈ ಬಗ್ಗೆ ಎಎನ್‌ಐ ಜೊತೆ ಮಾತನಾಡಿರುವ ಬಿಜೆಪಿಯ ಕಿಸಾನ್ ಮೋರ್ಚಾದ ಜಿಲ್ಲಾ ಮುಖ್ಯಸ್ಥ ಸಂಜೀವ್ ರಾಣಾ ಅವರು, ”ನಮ್ಮ ಮಹಾನ್ ನಾಯಕ ಮಿಹಿರ್ ಭೋಜ್ ಅವರ ಪ್ರತಿಮೆಯನ್ನು ‘ಹಿಂದೂ ಸಾಮ್ರಾಟ್’ ಎಂದು ಕೆತ್ತಿಸಬೇಕೆಂದು ನಾವು ಒತ್ತಾಯಿಸುತ್ತಿದ್ದೆವು. ನಾವು ಅದರ ಮೇಲೆ ‘ರಜಪೂತ್’ ಅಥವಾ ‘ಗುಜ್ಜರ್’ ಎಂದು ಬರೆಯಿರಿ ಎಂದೂ ಹೇಳಿಲ್ಲ” ಎಂದು ಹೇಳಿದ್ದಾರೆ.

”ನಮ್ಮ ಸಮುದಾಯದ ಸದಸ್ಯರು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರು ಆದರೆ ಪೊಲೀಸರು ನಮ್ಮ ಮೇಲೆ ಲಾಠಿ ಬೀಸಿದರು” ಎಂದು ಅವರು ಆರೋಪ ಮಾಡಿದ್ದಾರೆ.

ಪ್ರತಿಮೆಯ ಅನಾವರಣ ಸಮಾರಂಭ ಮತ್ತು ಲಾಠಿ ಚಾರ್ಜ್ ಘಟನೆಯ ನಂತರ, ಸರ್ಕಾರವು ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಕಾರ್ಯಕ್ರಮವನ್ನು ಆಯೋಜಿಸಿತು. ಈ ಕ್ರಮವು ರಜಪೂತ ಸಮುದಾಯದ ಬಿಜೆಪಿ ನಾಯಕರನ್ನು ಮತ್ತಷ್ಟು ಕೆರಳಿಸಿತು.

”ನಾವು ಕ್ರಿಮಿನಲ್‌ಗಳಾಗಿದ್ದೇವೆಯೇ? ಸರ್ಕಾರದ ಆಜ್ಞೆಯ ಮೇರೆಗೆ ಪೊಲೀಸರು ನಮ್ಮ ಮೇಲೆ ಲಾಠಿ ಚಾರ್ಜ್ ಮತ್ತು ಅಶ್ರುವಾಯು ಶೆಲ್‌ಗಳ ದಾಳಿ ಮಾಡಿದರು. ಘಟನೆಯ ಒಂದು ದಿನದ ನಂತರ, ಸರ್ಕಾರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಕಾರ್ಯಕ್ರಮವನ್ನು ಆಯೋಜಿಸಿತು. ಇದು ಬಿಜೆಪಿಗೆ ರಜಪೂತರ ಅಗತ್ಯವಿಲ್ಲ ಎಂದು ತೋರಿಸುತ್ತದೆ” ಎಂದು ಸಂಜೀವ್ ರಾಣಾ ಆಕ್ರೋಶ ಹೊರಹಾಕಿದರು.

ಸರ್ಕಾರದ ನಡೆಯ ವಿರೋಧದ ಕ್ರಮವಾಗಿ ಬಿಜೆಪಿಯ ಎಲ್ಲಾ ರಜಪೂತ ನಾಯಕರು ತಮ್ಮ ರಾಜೀನಾಮೆಯನ್ನು ಹರಿಯಾಣ ರಾಜ್ಯ ಅಧ್ಯಕ್ಷ ಓಂ ಪ್ರಕಾಶ್ ಧನಾರ್ ಅವರಿಗೆ ಸಲ್ಲಿಸಿದ್ದಾರೆ.

ಸಾಮೂಹಿಕ ರಾಜೀನಾಮೆ ನೀಡಿದ ಬಿಜೆಪಿ ಮುಖಂಡರಲ್ಲಿ ಮಹಿಪಾಲ್ ರಾಣಾ, ವಿಭಾಗೀಯ ಅಧ್ಯಕ್ಷ ಕಲಾಯತ್, ಸಂಜೀವ್ ರಾಣಾ, ಕಿಸಾನ್ ಮೋರ್ಚಾದ ಜಿಲ್ಲಾ ಮುಖಂಡ ಜೈದೀಪ್ ರಾಣಾ, ಕಿಸಾನ್ ಮೋರ್ಚಾ ಉಪಾಧ್ಯಕ್ಷ ಕೈತಾಲ್ ಸಂದೀಪ್ ರಾಣಾ, ಜಿಲ್ಲಾ ಸಂಚಾಲಕ ರಾಹುಲ್ ರಾಣಾ, ವಿಭಾಗೀಯ ಪ್ರಧಾನ ಕಾರ್ಯದರ್ಶಿ ಕಲಾಯತ್, ಮತ್ತು ಮಂಡಲ ಅಧ್ಯಕ್ಷ ಅಮಿತ್ ರಾಣಾ ಇತರರು ಇದ್ದರು.

ಈ ಕುರಿತು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಸ್ಪಷ್ಟನೆ ಹಾಗೂ ಪೊಲೀಸ್ ಕ್ರಮದ ಬಗ್ಗೆ ಪ್ರತಿಕ್ರಿಯೆಗೆ ರಜಪೂತ ಮುಖಂಡರು ಆಗ್ರಹಿಸಿದ್ದಾರೆ. ಸಿಎಂ ಖಟ್ಟರ್ ನಮ್ಮೊಂದಿಗೆ ಚರ್ಚಿಸುವವರೆಗೂ ನಾವು ಬಿಜೆಪಿಯಿಂದ ಹೊರಗುಳಿಯುತ್ತೇವೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಕುಸ್ತಿಪಟುಗಳ ಪ್ರತಿಭಟನೆ: ಕೇಂದ್ರ ಸರ್ಕಾರದ ನಡೆಯಿಂದ ಹರಿಯಾಣ ಬಿಜೆಪಿ ಘಟಕದಲ್ಲಿ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...