Homeಮುಖಪುಟಹರಿಯಾಣ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ: 40ಕ್ಕೂ ಹೆಚ್ಚು ನಾಯಕರಿಂದ ರಾಜೀನಾಮೆ

ಹರಿಯಾಣ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ: 40ಕ್ಕೂ ಹೆಚ್ಚು ನಾಯಕರಿಂದ ರಾಜೀನಾಮೆ

- Advertisement -
- Advertisement -

ಹರಿಯಾಣದ ಬಿಜೆಪಿಯಲ್ಲಿ ಭಿನ್ನಮತದ ಅಲೆ ಎದ್ದಿದ್ದು, 40ಕ್ಕೂ ಹೆಚ್ಚು ನಾಯಕರ ರಾಜೀನಾಮೆ ನೀಡಿದ್ದಾರೆ. 9ನೇ ಶತಮಾನದ ಆಡಳಿತಗಾರ ಸಾಮ್ರಾಟ್ ಮಿಹಿರ್ ಭೋಜ್ ಅವರ ಪ್ರತಿಮೆಯ ಅನಾವರಣ ಸಮಾರಂಭದಲ್ಲಿ ನಡೆದ ಗಲಾಟೆಯಿಂದ ಈ ಬೆಳವಣಿಗೆ ನಡೆದಿದೆ.

ಒಂದೆಡೆ ನಾಯಕರು ಪಕ್ಷ ತೊರೆಯುತ್ತಿದ್ದರೆ, ಮತ್ತೊಂಡೆದೆ ಹಲವಾರು ಗ್ರಾಮಗಳಲ್ಲಿ ಬಿಜೆಪಿ ನಾಯಕರ ಪ್ರವೇಶವನ್ನು ನಿಷೇಧಿಸಲಾಗುತ್ತಿದೆ. ನಾಲ್ಕು ದಿನಗಳ ಹಿಂದೆ ಬಿಜೆಪಿ ಕೈತಾಲ್ ಶಾಸಕಿ ಲೀಲಾ ರಾಮ್ ಗುರ್ಜರ್ ಮತ್ತು ಗುರ್ಜರ್ ಸಮುದಾಯದ ಇತರ ನಾಯಕರು ಬಿಗಿ ಭದ್ರತೆಯ ನಡುವೆ ಜುಲೈ 20ರಂದು ಪ್ರತಿಮೆಯನ್ನು ಅನಾವರಣಗೊಳಿಸಿದರು. ಅಂದಿನಿಂದ, ರಾಜ್ಯದಲ್ಲಿ ಸುಮಾರು 40 ಪದಾಧಿಕಾರಿಗಳು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಜುಲೈ 20 ರಂದು, ಬಿಜೆಪಿಯು ಸಾಮ್ರಾಟ್ ಮಿಹಿರ್ ಭೋಜ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿತು. ಈ ಸಮಾರಂಭದಿಂದ ರಾಜ್ಯದ ಎರಡು ಸಮುದಾಯಗಳ ಗಲಾಟೆಗೆ ಕಾರಣವಾಯಿತು. ಈ ಸಮಾರಂಭದ ಬಳಿಕ ‘ಗುರ್ಜರ್‌ಗಳು’ ಮತ್ತು ‘ರಜಪೂತರು’ ಜಗಳವಾಡಿದರು. ಅನಾವರಣ ಸಮಾರಂಭದ ಮೊದಲು, ರಜಪೂತ ಸಮುದಾಯದ ಸದಸ್ಯರು ಪ್ರತಿಮೆಯ ಮೇಲೆ ಕೆತ್ತಲಾದ ‘ಗುಜ್ಜರ್’ ಪದವನ್ನು ತೆಗೆದುಹಾಕಲು ಒತ್ತಾಯಿಸಿದರು. ಅದಕ್ಕಾಗಿ ಸಮಾಜದ ಮುಖಂಡರು ಪ್ರತಿಭಟನೆ ಆರಂಭಿಸಿದರು. ಪ್ರತಿಮೆಯ ಮೇಲೆ ‘ಹಿಂದೂ ಸಾಮ್ರಾಟ್’ ಎಂಬ ವಿಶೇಷಣವನ್ನು ಸೇರಿಸಬೇಕೆಂದು ಅವರು ಒತ್ತಾಯಿಸಿದರು. ಕೂಡಲೇ ಪ್ರತಿಭಟನೆಗಾಗಿ ಅವರ ಮೇಲೆ ಲಾಠಿ ಚಾರ್ಜ್ ಮಾಡಲಾಯಿತು.

ಈ ಘಟನೆ ನಡೆದಾಗಿನಿಂದ ರಜಪೂತ ಸಮುದಾಯದ ಮುಖಂಡರು ಬಿಜೆಪಿ ವಿರುದ್ಧ ತಿರುಗಿಬಿದ್ದಿದ್ದಾರೆ. ಇತ್ತೀಚೆಗೆ, ರಜಪೂತ ಸಮುದಾಯದ ಪ್ರಾಬಲ್ಯವಿರುವ ಹರಿಯಾಣದ ಹಲವು ಗ್ರಾಮಗಳು ಬಿಜೆಪಿ ನಾಯಕರ ಪ್ರವೇಶಕ್ಕೆ ನಿಷೇಧ ಹೇರಿವೆ ಎಂದು ದಿ ಹಿಂದೂ ವರದಿ ಮಾಡಿದೆ.

ಈ ಬಗ್ಗೆ ಎಎನ್‌ಐ ಜೊತೆ ಮಾತನಾಡಿರುವ ಬಿಜೆಪಿಯ ಕಿಸಾನ್ ಮೋರ್ಚಾದ ಜಿಲ್ಲಾ ಮುಖ್ಯಸ್ಥ ಸಂಜೀವ್ ರಾಣಾ ಅವರು, ”ನಮ್ಮ ಮಹಾನ್ ನಾಯಕ ಮಿಹಿರ್ ಭೋಜ್ ಅವರ ಪ್ರತಿಮೆಯನ್ನು ‘ಹಿಂದೂ ಸಾಮ್ರಾಟ್’ ಎಂದು ಕೆತ್ತಿಸಬೇಕೆಂದು ನಾವು ಒತ್ತಾಯಿಸುತ್ತಿದ್ದೆವು. ನಾವು ಅದರ ಮೇಲೆ ‘ರಜಪೂತ್’ ಅಥವಾ ‘ಗುಜ್ಜರ್’ ಎಂದು ಬರೆಯಿರಿ ಎಂದೂ ಹೇಳಿಲ್ಲ” ಎಂದು ಹೇಳಿದ್ದಾರೆ.

”ನಮ್ಮ ಸಮುದಾಯದ ಸದಸ್ಯರು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರು ಆದರೆ ಪೊಲೀಸರು ನಮ್ಮ ಮೇಲೆ ಲಾಠಿ ಬೀಸಿದರು” ಎಂದು ಅವರು ಆರೋಪ ಮಾಡಿದ್ದಾರೆ.

ಪ್ರತಿಮೆಯ ಅನಾವರಣ ಸಮಾರಂಭ ಮತ್ತು ಲಾಠಿ ಚಾರ್ಜ್ ಘಟನೆಯ ನಂತರ, ಸರ್ಕಾರವು ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಕಾರ್ಯಕ್ರಮವನ್ನು ಆಯೋಜಿಸಿತು. ಈ ಕ್ರಮವು ರಜಪೂತ ಸಮುದಾಯದ ಬಿಜೆಪಿ ನಾಯಕರನ್ನು ಮತ್ತಷ್ಟು ಕೆರಳಿಸಿತು.

”ನಾವು ಕ್ರಿಮಿನಲ್‌ಗಳಾಗಿದ್ದೇವೆಯೇ? ಸರ್ಕಾರದ ಆಜ್ಞೆಯ ಮೇರೆಗೆ ಪೊಲೀಸರು ನಮ್ಮ ಮೇಲೆ ಲಾಠಿ ಚಾರ್ಜ್ ಮತ್ತು ಅಶ್ರುವಾಯು ಶೆಲ್‌ಗಳ ದಾಳಿ ಮಾಡಿದರು. ಘಟನೆಯ ಒಂದು ದಿನದ ನಂತರ, ಸರ್ಕಾರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಕಾರ್ಯಕ್ರಮವನ್ನು ಆಯೋಜಿಸಿತು. ಇದು ಬಿಜೆಪಿಗೆ ರಜಪೂತರ ಅಗತ್ಯವಿಲ್ಲ ಎಂದು ತೋರಿಸುತ್ತದೆ” ಎಂದು ಸಂಜೀವ್ ರಾಣಾ ಆಕ್ರೋಶ ಹೊರಹಾಕಿದರು.

ಸರ್ಕಾರದ ನಡೆಯ ವಿರೋಧದ ಕ್ರಮವಾಗಿ ಬಿಜೆಪಿಯ ಎಲ್ಲಾ ರಜಪೂತ ನಾಯಕರು ತಮ್ಮ ರಾಜೀನಾಮೆಯನ್ನು ಹರಿಯಾಣ ರಾಜ್ಯ ಅಧ್ಯಕ್ಷ ಓಂ ಪ್ರಕಾಶ್ ಧನಾರ್ ಅವರಿಗೆ ಸಲ್ಲಿಸಿದ್ದಾರೆ.

ಸಾಮೂಹಿಕ ರಾಜೀನಾಮೆ ನೀಡಿದ ಬಿಜೆಪಿ ಮುಖಂಡರಲ್ಲಿ ಮಹಿಪಾಲ್ ರಾಣಾ, ವಿಭಾಗೀಯ ಅಧ್ಯಕ್ಷ ಕಲಾಯತ್, ಸಂಜೀವ್ ರಾಣಾ, ಕಿಸಾನ್ ಮೋರ್ಚಾದ ಜಿಲ್ಲಾ ಮುಖಂಡ ಜೈದೀಪ್ ರಾಣಾ, ಕಿಸಾನ್ ಮೋರ್ಚಾ ಉಪಾಧ್ಯಕ್ಷ ಕೈತಾಲ್ ಸಂದೀಪ್ ರಾಣಾ, ಜಿಲ್ಲಾ ಸಂಚಾಲಕ ರಾಹುಲ್ ರಾಣಾ, ವಿಭಾಗೀಯ ಪ್ರಧಾನ ಕಾರ್ಯದರ್ಶಿ ಕಲಾಯತ್, ಮತ್ತು ಮಂಡಲ ಅಧ್ಯಕ್ಷ ಅಮಿತ್ ರಾಣಾ ಇತರರು ಇದ್ದರು.

ಈ ಕುರಿತು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಸ್ಪಷ್ಟನೆ ಹಾಗೂ ಪೊಲೀಸ್ ಕ್ರಮದ ಬಗ್ಗೆ ಪ್ರತಿಕ್ರಿಯೆಗೆ ರಜಪೂತ ಮುಖಂಡರು ಆಗ್ರಹಿಸಿದ್ದಾರೆ. ಸಿಎಂ ಖಟ್ಟರ್ ನಮ್ಮೊಂದಿಗೆ ಚರ್ಚಿಸುವವರೆಗೂ ನಾವು ಬಿಜೆಪಿಯಿಂದ ಹೊರಗುಳಿಯುತ್ತೇವೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಕುಸ್ತಿಪಟುಗಳ ಪ್ರತಿಭಟನೆ: ಕೇಂದ್ರ ಸರ್ಕಾರದ ನಡೆಯಿಂದ ಹರಿಯಾಣ ಬಿಜೆಪಿ ಘಟಕದಲ್ಲಿ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...